Homeಕರ್ನಾಟಕ'ನೈಸ್ ಯೋಜನೆ' ವಶಕ್ಕೆ ಪಡೆಯಿರಿ; ರಾಜ್ಯ ಸರ್ಕಾರಕ್ಕೆ ಮಾಜಿ ಪಿಎಂ ಆಗ್ರಹ

‘ನೈಸ್ ಯೋಜನೆ’ ವಶಕ್ಕೆ ಪಡೆಯಿರಿ; ರಾಜ್ಯ ಸರ್ಕಾರಕ್ಕೆ ಮಾಜಿ ಪಿಎಂ ಆಗ್ರಹ

- Advertisement -
- Advertisement -

ನೈಸ್ ಯೋಜನೆಯನ್ನು (ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸ್) ರಾಜ್ಯ ಸರ್ಕಾರ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ‘ಆ ಕಂಪನಿ ವಶದಲ್ಲಿರುವ 13404 ಎಕರೆಯಷ್ಟು ರೈತರ ಭೂಮಿಯನ್ನು ಸರ್ಕಾರ ಮರು ವಶಪಡಿಸಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಗ್ಗೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರೂ ಅವರು ಈವರೆಗೆ ಯಾವುದೇ ಕ್ರಮ ವಹಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಸಿದ್ದರಾಮಯ್ಯ ಬಡವರ ಪರ ಮಾತನಾಡುತ್ತಾರೆ. ಆ ಯೋಜನೆಯಲ್ಲಿ ಇಷ್ಟೊಂದು ಅಕ್ರಮ ಆಗಿದ್ದರೂ, ಬಡವರ ಭೂಮಿ ಲೂಟಿ ಹೊಡೆಯಲಾಗಿದ್ದರೂ ಏನು ಕ್ರಮ ತೆಗೆದುಕೊಂಡಿಲ್ಲ. ಬಡವರ ಪರ ಮಾತಾಡುವ ಸಿಎಂ ಯಾಕೆ ಕ್ರಮ ತೆಗೆದುಕೊಂಡಿಲ್ಲ’ ಎಂದು ಪ್ರಶ್ನಿಸಿದರು.

‘ಸಿದ್ದರಾಮಯ್ಯ ಅವರು ಎಷ್ಟು ವರ್ಷ ಆಳಿದರೂ ಈ ಕಪ್ಪುಚುಕ್ಕೆಯಿಂದ ಹೊರೆಗೆ ಬರಲು ಸಾಧ್ಯವಿಲ್ಲ. ಇದರ ವಿರುದ್ದ ಅವರು ಕ್ರಮ ತೆಗೆದುಕೊಳ್ಳದೇ ಹೋದರೆ ಅವರ ರಾಜಕೀಯ ಜೀವನಕ್ಕೆ ಇದೇ ಕಪ್ಪುಚುಕ್ಕೆಯಾಗಿ ಉಳಿದು ಹೋಗುತ್ತದೆ’ ಎಂದರು.

‘ನೈಸ್ ರಸ್ತೆ ಯೋಜನೆ ವಿಷಯ ಎಲ್ಲರಿಗೂ ಗೊತ್ತಿದೆ. ಅದರಲ್ಲಿ ಏನೇನು ನಡೆದಿದೆ ಎನ್ನುವುದೂ ತಿಳಿದಿದೆ. ಬಡವರಿಗೆ ಇದರಿಂದ ಅನ್ಯಾಯ ಆಗಿದೆ. ನಮ್ಮ ಪಕ್ಷ ಇದರ ವಿರುದ್ದ ದನಿ ಎತ್ತಿದೆ. ವಿಧಾನಸಭೆಯಲ್ಲೂ ಈ ಬಗ್ಗೆ ಸುದೀರ್ಘ ಚರ್ಚೆ ಆಗಿದೆ. ವಿಧಾನಸಭೆಯಲ್ಲಿ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಸದನ ಸಮಿತಿ ನೇಮಕ ಮಾಡಲಾಗಿತ್ತು. ಆ ಸದನ ಸಮಿತಿ ವರದಿ ಕೊಟ್ಟಿದೆ. ಎಷ್ಟು ಅಕ್ರಮ ಮಾಡಿದೆ, ಈ ಯೋಜನೆಯನ್ನು ಸರ್ಕಾರ ವಶಪಡಿಸಿಕೊಳ್ಳಬೇಕು ಎಂದು ವರದಿ ಕೊಟ್ಟಿದೆ. ಆದರೆ, ಸರ್ಕಾರ ಅಂತಿಮ ನಿರ್ಧಾರ ಮಾಡಿಲ್ಲ. ಇದಕ್ಕೆ ಕಾರಣ ಗೊತ್ತಿಲ್ಲ’ ಎಂದರು.

2023 ಅಕ್ಟೋಬರ್ 19 ರಂದು ನಾನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೆ. ನೈಸ್ ವಿಚಾರವಾಗಿ ಕ್ರಮಕ್ಕೆ ಆಗ್ರಹಿಸಿದ್ದೆ. ಈ ಬಗ್ಗೆ ಖುದ್ದು ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ ಎಂದು ಮಾಹಿತಿ ನೀಡಿದ ಮಾಜಿ ಪ್ರಧಾನಿಗಳು, ತಾವು ಬರೆದಿದ್ದ ಪತ್ರವನ್ನು ಮಾಧ್ಯಮಗೋಷ್ಟಿಯಲ್ಲಿ ಬಿಡುಗಡೆ ಮಾಡಿದರು.

‘13404 ಎಕರೆಯಷ್ಟು ರೈತರ ಭೂಮಿಯನ್ನು ನೈಸ್ ವಶಪಡಿಸಿಕೊಂಡಿದೆ. ಅದನ್ನು ಸರ್ಕಾರ ಮರು ವಶಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದೆ. ಈ ಯೋಜನೆಯ ಮೌಲ್ಯ 7 ಸಾವಿರ ಕೋಟಿ ಎಂದು ಸದನ ಸಮಿತಿಯೇ ವರದಿ ಕೊಟ್ಟಿದೆ; ಅಧಿಕಾರಿಗಳೇ ಈ ವರದಿ ಕೊಟ್ಟಿದ್ದಾರೆ. ಹಿಂದೆ ಸೋನಿಯಾ ಗಾಂಧಿ ಅವರ ಬಳಿಯು ಈ ಯೋಜನೆಯ ಅಕ್ರಮಗಳ ಚರ್ಚೆ ಆಗಿದೆ. ಧರ್ಮಸಿಂಗ್ ಅವರ ಕಾಲದಲ್ಲಿಯೂ ಚರ್ಚೆ ಆಗಿತ್ತು. ಆಗ ಸೋನಿಯಾಗಾಂಧಿ ಅವರು ಧರ್ಮಸಿಂಗ್ ಅವರಿಗೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದರು’ ಎಂದು ಮಾಜಿ ಪ್ರಧಾನಿಗಳು ಹೇಳಿದರು.

‘ನಾನು ಜೀವನದಲ್ಲಿ ಒಂದೇ ಒಂದು ತಪ್ಪು ಮಾಡಿದೆ. ಒಳ್ಳೆಯ ರಸ್ತೆ ಆಗುತ್ತದೆ ಎಂಬ ಮಹಾತ್ವಕಾಂಕ್ಷೆಯಿಂದ ಮಾಡಿದೆ. ಮೈಸೂರಿಗೆ ಒಂದು ಗಂಟೆಯಲ್ಲಿ ಹೋಗಬಹುದು ಎಂಧೂ ಇದನ್ನು ಮಾಡಿದೆ. ಆದರೆ, ದೊಡ್ಡ ಪೆಟ್ಟು ಕೊಟ್ಟರು ಮಹಾನುಭಾವ ಸಿದ್ದರಾಮಯ್ಯನವರು ಇದನ್ನು ಸರಿ ಮಾಡಲಿ. ನಮ್ಮ ಪಕ್ಷ ನೈಸ್ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ನಾನು ನಮ್ಮ ಪಕ್ಷ, ರೈತರು, ಬಡವರ ಪರ ಹೋರಾಟ ಮಾಡುತ್ತೇವೆ’ ಎಂದು ಹೇಳಿದರು.

ದನ್ನೂ ಓದಿ; ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...