Homeಕರ್ನಾಟಕ'ನೈಸ್ ಯೋಜನೆ' ವಶಕ್ಕೆ ಪಡೆಯಿರಿ; ರಾಜ್ಯ ಸರ್ಕಾರಕ್ಕೆ ಮಾಜಿ ಪಿಎಂ ಆಗ್ರಹ

‘ನೈಸ್ ಯೋಜನೆ’ ವಶಕ್ಕೆ ಪಡೆಯಿರಿ; ರಾಜ್ಯ ಸರ್ಕಾರಕ್ಕೆ ಮಾಜಿ ಪಿಎಂ ಆಗ್ರಹ

- Advertisement -
- Advertisement -

ನೈಸ್ ಯೋಜನೆಯನ್ನು (ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸ್) ರಾಜ್ಯ ಸರ್ಕಾರ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ‘ಆ ಕಂಪನಿ ವಶದಲ್ಲಿರುವ 13404 ಎಕರೆಯಷ್ಟು ರೈತರ ಭೂಮಿಯನ್ನು ಸರ್ಕಾರ ಮರು ವಶಪಡಿಸಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಗ್ಗೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರೂ ಅವರು ಈವರೆಗೆ ಯಾವುದೇ ಕ್ರಮ ವಹಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಸಿದ್ದರಾಮಯ್ಯ ಬಡವರ ಪರ ಮಾತನಾಡುತ್ತಾರೆ. ಆ ಯೋಜನೆಯಲ್ಲಿ ಇಷ್ಟೊಂದು ಅಕ್ರಮ ಆಗಿದ್ದರೂ, ಬಡವರ ಭೂಮಿ ಲೂಟಿ ಹೊಡೆಯಲಾಗಿದ್ದರೂ ಏನು ಕ್ರಮ ತೆಗೆದುಕೊಂಡಿಲ್ಲ. ಬಡವರ ಪರ ಮಾತಾಡುವ ಸಿಎಂ ಯಾಕೆ ಕ್ರಮ ತೆಗೆದುಕೊಂಡಿಲ್ಲ’ ಎಂದು ಪ್ರಶ್ನಿಸಿದರು.

‘ಸಿದ್ದರಾಮಯ್ಯ ಅವರು ಎಷ್ಟು ವರ್ಷ ಆಳಿದರೂ ಈ ಕಪ್ಪುಚುಕ್ಕೆಯಿಂದ ಹೊರೆಗೆ ಬರಲು ಸಾಧ್ಯವಿಲ್ಲ. ಇದರ ವಿರುದ್ದ ಅವರು ಕ್ರಮ ತೆಗೆದುಕೊಳ್ಳದೇ ಹೋದರೆ ಅವರ ರಾಜಕೀಯ ಜೀವನಕ್ಕೆ ಇದೇ ಕಪ್ಪುಚುಕ್ಕೆಯಾಗಿ ಉಳಿದು ಹೋಗುತ್ತದೆ’ ಎಂದರು.

‘ನೈಸ್ ರಸ್ತೆ ಯೋಜನೆ ವಿಷಯ ಎಲ್ಲರಿಗೂ ಗೊತ್ತಿದೆ. ಅದರಲ್ಲಿ ಏನೇನು ನಡೆದಿದೆ ಎನ್ನುವುದೂ ತಿಳಿದಿದೆ. ಬಡವರಿಗೆ ಇದರಿಂದ ಅನ್ಯಾಯ ಆಗಿದೆ. ನಮ್ಮ ಪಕ್ಷ ಇದರ ವಿರುದ್ದ ದನಿ ಎತ್ತಿದೆ. ವಿಧಾನಸಭೆಯಲ್ಲೂ ಈ ಬಗ್ಗೆ ಸುದೀರ್ಘ ಚರ್ಚೆ ಆಗಿದೆ. ವಿಧಾನಸಭೆಯಲ್ಲಿ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಸದನ ಸಮಿತಿ ನೇಮಕ ಮಾಡಲಾಗಿತ್ತು. ಆ ಸದನ ಸಮಿತಿ ವರದಿ ಕೊಟ್ಟಿದೆ. ಎಷ್ಟು ಅಕ್ರಮ ಮಾಡಿದೆ, ಈ ಯೋಜನೆಯನ್ನು ಸರ್ಕಾರ ವಶಪಡಿಸಿಕೊಳ್ಳಬೇಕು ಎಂದು ವರದಿ ಕೊಟ್ಟಿದೆ. ಆದರೆ, ಸರ್ಕಾರ ಅಂತಿಮ ನಿರ್ಧಾರ ಮಾಡಿಲ್ಲ. ಇದಕ್ಕೆ ಕಾರಣ ಗೊತ್ತಿಲ್ಲ’ ಎಂದರು.

2023 ಅಕ್ಟೋಬರ್ 19 ರಂದು ನಾನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೆ. ನೈಸ್ ವಿಚಾರವಾಗಿ ಕ್ರಮಕ್ಕೆ ಆಗ್ರಹಿಸಿದ್ದೆ. ಈ ಬಗ್ಗೆ ಖುದ್ದು ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ ಎಂದು ಮಾಹಿತಿ ನೀಡಿದ ಮಾಜಿ ಪ್ರಧಾನಿಗಳು, ತಾವು ಬರೆದಿದ್ದ ಪತ್ರವನ್ನು ಮಾಧ್ಯಮಗೋಷ್ಟಿಯಲ್ಲಿ ಬಿಡುಗಡೆ ಮಾಡಿದರು.

‘13404 ಎಕರೆಯಷ್ಟು ರೈತರ ಭೂಮಿಯನ್ನು ನೈಸ್ ವಶಪಡಿಸಿಕೊಂಡಿದೆ. ಅದನ್ನು ಸರ್ಕಾರ ಮರು ವಶಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದೆ. ಈ ಯೋಜನೆಯ ಮೌಲ್ಯ 7 ಸಾವಿರ ಕೋಟಿ ಎಂದು ಸದನ ಸಮಿತಿಯೇ ವರದಿ ಕೊಟ್ಟಿದೆ; ಅಧಿಕಾರಿಗಳೇ ಈ ವರದಿ ಕೊಟ್ಟಿದ್ದಾರೆ. ಹಿಂದೆ ಸೋನಿಯಾ ಗಾಂಧಿ ಅವರ ಬಳಿಯು ಈ ಯೋಜನೆಯ ಅಕ್ರಮಗಳ ಚರ್ಚೆ ಆಗಿದೆ. ಧರ್ಮಸಿಂಗ್ ಅವರ ಕಾಲದಲ್ಲಿಯೂ ಚರ್ಚೆ ಆಗಿತ್ತು. ಆಗ ಸೋನಿಯಾಗಾಂಧಿ ಅವರು ಧರ್ಮಸಿಂಗ್ ಅವರಿಗೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದರು’ ಎಂದು ಮಾಜಿ ಪ್ರಧಾನಿಗಳು ಹೇಳಿದರು.

‘ನಾನು ಜೀವನದಲ್ಲಿ ಒಂದೇ ಒಂದು ತಪ್ಪು ಮಾಡಿದೆ. ಒಳ್ಳೆಯ ರಸ್ತೆ ಆಗುತ್ತದೆ ಎಂಬ ಮಹಾತ್ವಕಾಂಕ್ಷೆಯಿಂದ ಮಾಡಿದೆ. ಮೈಸೂರಿಗೆ ಒಂದು ಗಂಟೆಯಲ್ಲಿ ಹೋಗಬಹುದು ಎಂಧೂ ಇದನ್ನು ಮಾಡಿದೆ. ಆದರೆ, ದೊಡ್ಡ ಪೆಟ್ಟು ಕೊಟ್ಟರು ಮಹಾನುಭಾವ ಸಿದ್ದರಾಮಯ್ಯನವರು ಇದನ್ನು ಸರಿ ಮಾಡಲಿ. ನಮ್ಮ ಪಕ್ಷ ನೈಸ್ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ನಾನು ನಮ್ಮ ಪಕ್ಷ, ರೈತರು, ಬಡವರ ಪರ ಹೋರಾಟ ಮಾಡುತ್ತೇವೆ’ ಎಂದು ಹೇಳಿದರು.

ದನ್ನೂ ಓದಿ; ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...