Homeಕರ್ನಾಟಕಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

- Advertisement -
- Advertisement -

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು.

ಗುರುವಾರ (ಜ.29) ಸಂಜೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ ’17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಬೆಂಗಳೂರಿನ ಚಲನಚಿತ್ರೋತ್ಸವದಲ್ಲಿ ರಾಜಕೀಯ ಪ್ರವೇಶ ಆಗಿದೆ. ಇಂತಹ ಅದ್ಬುತ ಕಾರ್ಯಕ್ರಮದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳನ್ನು ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡುತ್ತಿಲ್ಲ. ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು ಇದನ್ನು ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು ಎಂದು ನಾನು ರಾಯಬಾರಿಯಾಗಿ ಒತ್ತಾಯಿಸುತ್ತಿದ್ದೇನೆ ಎಂದು ಪ್ರಕಾಶ್ ರಾಜ್ ಹೇಳಿದರು.

ನಮ್ಮ ನಾಡಿನ ಕಣ್ಣೀರಿನ ಕಥೆಗಳ ಪುಸ್ತಕ ಬೇರೆ ಭಾಷೆಗೆ ತರ್ಜುಮೆಯಾಗಿ ಬೂಕರ್ ಪ್ರಶಸ್ತಿ ಪಡೆದುಕೊಂಡಾಗ ಸಂಭ್ರಮಿಸಿದ ನಾವು, ನಮ್ಮ ನೆಲಕ್ಕೆ ಇನ್ನೊಬ್ಬರ ಕಣ್ಣೀರಿನ ಕಥೆಗಳನ್ನು ತರಲು ಆಗುವುದಿಲ್ಲ ಎನ್ನುವುದನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ? ಎಂದರು.

ಕೇರಳದ ಚಲನಚಿತ್ರೋತ್ಸವದಲ್ಲೂ ಕೇಂದ್ರ ಸರ್ಕಾದವರು ಇದನ್ನೇ ಮಾಡಿದರು. ಆದರೆ, ಅಲ್ಲಿಯ ರಾಜ್ಯ ಸರ್ಕಾರ ಮುಂದೆ ನಿಂತು ಆ ಚಿತ್ರಗಳ ಪ್ರದರ್ಶನಗಳಿಗೆ ಅನುವು ಮಾಡಿಕೊಟ್ಟಿತು. ಅಂತಹ ಪ್ರತಿರೋಧವನ್ನು ಬೆಂಗಳೂರು ಚಲನಚಿತ್ರೋತ್ಸವದಲ್ಲಿ ವ್ಯಕ್ತಪಡಿಸಬೇಕು. ಸರ್ಕಾರ, ಚಲನಚಿತ್ರ ಮಂಡಳಿ ಪ್ರತಿಭಟಿಸಬೇಕು. ನಿಮ್ಮ ರಾಜಕೀಯ ಹುನ್ನಾರಗಳು ನಡೆಯಲ್ಲ ಎನ್ನುವುದನ್ನು ಹೇಳಬೇಕು ಎಂದು ಆಗ್ರಹಿಸಿದರು.

“ನಮ್ಮ ಕೆನ್ನೆಗೆ ನಮ್ಮ ನೋವುಗಳಿಗೆ ನಾವು ಸುರಿಸುವ ಕಣ್ಣೀರಿನ ಪರಿಚಯ ಮಾತ್ರ ಇದ್ದರೆ ಸಾಲದು, ಇನ್ನೊಬ್ಬರು ನೋವಿಗೂ ನಾವು ಅಳುವ ಕಣ್ಣೀರಿನ ಪರಿಚಯವನ್ನೂ ನಮ್ಮ ಕೆನ್ನೆಗೆ ಮಾಡಿದರೆ ಮಾತ್ರ ನಾವು ಮನುಷ್ಯರಾಗೋದು” ಎಂದರು.

ನೀವು ಪ್ಯಾಲೆಸ್ತೀನಿಯನ್ ಸಿನಿಮಾಗಳನ್ನು ಪ್ರದರ್ಶಿಸಲು ಬಿಡದೆ ಇದ್ದರೆ ಈ ವೇದಿಕೆಯಲ್ಲಿ ನಾನು ಅಲ್ಲಿಯ ನೋವನ್ನು ವ್ಯಕ್ತಪಡಿಸುವ ಪದ್ಯವನ್ನು ಓದುತ್ತೇನೆ. ಈ ಮೂಲಕ ಪ್ರತಿರೋಧ ವ್ಯಕ್ತಪಡಿಸುತ್ತೇನೆ ಎಂದ ಪ್ರಕಾಶ್ ರಾಜ್, ಈ ಕೆಳಗಿನ ಪದ್ಯವನ್ನು ಓದಿದರು.

“ಯುದ್ದಗಳು ಕೊನೆಗೊಳ್ಳುತ್ತವೆ, ನಾಯಕರು ಕೈ ಕುಲುಕಿ ತೆರಳುತ್ತಾರೆ..
ಆದರೆ ಆ ವೃದ್ದೆ ತನ್ನ ಮಗನಿಗಾಗಿ ಕಾಯುತ್ತಿರುತ್ತಾಳೆ,
ಆ ಹೆಣ್ಣು ಮಗಳು ತನ್ನ ಗಂಡನಿಗಾಗಿ ಕಾಯುತ್ತಿರುತ್ತಾಳೆ,
ಆ ಮಕ್ಕಳು ತಮ್ಮ ವೀರನಾದ ಅಪ್ಪನಿಗೋಸ್ಕರ ಕಾಯುತ್ತಿವೆ,
ನನ್ನ ಮಣ್ಣನ್ನು, ನನ್ನ ಮಾತೃ ಭೂಮಿಯನ್ನು ಮಾರಿದವರು ಯಾರೆಂದು ನನಗೆ ಗೊತ್ತಿಲ್ಲ,
ಆದರೆ, ಅದಕ್ಕೆ ಬೆಲೆ ತೆತ್ತವರು ಯಾರು ಎಂದು ನಮಗೆ ಗೊತ್ತು”

ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಎನ್ನುತ್ತೇವೆ. ವಿಜಯನಗರ ಜಿಲ್ಲೆಯಲ್ಲಿ ಅಂಕ ಸಮುದ್ರ ಎಂಬ ಒಂದು ಕೆರೆಯಿದೆ. ಅಲ್ಲಿಗೆ ಬೇರೆ ಬೇರೆ ದೇಶಗಳ ಹಕ್ಕಿಗಳು ಬರುತ್ತವೆ. ಅಲ್ಲಿ ರೈತರು ಬೆಳೆದ ಬೆಳೆಗಳನ್ನು ತಿನ್ನುತ್ತವೆ. ಈ ಬಗ್ಗೆ ಕೃಪಾಕರ ಸೇನಾನಿ ಅವರು ಒಬ್ಬರು ರೈತನಲ್ಲಿ ಪ್ರಶ್ನಿಸಿದಾಗ, ಆ ರೈತ “ಗುಬ್ಬಿಗಳು ಸರ್ ಎಷ್ಟು ತಿನ್ನುತ್ತವೆ” ಉತ್ತರಿಸಿದರು. ಇದು ಈ ಮಣ್ಣಿನ ಗುಣ, ಈ ಗುಣ ನಮ್ಮ ಉತ್ಸವಕ್ಕೂ ಬರಬೇಕು ಎಂದು ಪ್ರಕಾಶ್ ಹೇಳಿದರು.

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನೀಡದ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ರಾಯಬಾರಿ ಒತ್ತಾಯಿಸುತ್ತೇನೆ ಎಂದು ಪುನರುಚ್ಚರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...