Homeಕರ್ನಾಟಕಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

- Advertisement -
- Advertisement -

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು.

ಗುರುವಾರ (ಜ.29) ಸಂಜೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ ’17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಬೆಂಗಳೂರಿನ ಚಲನಚಿತ್ರೋತ್ಸವದಲ್ಲಿ ರಾಜಕೀಯ ಪ್ರವೇಶ ಆಗಿದೆ. ಇಂತಹ ಅದ್ಬುತ ಕಾರ್ಯಕ್ರಮದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳನ್ನು ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡುತ್ತಿಲ್ಲ. ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು ಇದನ್ನು ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು ಎಂದು ನಾನು ರಾಯಬಾರಿಯಾಗಿ ಒತ್ತಾಯಿಸುತ್ತಿದ್ದೇನೆ ಎಂದು ಪ್ರಕಾಶ್ ರಾಜ್ ಹೇಳಿದರು.

ನಮ್ಮ ನಾಡಿನ ಕಣ್ಣೀರಿನ ಕಥೆಗಳ ಪುಸ್ತಕ ಬೇರೆ ಭಾಷೆಗೆ ತರ್ಜುಮೆಯಾಗಿ ಬೂಕರ್ ಪ್ರಶಸ್ತಿ ಪಡೆದುಕೊಂಡಾಗ ಸಂಭ್ರಮಿಸಿದ ನಾವು, ನಮ್ಮ ನೆಲಕ್ಕೆ ಇನ್ನೊಬ್ಬರ ಕಣ್ಣೀರಿನ ಕಥೆಗಳನ್ನು ತರಲು ಆಗುವುದಿಲ್ಲ ಎನ್ನುವುದನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ? ಎಂದರು.

ಕೇರಳದ ಚಲನಚಿತ್ರೋತ್ಸವದಲ್ಲೂ ಕೇಂದ್ರ ಸರ್ಕಾದವರು ಇದನ್ನೇ ಮಾಡಿದರು. ಆದರೆ, ಅಲ್ಲಿಯ ರಾಜ್ಯ ಸರ್ಕಾರ ಮುಂದೆ ನಿಂತು ಆ ಚಿತ್ರಗಳ ಪ್ರದರ್ಶನಗಳಿಗೆ ಅನುವು ಮಾಡಿಕೊಟ್ಟಿತು. ಅಂತಹ ಪ್ರತಿರೋಧವನ್ನು ಬೆಂಗಳೂರು ಚಲನಚಿತ್ರೋತ್ಸವದಲ್ಲಿ ವ್ಯಕ್ತಪಡಿಸಬೇಕು. ಸರ್ಕಾರ, ಚಲನಚಿತ್ರ ಮಂಡಳಿ ಪ್ರತಿಭಟಿಸಬೇಕು. ನಿಮ್ಮ ರಾಜಕೀಯ ಹುನ್ನಾರಗಳು ನಡೆಯಲ್ಲ ಎನ್ನುವುದನ್ನು ಹೇಳಬೇಕು ಎಂದು ಆಗ್ರಹಿಸಿದರು.

“ನಮ್ಮ ಕೆನ್ನೆಗೆ ನಮ್ಮ ನೋವುಗಳಿಗೆ ನಾವು ಸುರಿಸುವ ಕಣ್ಣೀರಿನ ಪರಿಚಯ ಮಾತ್ರ ಇದ್ದರೆ ಸಾಲದು, ಇನ್ನೊಬ್ಬರು ನೋವಿಗೂ ನಾವು ಅಳುವ ಕಣ್ಣೀರಿನ ಪರಿಚಯವನ್ನೂ ನಮ್ಮ ಕೆನ್ನೆಗೆ ಮಾಡಿದರೆ ಮಾತ್ರ ನಾವು ಮನುಷ್ಯರಾಗೋದು” ಎಂದರು.

ನೀವು ಪ್ಯಾಲೆಸ್ತೀನಿಯನ್ ಸಿನಿಮಾಗಳನ್ನು ಪ್ರದರ್ಶಿಸಲು ಬಿಡದೆ ಇದ್ದರೆ ಈ ವೇದಿಕೆಯಲ್ಲಿ ನಾನು ಅಲ್ಲಿಯ ನೋವನ್ನು ವ್ಯಕ್ತಪಡಿಸುವ ಪದ್ಯವನ್ನು ಓದುತ್ತೇನೆ. ಈ ಮೂಲಕ ಪ್ರತಿರೋಧ ವ್ಯಕ್ತಪಡಿಸುತ್ತೇನೆ ಎಂದ ಪ್ರಕಾಶ್ ರಾಜ್, ಈ ಕೆಳಗಿನ ಪದ್ಯವನ್ನು ಓದಿದರು.

“ಯುದ್ದಗಳು ಕೊನೆಗೊಳ್ಳುತ್ತವೆ, ನಾಯಕರು ಕೈ ಕುಲುಕಿ ತೆರಳುತ್ತಾರೆ..
ಆದರೆ ಆ ವೃದ್ದೆ ತನ್ನ ಮಗನಿಗಾಗಿ ಕಾಯುತ್ತಿರುತ್ತಾಳೆ,
ಆ ಹೆಣ್ಣು ಮಗಳು ತನ್ನ ಗಂಡನಿಗಾಗಿ ಕಾಯುತ್ತಿರುತ್ತಾಳೆ,
ಆ ಮಕ್ಕಳು ತಮ್ಮ ವೀರನಾದ ಅಪ್ಪನಿಗೋಸ್ಕರ ಕಾಯುತ್ತಿವೆ,
ನನ್ನ ಮಣ್ಣನ್ನು, ನನ್ನ ಮಾತೃ ಭೂಮಿಯನ್ನು ಮಾರಿದವರು ಯಾರೆಂದು ನನಗೆ ಗೊತ್ತಿಲ್ಲ,
ಆದರೆ, ಅದಕ್ಕೆ ಬೆಲೆ ತೆತ್ತವರು ಯಾರು ಎಂದು ನಮಗೆ ಗೊತ್ತು”

ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಎನ್ನುತ್ತೇವೆ. ವಿಜಯನಗರ ಜಿಲ್ಲೆಯಲ್ಲಿ ಅಂಕ ಸಮುದ್ರ ಎಂಬ ಒಂದು ಕೆರೆಯಿದೆ. ಅಲ್ಲಿಗೆ ಬೇರೆ ಬೇರೆ ದೇಶಗಳ ಹಕ್ಕಿಗಳು ಬರುತ್ತವೆ. ಅಲ್ಲಿ ರೈತರು ಬೆಳೆದ ಬೆಳೆಗಳನ್ನು ತಿನ್ನುತ್ತವೆ. ಈ ಬಗ್ಗೆ ಕೃಪಾಕರ ಸೇನಾನಿ ಅವರು ಒಬ್ಬರು ರೈತನಲ್ಲಿ ಪ್ರಶ್ನಿಸಿದಾಗ, ಆ ರೈತ “ಗುಬ್ಬಿಗಳು ಸರ್ ಎಷ್ಟು ತಿನ್ನುತ್ತವೆ” ಉತ್ತರಿಸಿದರು. ಇದು ಈ ಮಣ್ಣಿನ ಗುಣ, ಈ ಗುಣ ನಮ್ಮ ಉತ್ಸವಕ್ಕೂ ಬರಬೇಕು ಎಂದು ಪ್ರಕಾಶ್ ಹೇಳಿದರು.

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನೀಡದ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ರಾಯಬಾರಿ ಒತ್ತಾಯಿಸುತ್ತೇನೆ ಎಂದು ಪುನರುಚ್ಚರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...