Homeಕರ್ನಾಟಕಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

- Advertisement -
- Advertisement -

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು.

ಗುರುವಾರ (ಜ.29) ಸಂಜೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ ’17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಬೆಂಗಳೂರಿನ ಚಲನಚಿತ್ರೋತ್ಸವದಲ್ಲಿ ರಾಜಕೀಯ ಪ್ರವೇಶ ಆಗಿದೆ. ಇಂತಹ ಅದ್ಬುತ ಕಾರ್ಯಕ್ರಮದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳನ್ನು ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡುತ್ತಿಲ್ಲ. ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು ಇದನ್ನು ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು ಎಂದು ನಾನು ರಾಯಬಾರಿಯಾಗಿ ಒತ್ತಾಯಿಸುತ್ತಿದ್ದೇನೆ ಎಂದು ಪ್ರಕಾಶ್ ರಾಜ್ ಹೇಳಿದರು.

ನಮ್ಮ ನಾಡಿನ ಕಣ್ಣೀರಿನ ಕಥೆಗಳ ಪುಸ್ತಕ ಬೇರೆ ಭಾಷೆಗೆ ತರ್ಜುಮೆಯಾಗಿ ಬೂಕರ್ ಪ್ರಶಸ್ತಿ ಪಡೆದುಕೊಂಡಾಗ ಸಂಭ್ರಮಿಸಿದ ನಾವು, ನಮ್ಮ ನೆಲಕ್ಕೆ ಇನ್ನೊಬ್ಬರ ಕಣ್ಣೀರಿನ ಕಥೆಗಳನ್ನು ತರಲು ಆಗುವುದಿಲ್ಲ ಎನ್ನುವುದನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ? ಎಂದರು.

ಕೇರಳದ ಚಲನಚಿತ್ರೋತ್ಸವದಲ್ಲೂ ಕೇಂದ್ರ ಸರ್ಕಾದವರು ಇದನ್ನೇ ಮಾಡಿದರು. ಆದರೆ, ಅಲ್ಲಿಯ ರಾಜ್ಯ ಸರ್ಕಾರ ಮುಂದೆ ನಿಂತು ಆ ಚಿತ್ರಗಳ ಪ್ರದರ್ಶನಗಳಿಗೆ ಅನುವು ಮಾಡಿಕೊಟ್ಟಿತು. ಅಂತಹ ಪ್ರತಿರೋಧವನ್ನು ಬೆಂಗಳೂರು ಚಲನಚಿತ್ರೋತ್ಸವದಲ್ಲಿ ವ್ಯಕ್ತಪಡಿಸಬೇಕು. ಸರ್ಕಾರ, ಚಲನಚಿತ್ರ ಮಂಡಳಿ ಪ್ರತಿಭಟಿಸಬೇಕು. ನಿಮ್ಮ ರಾಜಕೀಯ ಹುನ್ನಾರಗಳು ನಡೆಯಲ್ಲ ಎನ್ನುವುದನ್ನು ಹೇಳಬೇಕು ಎಂದು ಆಗ್ರಹಿಸಿದರು.

“ನಮ್ಮ ಕೆನ್ನೆಗೆ ನಮ್ಮ ನೋವುಗಳಿಗೆ ನಾವು ಸುರಿಸುವ ಕಣ್ಣೀರಿನ ಪರಿಚಯ ಮಾತ್ರ ಇದ್ದರೆ ಸಾಲದು, ಇನ್ನೊಬ್ಬರು ನೋವಿಗೂ ನಾವು ಅಳುವ ಕಣ್ಣೀರಿನ ಪರಿಚಯವನ್ನೂ ನಮ್ಮ ಕೆನ್ನೆಗೆ ಮಾಡಿದರೆ ಮಾತ್ರ ನಾವು ಮನುಷ್ಯರಾಗೋದು” ಎಂದರು.

ನೀವು ಪ್ಯಾಲೆಸ್ತೀನಿಯನ್ ಸಿನಿಮಾಗಳನ್ನು ಪ್ರದರ್ಶಿಸಲು ಬಿಡದೆ ಇದ್ದರೆ ಈ ವೇದಿಕೆಯಲ್ಲಿ ನಾನು ಅಲ್ಲಿಯ ನೋವನ್ನು ವ್ಯಕ್ತಪಡಿಸುವ ಪದ್ಯವನ್ನು ಓದುತ್ತೇನೆ. ಈ ಮೂಲಕ ಪ್ರತಿರೋಧ ವ್ಯಕ್ತಪಡಿಸುತ್ತೇನೆ ಎಂದ ಪ್ರಕಾಶ್ ರಾಜ್, ಈ ಕೆಳಗಿನ ಪದ್ಯವನ್ನು ಓದಿದರು.

“ಯುದ್ದಗಳು ಕೊನೆಗೊಳ್ಳುತ್ತವೆ, ನಾಯಕರು ಕೈ ಕುಲುಕಿ ತೆರಳುತ್ತಾರೆ..
ಆದರೆ ಆ ವೃದ್ದೆ ತನ್ನ ಮಗನಿಗಾಗಿ ಕಾಯುತ್ತಿರುತ್ತಾಳೆ,
ಆ ಹೆಣ್ಣು ಮಗಳು ತನ್ನ ಗಂಡನಿಗಾಗಿ ಕಾಯುತ್ತಿರುತ್ತಾಳೆ,
ಆ ಮಕ್ಕಳು ತಮ್ಮ ವೀರನಾದ ಅಪ್ಪನಿಗೋಸ್ಕರ ಕಾಯುತ್ತಿವೆ,
ನನ್ನ ಮಣ್ಣನ್ನು, ನನ್ನ ಮಾತೃ ಭೂಮಿಯನ್ನು ಮಾರಿದವರು ಯಾರೆಂದು ನನಗೆ ಗೊತ್ತಿಲ್ಲ,
ಆದರೆ, ಅದಕ್ಕೆ ಬೆಲೆ ತೆತ್ತವರು ಯಾರು ಎಂದು ನಮಗೆ ಗೊತ್ತು”

ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಎನ್ನುತ್ತೇವೆ. ವಿಜಯನಗರ ಜಿಲ್ಲೆಯಲ್ಲಿ ಅಂಕ ಸಮುದ್ರ ಎಂಬ ಒಂದು ಕೆರೆಯಿದೆ. ಅಲ್ಲಿಗೆ ಬೇರೆ ಬೇರೆ ದೇಶಗಳ ಹಕ್ಕಿಗಳು ಬರುತ್ತವೆ. ಅಲ್ಲಿ ರೈತರು ಬೆಳೆದ ಬೆಳೆಗಳನ್ನು ತಿನ್ನುತ್ತವೆ. ಈ ಬಗ್ಗೆ ಕೃಪಾಕರ ಸೇನಾನಿ ಅವರು ಒಬ್ಬರು ರೈತನಲ್ಲಿ ಪ್ರಶ್ನಿಸಿದಾಗ, ಆ ರೈತ “ಗುಬ್ಬಿಗಳು ಸರ್ ಎಷ್ಟು ತಿನ್ನುತ್ತವೆ” ಉತ್ತರಿಸಿದರು. ಇದು ಈ ಮಣ್ಣಿನ ಗುಣ, ಈ ಗುಣ ನಮ್ಮ ಉತ್ಸವಕ್ಕೂ ಬರಬೇಕು ಎಂದು ಪ್ರಕಾಶ್ ಹೇಳಿದರು.

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನೀಡದ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ರಾಯಬಾರಿ ಒತ್ತಾಯಿಸುತ್ತೇನೆ ಎಂದು ಪುನರುಚ್ಚರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...