Homeಕರ್ನಾಟಕಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ - AICCTU ಆಕ್ರೋಶ

ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ – AICCTU ಆಕ್ರೋಶ

- Advertisement -
- Advertisement -

ದೇಶದಾದ್ಯಂತ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದ ನಂತರ ದೇಶದಾದ್ಯಂತ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುತ್ತಿದೆ. ಆದರೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ, ಅವರ ಶ್ರಮದಿಂದಾಗಿ ಶೇಖರಣೆಯಾದ ಕಲ್ಯಾಣ ನಿಧಿಯಿಂದ ಲಸಿಕೆ ನೀಡುವುದಕ್ಕೆ ರಾಜ್ಯ ಸರ್ಕಾರ ಹೊರಟಿದ್ದು, ಒಂದು ಡೋಸ್‌ಗೆ ರೂ.789 ಯಂತೆ ಒಟ್ಟು 15.60 ಕೋಟಿ ರೂ.ಗಳನ್ನು ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಮ್‌ಗಳಿಗೆ ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

ಕಾರ್ಮಿಕರ ಸುರಕ್ಷತೆ, ಕಲ್ಯಾಣ ಮತ್ತು ಸೇವೆಗಾಗಿ, “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು (ಉದ್ಯೋಗ ಮತ್ತು ಸೇವಾ ನಿಯಮಗಳ ನಿಯಂತ್ರಣ) ಕಾಯಿದೆ-1996” ರ ಅಡಿಯಲ್ಲಿ “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ”ಯನ್ನು ಸ್ಥಾಪಿಸಲಾಗಿದೆ. “ಮಂಡಳಿ ಇರುವುದು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಉದ್ಯೋಗ ಮತ್ತು ಸೇವೆಯ ಪರಿಸ್ಥಿತಿಗಳನ್ನು ನಿಯಂತ್ರಿಸಲು ಮತ್ತು ಅವರ ಸುರಕ್ಷತೆ, ಆರೋಗ್ಯ ಮತ್ತು ಕಲ್ಯಾಣ ಕ್ರಮಗಳನ್ನು ಜಾರಿಗೊಳಿಸುವುದಕ್ಕಾಗಿ” ಎಂದು AICCTU ಹೇಳಿದ್ದು, ಸರ್ಕಾರದ ಕಾರ್ಯಾದೇಶ ದಿಗ್ಬ್ರಮೆ ಉಂಟುಮಾಡಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರೆ ಸುಮಾರು 30 ಲಕ್ಷ ಜನರಿದ್ದಾರೆ. ಆದರೆ ಪ್ರಸ್ತುತ ಸರ್ಕಾರ ಕೇವಲ 2 ಲಕ್ಷ ಡೋಸ್‌ಗಳಿಗೆ ಕಾರ್ಮಿಕರ ಖಾಸಗಿ ಆಸ್ಪತ್ರಗೆ ಬಿಡುಗಡೆ ಮಾಡಲಾಗಿದೆ.

ಕಾರ್ಮಿಕ ಸಂಘಟನೆ AICCTU ಯ ಪದಾದಿಕಾರಿಯೊಬ್ಬರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರ ಕಾರ್ಮಿಕರಲ್ಲಿ 60% ಜನರು ಈಗಾಗಲೆ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಹೊರ ರಾಜ್ಯದಿಂದ ಬರುವ ವಲಸೆ ಕಾರ್ಮಿಕರು ಕೂಡಾ ಲಸಿಕೆ ಪಡೆದೇ ರಾಜ್ಯ ಪ್ರವೇಶಿಸುತ್ತಾರೆ. ಲಾಕ್‌ಡೌನ್‌ ಸಮಯದಲ್ಲಿ ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ನೇರವಾಗಲು ರಾಜ್ಯಕ್ಕೆ ವಿನಂತಿಸಿದಾಗ ಅದಕ್ಕೆ ಸರ್ಕಾರ ಸ್ಪಂದಿಸಿರಲಿಲ್ಲ. ಈಗ, ಕಾರ್ಮಿಕರ ನಿಧಿಯಿಂದ 400 ಆಸ್ಪತ್ರೆಗಳಿಗೆ ಹಣ ಬಿಡುಗಡೆ ಮಾಡಿದೆ. ಸರ್ಕಾರದ ಈ ನಡೆ ಖಾಸಗಿ ಆಸ್ಪತ್ರೆಗಳ ಅವರ ಹಿತ ಕಾಯಲು ಬೇಕಾಗಿಯೆ ಹೊರತು ಕಾರ್ಮಿಕರ ಹಿತ ಕಾಯಲು ಅಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕಾರ್ಮಿಕರ ಅನುಕೂಲಕ್ಕಾಗಿ ಮೀಸಲಾದ ಹಣವನ್ನು ನೇರವಾಗಿ ಆ ಕಾರ್ಮಿಕರ ಖಾತೆಗೆ ಜಮಾ ಮಾಡಬೇಕಾಗುತ್ತದೆ. ಅವರ ಹೆಸರಲ್ಲಿ ಕಾರ್ಪೋರೇಟ್‌ ಆಸ್ಪತ್ರೆಗಳ ಖಾತೆಗೆ ಜಮಾ ಮಾಡಲು ಹೊರಟಿರುವುದು ಅತ್ಯಂತ ಖಂಡನೀಯ. ಸದರಿ ಕಾರ್ಯಾದೇಶ ಹೊರಡಿಸುವುದಕ್ಕಿಂತ ಮುಂಚೆ ಕಾರ್ಮಿಕರನ್ನು ಅಥವಾ ಕಾರ್ಮಿಕ ಸಂಘಟನೆಗಳನ್ನು ಸಂಪರ್ಕಿಸಿ ಚರ್ಚೆ ನಡೆಸಬೇಕೆನ್ನುವ ಸಾಮಾನ್ಯ ಜ್ಞಾನ ಸರ್ಕಾರ ಮತ್ತು ಆಡಳಿತ ವಲಯಕ್ಕೆ ಇಲ್ಲದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಧಿಕ್ಕರಿಸಿದಂತಿದೆ” ಎಂದು AICCTU ಹೇಳಿದೆ.

ಇದನ್ನೂ ಓದಿ: ಸರಕಾರಿ ಜಾಹೀರಾತು 100% ಕಡಿತ: ಸಿಎಎ ಪ್ರತಿಭಟನೆಗಳ ವರದಿ ಮಾಡಿದ್ದಕ್ಕೆ ಬೆಲೆ ತೆರುತ್ತಿದೆಯೇ ವಾರ್ತಾಭಾರತಿ ಕನ್ನಡ ದೈನಿಕ?

“ಆಡಳಿತ ನಡೆಸುತ್ತಿರುವ ಕಾರ್ಪೋರೇಟ್‌ ಗುಲಾಮಿ ಸರ್ಕಾರದ ನೀತಿಯಿಂದಾಗಿ ಕಾರ್ಮಿಕರ ಕಲ್ಯಾಣ ಮಂಡಳಿಯು, ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ಹಣವನ್ನು ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಮ್‌ ಅಸೋಶಿಯೇಷನ್‌ರವರ ಹಿತ ಕಾಪಾಡುವುದಕ್ಕಾಗಿ ದುರುಪಯೋಗ ಪಡಿಸಿಕೊಳ್ಳಲು ಹೊರಟಿರುವುದು ದುರದೃಷ್ಟಕರ ಸಂಗತಿ” ಎಂದು ಅದು ಹೇಳಿದೆ.

“ಕೊರೊನಾ ಎರಡನೇ ಅಲೆಯಲ್ಲಿ ಕಾರ್ಮಿಕರ ಕಾಳಜಿ ವಹಿಸದ ರಾಜ್ಯ ಸರ್ಕಾರ, ಈಗ ಕಾರ್ಮಿಕರ ಕಲ್ಯಾಣಕ್ಕಾಗಿ ಉಳಿತಾಯ ಮಾಡಿದ್ದ ಹಣವನ್ನು ಬೇಜವಾಬ್ದಾರಿಯಿಂದ ಖರ್ಚು ಮಾಡುತ್ತಿದೆ. ತಮ್ಮ ಜವಾಬ್ದಾರಿಯಿಂದ ಕಳಚಿಕೊಂಡು ಈಗ ಖಾಸಗೀ ವಲಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿರುವ ಸರ್ಕಾರವನ್ನು ನಾವು ಖಂಡಿಸುತ್ತೇವೆ” ಎಂದು AICCTU ತಿಳಿಸಿದೆ.
ಕಾರ್ಮಿಕ ಸಂಘಟನೆಗಳ ಅಹವಾಲುಗಳನ್ನು ಕೇಳದೆ, ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ನಿಧಿಯನ್ನು ಲೂಟಿ ಮಾಡುವುದಕ್ಕಾಗಿಯೇ ಹೊರಡಿಸಿರುವ ಕಾರ್ಯಾದೇಶವನ್ನು ತಕ್ಷಣವೇ ರದ್ದುಗೊಳಿಸಬೇಕೆಂದು AICCTU ಆಗ್ರಹಿಸಿದ್ದು, “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿರರಿಗೆ ಉಚಿತವಾಗಿ ಕೋವಿಡ್‌ ಲಸಿಕೆ ನೀಡಬೇಕೆಂದು ಮತ್ತು ಈ ಕಾರ್ಮಿಕರ ಕಲ್ಯಾಣ ನಿಧಿಯನ್ನು ಕಾರ್ಮಿಕರ ಕಲ್ಯಾಣ ಯೋಜನೆಗಳಿಗಾಗಿಯೇ ಉಪಯೋಗಿಸಬೇಕು” ಎಂದು ಅದು ಹೇಳಿದೆ.

ಇದನ್ನೂ ಓದಿ: ಕಾರ್ಮಿಕರ ದುಡಿಯುವ ಅವಧಿಯನ್ನು 10 ಗಂಟೆಗೆ ಏರಿಸಿದ ರಾಜ್ಯ ಸರ್ಕಾರ: ಕಾರ್ಮಿಕರ ಸಂಘಟನೆಗಳ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...