Homeಕರ್ನಾಟಕಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ - AICCTU ಆಕ್ರೋಶ

ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ – AICCTU ಆಕ್ರೋಶ

- Advertisement -
- Advertisement -

ದೇಶದಾದ್ಯಂತ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದ ನಂತರ ದೇಶದಾದ್ಯಂತ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುತ್ತಿದೆ. ಆದರೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ, ಅವರ ಶ್ರಮದಿಂದಾಗಿ ಶೇಖರಣೆಯಾದ ಕಲ್ಯಾಣ ನಿಧಿಯಿಂದ ಲಸಿಕೆ ನೀಡುವುದಕ್ಕೆ ರಾಜ್ಯ ಸರ್ಕಾರ ಹೊರಟಿದ್ದು, ಒಂದು ಡೋಸ್‌ಗೆ ರೂ.789 ಯಂತೆ ಒಟ್ಟು 15.60 ಕೋಟಿ ರೂ.ಗಳನ್ನು ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಮ್‌ಗಳಿಗೆ ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

ಕಾರ್ಮಿಕರ ಸುರಕ್ಷತೆ, ಕಲ್ಯಾಣ ಮತ್ತು ಸೇವೆಗಾಗಿ, “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು (ಉದ್ಯೋಗ ಮತ್ತು ಸೇವಾ ನಿಯಮಗಳ ನಿಯಂತ್ರಣ) ಕಾಯಿದೆ-1996” ರ ಅಡಿಯಲ್ಲಿ “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ”ಯನ್ನು ಸ್ಥಾಪಿಸಲಾಗಿದೆ. “ಮಂಡಳಿ ಇರುವುದು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಉದ್ಯೋಗ ಮತ್ತು ಸೇವೆಯ ಪರಿಸ್ಥಿತಿಗಳನ್ನು ನಿಯಂತ್ರಿಸಲು ಮತ್ತು ಅವರ ಸುರಕ್ಷತೆ, ಆರೋಗ್ಯ ಮತ್ತು ಕಲ್ಯಾಣ ಕ್ರಮಗಳನ್ನು ಜಾರಿಗೊಳಿಸುವುದಕ್ಕಾಗಿ” ಎಂದು AICCTU ಹೇಳಿದ್ದು, ಸರ್ಕಾರದ ಕಾರ್ಯಾದೇಶ ದಿಗ್ಬ್ರಮೆ ಉಂಟುಮಾಡಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರೆ ಸುಮಾರು 30 ಲಕ್ಷ ಜನರಿದ್ದಾರೆ. ಆದರೆ ಪ್ರಸ್ತುತ ಸರ್ಕಾರ ಕೇವಲ 2 ಲಕ್ಷ ಡೋಸ್‌ಗಳಿಗೆ ಕಾರ್ಮಿಕರ ಖಾಸಗಿ ಆಸ್ಪತ್ರಗೆ ಬಿಡುಗಡೆ ಮಾಡಲಾಗಿದೆ.

ಕಾರ್ಮಿಕ ಸಂಘಟನೆ AICCTU ಯ ಪದಾದಿಕಾರಿಯೊಬ್ಬರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರ ಕಾರ್ಮಿಕರಲ್ಲಿ 60% ಜನರು ಈಗಾಗಲೆ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಹೊರ ರಾಜ್ಯದಿಂದ ಬರುವ ವಲಸೆ ಕಾರ್ಮಿಕರು ಕೂಡಾ ಲಸಿಕೆ ಪಡೆದೇ ರಾಜ್ಯ ಪ್ರವೇಶಿಸುತ್ತಾರೆ. ಲಾಕ್‌ಡೌನ್‌ ಸಮಯದಲ್ಲಿ ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ನೇರವಾಗಲು ರಾಜ್ಯಕ್ಕೆ ವಿನಂತಿಸಿದಾಗ ಅದಕ್ಕೆ ಸರ್ಕಾರ ಸ್ಪಂದಿಸಿರಲಿಲ್ಲ. ಈಗ, ಕಾರ್ಮಿಕರ ನಿಧಿಯಿಂದ 400 ಆಸ್ಪತ್ರೆಗಳಿಗೆ ಹಣ ಬಿಡುಗಡೆ ಮಾಡಿದೆ. ಸರ್ಕಾರದ ಈ ನಡೆ ಖಾಸಗಿ ಆಸ್ಪತ್ರೆಗಳ ಅವರ ಹಿತ ಕಾಯಲು ಬೇಕಾಗಿಯೆ ಹೊರತು ಕಾರ್ಮಿಕರ ಹಿತ ಕಾಯಲು ಅಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕಾರ್ಮಿಕರ ಅನುಕೂಲಕ್ಕಾಗಿ ಮೀಸಲಾದ ಹಣವನ್ನು ನೇರವಾಗಿ ಆ ಕಾರ್ಮಿಕರ ಖಾತೆಗೆ ಜಮಾ ಮಾಡಬೇಕಾಗುತ್ತದೆ. ಅವರ ಹೆಸರಲ್ಲಿ ಕಾರ್ಪೋರೇಟ್‌ ಆಸ್ಪತ್ರೆಗಳ ಖಾತೆಗೆ ಜಮಾ ಮಾಡಲು ಹೊರಟಿರುವುದು ಅತ್ಯಂತ ಖಂಡನೀಯ. ಸದರಿ ಕಾರ್ಯಾದೇಶ ಹೊರಡಿಸುವುದಕ್ಕಿಂತ ಮುಂಚೆ ಕಾರ್ಮಿಕರನ್ನು ಅಥವಾ ಕಾರ್ಮಿಕ ಸಂಘಟನೆಗಳನ್ನು ಸಂಪರ್ಕಿಸಿ ಚರ್ಚೆ ನಡೆಸಬೇಕೆನ್ನುವ ಸಾಮಾನ್ಯ ಜ್ಞಾನ ಸರ್ಕಾರ ಮತ್ತು ಆಡಳಿತ ವಲಯಕ್ಕೆ ಇಲ್ಲದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಧಿಕ್ಕರಿಸಿದಂತಿದೆ” ಎಂದು AICCTU ಹೇಳಿದೆ.

ಇದನ್ನೂ ಓದಿ: ಸರಕಾರಿ ಜಾಹೀರಾತು 100% ಕಡಿತ: ಸಿಎಎ ಪ್ರತಿಭಟನೆಗಳ ವರದಿ ಮಾಡಿದ್ದಕ್ಕೆ ಬೆಲೆ ತೆರುತ್ತಿದೆಯೇ ವಾರ್ತಾಭಾರತಿ ಕನ್ನಡ ದೈನಿಕ?

“ಆಡಳಿತ ನಡೆಸುತ್ತಿರುವ ಕಾರ್ಪೋರೇಟ್‌ ಗುಲಾಮಿ ಸರ್ಕಾರದ ನೀತಿಯಿಂದಾಗಿ ಕಾರ್ಮಿಕರ ಕಲ್ಯಾಣ ಮಂಡಳಿಯು, ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ಹಣವನ್ನು ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಮ್‌ ಅಸೋಶಿಯೇಷನ್‌ರವರ ಹಿತ ಕಾಪಾಡುವುದಕ್ಕಾಗಿ ದುರುಪಯೋಗ ಪಡಿಸಿಕೊಳ್ಳಲು ಹೊರಟಿರುವುದು ದುರದೃಷ್ಟಕರ ಸಂಗತಿ” ಎಂದು ಅದು ಹೇಳಿದೆ.

“ಕೊರೊನಾ ಎರಡನೇ ಅಲೆಯಲ್ಲಿ ಕಾರ್ಮಿಕರ ಕಾಳಜಿ ವಹಿಸದ ರಾಜ್ಯ ಸರ್ಕಾರ, ಈಗ ಕಾರ್ಮಿಕರ ಕಲ್ಯಾಣಕ್ಕಾಗಿ ಉಳಿತಾಯ ಮಾಡಿದ್ದ ಹಣವನ್ನು ಬೇಜವಾಬ್ದಾರಿಯಿಂದ ಖರ್ಚು ಮಾಡುತ್ತಿದೆ. ತಮ್ಮ ಜವಾಬ್ದಾರಿಯಿಂದ ಕಳಚಿಕೊಂಡು ಈಗ ಖಾಸಗೀ ವಲಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿರುವ ಸರ್ಕಾರವನ್ನು ನಾವು ಖಂಡಿಸುತ್ತೇವೆ” ಎಂದು AICCTU ತಿಳಿಸಿದೆ.
ಕಾರ್ಮಿಕ ಸಂಘಟನೆಗಳ ಅಹವಾಲುಗಳನ್ನು ಕೇಳದೆ, ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ನಿಧಿಯನ್ನು ಲೂಟಿ ಮಾಡುವುದಕ್ಕಾಗಿಯೇ ಹೊರಡಿಸಿರುವ ಕಾರ್ಯಾದೇಶವನ್ನು ತಕ್ಷಣವೇ ರದ್ದುಗೊಳಿಸಬೇಕೆಂದು AICCTU ಆಗ್ರಹಿಸಿದ್ದು, “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿರರಿಗೆ ಉಚಿತವಾಗಿ ಕೋವಿಡ್‌ ಲಸಿಕೆ ನೀಡಬೇಕೆಂದು ಮತ್ತು ಈ ಕಾರ್ಮಿಕರ ಕಲ್ಯಾಣ ನಿಧಿಯನ್ನು ಕಾರ್ಮಿಕರ ಕಲ್ಯಾಣ ಯೋಜನೆಗಳಿಗಾಗಿಯೇ ಉಪಯೋಗಿಸಬೇಕು” ಎಂದು ಅದು ಹೇಳಿದೆ.

ಇದನ್ನೂ ಓದಿ: ಕಾರ್ಮಿಕರ ದುಡಿಯುವ ಅವಧಿಯನ್ನು 10 ಗಂಟೆಗೆ ಏರಿಸಿದ ರಾಜ್ಯ ಸರ್ಕಾರ: ಕಾರ್ಮಿಕರ ಸಂಘಟನೆಗಳ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...