Homeಕರ್ನಾಟಕಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ - AICCTU ಆಕ್ರೋಶ

ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ – AICCTU ಆಕ್ರೋಶ

- Advertisement -
- Advertisement -

ದೇಶದಾದ್ಯಂತ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದ ನಂತರ ದೇಶದಾದ್ಯಂತ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುತ್ತಿದೆ. ಆದರೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ, ಅವರ ಶ್ರಮದಿಂದಾಗಿ ಶೇಖರಣೆಯಾದ ಕಲ್ಯಾಣ ನಿಧಿಯಿಂದ ಲಸಿಕೆ ನೀಡುವುದಕ್ಕೆ ರಾಜ್ಯ ಸರ್ಕಾರ ಹೊರಟಿದ್ದು, ಒಂದು ಡೋಸ್‌ಗೆ ರೂ.789 ಯಂತೆ ಒಟ್ಟು 15.60 ಕೋಟಿ ರೂ.ಗಳನ್ನು ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಮ್‌ಗಳಿಗೆ ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

ಕಾರ್ಮಿಕರ ಸುರಕ್ಷತೆ, ಕಲ್ಯಾಣ ಮತ್ತು ಸೇವೆಗಾಗಿ, “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು (ಉದ್ಯೋಗ ಮತ್ತು ಸೇವಾ ನಿಯಮಗಳ ನಿಯಂತ್ರಣ) ಕಾಯಿದೆ-1996” ರ ಅಡಿಯಲ್ಲಿ “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ”ಯನ್ನು ಸ್ಥಾಪಿಸಲಾಗಿದೆ. “ಮಂಡಳಿ ಇರುವುದು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಉದ್ಯೋಗ ಮತ್ತು ಸೇವೆಯ ಪರಿಸ್ಥಿತಿಗಳನ್ನು ನಿಯಂತ್ರಿಸಲು ಮತ್ತು ಅವರ ಸುರಕ್ಷತೆ, ಆರೋಗ್ಯ ಮತ್ತು ಕಲ್ಯಾಣ ಕ್ರಮಗಳನ್ನು ಜಾರಿಗೊಳಿಸುವುದಕ್ಕಾಗಿ” ಎಂದು AICCTU ಹೇಳಿದ್ದು, ಸರ್ಕಾರದ ಕಾರ್ಯಾದೇಶ ದಿಗ್ಬ್ರಮೆ ಉಂಟುಮಾಡಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರೆ ಸುಮಾರು 30 ಲಕ್ಷ ಜನರಿದ್ದಾರೆ. ಆದರೆ ಪ್ರಸ್ತುತ ಸರ್ಕಾರ ಕೇವಲ 2 ಲಕ್ಷ ಡೋಸ್‌ಗಳಿಗೆ ಕಾರ್ಮಿಕರ ಖಾಸಗಿ ಆಸ್ಪತ್ರಗೆ ಬಿಡುಗಡೆ ಮಾಡಲಾಗಿದೆ.

ಕಾರ್ಮಿಕ ಸಂಘಟನೆ AICCTU ಯ ಪದಾದಿಕಾರಿಯೊಬ್ಬರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರ ಕಾರ್ಮಿಕರಲ್ಲಿ 60% ಜನರು ಈಗಾಗಲೆ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಹೊರ ರಾಜ್ಯದಿಂದ ಬರುವ ವಲಸೆ ಕಾರ್ಮಿಕರು ಕೂಡಾ ಲಸಿಕೆ ಪಡೆದೇ ರಾಜ್ಯ ಪ್ರವೇಶಿಸುತ್ತಾರೆ. ಲಾಕ್‌ಡೌನ್‌ ಸಮಯದಲ್ಲಿ ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ನೇರವಾಗಲು ರಾಜ್ಯಕ್ಕೆ ವಿನಂತಿಸಿದಾಗ ಅದಕ್ಕೆ ಸರ್ಕಾರ ಸ್ಪಂದಿಸಿರಲಿಲ್ಲ. ಈಗ, ಕಾರ್ಮಿಕರ ನಿಧಿಯಿಂದ 400 ಆಸ್ಪತ್ರೆಗಳಿಗೆ ಹಣ ಬಿಡುಗಡೆ ಮಾಡಿದೆ. ಸರ್ಕಾರದ ಈ ನಡೆ ಖಾಸಗಿ ಆಸ್ಪತ್ರೆಗಳ ಅವರ ಹಿತ ಕಾಯಲು ಬೇಕಾಗಿಯೆ ಹೊರತು ಕಾರ್ಮಿಕರ ಹಿತ ಕಾಯಲು ಅಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕಾರ್ಮಿಕರ ಅನುಕೂಲಕ್ಕಾಗಿ ಮೀಸಲಾದ ಹಣವನ್ನು ನೇರವಾಗಿ ಆ ಕಾರ್ಮಿಕರ ಖಾತೆಗೆ ಜಮಾ ಮಾಡಬೇಕಾಗುತ್ತದೆ. ಅವರ ಹೆಸರಲ್ಲಿ ಕಾರ್ಪೋರೇಟ್‌ ಆಸ್ಪತ್ರೆಗಳ ಖಾತೆಗೆ ಜಮಾ ಮಾಡಲು ಹೊರಟಿರುವುದು ಅತ್ಯಂತ ಖಂಡನೀಯ. ಸದರಿ ಕಾರ್ಯಾದೇಶ ಹೊರಡಿಸುವುದಕ್ಕಿಂತ ಮುಂಚೆ ಕಾರ್ಮಿಕರನ್ನು ಅಥವಾ ಕಾರ್ಮಿಕ ಸಂಘಟನೆಗಳನ್ನು ಸಂಪರ್ಕಿಸಿ ಚರ್ಚೆ ನಡೆಸಬೇಕೆನ್ನುವ ಸಾಮಾನ್ಯ ಜ್ಞಾನ ಸರ್ಕಾರ ಮತ್ತು ಆಡಳಿತ ವಲಯಕ್ಕೆ ಇಲ್ಲದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಧಿಕ್ಕರಿಸಿದಂತಿದೆ” ಎಂದು AICCTU ಹೇಳಿದೆ.

ಇದನ್ನೂ ಓದಿ: ಸರಕಾರಿ ಜಾಹೀರಾತು 100% ಕಡಿತ: ಸಿಎಎ ಪ್ರತಿಭಟನೆಗಳ ವರದಿ ಮಾಡಿದ್ದಕ್ಕೆ ಬೆಲೆ ತೆರುತ್ತಿದೆಯೇ ವಾರ್ತಾಭಾರತಿ ಕನ್ನಡ ದೈನಿಕ?

“ಆಡಳಿತ ನಡೆಸುತ್ತಿರುವ ಕಾರ್ಪೋರೇಟ್‌ ಗುಲಾಮಿ ಸರ್ಕಾರದ ನೀತಿಯಿಂದಾಗಿ ಕಾರ್ಮಿಕರ ಕಲ್ಯಾಣ ಮಂಡಳಿಯು, ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ಹಣವನ್ನು ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಮ್‌ ಅಸೋಶಿಯೇಷನ್‌ರವರ ಹಿತ ಕಾಪಾಡುವುದಕ್ಕಾಗಿ ದುರುಪಯೋಗ ಪಡಿಸಿಕೊಳ್ಳಲು ಹೊರಟಿರುವುದು ದುರದೃಷ್ಟಕರ ಸಂಗತಿ” ಎಂದು ಅದು ಹೇಳಿದೆ.

“ಕೊರೊನಾ ಎರಡನೇ ಅಲೆಯಲ್ಲಿ ಕಾರ್ಮಿಕರ ಕಾಳಜಿ ವಹಿಸದ ರಾಜ್ಯ ಸರ್ಕಾರ, ಈಗ ಕಾರ್ಮಿಕರ ಕಲ್ಯಾಣಕ್ಕಾಗಿ ಉಳಿತಾಯ ಮಾಡಿದ್ದ ಹಣವನ್ನು ಬೇಜವಾಬ್ದಾರಿಯಿಂದ ಖರ್ಚು ಮಾಡುತ್ತಿದೆ. ತಮ್ಮ ಜವಾಬ್ದಾರಿಯಿಂದ ಕಳಚಿಕೊಂಡು ಈಗ ಖಾಸಗೀ ವಲಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿರುವ ಸರ್ಕಾರವನ್ನು ನಾವು ಖಂಡಿಸುತ್ತೇವೆ” ಎಂದು AICCTU ತಿಳಿಸಿದೆ.
ಕಾರ್ಮಿಕ ಸಂಘಟನೆಗಳ ಅಹವಾಲುಗಳನ್ನು ಕೇಳದೆ, ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ನಿಧಿಯನ್ನು ಲೂಟಿ ಮಾಡುವುದಕ್ಕಾಗಿಯೇ ಹೊರಡಿಸಿರುವ ಕಾರ್ಯಾದೇಶವನ್ನು ತಕ್ಷಣವೇ ರದ್ದುಗೊಳಿಸಬೇಕೆಂದು AICCTU ಆಗ್ರಹಿಸಿದ್ದು, “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿರರಿಗೆ ಉಚಿತವಾಗಿ ಕೋವಿಡ್‌ ಲಸಿಕೆ ನೀಡಬೇಕೆಂದು ಮತ್ತು ಈ ಕಾರ್ಮಿಕರ ಕಲ್ಯಾಣ ನಿಧಿಯನ್ನು ಕಾರ್ಮಿಕರ ಕಲ್ಯಾಣ ಯೋಜನೆಗಳಿಗಾಗಿಯೇ ಉಪಯೋಗಿಸಬೇಕು” ಎಂದು ಅದು ಹೇಳಿದೆ.

ಇದನ್ನೂ ಓದಿ: ಕಾರ್ಮಿಕರ ದುಡಿಯುವ ಅವಧಿಯನ್ನು 10 ಗಂಟೆಗೆ ಏರಿಸಿದ ರಾಜ್ಯ ಸರ್ಕಾರ: ಕಾರ್ಮಿಕರ ಸಂಘಟನೆಗಳ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...