Homeಕರ್ನಾಟಕಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ - AICCTU ಆಕ್ರೋಶ

ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ – AICCTU ಆಕ್ರೋಶ

- Advertisement -
- Advertisement -

ದೇಶದಾದ್ಯಂತ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದ ನಂತರ ದೇಶದಾದ್ಯಂತ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುತ್ತಿದೆ. ಆದರೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ, ಅವರ ಶ್ರಮದಿಂದಾಗಿ ಶೇಖರಣೆಯಾದ ಕಲ್ಯಾಣ ನಿಧಿಯಿಂದ ಲಸಿಕೆ ನೀಡುವುದಕ್ಕೆ ರಾಜ್ಯ ಸರ್ಕಾರ ಹೊರಟಿದ್ದು, ಒಂದು ಡೋಸ್‌ಗೆ ರೂ.789 ಯಂತೆ ಒಟ್ಟು 15.60 ಕೋಟಿ ರೂ.ಗಳನ್ನು ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಮ್‌ಗಳಿಗೆ ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

ಕಾರ್ಮಿಕರ ಸುರಕ್ಷತೆ, ಕಲ್ಯಾಣ ಮತ್ತು ಸೇವೆಗಾಗಿ, “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು (ಉದ್ಯೋಗ ಮತ್ತು ಸೇವಾ ನಿಯಮಗಳ ನಿಯಂತ್ರಣ) ಕಾಯಿದೆ-1996” ರ ಅಡಿಯಲ್ಲಿ “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ”ಯನ್ನು ಸ್ಥಾಪಿಸಲಾಗಿದೆ. “ಮಂಡಳಿ ಇರುವುದು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಉದ್ಯೋಗ ಮತ್ತು ಸೇವೆಯ ಪರಿಸ್ಥಿತಿಗಳನ್ನು ನಿಯಂತ್ರಿಸಲು ಮತ್ತು ಅವರ ಸುರಕ್ಷತೆ, ಆರೋಗ್ಯ ಮತ್ತು ಕಲ್ಯಾಣ ಕ್ರಮಗಳನ್ನು ಜಾರಿಗೊಳಿಸುವುದಕ್ಕಾಗಿ” ಎಂದು AICCTU ಹೇಳಿದ್ದು, ಸರ್ಕಾರದ ಕಾರ್ಯಾದೇಶ ದಿಗ್ಬ್ರಮೆ ಉಂಟುಮಾಡಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರೆ ಸುಮಾರು 30 ಲಕ್ಷ ಜನರಿದ್ದಾರೆ. ಆದರೆ ಪ್ರಸ್ತುತ ಸರ್ಕಾರ ಕೇವಲ 2 ಲಕ್ಷ ಡೋಸ್‌ಗಳಿಗೆ ಕಾರ್ಮಿಕರ ಖಾಸಗಿ ಆಸ್ಪತ್ರಗೆ ಬಿಡುಗಡೆ ಮಾಡಲಾಗಿದೆ.

ಕಾರ್ಮಿಕ ಸಂಘಟನೆ AICCTU ಯ ಪದಾದಿಕಾರಿಯೊಬ್ಬರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರ ಕಾರ್ಮಿಕರಲ್ಲಿ 60% ಜನರು ಈಗಾಗಲೆ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಹೊರ ರಾಜ್ಯದಿಂದ ಬರುವ ವಲಸೆ ಕಾರ್ಮಿಕರು ಕೂಡಾ ಲಸಿಕೆ ಪಡೆದೇ ರಾಜ್ಯ ಪ್ರವೇಶಿಸುತ್ತಾರೆ. ಲಾಕ್‌ಡೌನ್‌ ಸಮಯದಲ್ಲಿ ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ನೇರವಾಗಲು ರಾಜ್ಯಕ್ಕೆ ವಿನಂತಿಸಿದಾಗ ಅದಕ್ಕೆ ಸರ್ಕಾರ ಸ್ಪಂದಿಸಿರಲಿಲ್ಲ. ಈಗ, ಕಾರ್ಮಿಕರ ನಿಧಿಯಿಂದ 400 ಆಸ್ಪತ್ರೆಗಳಿಗೆ ಹಣ ಬಿಡುಗಡೆ ಮಾಡಿದೆ. ಸರ್ಕಾರದ ಈ ನಡೆ ಖಾಸಗಿ ಆಸ್ಪತ್ರೆಗಳ ಅವರ ಹಿತ ಕಾಯಲು ಬೇಕಾಗಿಯೆ ಹೊರತು ಕಾರ್ಮಿಕರ ಹಿತ ಕಾಯಲು ಅಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕಾರ್ಮಿಕರ ಅನುಕೂಲಕ್ಕಾಗಿ ಮೀಸಲಾದ ಹಣವನ್ನು ನೇರವಾಗಿ ಆ ಕಾರ್ಮಿಕರ ಖಾತೆಗೆ ಜಮಾ ಮಾಡಬೇಕಾಗುತ್ತದೆ. ಅವರ ಹೆಸರಲ್ಲಿ ಕಾರ್ಪೋರೇಟ್‌ ಆಸ್ಪತ್ರೆಗಳ ಖಾತೆಗೆ ಜಮಾ ಮಾಡಲು ಹೊರಟಿರುವುದು ಅತ್ಯಂತ ಖಂಡನೀಯ. ಸದರಿ ಕಾರ್ಯಾದೇಶ ಹೊರಡಿಸುವುದಕ್ಕಿಂತ ಮುಂಚೆ ಕಾರ್ಮಿಕರನ್ನು ಅಥವಾ ಕಾರ್ಮಿಕ ಸಂಘಟನೆಗಳನ್ನು ಸಂಪರ್ಕಿಸಿ ಚರ್ಚೆ ನಡೆಸಬೇಕೆನ್ನುವ ಸಾಮಾನ್ಯ ಜ್ಞಾನ ಸರ್ಕಾರ ಮತ್ತು ಆಡಳಿತ ವಲಯಕ್ಕೆ ಇಲ್ಲದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಧಿಕ್ಕರಿಸಿದಂತಿದೆ” ಎಂದು AICCTU ಹೇಳಿದೆ.

ಇದನ್ನೂ ಓದಿ: ಸರಕಾರಿ ಜಾಹೀರಾತು 100% ಕಡಿತ: ಸಿಎಎ ಪ್ರತಿಭಟನೆಗಳ ವರದಿ ಮಾಡಿದ್ದಕ್ಕೆ ಬೆಲೆ ತೆರುತ್ತಿದೆಯೇ ವಾರ್ತಾಭಾರತಿ ಕನ್ನಡ ದೈನಿಕ?

“ಆಡಳಿತ ನಡೆಸುತ್ತಿರುವ ಕಾರ್ಪೋರೇಟ್‌ ಗುಲಾಮಿ ಸರ್ಕಾರದ ನೀತಿಯಿಂದಾಗಿ ಕಾರ್ಮಿಕರ ಕಲ್ಯಾಣ ಮಂಡಳಿಯು, ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ಹಣವನ್ನು ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಮ್‌ ಅಸೋಶಿಯೇಷನ್‌ರವರ ಹಿತ ಕಾಪಾಡುವುದಕ್ಕಾಗಿ ದುರುಪಯೋಗ ಪಡಿಸಿಕೊಳ್ಳಲು ಹೊರಟಿರುವುದು ದುರದೃಷ್ಟಕರ ಸಂಗತಿ” ಎಂದು ಅದು ಹೇಳಿದೆ.

“ಕೊರೊನಾ ಎರಡನೇ ಅಲೆಯಲ್ಲಿ ಕಾರ್ಮಿಕರ ಕಾಳಜಿ ವಹಿಸದ ರಾಜ್ಯ ಸರ್ಕಾರ, ಈಗ ಕಾರ್ಮಿಕರ ಕಲ್ಯಾಣಕ್ಕಾಗಿ ಉಳಿತಾಯ ಮಾಡಿದ್ದ ಹಣವನ್ನು ಬೇಜವಾಬ್ದಾರಿಯಿಂದ ಖರ್ಚು ಮಾಡುತ್ತಿದೆ. ತಮ್ಮ ಜವಾಬ್ದಾರಿಯಿಂದ ಕಳಚಿಕೊಂಡು ಈಗ ಖಾಸಗೀ ವಲಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿರುವ ಸರ್ಕಾರವನ್ನು ನಾವು ಖಂಡಿಸುತ್ತೇವೆ” ಎಂದು AICCTU ತಿಳಿಸಿದೆ.
ಕಾರ್ಮಿಕ ಸಂಘಟನೆಗಳ ಅಹವಾಲುಗಳನ್ನು ಕೇಳದೆ, ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ನಿಧಿಯನ್ನು ಲೂಟಿ ಮಾಡುವುದಕ್ಕಾಗಿಯೇ ಹೊರಡಿಸಿರುವ ಕಾರ್ಯಾದೇಶವನ್ನು ತಕ್ಷಣವೇ ರದ್ದುಗೊಳಿಸಬೇಕೆಂದು AICCTU ಆಗ್ರಹಿಸಿದ್ದು, “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿರರಿಗೆ ಉಚಿತವಾಗಿ ಕೋವಿಡ್‌ ಲಸಿಕೆ ನೀಡಬೇಕೆಂದು ಮತ್ತು ಈ ಕಾರ್ಮಿಕರ ಕಲ್ಯಾಣ ನಿಧಿಯನ್ನು ಕಾರ್ಮಿಕರ ಕಲ್ಯಾಣ ಯೋಜನೆಗಳಿಗಾಗಿಯೇ ಉಪಯೋಗಿಸಬೇಕು” ಎಂದು ಅದು ಹೇಳಿದೆ.

ಇದನ್ನೂ ಓದಿ: ಕಾರ್ಮಿಕರ ದುಡಿಯುವ ಅವಧಿಯನ್ನು 10 ಗಂಟೆಗೆ ಏರಿಸಿದ ರಾಜ್ಯ ಸರ್ಕಾರ: ಕಾರ್ಮಿಕರ ಸಂಘಟನೆಗಳ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...