Homeಕರ್ನಾಟಕಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ - AICCTU ಆಕ್ರೋಶ

ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ – AICCTU ಆಕ್ರೋಶ

- Advertisement -
- Advertisement -

ದೇಶದಾದ್ಯಂತ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದ ನಂತರ ದೇಶದಾದ್ಯಂತ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುತ್ತಿದೆ. ಆದರೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ, ಅವರ ಶ್ರಮದಿಂದಾಗಿ ಶೇಖರಣೆಯಾದ ಕಲ್ಯಾಣ ನಿಧಿಯಿಂದ ಲಸಿಕೆ ನೀಡುವುದಕ್ಕೆ ರಾಜ್ಯ ಸರ್ಕಾರ ಹೊರಟಿದ್ದು, ಒಂದು ಡೋಸ್‌ಗೆ ರೂ.789 ಯಂತೆ ಒಟ್ಟು 15.60 ಕೋಟಿ ರೂ.ಗಳನ್ನು ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಮ್‌ಗಳಿಗೆ ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

ಕಾರ್ಮಿಕರ ಸುರಕ್ಷತೆ, ಕಲ್ಯಾಣ ಮತ್ತು ಸೇವೆಗಾಗಿ, “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು (ಉದ್ಯೋಗ ಮತ್ತು ಸೇವಾ ನಿಯಮಗಳ ನಿಯಂತ್ರಣ) ಕಾಯಿದೆ-1996” ರ ಅಡಿಯಲ್ಲಿ “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ”ಯನ್ನು ಸ್ಥಾಪಿಸಲಾಗಿದೆ. “ಮಂಡಳಿ ಇರುವುದು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಉದ್ಯೋಗ ಮತ್ತು ಸೇವೆಯ ಪರಿಸ್ಥಿತಿಗಳನ್ನು ನಿಯಂತ್ರಿಸಲು ಮತ್ತು ಅವರ ಸುರಕ್ಷತೆ, ಆರೋಗ್ಯ ಮತ್ತು ಕಲ್ಯಾಣ ಕ್ರಮಗಳನ್ನು ಜಾರಿಗೊಳಿಸುವುದಕ್ಕಾಗಿ” ಎಂದು AICCTU ಹೇಳಿದ್ದು, ಸರ್ಕಾರದ ಕಾರ್ಯಾದೇಶ ದಿಗ್ಬ್ರಮೆ ಉಂಟುಮಾಡಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರೆ ಸುಮಾರು 30 ಲಕ್ಷ ಜನರಿದ್ದಾರೆ. ಆದರೆ ಪ್ರಸ್ತುತ ಸರ್ಕಾರ ಕೇವಲ 2 ಲಕ್ಷ ಡೋಸ್‌ಗಳಿಗೆ ಕಾರ್ಮಿಕರ ಖಾಸಗಿ ಆಸ್ಪತ್ರಗೆ ಬಿಡುಗಡೆ ಮಾಡಲಾಗಿದೆ.

ಕಾರ್ಮಿಕ ಸಂಘಟನೆ AICCTU ಯ ಪದಾದಿಕಾರಿಯೊಬ್ಬರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರ ಕಾರ್ಮಿಕರಲ್ಲಿ 60% ಜನರು ಈಗಾಗಲೆ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಹೊರ ರಾಜ್ಯದಿಂದ ಬರುವ ವಲಸೆ ಕಾರ್ಮಿಕರು ಕೂಡಾ ಲಸಿಕೆ ಪಡೆದೇ ರಾಜ್ಯ ಪ್ರವೇಶಿಸುತ್ತಾರೆ. ಲಾಕ್‌ಡೌನ್‌ ಸಮಯದಲ್ಲಿ ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ನೇರವಾಗಲು ರಾಜ್ಯಕ್ಕೆ ವಿನಂತಿಸಿದಾಗ ಅದಕ್ಕೆ ಸರ್ಕಾರ ಸ್ಪಂದಿಸಿರಲಿಲ್ಲ. ಈಗ, ಕಾರ್ಮಿಕರ ನಿಧಿಯಿಂದ 400 ಆಸ್ಪತ್ರೆಗಳಿಗೆ ಹಣ ಬಿಡುಗಡೆ ಮಾಡಿದೆ. ಸರ್ಕಾರದ ಈ ನಡೆ ಖಾಸಗಿ ಆಸ್ಪತ್ರೆಗಳ ಅವರ ಹಿತ ಕಾಯಲು ಬೇಕಾಗಿಯೆ ಹೊರತು ಕಾರ್ಮಿಕರ ಹಿತ ಕಾಯಲು ಅಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕಾರ್ಮಿಕರ ಅನುಕೂಲಕ್ಕಾಗಿ ಮೀಸಲಾದ ಹಣವನ್ನು ನೇರವಾಗಿ ಆ ಕಾರ್ಮಿಕರ ಖಾತೆಗೆ ಜಮಾ ಮಾಡಬೇಕಾಗುತ್ತದೆ. ಅವರ ಹೆಸರಲ್ಲಿ ಕಾರ್ಪೋರೇಟ್‌ ಆಸ್ಪತ್ರೆಗಳ ಖಾತೆಗೆ ಜಮಾ ಮಾಡಲು ಹೊರಟಿರುವುದು ಅತ್ಯಂತ ಖಂಡನೀಯ. ಸದರಿ ಕಾರ್ಯಾದೇಶ ಹೊರಡಿಸುವುದಕ್ಕಿಂತ ಮುಂಚೆ ಕಾರ್ಮಿಕರನ್ನು ಅಥವಾ ಕಾರ್ಮಿಕ ಸಂಘಟನೆಗಳನ್ನು ಸಂಪರ್ಕಿಸಿ ಚರ್ಚೆ ನಡೆಸಬೇಕೆನ್ನುವ ಸಾಮಾನ್ಯ ಜ್ಞಾನ ಸರ್ಕಾರ ಮತ್ತು ಆಡಳಿತ ವಲಯಕ್ಕೆ ಇಲ್ಲದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಧಿಕ್ಕರಿಸಿದಂತಿದೆ” ಎಂದು AICCTU ಹೇಳಿದೆ.

ಇದನ್ನೂ ಓದಿ: ಸರಕಾರಿ ಜಾಹೀರಾತು 100% ಕಡಿತ: ಸಿಎಎ ಪ್ರತಿಭಟನೆಗಳ ವರದಿ ಮಾಡಿದ್ದಕ್ಕೆ ಬೆಲೆ ತೆರುತ್ತಿದೆಯೇ ವಾರ್ತಾಭಾರತಿ ಕನ್ನಡ ದೈನಿಕ?

“ಆಡಳಿತ ನಡೆಸುತ್ತಿರುವ ಕಾರ್ಪೋರೇಟ್‌ ಗುಲಾಮಿ ಸರ್ಕಾರದ ನೀತಿಯಿಂದಾಗಿ ಕಾರ್ಮಿಕರ ಕಲ್ಯಾಣ ಮಂಡಳಿಯು, ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ಹಣವನ್ನು ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಮ್‌ ಅಸೋಶಿಯೇಷನ್‌ರವರ ಹಿತ ಕಾಪಾಡುವುದಕ್ಕಾಗಿ ದುರುಪಯೋಗ ಪಡಿಸಿಕೊಳ್ಳಲು ಹೊರಟಿರುವುದು ದುರದೃಷ್ಟಕರ ಸಂಗತಿ” ಎಂದು ಅದು ಹೇಳಿದೆ.

“ಕೊರೊನಾ ಎರಡನೇ ಅಲೆಯಲ್ಲಿ ಕಾರ್ಮಿಕರ ಕಾಳಜಿ ವಹಿಸದ ರಾಜ್ಯ ಸರ್ಕಾರ, ಈಗ ಕಾರ್ಮಿಕರ ಕಲ್ಯಾಣಕ್ಕಾಗಿ ಉಳಿತಾಯ ಮಾಡಿದ್ದ ಹಣವನ್ನು ಬೇಜವಾಬ್ದಾರಿಯಿಂದ ಖರ್ಚು ಮಾಡುತ್ತಿದೆ. ತಮ್ಮ ಜವಾಬ್ದಾರಿಯಿಂದ ಕಳಚಿಕೊಂಡು ಈಗ ಖಾಸಗೀ ವಲಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿರುವ ಸರ್ಕಾರವನ್ನು ನಾವು ಖಂಡಿಸುತ್ತೇವೆ” ಎಂದು AICCTU ತಿಳಿಸಿದೆ.
ಕಾರ್ಮಿಕ ಸಂಘಟನೆಗಳ ಅಹವಾಲುಗಳನ್ನು ಕೇಳದೆ, ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ನಿಧಿಯನ್ನು ಲೂಟಿ ಮಾಡುವುದಕ್ಕಾಗಿಯೇ ಹೊರಡಿಸಿರುವ ಕಾರ್ಯಾದೇಶವನ್ನು ತಕ್ಷಣವೇ ರದ್ದುಗೊಳಿಸಬೇಕೆಂದು AICCTU ಆಗ್ರಹಿಸಿದ್ದು, “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿರರಿಗೆ ಉಚಿತವಾಗಿ ಕೋವಿಡ್‌ ಲಸಿಕೆ ನೀಡಬೇಕೆಂದು ಮತ್ತು ಈ ಕಾರ್ಮಿಕರ ಕಲ್ಯಾಣ ನಿಧಿಯನ್ನು ಕಾರ್ಮಿಕರ ಕಲ್ಯಾಣ ಯೋಜನೆಗಳಿಗಾಗಿಯೇ ಉಪಯೋಗಿಸಬೇಕು” ಎಂದು ಅದು ಹೇಳಿದೆ.

ಇದನ್ನೂ ಓದಿ: ಕಾರ್ಮಿಕರ ದುಡಿಯುವ ಅವಧಿಯನ್ನು 10 ಗಂಟೆಗೆ ಏರಿಸಿದ ರಾಜ್ಯ ಸರ್ಕಾರ: ಕಾರ್ಮಿಕರ ಸಂಘಟನೆಗಳ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...