Homeಕರ್ನಾಟಕಇಶಾ ಫೌಂಡೇಶನ್‌ನ ಆದಿಯೋಗಿ ಪ್ರತಿಮೆ ಅನಾವರಣಕ್ಕೆ ಅನುಮತಿ ನೀಡಿದ ರಾಜ್ಯ ಹೈಕೋರ್ಟ್

ಇಶಾ ಫೌಂಡೇಶನ್‌ನ ಆದಿಯೋಗಿ ಪ್ರತಿಮೆ ಅನಾವರಣಕ್ಕೆ ಅನುಮತಿ ನೀಡಿದ ರಾಜ್ಯ ಹೈಕೋರ್ಟ್

ಪ್ರತಿಮೆಯನ್ನು ಉದ್ಘಾಟಿಸಲು ಉಪ ರಾಷ್ಟ್ರಪತಿ ಆಗಮಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕೂಡಾ ಭಾಗವಹಿಸಲಿದ್ದಾರೆ

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಯ ಅನಾವರಣ ಸಮಾರಂಭವನ್ನು ನಿಗದಿತ ವೇಳಾಪಟ್ಟಿಯಂತೆ ನಡೆಸಲು ರಾಜ್ಯ ಹೈಕೋರ್ಟ್‌ ಶುಕ್ರವಾರ ಅನುಮತಿ ನೀಡಿದೆ. ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್‌ ನಿರ್ಮಿಸುತ್ತಿರುವ ಈ ಪ್ರತಿಮೆಯು ಪರಿಸರ ಸೂಕ್ಷ್ಮ ಪ್ರದೇಶದಲ್ಲಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.

ಪ್ರತಿಮೆಯನ್ನು ಉದ್ಘಾಟಿಸಲು ಉಪ ರಾಷ್ಟ್ರಪತಿ ಆಗಮಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕೂಡಾ ಭಾಗವಹಿಸಲಿದ್ದಾರೆ. “ಕೆಲವು ಗಣ್ಯರು ಭಾಗವಹಿಸುವ ಅನುಕೂಲವನ್ನು ಆಧರಿಸಿ ಪ್ರತಿಮೆ ಅನಾವರಣ ದಿನಾಂಕವನ್ನು ನಿರ್ಧರಿಸಲಾಗಿದೆ. ಪಿಐಎಲ್ ಸಲ್ಲಿಸುವ ಮೊದಲು ಅದನ್ನು ನಿರ್ಧರಿಸಲಾಗಿದೆ” ಎಂದು ನ್ಯಾಯಾಲಯ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠವು ಕಾರ್ಯಕ್ರಮಕ್ಕೆ ಅಗತ್ಯವಿರುವ ಪ್ರದೇಶದ ಹೊರಗೆ ಯಾವುದೇ ನಿರ್ಮಾಣ ಅಥವಾ ಅರಣ್ಯನಾಶವನ್ನು ನಡೆಸುವುದಿಲ್ಲ ಎಂಬ ಇಶಾ ಫೌಂಡೇಶನ್‌ ನೀಡಿದ ಭರವಸೆಯನ್ನು ಅಂಗೀಕರಿಸಿತು.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ,“ಪ್ರತಿವಾದಿ ಸಂಖ್ಯೆ ಆರಕ್ಕೆ ಅನುಮತಿ ನೀಡುವುದು ಸೂಕ್ತವೆಂದು ನಾವು ಪರಿಗಣಿಸುತ್ತೇವೆ. ಜನವರಿ 11ರ ನಮ್ಮ ಆದೇಶವು ಜನವರಿ 15 ರಂದು ನಿಗದಿತ ಕಾರ್ಯಚಟುವಟಿಕೆಗೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸುತ್ತದೆ” ಎಂದು ನ್ಯಾಯಾಲಯವು ಹೇಳಿದೆ.

ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ದಂಧೆ ನಡೆಸಲಾಗುತ್ತಿದೆ ಎಂದು ನಂದಿಬೆಟ್ಟದ ಬಳಿಯ ಚಿಕ್ಕಬಳ್ಳಾಪುರದ ರೈತರಾದ ಕ್ಯಾತಪ್ಪ ಎಸ್. ಮತ್ತು ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ದೂರಲಾಗಿದೆ.

ವಾಹನಗಳು ಮತ್ತು ಜನರ ಚಲನೆಯಿಂದ ಉಂಟಾಗುವ ಜನಸಂಖ್ಯಾ ಒತ್ತಡದ ಜೊತೆಗೆ, ಸುಮಾರು ಐದು ಲಕ್ಷ ಜನರನ್ನು ಒಟ್ಟುಗೂಡಿಸುವುದರಿಂದ ಸಸ್ಯ ಮತ್ತು ಪ್ರಾಣಿಗಳಿಗೆ ಬದಲಾಯಿಸಲಾಗದ ಹಾನಿ ಉಂಟಾಗುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಉತ್ತರ ಪಿನಾಕಿನಿ ಮತ್ತು ದಕ್ಷಿಣ ಪಿನಾಕಿನಿ ನದಿಗಳು ಹುಟ್ಟುವ ನಂದಿ ಬೆಟ್ಟಗಳ ಮೇಲೆ ಈ ನಿರ್ಮಾಣಗಳು ಪರಿಣಾಮ ಬೀರಲಿದೆ. ಇಶಾ ಕೇಂದ್ರವು ಶಿವನ ಪ್ರತಿಮೆಯನ್ನು ಆಮದು ಮಾಡಿಕೊಂಡಿದ್ದು, ಅದನ್ನು ರಾತ್ರೋರಾತ್ರಿ ಒಟ್ಟಿಗೆ ಸೇರಿಸಿ ನಡೆಸಿದ ಪ್ರಕ್ರಿಯೆಯಲ್ಲಿ ಭೂದೃಶ್ಯವನ್ನು ವಿರೂಪಗೊಳಿಸಿದೆ ಎಂದು ಪಿಐಎಲ್ ಹೇಳಿದೆ.

ಬುಧವಾರದಂದು ಆದಿಯೋಗಿ ಪ್ರತಿಮೆ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ನಡೆಸಬಾರದು ಎಂದು ರಾಜ್ಯ ಹೈಕೋರ್ಟ್‌ ಆದೇಶಿಸಿತ್ತು. ಪ್ರತಿಮೆ ನಿರ್ಮಾಣವಾಗುತ್ತಿರುವ ಸ್ಥಳದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ಇಶಾ ಫೌಂಡೇಶನ್‌ ನಿರ್ಮಿಸಿರುವ 112 ಅಡಿ ಎತ್ತರದ ಪ್ರತಿಮೆಯನ್ನು ಜನವರಿ 15 ರಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಅನಾವರಣಗೊಳಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಾ ಪಾಲ್ಗೊಳ್ಳಲಿದ್ದಾರೆ. ಈ ಪ್ರತಿಮೆಯು ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಯೋಗ ಕೇಂದ್ರದ ನಿಖರವಾದ ಪ್ರತಿರೂಪವಾಗಿದೆ ಎಂದು ಫೌಂಡೇಶನ್ ಹೇಳಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...