Homeಕರ್ನಾಟಕಇಶಾ ಫೌಂಡೇಶನ್‌ನ ಆದಿಯೋಗಿ ಪ್ರತಿಮೆ ಅನಾವರಣಕ್ಕೆ ಅನುಮತಿ ನೀಡಿದ ರಾಜ್ಯ ಹೈಕೋರ್ಟ್

ಇಶಾ ಫೌಂಡೇಶನ್‌ನ ಆದಿಯೋಗಿ ಪ್ರತಿಮೆ ಅನಾವರಣಕ್ಕೆ ಅನುಮತಿ ನೀಡಿದ ರಾಜ್ಯ ಹೈಕೋರ್ಟ್

ಪ್ರತಿಮೆಯನ್ನು ಉದ್ಘಾಟಿಸಲು ಉಪ ರಾಷ್ಟ್ರಪತಿ ಆಗಮಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕೂಡಾ ಭಾಗವಹಿಸಲಿದ್ದಾರೆ

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಯ ಅನಾವರಣ ಸಮಾರಂಭವನ್ನು ನಿಗದಿತ ವೇಳಾಪಟ್ಟಿಯಂತೆ ನಡೆಸಲು ರಾಜ್ಯ ಹೈಕೋರ್ಟ್‌ ಶುಕ್ರವಾರ ಅನುಮತಿ ನೀಡಿದೆ. ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್‌ ನಿರ್ಮಿಸುತ್ತಿರುವ ಈ ಪ್ರತಿಮೆಯು ಪರಿಸರ ಸೂಕ್ಷ್ಮ ಪ್ರದೇಶದಲ್ಲಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.

ಪ್ರತಿಮೆಯನ್ನು ಉದ್ಘಾಟಿಸಲು ಉಪ ರಾಷ್ಟ್ರಪತಿ ಆಗಮಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕೂಡಾ ಭಾಗವಹಿಸಲಿದ್ದಾರೆ. “ಕೆಲವು ಗಣ್ಯರು ಭಾಗವಹಿಸುವ ಅನುಕೂಲವನ್ನು ಆಧರಿಸಿ ಪ್ರತಿಮೆ ಅನಾವರಣ ದಿನಾಂಕವನ್ನು ನಿರ್ಧರಿಸಲಾಗಿದೆ. ಪಿಐಎಲ್ ಸಲ್ಲಿಸುವ ಮೊದಲು ಅದನ್ನು ನಿರ್ಧರಿಸಲಾಗಿದೆ” ಎಂದು ನ್ಯಾಯಾಲಯ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠವು ಕಾರ್ಯಕ್ರಮಕ್ಕೆ ಅಗತ್ಯವಿರುವ ಪ್ರದೇಶದ ಹೊರಗೆ ಯಾವುದೇ ನಿರ್ಮಾಣ ಅಥವಾ ಅರಣ್ಯನಾಶವನ್ನು ನಡೆಸುವುದಿಲ್ಲ ಎಂಬ ಇಶಾ ಫೌಂಡೇಶನ್‌ ನೀಡಿದ ಭರವಸೆಯನ್ನು ಅಂಗೀಕರಿಸಿತು.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ,“ಪ್ರತಿವಾದಿ ಸಂಖ್ಯೆ ಆರಕ್ಕೆ ಅನುಮತಿ ನೀಡುವುದು ಸೂಕ್ತವೆಂದು ನಾವು ಪರಿಗಣಿಸುತ್ತೇವೆ. ಜನವರಿ 11ರ ನಮ್ಮ ಆದೇಶವು ಜನವರಿ 15 ರಂದು ನಿಗದಿತ ಕಾರ್ಯಚಟುವಟಿಕೆಗೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸುತ್ತದೆ” ಎಂದು ನ್ಯಾಯಾಲಯವು ಹೇಳಿದೆ.

ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ದಂಧೆ ನಡೆಸಲಾಗುತ್ತಿದೆ ಎಂದು ನಂದಿಬೆಟ್ಟದ ಬಳಿಯ ಚಿಕ್ಕಬಳ್ಳಾಪುರದ ರೈತರಾದ ಕ್ಯಾತಪ್ಪ ಎಸ್. ಮತ್ತು ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ದೂರಲಾಗಿದೆ.

ವಾಹನಗಳು ಮತ್ತು ಜನರ ಚಲನೆಯಿಂದ ಉಂಟಾಗುವ ಜನಸಂಖ್ಯಾ ಒತ್ತಡದ ಜೊತೆಗೆ, ಸುಮಾರು ಐದು ಲಕ್ಷ ಜನರನ್ನು ಒಟ್ಟುಗೂಡಿಸುವುದರಿಂದ ಸಸ್ಯ ಮತ್ತು ಪ್ರಾಣಿಗಳಿಗೆ ಬದಲಾಯಿಸಲಾಗದ ಹಾನಿ ಉಂಟಾಗುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಉತ್ತರ ಪಿನಾಕಿನಿ ಮತ್ತು ದಕ್ಷಿಣ ಪಿನಾಕಿನಿ ನದಿಗಳು ಹುಟ್ಟುವ ನಂದಿ ಬೆಟ್ಟಗಳ ಮೇಲೆ ಈ ನಿರ್ಮಾಣಗಳು ಪರಿಣಾಮ ಬೀರಲಿದೆ. ಇಶಾ ಕೇಂದ್ರವು ಶಿವನ ಪ್ರತಿಮೆಯನ್ನು ಆಮದು ಮಾಡಿಕೊಂಡಿದ್ದು, ಅದನ್ನು ರಾತ್ರೋರಾತ್ರಿ ಒಟ್ಟಿಗೆ ಸೇರಿಸಿ ನಡೆಸಿದ ಪ್ರಕ್ರಿಯೆಯಲ್ಲಿ ಭೂದೃಶ್ಯವನ್ನು ವಿರೂಪಗೊಳಿಸಿದೆ ಎಂದು ಪಿಐಎಲ್ ಹೇಳಿದೆ.

ಬುಧವಾರದಂದು ಆದಿಯೋಗಿ ಪ್ರತಿಮೆ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ನಡೆಸಬಾರದು ಎಂದು ರಾಜ್ಯ ಹೈಕೋರ್ಟ್‌ ಆದೇಶಿಸಿತ್ತು. ಪ್ರತಿಮೆ ನಿರ್ಮಾಣವಾಗುತ್ತಿರುವ ಸ್ಥಳದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ಇಶಾ ಫೌಂಡೇಶನ್‌ ನಿರ್ಮಿಸಿರುವ 112 ಅಡಿ ಎತ್ತರದ ಪ್ರತಿಮೆಯನ್ನು ಜನವರಿ 15 ರಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಅನಾವರಣಗೊಳಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಾ ಪಾಲ್ಗೊಳ್ಳಲಿದ್ದಾರೆ. ಈ ಪ್ರತಿಮೆಯು ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಯೋಗ ಕೇಂದ್ರದ ನಿಖರವಾದ ಪ್ರತಿರೂಪವಾಗಿದೆ ಎಂದು ಫೌಂಡೇಶನ್ ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...