Homeಕರ್ನಾಟಕಮುಸ್ಲಿಂ ವಿದ್ಯಾರ್ಥಿನಿಯರ ರಿಟ್‌ ಅರ್ಜಿ ವಜಾ; ಹಿಜಾಬ್ ನಿರ್ಬಂಧ ಎತ್ತಿ ಹಿಡಿದ ಹೈಕೋರ್ಟ್

ಮುಸ್ಲಿಂ ವಿದ್ಯಾರ್ಥಿನಿಯರ ರಿಟ್‌ ಅರ್ಜಿ ವಜಾ; ಹಿಜಾಬ್ ನಿರ್ಬಂಧ ಎತ್ತಿ ಹಿಡಿದ ಹೈಕೋರ್ಟ್

- Advertisement -
- Advertisement -

ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣದ ತೀರ್ಪು ಮಂಗಳವಾರ ರಾಜ್ಯ ಹೈಕೋರ್ಟ್‌ ನೀಡಿದ್ದು, ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೇಳಿದೆ. ಸಮವಸ್ತ್ರವನ್ನು ಸೂಚಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ ಎಂದು ಹೇಳಿರುವ ಕೋರ್ಟ್‌ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿದೆ.

ಫೆಬ್ರವರಿ 25 ರಂದು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ಅಂತಿಮ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

ಇಂದು ನ್ಯಾಯಾಲಯದಲ್ಲಿ ತೀರ್ಪನ್ನು ಓದಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, “ಇಡೀ ಪ್ರಕರಣದ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಂಡು, ನಾವು ಕೆಲವು ಪ್ರಶ್ನೆಗಳನ್ನು ರೂಪಿಸಿದ್ದೇವೆ. ಮತ್ತು ಅದಕ್ಕೆ ಅನುಗುಣವಾಗಿ ಉತ್ತರಿಸಿದ್ದೇವೆ” ಎಂದು ಹೇಳಿದರು.

“ಪ್ರಶ್ನೆಗಳನ್ನು ಹೀಗೆ ರೂಪಿಸಲಾಗಿದೆ: 1. ಆರ್ಟಿಕಲ್‌ 25 ರ ಅಡಿಯಲ್ಲಿ ಇಸ್ಲಾಮಿಕ್ ನಂಬಿಕೆಯಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮೀಕ ಆಚರಣೆ ಆಗಿದೆಯೇ? 2. ಶಾಲಾ ಸಮವಸ್ತ್ರದ ಸೂಚನೆಯು ಹಕ್ಕುಗಳ ಉಲ್ಲಂಘನೆಯಾಗಿದೆಯೇ? ಫೆಬ್ರುವರಿ 5 ರ ಸರ್ಕಾರಿ ಆದೇಶವು ಅಸಮರ್ಥ ಮತ್ತು ಸ್ಪಷ್ಟವಾಗಿ ಆರ್ಟಿಕಲ್ 14 ಮತ್ತು 15 ಅನ್ನು ಉಲ್ಲಂಘಿಸುತ್ತದೆಯೇ ಎಂಬುದು ಮೂರನೇ ಪ್ರಶ್ನೆಯಾಗಿದೆ” ಎಂದು ಹೇಳಿದ್ದಾರೆ.

ಈ ಪ್ರಶ್ನೆಗಳಿಗೆ ಉತ್ತರಿಸುತ್ತಾ ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ, “ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ. ಸಮವಸ್ತ್ರವನ್ನು ಸೂಚಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ” ಎಂದು ಹೇಳಿದ್ದಾರೆ.

ಜೊತೆಗೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಮತ್ತು ಫೆಬ್ರವರಿ 5 ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಎಲ್ಲಾ ರಿಟ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಿಜಾಬ್ ಪ್ರಕರಣದ ಆದೇಶವನ್ನು ಗೌ. ಕೋರ್ಟ್ ಶಾಲಾ ಕಾಲೇಜುಗಳಲ್ಲಿ ಮಾತ್ರ ಅಲ್ಲ…. ಸರ್ಕಾರದ ಎಲ್ಲಾ ಕಚೇರಿ ಯ ಒಳಗಡೆಯೂ ವಿಸ್ತರಿಸಬಹುದಿತ್ತು.( +ve Or – ve) ಆದರೆ ತೀರ್ಪು ಸಮಂಜಸವಾಗಿದೆ. …… ಈ ತೀರ್ಪು ವ್ಯತಿರಿಕ್ತ ವಾಗುತ್ತಿದ್ದರೆ ಜಾತ್ಯತೀತ ರಾಷ್ಟ್ರ ದಲ್ಲಿ ವಸ್ತ್ರ ಸಂಹಿತೆ ಗೆ ಸಮಾನತೆ ಸಿಕ್ಕಿದಂತಾಗುವುದೇ…? ಆದ್ದರಿಂದ ನಾವೆಲ್ಲರೂ ತೀರ್ಪನ್ನು ಗೌರವಿಸಬೇಕಲ್ಲವೇ… 🙏

  2. ನ್ಯಾಯಾಲಯದ ತೀರ್ಪನ್ನು ಗೌರವಿಸೋಣ. ಇದಕ್ಕೆ ಆಕ್ಷೇಪ ಇದ್ದಲ್ಲಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶ ಇದೆ. ವಿವೇಕ ವರ್ತನೆ ಸಂವಿಧಾನ ರಕ್ಷಣೆ ನಮ್ಮೆಲ್ಲರ ಕರ್ತವ್ಯ

  3. ಒಪ್ಪಿಗೆ ಇದೆ. ಮುಂದಿನ ಹೋರಾಟವನ್ನು ಸಮಾಧಾನವಾಗಿ ಕುರಿತು ಆಲೋಚಿಸಬೇಕಿದೆ ಮಾತ್ರವಲ್ಲ. ಇತರ ಶೈಕ್ಷಣಿಕ ಸಂಸ್ಥೆಗಳ ನಿರ್ಧಾರಕ್ಕಾಗಿ ಕಾಯಬೇಕಿದೆ. ಅಲ್ಪ ಸಂಖ್ಯಾತ ಶಿಕ್ಷಣ ಸಂಸ್ಥೆಗಳ ಬಲವರ್ಧನೆ ಮಾಡಬೇಕಿದೆ.

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...