Homeಕರ್ನಾಟಕಮುಸ್ಲಿಂ ವಿದ್ಯಾರ್ಥಿನಿಯರ ರಿಟ್‌ ಅರ್ಜಿ ವಜಾ; ಹಿಜಾಬ್ ನಿರ್ಬಂಧ ಎತ್ತಿ ಹಿಡಿದ ಹೈಕೋರ್ಟ್

ಮುಸ್ಲಿಂ ವಿದ್ಯಾರ್ಥಿನಿಯರ ರಿಟ್‌ ಅರ್ಜಿ ವಜಾ; ಹಿಜಾಬ್ ನಿರ್ಬಂಧ ಎತ್ತಿ ಹಿಡಿದ ಹೈಕೋರ್ಟ್

- Advertisement -
- Advertisement -

ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣದ ತೀರ್ಪು ಮಂಗಳವಾರ ರಾಜ್ಯ ಹೈಕೋರ್ಟ್‌ ನೀಡಿದ್ದು, ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೇಳಿದೆ. ಸಮವಸ್ತ್ರವನ್ನು ಸೂಚಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ ಎಂದು ಹೇಳಿರುವ ಕೋರ್ಟ್‌ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿದೆ.

ಫೆಬ್ರವರಿ 25 ರಂದು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ಅಂತಿಮ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

ಇಂದು ನ್ಯಾಯಾಲಯದಲ್ಲಿ ತೀರ್ಪನ್ನು ಓದಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, “ಇಡೀ ಪ್ರಕರಣದ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಂಡು, ನಾವು ಕೆಲವು ಪ್ರಶ್ನೆಗಳನ್ನು ರೂಪಿಸಿದ್ದೇವೆ. ಮತ್ತು ಅದಕ್ಕೆ ಅನುಗುಣವಾಗಿ ಉತ್ತರಿಸಿದ್ದೇವೆ” ಎಂದು ಹೇಳಿದರು.

“ಪ್ರಶ್ನೆಗಳನ್ನು ಹೀಗೆ ರೂಪಿಸಲಾಗಿದೆ: 1. ಆರ್ಟಿಕಲ್‌ 25 ರ ಅಡಿಯಲ್ಲಿ ಇಸ್ಲಾಮಿಕ್ ನಂಬಿಕೆಯಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮೀಕ ಆಚರಣೆ ಆಗಿದೆಯೇ? 2. ಶಾಲಾ ಸಮವಸ್ತ್ರದ ಸೂಚನೆಯು ಹಕ್ಕುಗಳ ಉಲ್ಲಂಘನೆಯಾಗಿದೆಯೇ? ಫೆಬ್ರುವರಿ 5 ರ ಸರ್ಕಾರಿ ಆದೇಶವು ಅಸಮರ್ಥ ಮತ್ತು ಸ್ಪಷ್ಟವಾಗಿ ಆರ್ಟಿಕಲ್ 14 ಮತ್ತು 15 ಅನ್ನು ಉಲ್ಲಂಘಿಸುತ್ತದೆಯೇ ಎಂಬುದು ಮೂರನೇ ಪ್ರಶ್ನೆಯಾಗಿದೆ” ಎಂದು ಹೇಳಿದ್ದಾರೆ.

ಈ ಪ್ರಶ್ನೆಗಳಿಗೆ ಉತ್ತರಿಸುತ್ತಾ ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ, “ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ. ಸಮವಸ್ತ್ರವನ್ನು ಸೂಚಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ” ಎಂದು ಹೇಳಿದ್ದಾರೆ.

ಜೊತೆಗೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಮತ್ತು ಫೆಬ್ರವರಿ 5 ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಎಲ್ಲಾ ರಿಟ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಿಜಾಬ್ ಪ್ರಕರಣದ ಆದೇಶವನ್ನು ಗೌ. ಕೋರ್ಟ್ ಶಾಲಾ ಕಾಲೇಜುಗಳಲ್ಲಿ ಮಾತ್ರ ಅಲ್ಲ…. ಸರ್ಕಾರದ ಎಲ್ಲಾ ಕಚೇರಿ ಯ ಒಳಗಡೆಯೂ ವಿಸ್ತರಿಸಬಹುದಿತ್ತು.( +ve Or – ve) ಆದರೆ ತೀರ್ಪು ಸಮಂಜಸವಾಗಿದೆ. …… ಈ ತೀರ್ಪು ವ್ಯತಿರಿಕ್ತ ವಾಗುತ್ತಿದ್ದರೆ ಜಾತ್ಯತೀತ ರಾಷ್ಟ್ರ ದಲ್ಲಿ ವಸ್ತ್ರ ಸಂಹಿತೆ ಗೆ ಸಮಾನತೆ ಸಿಕ್ಕಿದಂತಾಗುವುದೇ…? ಆದ್ದರಿಂದ ನಾವೆಲ್ಲರೂ ತೀರ್ಪನ್ನು ಗೌರವಿಸಬೇಕಲ್ಲವೇ… 🙏

  2. ನ್ಯಾಯಾಲಯದ ತೀರ್ಪನ್ನು ಗೌರವಿಸೋಣ. ಇದಕ್ಕೆ ಆಕ್ಷೇಪ ಇದ್ದಲ್ಲಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶ ಇದೆ. ವಿವೇಕ ವರ್ತನೆ ಸಂವಿಧಾನ ರಕ್ಷಣೆ ನಮ್ಮೆಲ್ಲರ ಕರ್ತವ್ಯ

  3. ಒಪ್ಪಿಗೆ ಇದೆ. ಮುಂದಿನ ಹೋರಾಟವನ್ನು ಸಮಾಧಾನವಾಗಿ ಕುರಿತು ಆಲೋಚಿಸಬೇಕಿದೆ ಮಾತ್ರವಲ್ಲ. ಇತರ ಶೈಕ್ಷಣಿಕ ಸಂಸ್ಥೆಗಳ ನಿರ್ಧಾರಕ್ಕಾಗಿ ಕಾಯಬೇಕಿದೆ. ಅಲ್ಪ ಸಂಖ್ಯಾತ ಶಿಕ್ಷಣ ಸಂಸ್ಥೆಗಳ ಬಲವರ್ಧನೆ ಮಾಡಬೇಕಿದೆ.

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...