Homeಕರ್ನಾಟಕಮುಸ್ಲಿಂ ವಿದ್ಯಾರ್ಥಿನಿಯರ ರಿಟ್‌ ಅರ್ಜಿ ವಜಾ; ಹಿಜಾಬ್ ನಿರ್ಬಂಧ ಎತ್ತಿ ಹಿಡಿದ ಹೈಕೋರ್ಟ್

ಮುಸ್ಲಿಂ ವಿದ್ಯಾರ್ಥಿನಿಯರ ರಿಟ್‌ ಅರ್ಜಿ ವಜಾ; ಹಿಜಾಬ್ ನಿರ್ಬಂಧ ಎತ್ತಿ ಹಿಡಿದ ಹೈಕೋರ್ಟ್

- Advertisement -
- Advertisement -

ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣದ ತೀರ್ಪು ಮಂಗಳವಾರ ರಾಜ್ಯ ಹೈಕೋರ್ಟ್‌ ನೀಡಿದ್ದು, ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೇಳಿದೆ. ಸಮವಸ್ತ್ರವನ್ನು ಸೂಚಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ ಎಂದು ಹೇಳಿರುವ ಕೋರ್ಟ್‌ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿದೆ.

ಫೆಬ್ರವರಿ 25 ರಂದು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ಅಂತಿಮ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

ಇಂದು ನ್ಯಾಯಾಲಯದಲ್ಲಿ ತೀರ್ಪನ್ನು ಓದಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, “ಇಡೀ ಪ್ರಕರಣದ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಂಡು, ನಾವು ಕೆಲವು ಪ್ರಶ್ನೆಗಳನ್ನು ರೂಪಿಸಿದ್ದೇವೆ. ಮತ್ತು ಅದಕ್ಕೆ ಅನುಗುಣವಾಗಿ ಉತ್ತರಿಸಿದ್ದೇವೆ” ಎಂದು ಹೇಳಿದರು.

“ಪ್ರಶ್ನೆಗಳನ್ನು ಹೀಗೆ ರೂಪಿಸಲಾಗಿದೆ: 1. ಆರ್ಟಿಕಲ್‌ 25 ರ ಅಡಿಯಲ್ಲಿ ಇಸ್ಲಾಮಿಕ್ ನಂಬಿಕೆಯಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮೀಕ ಆಚರಣೆ ಆಗಿದೆಯೇ? 2. ಶಾಲಾ ಸಮವಸ್ತ್ರದ ಸೂಚನೆಯು ಹಕ್ಕುಗಳ ಉಲ್ಲಂಘನೆಯಾಗಿದೆಯೇ? ಫೆಬ್ರುವರಿ 5 ರ ಸರ್ಕಾರಿ ಆದೇಶವು ಅಸಮರ್ಥ ಮತ್ತು ಸ್ಪಷ್ಟವಾಗಿ ಆರ್ಟಿಕಲ್ 14 ಮತ್ತು 15 ಅನ್ನು ಉಲ್ಲಂಘಿಸುತ್ತದೆಯೇ ಎಂಬುದು ಮೂರನೇ ಪ್ರಶ್ನೆಯಾಗಿದೆ” ಎಂದು ಹೇಳಿದ್ದಾರೆ.

ಈ ಪ್ರಶ್ನೆಗಳಿಗೆ ಉತ್ತರಿಸುತ್ತಾ ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ, “ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ. ಸಮವಸ್ತ್ರವನ್ನು ಸೂಚಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ” ಎಂದು ಹೇಳಿದ್ದಾರೆ.

ಜೊತೆಗೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಮತ್ತು ಫೆಬ್ರವರಿ 5 ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಎಲ್ಲಾ ರಿಟ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಿಜಾಬ್ ಪ್ರಕರಣದ ಆದೇಶವನ್ನು ಗೌ. ಕೋರ್ಟ್ ಶಾಲಾ ಕಾಲೇಜುಗಳಲ್ಲಿ ಮಾತ್ರ ಅಲ್ಲ…. ಸರ್ಕಾರದ ಎಲ್ಲಾ ಕಚೇರಿ ಯ ಒಳಗಡೆಯೂ ವಿಸ್ತರಿಸಬಹುದಿತ್ತು.( +ve Or – ve) ಆದರೆ ತೀರ್ಪು ಸಮಂಜಸವಾಗಿದೆ. …… ಈ ತೀರ್ಪು ವ್ಯತಿರಿಕ್ತ ವಾಗುತ್ತಿದ್ದರೆ ಜಾತ್ಯತೀತ ರಾಷ್ಟ್ರ ದಲ್ಲಿ ವಸ್ತ್ರ ಸಂಹಿತೆ ಗೆ ಸಮಾನತೆ ಸಿಕ್ಕಿದಂತಾಗುವುದೇ…? ಆದ್ದರಿಂದ ನಾವೆಲ್ಲರೂ ತೀರ್ಪನ್ನು ಗೌರವಿಸಬೇಕಲ್ಲವೇ… 🙏

  2. ನ್ಯಾಯಾಲಯದ ತೀರ್ಪನ್ನು ಗೌರವಿಸೋಣ. ಇದಕ್ಕೆ ಆಕ್ಷೇಪ ಇದ್ದಲ್ಲಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶ ಇದೆ. ವಿವೇಕ ವರ್ತನೆ ಸಂವಿಧಾನ ರಕ್ಷಣೆ ನಮ್ಮೆಲ್ಲರ ಕರ್ತವ್ಯ

  3. ಒಪ್ಪಿಗೆ ಇದೆ. ಮುಂದಿನ ಹೋರಾಟವನ್ನು ಸಮಾಧಾನವಾಗಿ ಕುರಿತು ಆಲೋಚಿಸಬೇಕಿದೆ ಮಾತ್ರವಲ್ಲ. ಇತರ ಶೈಕ್ಷಣಿಕ ಸಂಸ್ಥೆಗಳ ನಿರ್ಧಾರಕ್ಕಾಗಿ ಕಾಯಬೇಕಿದೆ. ಅಲ್ಪ ಸಂಖ್ಯಾತ ಶಿಕ್ಷಣ ಸಂಸ್ಥೆಗಳ ಬಲವರ್ಧನೆ ಮಾಡಬೇಕಿದೆ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...