Homeಕರ್ನಾಟಕಮುಸ್ಲಿಂ ವಿದ್ಯಾರ್ಥಿನಿಯರ ರಿಟ್‌ ಅರ್ಜಿ ವಜಾ; ಹಿಜಾಬ್ ನಿರ್ಬಂಧ ಎತ್ತಿ ಹಿಡಿದ ಹೈಕೋರ್ಟ್

ಮುಸ್ಲಿಂ ವಿದ್ಯಾರ್ಥಿನಿಯರ ರಿಟ್‌ ಅರ್ಜಿ ವಜಾ; ಹಿಜಾಬ್ ನಿರ್ಬಂಧ ಎತ್ತಿ ಹಿಡಿದ ಹೈಕೋರ್ಟ್

- Advertisement -
- Advertisement -

ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣದ ತೀರ್ಪು ಮಂಗಳವಾರ ರಾಜ್ಯ ಹೈಕೋರ್ಟ್‌ ನೀಡಿದ್ದು, ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೇಳಿದೆ. ಸಮವಸ್ತ್ರವನ್ನು ಸೂಚಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ ಎಂದು ಹೇಳಿರುವ ಕೋರ್ಟ್‌ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿದೆ.

ಫೆಬ್ರವರಿ 25 ರಂದು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ಅಂತಿಮ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

ಇಂದು ನ್ಯಾಯಾಲಯದಲ್ಲಿ ತೀರ್ಪನ್ನು ಓದಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, “ಇಡೀ ಪ್ರಕರಣದ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಂಡು, ನಾವು ಕೆಲವು ಪ್ರಶ್ನೆಗಳನ್ನು ರೂಪಿಸಿದ್ದೇವೆ. ಮತ್ತು ಅದಕ್ಕೆ ಅನುಗುಣವಾಗಿ ಉತ್ತರಿಸಿದ್ದೇವೆ” ಎಂದು ಹೇಳಿದರು.

“ಪ್ರಶ್ನೆಗಳನ್ನು ಹೀಗೆ ರೂಪಿಸಲಾಗಿದೆ: 1. ಆರ್ಟಿಕಲ್‌ 25 ರ ಅಡಿಯಲ್ಲಿ ಇಸ್ಲಾಮಿಕ್ ನಂಬಿಕೆಯಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮೀಕ ಆಚರಣೆ ಆಗಿದೆಯೇ? 2. ಶಾಲಾ ಸಮವಸ್ತ್ರದ ಸೂಚನೆಯು ಹಕ್ಕುಗಳ ಉಲ್ಲಂಘನೆಯಾಗಿದೆಯೇ? ಫೆಬ್ರುವರಿ 5 ರ ಸರ್ಕಾರಿ ಆದೇಶವು ಅಸಮರ್ಥ ಮತ್ತು ಸ್ಪಷ್ಟವಾಗಿ ಆರ್ಟಿಕಲ್ 14 ಮತ್ತು 15 ಅನ್ನು ಉಲ್ಲಂಘಿಸುತ್ತದೆಯೇ ಎಂಬುದು ಮೂರನೇ ಪ್ರಶ್ನೆಯಾಗಿದೆ” ಎಂದು ಹೇಳಿದ್ದಾರೆ.

ಈ ಪ್ರಶ್ನೆಗಳಿಗೆ ಉತ್ತರಿಸುತ್ತಾ ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ, “ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ. ಸಮವಸ್ತ್ರವನ್ನು ಸೂಚಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ” ಎಂದು ಹೇಳಿದ್ದಾರೆ.

ಜೊತೆಗೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಮತ್ತು ಫೆಬ್ರವರಿ 5 ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಎಲ್ಲಾ ರಿಟ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಿಜಾಬ್ ಪ್ರಕರಣದ ಆದೇಶವನ್ನು ಗೌ. ಕೋರ್ಟ್ ಶಾಲಾ ಕಾಲೇಜುಗಳಲ್ಲಿ ಮಾತ್ರ ಅಲ್ಲ…. ಸರ್ಕಾರದ ಎಲ್ಲಾ ಕಚೇರಿ ಯ ಒಳಗಡೆಯೂ ವಿಸ್ತರಿಸಬಹುದಿತ್ತು.( +ve Or – ve) ಆದರೆ ತೀರ್ಪು ಸಮಂಜಸವಾಗಿದೆ. …… ಈ ತೀರ್ಪು ವ್ಯತಿರಿಕ್ತ ವಾಗುತ್ತಿದ್ದರೆ ಜಾತ್ಯತೀತ ರಾಷ್ಟ್ರ ದಲ್ಲಿ ವಸ್ತ್ರ ಸಂಹಿತೆ ಗೆ ಸಮಾನತೆ ಸಿಕ್ಕಿದಂತಾಗುವುದೇ…? ಆದ್ದರಿಂದ ನಾವೆಲ್ಲರೂ ತೀರ್ಪನ್ನು ಗೌರವಿಸಬೇಕಲ್ಲವೇ… 🙏

  2. ನ್ಯಾಯಾಲಯದ ತೀರ್ಪನ್ನು ಗೌರವಿಸೋಣ. ಇದಕ್ಕೆ ಆಕ್ಷೇಪ ಇದ್ದಲ್ಲಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶ ಇದೆ. ವಿವೇಕ ವರ್ತನೆ ಸಂವಿಧಾನ ರಕ್ಷಣೆ ನಮ್ಮೆಲ್ಲರ ಕರ್ತವ್ಯ

  3. ಒಪ್ಪಿಗೆ ಇದೆ. ಮುಂದಿನ ಹೋರಾಟವನ್ನು ಸಮಾಧಾನವಾಗಿ ಕುರಿತು ಆಲೋಚಿಸಬೇಕಿದೆ ಮಾತ್ರವಲ್ಲ. ಇತರ ಶೈಕ್ಷಣಿಕ ಸಂಸ್ಥೆಗಳ ನಿರ್ಧಾರಕ್ಕಾಗಿ ಕಾಯಬೇಕಿದೆ. ಅಲ್ಪ ಸಂಖ್ಯಾತ ಶಿಕ್ಷಣ ಸಂಸ್ಥೆಗಳ ಬಲವರ್ಧನೆ ಮಾಡಬೇಕಿದೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...