Homeಕರ್ನಾಟಕರಾಜ್ಯ ದೇಶಕ್ಕೆ ₹100 ಕೊಟ್ರೆ ₹12 ಮಾತ್ರ ಮರಳಿ ಬರುತ್ತಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯ ದೇಶಕ್ಕೆ ₹100 ಕೊಟ್ರೆ ₹12 ಮಾತ್ರ ಮರಳಿ ಬರುತ್ತಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯವು ದೇಶಕ್ಕೆ ಸಂಗ್ರಹಿಸಿಕೊಡುವ ಪ್ರತಿ 100 ರೂಪಾಯಿಗಳಿಗೆ 12.50 ರೂಪಾಯಿ ಮಾತ್ರ ರಾಜ್ಯಕ್ಕೆ ಮರಳಿ ಬರುತ್ತಿದೆ. ಕರ್ನಾಟಕದಿಂದ ವಾರ್ಷಿಕ ರೂ. 4 ಲಕ್ಷ ಕೋಟಿ ಆದಾಯ ಗಳಿಕೆಯಾದರೆ, ಇದಕ್ಕೆ ಪ್ರತಿಯಾಗಿ ಕೇಂದ್ರದಿಂದ ನಮಗೆ ಬರುವುದು ಸುಮಾರು ರೂ. 50,000 ಕೋಟಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ‘ಆರ್ಥಿಕ ಸಂಯುಕ್ತ ತತ್ವ : 16 ನೇ ಹಣಕಾಸು ಆಯೋಗದ ಮುಂದಿರುವ ಸವಾಲು’ಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದರು.

15ನೇ ಹಣಕಾಸು ಆಯೋಗದ ಶಿಫಾರಸ್ಸುಗಳಿಂದ ಕರ್ನಾಟಕಕ್ಕೆ 5 ವರ್ಷಗಳ ಅವಧಿಯಲ್ಲಿ ರೂ. 62,000 ಕೋಟಿ ನಷ್ಟ ಆಗಲಿದೆ ಎಂದು ಸಿಎಂ ಹೇಳಿದರು.

ಹಿಂದಿನ ಹಣಕಾಸು ಆಯೋಗದ ಶಿಫಾರಸ್ಸುಗಳಿಂದಾಗಿ ಕರ್ನಾಟಕ ಭಾರೀ ನಷ್ಟವನ್ನು ಅನುಭವಿಸಬೇಕಾಗಿ ಬಂದಿದ್ದು, ಇದನ್ನು 16ನೇ ಹಣಕಾಸು ಆಯೋಗದ ಮುಂದೆ ಪ್ರಶ್ನಿಸಬೇಕಿದೆ. 14ನೇ ಹಣಕಾಸು ಆಯೋಗದಡಿ ಕರ್ನಾಟಕದ ಪಾಲಿನ ತೆರಿಗೆ ಹಂಚಿಕೆಯು ಶೇ 4.713 ರಿಂದ ಶೇ. 3.647 ಕ್ಕೆ 15ನೇ ಹಣಕಾಸು ಆಯೋಗದಿಂದಾಗಿ ಇಳಿದಿದೆ ಎಂದರು.

ರಾಜ್ಯಗಳ ಪೈಕಿ ಕರ್ನಾಟಕಕ್ಕೆ ಅತ್ಯಂತ ದೊಡ್ಡ ಮೊತ್ತ, ಅಂದರೆ ಶೇ 1.066 ರಷ್ಟು ಇಳಿಕೆಯಾಗಿದೆ. ಈಗಿನ ವ್ಯವಸ್ಥೆ ಆದಾಯದ ದೂರ ವ್ಯಾಪ್ತಿಯನ್ನು ಪರಿಗಣಿಸಿಸುತ್ತಿದ್ದು, ಈ ಪ್ರಕಾರ ಕರ್ನಾಟಕವು ಅತಿ ಹೆಚ್ಚು ತಲಾ ಆದಾಯವಿರುವ ರಾಜ್ಯಕ್ಕೆ ಹೋಲಿಸಿ ಆದಾಯ ಕಡಿಮೆ ದೂರವ್ಯಾಪ್ತಿ ಇರುವ ಕಾರಣ ಸೋಲುತ್ತಿದೆ ಎಂದು ತಿಳಿಸಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ರೂ.6,21,131 ಕೋಟಿಗೂ ಹೆಚ್ಚಿನ ತಲಾ ಆದಾಯ ಮಟ್ಟವನ್ನು ಕಾಣಬಹುದಾಗಿದೆ ಎನ್ನುವುದನ್ನು ಪರಿಗಣಿಸುವುದು ಮುಖ್ಯ. ಈ ವ್ಯವಸ್ಥೆ ಕರ್ನಾಟಕಕ್ಕೆ ಕೆಲವು ಜಿಲ್ಲೆಗಳಲ್ಲಿ ಕಡಿಮೆಯಿರುವ ತಲಾ ಆದಾಯದ ಸಮಸ್ಯೆಯನ್ನು ಬಗೆಹರಿಸಲು ಸಾಕಷ್ಟು ಸಂಪನ್ಮೂಲ ವರ್ಗಾವಣೆಯಿಂದ ವಂಚಿತವಾಗಿಸಿದೆ. ಅಂತರ ರಾಜ್ಯ ತಲಾ ಆದಾಯ ವ್ಯತ್ಯಾಸಗಳಿಗೆ ಹಣಕಾಸು ಆಯೋಗಗಳು ಅಗತ್ಯವಿರುವ ಹೊಂದಾಣಿಕೆಯನ್ನು ಮಾಡಿಕೊಂಡು ಶಿಫಾರಸ್ಸುಗಳನ್ನು ಮಾಡುವಾಗ ಆದಾಯ ದೂರವ್ಯಾಪ್ತಿಯನ್ನು ಪರಿಗಣಿಸಬೇಕು ಎಂದು ಸಿಎಂ ಆಗ್ರಹಿಸಿದರು.

ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಕ್ಕೆ ತನ್ನ ಕೊಡುಗೆಗೆ ತಕ್ಕ ಪ್ರತಿಫಲ ದೊರಕದಿರುವುದು ವಿಪರ್ಯಾಸ. 16ನೇ ಹಣಕಾಸು ಆಯೋಗವು ದಕ್ಷತೆಗೆ ಪ್ರೋತ್ಸಾಹಕಗಳನ್ನು ಹಾಗೂ ವಿತ್ತೀಯ ಕಾರ್ಯಕ್ಷಮತೆಗೆ ನೀಡುವ ಬೆಲೆಯನ್ನು ಹೆಚ್ಚಿಸುವಂತೆ 16ನೇ ಹಣಕಾಸು ಆಯೋಗವನ್ನು ನಾವು ಒತ್ತಾಯಿಸುತ್ತೇವೆ ಎಂದರು.

ಅತ್ಯುತ್ತಮ ವಿತ್ತೀಯ ಕಾರ್ಯಕ್ಷಮತೆ ಹೊಂದಿರುವ ರಾಜ್ಯ ಎಂದು ದಾಖಲೆ ಹೊಂದಿರುವ ನಮ್ಮ ರಾಜ್ಯಕ್ಕೆ ಅದರ ದಕ್ಷತೆಗಾಗಿ ಯಾವುದೇ ಪ್ರೋತ್ಸಾಹಕಗಳು ದೊರೆಯುತ್ತಿಲ್ಲ. ಕರ್ನಾಟಕದ ಭಾರಿ ವಿತ್ತೀಯ ಕಾರ್ಯಕ್ಷಮತೆ ಗಮನಾರ್ಹವಾಗಿದ್ದು ವಿತ್ತೀಯ ಹೊಣೆಗಾರಿಕೆ ಕಾಯ್ದೆಯನ್ನು ಘೋಷಿಸಿದ ಮೊದಲ ರಾಜ್ಯವೆಂದು ಹೆಗ್ಗಳಿಕೆ ಪಡೆದಿದೆ. ಕೋವಿಡ್ ನಂತರದಲ್ಲಿ ರಾಜಸ್ವ ಕೊರತೆಗಳು ಮರುಕಳಿಸಿದ್ದನ್ನು ಹೊರತುಪಡಿಸಿ ಭಾರಿ ಗಾತ್ರದ ವಿತ್ತೀಯ ಸೂಚಕಗಳಾದ ವಿತ್ತೀಯ ಕೊರತೆ ಮತ್ತು ರಾಜಸ್ವ ಕೊರತೆ ಸದಾ ನಿಗದಿತ ವ್ಯಾಪ್ತಿಯಲ್ಲಿಯೇ ಇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಬಲೀಕೃತ ಸಮಿತಿಗಳ ಅಂದಾಜು ಬಳಸಿ ಮಾಡುವ ಒಟ್ಟು ಪ್ರಯತ್ನದ ಹೊರತಾಗಿಯೂ ರಾಜ್ಯ ಸತತವಾದ ಪ್ರಾದೇಶಿಕ ಅಸಮತೋಲನವನ್ನು ಎದುರಿಸುತ್ತಿದೆ. 2022-23ರ ಆರ್ಥಿಕ ಸಮೀಕ್ಷೆಯ ಪ್ರಕಾರ, 6,21,131 ರೂ.ಗಳ ತಲಾದಾಯವನ್ನು ಹೊಂದಿರುವ ಬೆಂಗಳೂರು ನಗರ ಪ್ರಥಮ ಸ್ಥಾನದಲ್ಲಿದ್ದು, 1,24,998 ರೂ.ಗಳ ತಲಾ ಆದಾಯವನ್ನು ಹೊಂದಿರುವ ಕಲಬುರಗಿ ಕೊನೆಯ ಸ್ಥಾನದಲ್ಲಿದೆ ಎಂದು ತಿಳಿಸಿದರು

ಬೆಂಗಳೂರು ನಗರದ ಮಾನವ ಅಭಿವೃದ್ಧಿ ಸೂಚ್ಯಂಕ 0.738 ಪಡೆದು ಮೊದಲ ಸ್ಥಾನದಲ್ಲಿದ್ದರೆ, ಯಾದಗಿರಿ, ಕಲಬುರಗಿ ಮತ್ತು ರಾಯಚೂರು 0.538, 0.539 ಹಾಗೂ 0.562 ಅನುಕ್ರಮವಾಗಿ ಮಾನವ ಅಭಿವೃದ್ಧಿ ಸೂಚ್ಯಂಕ ಪಡೆದು ಕೊನೆಯ ಮೂರು ಸ್ಥಾನಗಳಲ್ಲಿದ್ದು, ಮಾನವ ಅಭಿವೃದ್ಧಿಯ ಅಸಮತೋಲನ ಗಮನಾರ್ಹವಾಗಿದೆ ಎಂದು ಹೇಳಿದರು.

ಇದನ್ನೂ ಓದಿ : “ಬಿಜೆಪಿ ಗೂಂಡಾಗಳಿಂದ ಭಾರತ್ ಜೋಡೋ ನ್ಯಾಯ್‌ ಯಾತ್ರೆ ಮೇಲೆ ದಾಳಿ”: ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...