Homeಕರ್ನಾಟಕರಾಜ್ಯ ದೇಶಕ್ಕೆ ₹100 ಕೊಟ್ರೆ ₹12 ಮಾತ್ರ ಮರಳಿ ಬರುತ್ತಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯ ದೇಶಕ್ಕೆ ₹100 ಕೊಟ್ರೆ ₹12 ಮಾತ್ರ ಮರಳಿ ಬರುತ್ತಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯವು ದೇಶಕ್ಕೆ ಸಂಗ್ರಹಿಸಿಕೊಡುವ ಪ್ರತಿ 100 ರೂಪಾಯಿಗಳಿಗೆ 12.50 ರೂಪಾಯಿ ಮಾತ್ರ ರಾಜ್ಯಕ್ಕೆ ಮರಳಿ ಬರುತ್ತಿದೆ. ಕರ್ನಾಟಕದಿಂದ ವಾರ್ಷಿಕ ರೂ. 4 ಲಕ್ಷ ಕೋಟಿ ಆದಾಯ ಗಳಿಕೆಯಾದರೆ, ಇದಕ್ಕೆ ಪ್ರತಿಯಾಗಿ ಕೇಂದ್ರದಿಂದ ನಮಗೆ ಬರುವುದು ಸುಮಾರು ರೂ. 50,000 ಕೋಟಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ‘ಆರ್ಥಿಕ ಸಂಯುಕ್ತ ತತ್ವ : 16 ನೇ ಹಣಕಾಸು ಆಯೋಗದ ಮುಂದಿರುವ ಸವಾಲು’ಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದರು.

15ನೇ ಹಣಕಾಸು ಆಯೋಗದ ಶಿಫಾರಸ್ಸುಗಳಿಂದ ಕರ್ನಾಟಕಕ್ಕೆ 5 ವರ್ಷಗಳ ಅವಧಿಯಲ್ಲಿ ರೂ. 62,000 ಕೋಟಿ ನಷ್ಟ ಆಗಲಿದೆ ಎಂದು ಸಿಎಂ ಹೇಳಿದರು.

ಹಿಂದಿನ ಹಣಕಾಸು ಆಯೋಗದ ಶಿಫಾರಸ್ಸುಗಳಿಂದಾಗಿ ಕರ್ನಾಟಕ ಭಾರೀ ನಷ್ಟವನ್ನು ಅನುಭವಿಸಬೇಕಾಗಿ ಬಂದಿದ್ದು, ಇದನ್ನು 16ನೇ ಹಣಕಾಸು ಆಯೋಗದ ಮುಂದೆ ಪ್ರಶ್ನಿಸಬೇಕಿದೆ. 14ನೇ ಹಣಕಾಸು ಆಯೋಗದಡಿ ಕರ್ನಾಟಕದ ಪಾಲಿನ ತೆರಿಗೆ ಹಂಚಿಕೆಯು ಶೇ 4.713 ರಿಂದ ಶೇ. 3.647 ಕ್ಕೆ 15ನೇ ಹಣಕಾಸು ಆಯೋಗದಿಂದಾಗಿ ಇಳಿದಿದೆ ಎಂದರು.

ರಾಜ್ಯಗಳ ಪೈಕಿ ಕರ್ನಾಟಕಕ್ಕೆ ಅತ್ಯಂತ ದೊಡ್ಡ ಮೊತ್ತ, ಅಂದರೆ ಶೇ 1.066 ರಷ್ಟು ಇಳಿಕೆಯಾಗಿದೆ. ಈಗಿನ ವ್ಯವಸ್ಥೆ ಆದಾಯದ ದೂರ ವ್ಯಾಪ್ತಿಯನ್ನು ಪರಿಗಣಿಸಿಸುತ್ತಿದ್ದು, ಈ ಪ್ರಕಾರ ಕರ್ನಾಟಕವು ಅತಿ ಹೆಚ್ಚು ತಲಾ ಆದಾಯವಿರುವ ರಾಜ್ಯಕ್ಕೆ ಹೋಲಿಸಿ ಆದಾಯ ಕಡಿಮೆ ದೂರವ್ಯಾಪ್ತಿ ಇರುವ ಕಾರಣ ಸೋಲುತ್ತಿದೆ ಎಂದು ತಿಳಿಸಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ರೂ.6,21,131 ಕೋಟಿಗೂ ಹೆಚ್ಚಿನ ತಲಾ ಆದಾಯ ಮಟ್ಟವನ್ನು ಕಾಣಬಹುದಾಗಿದೆ ಎನ್ನುವುದನ್ನು ಪರಿಗಣಿಸುವುದು ಮುಖ್ಯ. ಈ ವ್ಯವಸ್ಥೆ ಕರ್ನಾಟಕಕ್ಕೆ ಕೆಲವು ಜಿಲ್ಲೆಗಳಲ್ಲಿ ಕಡಿಮೆಯಿರುವ ತಲಾ ಆದಾಯದ ಸಮಸ್ಯೆಯನ್ನು ಬಗೆಹರಿಸಲು ಸಾಕಷ್ಟು ಸಂಪನ್ಮೂಲ ವರ್ಗಾವಣೆಯಿಂದ ವಂಚಿತವಾಗಿಸಿದೆ. ಅಂತರ ರಾಜ್ಯ ತಲಾ ಆದಾಯ ವ್ಯತ್ಯಾಸಗಳಿಗೆ ಹಣಕಾಸು ಆಯೋಗಗಳು ಅಗತ್ಯವಿರುವ ಹೊಂದಾಣಿಕೆಯನ್ನು ಮಾಡಿಕೊಂಡು ಶಿಫಾರಸ್ಸುಗಳನ್ನು ಮಾಡುವಾಗ ಆದಾಯ ದೂರವ್ಯಾಪ್ತಿಯನ್ನು ಪರಿಗಣಿಸಬೇಕು ಎಂದು ಸಿಎಂ ಆಗ್ರಹಿಸಿದರು.

ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಕ್ಕೆ ತನ್ನ ಕೊಡುಗೆಗೆ ತಕ್ಕ ಪ್ರತಿಫಲ ದೊರಕದಿರುವುದು ವಿಪರ್ಯಾಸ. 16ನೇ ಹಣಕಾಸು ಆಯೋಗವು ದಕ್ಷತೆಗೆ ಪ್ರೋತ್ಸಾಹಕಗಳನ್ನು ಹಾಗೂ ವಿತ್ತೀಯ ಕಾರ್ಯಕ್ಷಮತೆಗೆ ನೀಡುವ ಬೆಲೆಯನ್ನು ಹೆಚ್ಚಿಸುವಂತೆ 16ನೇ ಹಣಕಾಸು ಆಯೋಗವನ್ನು ನಾವು ಒತ್ತಾಯಿಸುತ್ತೇವೆ ಎಂದರು.

ಅತ್ಯುತ್ತಮ ವಿತ್ತೀಯ ಕಾರ್ಯಕ್ಷಮತೆ ಹೊಂದಿರುವ ರಾಜ್ಯ ಎಂದು ದಾಖಲೆ ಹೊಂದಿರುವ ನಮ್ಮ ರಾಜ್ಯಕ್ಕೆ ಅದರ ದಕ್ಷತೆಗಾಗಿ ಯಾವುದೇ ಪ್ರೋತ್ಸಾಹಕಗಳು ದೊರೆಯುತ್ತಿಲ್ಲ. ಕರ್ನಾಟಕದ ಭಾರಿ ವಿತ್ತೀಯ ಕಾರ್ಯಕ್ಷಮತೆ ಗಮನಾರ್ಹವಾಗಿದ್ದು ವಿತ್ತೀಯ ಹೊಣೆಗಾರಿಕೆ ಕಾಯ್ದೆಯನ್ನು ಘೋಷಿಸಿದ ಮೊದಲ ರಾಜ್ಯವೆಂದು ಹೆಗ್ಗಳಿಕೆ ಪಡೆದಿದೆ. ಕೋವಿಡ್ ನಂತರದಲ್ಲಿ ರಾಜಸ್ವ ಕೊರತೆಗಳು ಮರುಕಳಿಸಿದ್ದನ್ನು ಹೊರತುಪಡಿಸಿ ಭಾರಿ ಗಾತ್ರದ ವಿತ್ತೀಯ ಸೂಚಕಗಳಾದ ವಿತ್ತೀಯ ಕೊರತೆ ಮತ್ತು ರಾಜಸ್ವ ಕೊರತೆ ಸದಾ ನಿಗದಿತ ವ್ಯಾಪ್ತಿಯಲ್ಲಿಯೇ ಇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಬಲೀಕೃತ ಸಮಿತಿಗಳ ಅಂದಾಜು ಬಳಸಿ ಮಾಡುವ ಒಟ್ಟು ಪ್ರಯತ್ನದ ಹೊರತಾಗಿಯೂ ರಾಜ್ಯ ಸತತವಾದ ಪ್ರಾದೇಶಿಕ ಅಸಮತೋಲನವನ್ನು ಎದುರಿಸುತ್ತಿದೆ. 2022-23ರ ಆರ್ಥಿಕ ಸಮೀಕ್ಷೆಯ ಪ್ರಕಾರ, 6,21,131 ರೂ.ಗಳ ತಲಾದಾಯವನ್ನು ಹೊಂದಿರುವ ಬೆಂಗಳೂರು ನಗರ ಪ್ರಥಮ ಸ್ಥಾನದಲ್ಲಿದ್ದು, 1,24,998 ರೂ.ಗಳ ತಲಾ ಆದಾಯವನ್ನು ಹೊಂದಿರುವ ಕಲಬುರಗಿ ಕೊನೆಯ ಸ್ಥಾನದಲ್ಲಿದೆ ಎಂದು ತಿಳಿಸಿದರು

ಬೆಂಗಳೂರು ನಗರದ ಮಾನವ ಅಭಿವೃದ್ಧಿ ಸೂಚ್ಯಂಕ 0.738 ಪಡೆದು ಮೊದಲ ಸ್ಥಾನದಲ್ಲಿದ್ದರೆ, ಯಾದಗಿರಿ, ಕಲಬುರಗಿ ಮತ್ತು ರಾಯಚೂರು 0.538, 0.539 ಹಾಗೂ 0.562 ಅನುಕ್ರಮವಾಗಿ ಮಾನವ ಅಭಿವೃದ್ಧಿ ಸೂಚ್ಯಂಕ ಪಡೆದು ಕೊನೆಯ ಮೂರು ಸ್ಥಾನಗಳಲ್ಲಿದ್ದು, ಮಾನವ ಅಭಿವೃದ್ಧಿಯ ಅಸಮತೋಲನ ಗಮನಾರ್ಹವಾಗಿದೆ ಎಂದು ಹೇಳಿದರು.

ಇದನ್ನೂ ಓದಿ : “ಬಿಜೆಪಿ ಗೂಂಡಾಗಳಿಂದ ಭಾರತ್ ಜೋಡೋ ನ್ಯಾಯ್‌ ಯಾತ್ರೆ ಮೇಲೆ ದಾಳಿ”: ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...