Homeಕರ್ನಾಟಕರಾಜ್ಯ ದೇಶಕ್ಕೆ ₹100 ಕೊಟ್ರೆ ₹12 ಮಾತ್ರ ಮರಳಿ ಬರುತ್ತಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯ ದೇಶಕ್ಕೆ ₹100 ಕೊಟ್ರೆ ₹12 ಮಾತ್ರ ಮರಳಿ ಬರುತ್ತಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯವು ದೇಶಕ್ಕೆ ಸಂಗ್ರಹಿಸಿಕೊಡುವ ಪ್ರತಿ 100 ರೂಪಾಯಿಗಳಿಗೆ 12.50 ರೂಪಾಯಿ ಮಾತ್ರ ರಾಜ್ಯಕ್ಕೆ ಮರಳಿ ಬರುತ್ತಿದೆ. ಕರ್ನಾಟಕದಿಂದ ವಾರ್ಷಿಕ ರೂ. 4 ಲಕ್ಷ ಕೋಟಿ ಆದಾಯ ಗಳಿಕೆಯಾದರೆ, ಇದಕ್ಕೆ ಪ್ರತಿಯಾಗಿ ಕೇಂದ್ರದಿಂದ ನಮಗೆ ಬರುವುದು ಸುಮಾರು ರೂ. 50,000 ಕೋಟಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ‘ಆರ್ಥಿಕ ಸಂಯುಕ್ತ ತತ್ವ : 16 ನೇ ಹಣಕಾಸು ಆಯೋಗದ ಮುಂದಿರುವ ಸವಾಲು’ಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದರು.

15ನೇ ಹಣಕಾಸು ಆಯೋಗದ ಶಿಫಾರಸ್ಸುಗಳಿಂದ ಕರ್ನಾಟಕಕ್ಕೆ 5 ವರ್ಷಗಳ ಅವಧಿಯಲ್ಲಿ ರೂ. 62,000 ಕೋಟಿ ನಷ್ಟ ಆಗಲಿದೆ ಎಂದು ಸಿಎಂ ಹೇಳಿದರು.

ಹಿಂದಿನ ಹಣಕಾಸು ಆಯೋಗದ ಶಿಫಾರಸ್ಸುಗಳಿಂದಾಗಿ ಕರ್ನಾಟಕ ಭಾರೀ ನಷ್ಟವನ್ನು ಅನುಭವಿಸಬೇಕಾಗಿ ಬಂದಿದ್ದು, ಇದನ್ನು 16ನೇ ಹಣಕಾಸು ಆಯೋಗದ ಮುಂದೆ ಪ್ರಶ್ನಿಸಬೇಕಿದೆ. 14ನೇ ಹಣಕಾಸು ಆಯೋಗದಡಿ ಕರ್ನಾಟಕದ ಪಾಲಿನ ತೆರಿಗೆ ಹಂಚಿಕೆಯು ಶೇ 4.713 ರಿಂದ ಶೇ. 3.647 ಕ್ಕೆ 15ನೇ ಹಣಕಾಸು ಆಯೋಗದಿಂದಾಗಿ ಇಳಿದಿದೆ ಎಂದರು.

ರಾಜ್ಯಗಳ ಪೈಕಿ ಕರ್ನಾಟಕಕ್ಕೆ ಅತ್ಯಂತ ದೊಡ್ಡ ಮೊತ್ತ, ಅಂದರೆ ಶೇ 1.066 ರಷ್ಟು ಇಳಿಕೆಯಾಗಿದೆ. ಈಗಿನ ವ್ಯವಸ್ಥೆ ಆದಾಯದ ದೂರ ವ್ಯಾಪ್ತಿಯನ್ನು ಪರಿಗಣಿಸಿಸುತ್ತಿದ್ದು, ಈ ಪ್ರಕಾರ ಕರ್ನಾಟಕವು ಅತಿ ಹೆಚ್ಚು ತಲಾ ಆದಾಯವಿರುವ ರಾಜ್ಯಕ್ಕೆ ಹೋಲಿಸಿ ಆದಾಯ ಕಡಿಮೆ ದೂರವ್ಯಾಪ್ತಿ ಇರುವ ಕಾರಣ ಸೋಲುತ್ತಿದೆ ಎಂದು ತಿಳಿಸಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ರೂ.6,21,131 ಕೋಟಿಗೂ ಹೆಚ್ಚಿನ ತಲಾ ಆದಾಯ ಮಟ್ಟವನ್ನು ಕಾಣಬಹುದಾಗಿದೆ ಎನ್ನುವುದನ್ನು ಪರಿಗಣಿಸುವುದು ಮುಖ್ಯ. ಈ ವ್ಯವಸ್ಥೆ ಕರ್ನಾಟಕಕ್ಕೆ ಕೆಲವು ಜಿಲ್ಲೆಗಳಲ್ಲಿ ಕಡಿಮೆಯಿರುವ ತಲಾ ಆದಾಯದ ಸಮಸ್ಯೆಯನ್ನು ಬಗೆಹರಿಸಲು ಸಾಕಷ್ಟು ಸಂಪನ್ಮೂಲ ವರ್ಗಾವಣೆಯಿಂದ ವಂಚಿತವಾಗಿಸಿದೆ. ಅಂತರ ರಾಜ್ಯ ತಲಾ ಆದಾಯ ವ್ಯತ್ಯಾಸಗಳಿಗೆ ಹಣಕಾಸು ಆಯೋಗಗಳು ಅಗತ್ಯವಿರುವ ಹೊಂದಾಣಿಕೆಯನ್ನು ಮಾಡಿಕೊಂಡು ಶಿಫಾರಸ್ಸುಗಳನ್ನು ಮಾಡುವಾಗ ಆದಾಯ ದೂರವ್ಯಾಪ್ತಿಯನ್ನು ಪರಿಗಣಿಸಬೇಕು ಎಂದು ಸಿಎಂ ಆಗ್ರಹಿಸಿದರು.

ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಕ್ಕೆ ತನ್ನ ಕೊಡುಗೆಗೆ ತಕ್ಕ ಪ್ರತಿಫಲ ದೊರಕದಿರುವುದು ವಿಪರ್ಯಾಸ. 16ನೇ ಹಣಕಾಸು ಆಯೋಗವು ದಕ್ಷತೆಗೆ ಪ್ರೋತ್ಸಾಹಕಗಳನ್ನು ಹಾಗೂ ವಿತ್ತೀಯ ಕಾರ್ಯಕ್ಷಮತೆಗೆ ನೀಡುವ ಬೆಲೆಯನ್ನು ಹೆಚ್ಚಿಸುವಂತೆ 16ನೇ ಹಣಕಾಸು ಆಯೋಗವನ್ನು ನಾವು ಒತ್ತಾಯಿಸುತ್ತೇವೆ ಎಂದರು.

ಅತ್ಯುತ್ತಮ ವಿತ್ತೀಯ ಕಾರ್ಯಕ್ಷಮತೆ ಹೊಂದಿರುವ ರಾಜ್ಯ ಎಂದು ದಾಖಲೆ ಹೊಂದಿರುವ ನಮ್ಮ ರಾಜ್ಯಕ್ಕೆ ಅದರ ದಕ್ಷತೆಗಾಗಿ ಯಾವುದೇ ಪ್ರೋತ್ಸಾಹಕಗಳು ದೊರೆಯುತ್ತಿಲ್ಲ. ಕರ್ನಾಟಕದ ಭಾರಿ ವಿತ್ತೀಯ ಕಾರ್ಯಕ್ಷಮತೆ ಗಮನಾರ್ಹವಾಗಿದ್ದು ವಿತ್ತೀಯ ಹೊಣೆಗಾರಿಕೆ ಕಾಯ್ದೆಯನ್ನು ಘೋಷಿಸಿದ ಮೊದಲ ರಾಜ್ಯವೆಂದು ಹೆಗ್ಗಳಿಕೆ ಪಡೆದಿದೆ. ಕೋವಿಡ್ ನಂತರದಲ್ಲಿ ರಾಜಸ್ವ ಕೊರತೆಗಳು ಮರುಕಳಿಸಿದ್ದನ್ನು ಹೊರತುಪಡಿಸಿ ಭಾರಿ ಗಾತ್ರದ ವಿತ್ತೀಯ ಸೂಚಕಗಳಾದ ವಿತ್ತೀಯ ಕೊರತೆ ಮತ್ತು ರಾಜಸ್ವ ಕೊರತೆ ಸದಾ ನಿಗದಿತ ವ್ಯಾಪ್ತಿಯಲ್ಲಿಯೇ ಇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಬಲೀಕೃತ ಸಮಿತಿಗಳ ಅಂದಾಜು ಬಳಸಿ ಮಾಡುವ ಒಟ್ಟು ಪ್ರಯತ್ನದ ಹೊರತಾಗಿಯೂ ರಾಜ್ಯ ಸತತವಾದ ಪ್ರಾದೇಶಿಕ ಅಸಮತೋಲನವನ್ನು ಎದುರಿಸುತ್ತಿದೆ. 2022-23ರ ಆರ್ಥಿಕ ಸಮೀಕ್ಷೆಯ ಪ್ರಕಾರ, 6,21,131 ರೂ.ಗಳ ತಲಾದಾಯವನ್ನು ಹೊಂದಿರುವ ಬೆಂಗಳೂರು ನಗರ ಪ್ರಥಮ ಸ್ಥಾನದಲ್ಲಿದ್ದು, 1,24,998 ರೂ.ಗಳ ತಲಾ ಆದಾಯವನ್ನು ಹೊಂದಿರುವ ಕಲಬುರಗಿ ಕೊನೆಯ ಸ್ಥಾನದಲ್ಲಿದೆ ಎಂದು ತಿಳಿಸಿದರು

ಬೆಂಗಳೂರು ನಗರದ ಮಾನವ ಅಭಿವೃದ್ಧಿ ಸೂಚ್ಯಂಕ 0.738 ಪಡೆದು ಮೊದಲ ಸ್ಥಾನದಲ್ಲಿದ್ದರೆ, ಯಾದಗಿರಿ, ಕಲಬುರಗಿ ಮತ್ತು ರಾಯಚೂರು 0.538, 0.539 ಹಾಗೂ 0.562 ಅನುಕ್ರಮವಾಗಿ ಮಾನವ ಅಭಿವೃದ್ಧಿ ಸೂಚ್ಯಂಕ ಪಡೆದು ಕೊನೆಯ ಮೂರು ಸ್ಥಾನಗಳಲ್ಲಿದ್ದು, ಮಾನವ ಅಭಿವೃದ್ಧಿಯ ಅಸಮತೋಲನ ಗಮನಾರ್ಹವಾಗಿದೆ ಎಂದು ಹೇಳಿದರು.

ಇದನ್ನೂ ಓದಿ : “ಬಿಜೆಪಿ ಗೂಂಡಾಗಳಿಂದ ಭಾರತ್ ಜೋಡೋ ನ್ಯಾಯ್‌ ಯಾತ್ರೆ ಮೇಲೆ ದಾಳಿ”: ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...