Homeಕರ್ನಾಟಕರಾಜ್ಯ ದೇಶಕ್ಕೆ ₹100 ಕೊಟ್ರೆ ₹12 ಮಾತ್ರ ಮರಳಿ ಬರುತ್ತಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯ ದೇಶಕ್ಕೆ ₹100 ಕೊಟ್ರೆ ₹12 ಮಾತ್ರ ಮರಳಿ ಬರುತ್ತಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯವು ದೇಶಕ್ಕೆ ಸಂಗ್ರಹಿಸಿಕೊಡುವ ಪ್ರತಿ 100 ರೂಪಾಯಿಗಳಿಗೆ 12.50 ರೂಪಾಯಿ ಮಾತ್ರ ರಾಜ್ಯಕ್ಕೆ ಮರಳಿ ಬರುತ್ತಿದೆ. ಕರ್ನಾಟಕದಿಂದ ವಾರ್ಷಿಕ ರೂ. 4 ಲಕ್ಷ ಕೋಟಿ ಆದಾಯ ಗಳಿಕೆಯಾದರೆ, ಇದಕ್ಕೆ ಪ್ರತಿಯಾಗಿ ಕೇಂದ್ರದಿಂದ ನಮಗೆ ಬರುವುದು ಸುಮಾರು ರೂ. 50,000 ಕೋಟಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ‘ಆರ್ಥಿಕ ಸಂಯುಕ್ತ ತತ್ವ : 16 ನೇ ಹಣಕಾಸು ಆಯೋಗದ ಮುಂದಿರುವ ಸವಾಲು’ಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದರು.

15ನೇ ಹಣಕಾಸು ಆಯೋಗದ ಶಿಫಾರಸ್ಸುಗಳಿಂದ ಕರ್ನಾಟಕಕ್ಕೆ 5 ವರ್ಷಗಳ ಅವಧಿಯಲ್ಲಿ ರೂ. 62,000 ಕೋಟಿ ನಷ್ಟ ಆಗಲಿದೆ ಎಂದು ಸಿಎಂ ಹೇಳಿದರು.

ಹಿಂದಿನ ಹಣಕಾಸು ಆಯೋಗದ ಶಿಫಾರಸ್ಸುಗಳಿಂದಾಗಿ ಕರ್ನಾಟಕ ಭಾರೀ ನಷ್ಟವನ್ನು ಅನುಭವಿಸಬೇಕಾಗಿ ಬಂದಿದ್ದು, ಇದನ್ನು 16ನೇ ಹಣಕಾಸು ಆಯೋಗದ ಮುಂದೆ ಪ್ರಶ್ನಿಸಬೇಕಿದೆ. 14ನೇ ಹಣಕಾಸು ಆಯೋಗದಡಿ ಕರ್ನಾಟಕದ ಪಾಲಿನ ತೆರಿಗೆ ಹಂಚಿಕೆಯು ಶೇ 4.713 ರಿಂದ ಶೇ. 3.647 ಕ್ಕೆ 15ನೇ ಹಣಕಾಸು ಆಯೋಗದಿಂದಾಗಿ ಇಳಿದಿದೆ ಎಂದರು.

ರಾಜ್ಯಗಳ ಪೈಕಿ ಕರ್ನಾಟಕಕ್ಕೆ ಅತ್ಯಂತ ದೊಡ್ಡ ಮೊತ್ತ, ಅಂದರೆ ಶೇ 1.066 ರಷ್ಟು ಇಳಿಕೆಯಾಗಿದೆ. ಈಗಿನ ವ್ಯವಸ್ಥೆ ಆದಾಯದ ದೂರ ವ್ಯಾಪ್ತಿಯನ್ನು ಪರಿಗಣಿಸಿಸುತ್ತಿದ್ದು, ಈ ಪ್ರಕಾರ ಕರ್ನಾಟಕವು ಅತಿ ಹೆಚ್ಚು ತಲಾ ಆದಾಯವಿರುವ ರಾಜ್ಯಕ್ಕೆ ಹೋಲಿಸಿ ಆದಾಯ ಕಡಿಮೆ ದೂರವ್ಯಾಪ್ತಿ ಇರುವ ಕಾರಣ ಸೋಲುತ್ತಿದೆ ಎಂದು ತಿಳಿಸಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ರೂ.6,21,131 ಕೋಟಿಗೂ ಹೆಚ್ಚಿನ ತಲಾ ಆದಾಯ ಮಟ್ಟವನ್ನು ಕಾಣಬಹುದಾಗಿದೆ ಎನ್ನುವುದನ್ನು ಪರಿಗಣಿಸುವುದು ಮುಖ್ಯ. ಈ ವ್ಯವಸ್ಥೆ ಕರ್ನಾಟಕಕ್ಕೆ ಕೆಲವು ಜಿಲ್ಲೆಗಳಲ್ಲಿ ಕಡಿಮೆಯಿರುವ ತಲಾ ಆದಾಯದ ಸಮಸ್ಯೆಯನ್ನು ಬಗೆಹರಿಸಲು ಸಾಕಷ್ಟು ಸಂಪನ್ಮೂಲ ವರ್ಗಾವಣೆಯಿಂದ ವಂಚಿತವಾಗಿಸಿದೆ. ಅಂತರ ರಾಜ್ಯ ತಲಾ ಆದಾಯ ವ್ಯತ್ಯಾಸಗಳಿಗೆ ಹಣಕಾಸು ಆಯೋಗಗಳು ಅಗತ್ಯವಿರುವ ಹೊಂದಾಣಿಕೆಯನ್ನು ಮಾಡಿಕೊಂಡು ಶಿಫಾರಸ್ಸುಗಳನ್ನು ಮಾಡುವಾಗ ಆದಾಯ ದೂರವ್ಯಾಪ್ತಿಯನ್ನು ಪರಿಗಣಿಸಬೇಕು ಎಂದು ಸಿಎಂ ಆಗ್ರಹಿಸಿದರು.

ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಕ್ಕೆ ತನ್ನ ಕೊಡುಗೆಗೆ ತಕ್ಕ ಪ್ರತಿಫಲ ದೊರಕದಿರುವುದು ವಿಪರ್ಯಾಸ. 16ನೇ ಹಣಕಾಸು ಆಯೋಗವು ದಕ್ಷತೆಗೆ ಪ್ರೋತ್ಸಾಹಕಗಳನ್ನು ಹಾಗೂ ವಿತ್ತೀಯ ಕಾರ್ಯಕ್ಷಮತೆಗೆ ನೀಡುವ ಬೆಲೆಯನ್ನು ಹೆಚ್ಚಿಸುವಂತೆ 16ನೇ ಹಣಕಾಸು ಆಯೋಗವನ್ನು ನಾವು ಒತ್ತಾಯಿಸುತ್ತೇವೆ ಎಂದರು.

ಅತ್ಯುತ್ತಮ ವಿತ್ತೀಯ ಕಾರ್ಯಕ್ಷಮತೆ ಹೊಂದಿರುವ ರಾಜ್ಯ ಎಂದು ದಾಖಲೆ ಹೊಂದಿರುವ ನಮ್ಮ ರಾಜ್ಯಕ್ಕೆ ಅದರ ದಕ್ಷತೆಗಾಗಿ ಯಾವುದೇ ಪ್ರೋತ್ಸಾಹಕಗಳು ದೊರೆಯುತ್ತಿಲ್ಲ. ಕರ್ನಾಟಕದ ಭಾರಿ ವಿತ್ತೀಯ ಕಾರ್ಯಕ್ಷಮತೆ ಗಮನಾರ್ಹವಾಗಿದ್ದು ವಿತ್ತೀಯ ಹೊಣೆಗಾರಿಕೆ ಕಾಯ್ದೆಯನ್ನು ಘೋಷಿಸಿದ ಮೊದಲ ರಾಜ್ಯವೆಂದು ಹೆಗ್ಗಳಿಕೆ ಪಡೆದಿದೆ. ಕೋವಿಡ್ ನಂತರದಲ್ಲಿ ರಾಜಸ್ವ ಕೊರತೆಗಳು ಮರುಕಳಿಸಿದ್ದನ್ನು ಹೊರತುಪಡಿಸಿ ಭಾರಿ ಗಾತ್ರದ ವಿತ್ತೀಯ ಸೂಚಕಗಳಾದ ವಿತ್ತೀಯ ಕೊರತೆ ಮತ್ತು ರಾಜಸ್ವ ಕೊರತೆ ಸದಾ ನಿಗದಿತ ವ್ಯಾಪ್ತಿಯಲ್ಲಿಯೇ ಇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಬಲೀಕೃತ ಸಮಿತಿಗಳ ಅಂದಾಜು ಬಳಸಿ ಮಾಡುವ ಒಟ್ಟು ಪ್ರಯತ್ನದ ಹೊರತಾಗಿಯೂ ರಾಜ್ಯ ಸತತವಾದ ಪ್ರಾದೇಶಿಕ ಅಸಮತೋಲನವನ್ನು ಎದುರಿಸುತ್ತಿದೆ. 2022-23ರ ಆರ್ಥಿಕ ಸಮೀಕ್ಷೆಯ ಪ್ರಕಾರ, 6,21,131 ರೂ.ಗಳ ತಲಾದಾಯವನ್ನು ಹೊಂದಿರುವ ಬೆಂಗಳೂರು ನಗರ ಪ್ರಥಮ ಸ್ಥಾನದಲ್ಲಿದ್ದು, 1,24,998 ರೂ.ಗಳ ತಲಾ ಆದಾಯವನ್ನು ಹೊಂದಿರುವ ಕಲಬುರಗಿ ಕೊನೆಯ ಸ್ಥಾನದಲ್ಲಿದೆ ಎಂದು ತಿಳಿಸಿದರು

ಬೆಂಗಳೂರು ನಗರದ ಮಾನವ ಅಭಿವೃದ್ಧಿ ಸೂಚ್ಯಂಕ 0.738 ಪಡೆದು ಮೊದಲ ಸ್ಥಾನದಲ್ಲಿದ್ದರೆ, ಯಾದಗಿರಿ, ಕಲಬುರಗಿ ಮತ್ತು ರಾಯಚೂರು 0.538, 0.539 ಹಾಗೂ 0.562 ಅನುಕ್ರಮವಾಗಿ ಮಾನವ ಅಭಿವೃದ್ಧಿ ಸೂಚ್ಯಂಕ ಪಡೆದು ಕೊನೆಯ ಮೂರು ಸ್ಥಾನಗಳಲ್ಲಿದ್ದು, ಮಾನವ ಅಭಿವೃದ್ಧಿಯ ಅಸಮತೋಲನ ಗಮನಾರ್ಹವಾಗಿದೆ ಎಂದು ಹೇಳಿದರು.

ಇದನ್ನೂ ಓದಿ : “ಬಿಜೆಪಿ ಗೂಂಡಾಗಳಿಂದ ಭಾರತ್ ಜೋಡೋ ನ್ಯಾಯ್‌ ಯಾತ್ರೆ ಮೇಲೆ ದಾಳಿ”: ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...