Homeಕರ್ನಾಟಕ‘ರಾಜ್ಯವು ನಿಯಂತ್ರಣದಲ್ಲಿದೆ’: ‘ಹಿಜಾಬ್‌‌’ ವಿಚಾರಣೆಯ ಸಮಯ ನ್ಯಾಯಾಲಯಕ್ಕೆ ತಿಳಿಸಿದ ರಾಜ್ಯ ಸರ್ಕಾರ!

‘ರಾಜ್ಯವು ನಿಯಂತ್ರಣದಲ್ಲಿದೆ’: ‘ಹಿಜಾಬ್‌‌’ ವಿಚಾರಣೆಯ ಸಮಯ ನ್ಯಾಯಾಲಯಕ್ಕೆ ತಿಳಿಸಿದ ರಾಜ್ಯ ಸರ್ಕಾರ!

- Advertisement -
- Advertisement -

ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿರುವುದನ್ನು ಪ್ರಶ್ನಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶ ನೀಡುವಂತೆ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವೇಳೆ “ರಾಜ್ಯವು ನಿಯಂತ್ರಣದಲ್ಲಿದೆ” ಎಂದು ರಾಜ್ಯ ಸರ್ಕಾರ ಹೇಳಿದೆ.

ವಿದ್ಯಾರ್ಥಿನಿಯರು ಸಲ್ಲಿಸಿದ ನಾಲ್ಕು ಅರ್ಜಿಗಳ ವಿಚಾರಣೆಯನ್ನು ಕೋರ್ಟ್‌ ಮಂಗಳವಾರ ಪ್ರಾರಂಭಿಸಿದೆ. ವಿದ್ಯಾರ್ಥಿನಿಯರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ದೇವದತ್ ಕಾಮತ್‌, “ಹಿಜಾಬ್ ಬಗ್ಗೆ ಕೋರ್ಟ್ ವಿಚಾರಣೆ ನಡೆಸುತ್ತಿದ್ದಾಗ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಕಾನೂನನ್ನು ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ಹಿಜಾಬ್ ಧರಿಸಿರುವ ಹುಡುಗಿಯರನ್ನು ಕೆಲವು ಹುಡುಗರು ಬೆನ್ನಟ್ಟುವ ಚಿತ್ರಗಳಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Hijab Live | ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿಲ್ಲ ಎಂದು ಕೋರ್ಟ್‌ನಲ್ಲಿ ಸುಳ್ಳು ಹೇಳಿದ ರಾಜ್ಯ ಸರ್ಕಾರ

ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ, “ಇಂತಹ ಹೇಳಿಕೆಗಳು ತಪ್ಪು ಸಂಕೇತವನ್ನು ನೀಡುತ್ತವೆ. ಹಿಜಾಬ್ ಧರಿಸಿರುವ ಹುಡುಗಿಯರ ಮೇಲೆ ದಾಳಿ ಮಾಡಲಾಗುತ್ತಿದೆ ಎಂಬಂತಹ ಹೇಳಿಕೆಗಳು ಅಪಾಯಕಾರಿ. ರಾಜ್ಯವು ನಿಯಂತ್ರಣದಲ್ಲಿದೆ” ಎಂದು ಹೇಳಿದ್ದಾರೆ.

ಆದರೆ ಮಾಧ್ಯಮಗಳು ವರದಿ ಮಾಡಿರುವಂತೆ ರಾಜ್ಯದಾದ್ಯಂತ ಹಲವು ಕಾಲೇಜುಗಳಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಿದೆ. ಮಂಡ್ಯದಲ್ಲಿ ಬುರ್ಖಾ ಧರಿಸಿರುವ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಸುತ್ತುವರೆದು ‘ಜೈಶ್ರೀರಾಮ್’ ಘೋಷಣೆ ಕೂಗಿದ್ದಾರೆ. ಶಿವಮೊಗ್ಗದ ಕಾಲೇಜಿನಲ್ಲಿ ರಾಷ್ಟ್ರಧ್ವಜ ಹಾರಿಸುವ ಧ್ವಜಸ್ಥಂಧದಲ್ಲಿ ಕೇಸರಿ ಧ್ವಜವನ್ನು ಹಾರಿಸಲಾಗಿದೆ.

ಮತ್ತೊಂದು ಪ್ರದೇಶದಲ್ಲಿ ಕೇಸರಿ ಶಾಲು ಹಾಕಿರುವ ವಿದ್ಯಾರ್ಥಿಗಳು ಕಾಲೇಜಿಗೆ ಕಲ್ಲೆಸೆದಿದ್ದಾರೆ. ಮತ್ತೊಂದು ಕಡೆಯಲ್ಲಿ ಬೀದಿಯಲ್ಲಿ ಹೊಡೆದಾಡಿಕೊಂಡಿದ್ದಾರೆ. ಮಡಿಕೇರಿಯಲ್ಲಿ ಕೇಸರಿ ಶಾಲು ಧರಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿ ಹೊಡೆದಾಟ ನಡೆದು, ಚೂರಿ ಇರಿತ ಮಾಡಲಾಗಿದೆ.

ಇದನ್ನೂ ಓದಿ:ಕುಶಾಲನಗರ: ಕೇಸರಿ ಶಾಲು ಹಾಕುವಂತೆ ಒತ್ತಾಯಿಸಿದ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ 

ಈ ನಡುವೆ ಎಲ್ಲಾ ಪ್ರೌಢಶಾಲೆ ಹಾಗೂ ಕಾಲೇಜುಗಳನ್ನು ಮುಂದಿನ ಮೂರು ದಿನಗಳ ಕಾಲ ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ದೀಕ್ಷಿತ್, “ನಾನು ತಾಳ್ಮೆಯಿಂದ ವಿಚಾರಣೆ ನಡೆಸುತ್ತಿದ್ದೇನೆ. ಸಂವಿಧಾನದಲ್ಲಿ ಜನರಿಗೆ ನಂಬಿಕೆ ಇರಬೇಕು. ಚೇಷ್ಟೆ ಮಾಡುವುದರಿಂದ ಸಮಸ್ಯೆ ಇನ್ನೂ ಉರಿಯುವಂತೆ ಮಾಡುತ್ತದೆ” ಎಂದು ಹೇಳಿದ್ದಾರೆ.

“ಪ್ರಕರಣದ ಮುಂದಿನ ವಿಚಾರಣೆ ಬಾಕಿಯಿದೆ. ಈ ನ್ಯಾಯಾಲಯವು ವಿದ್ಯಾರ್ಥಿ ಸಮುದಾಯ ಮತ್ತು ಸಾರ್ವಜನಿಕರಿಗೆ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡಲು ವಿನಂತಿಸುತ್ತದೆ. ನ್ಯಾಯಾಲಯವು ಸಾರ್ವಜನಿಕರ ಬುದ್ಧಿವಂತಿಕೆ ಮತ್ತು ಸದ್ಗುಣದಲ್ಲಿ ಸಂಪೂರ್ಣ ನಂಬಿಕೆಯನ್ನು ಹೊಂದಿದೆ ಮತ್ತು ಅದನ್ನು ಆಚರಣೆಗೆ ತರಬೇಕೆಂದು ಅದು ಆಶಿಸುತ್ತದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ಜೂಮ್‌ ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆಯಲ್ಲಿ ಭಾಗಿಯಾಗಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಸರ್ಕಾರದ ಪರವಾಗಿ ವಾದಿಸಿದ್ದಾರೆ. ವಿದ್ಯಾರ್ಥಿನಿಯರ ಪರವಾಗಿ ಹಿರಿಯ ವಕೀಲ ದೇವದತ್ತ ಕಾಮತ್‌ ಮತ್ತು ಮೊಹಮ್ಮದ್ ತಾಹೀರ್‌ ವಾದಿಸಿದ್ದಾರೆ. ಈಗಾಗಲೇ ಹಿಜಾಬ್‌ ಪರವಾಗಿ ಹಲವಾರು ವಿಷಯಗಳನ್ನು ನ್ಯಾಯಾಲಯದಲ್ಲಿ ಹಿರಿಯ ವಕೀಲ ದೇವದತ್ತ ಕಾಮತ್‌ ಮಂಡಿಸಿದ್ದಾರೆ. ನ್ಯಾಯಾಲಯವು ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಇದನ್ನೂ ಓದಿ: Hijab Live | ಹಿಜಾಬ್‌ ಅರ್ಜಿ ವಿಚಾರಣೆ ಲೈವ್‌ | ವಿಚಾರಣೆ ಬುಧವಾರಕ್ಕೆ ಮುಂದೂಡಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...