Homeಕರ್ನಾಟಕರಾಜ್ಯದಲ್ಲಿ ಹವಾಮಾನ ವೈಪರೀತ್ಯ ತಡೆಗೆ 2030 ರ ವೇಳೆಗೆ 52 ಲಕ್ಷ ಕೋಟಿ ಅಗತ್ಯವಿದೆ- EMPRI

ರಾಜ್ಯದಲ್ಲಿ ಹವಾಮಾನ ವೈಪರೀತ್ಯ ತಡೆಗೆ 2030 ರ ವೇಳೆಗೆ 52 ಲಕ್ಷ ಕೋಟಿ ಅಗತ್ಯವಿದೆ- EMPRI

- Advertisement -
- Advertisement -

ರಾಜ್ಯಕ್ಕೆ ಹವಾಮಾನ ಬದಲಾವಣೆಯ ಹೊಂದಾಣಿಕೆ ಮತ್ತು ವೈಪರೀತ್ಯ ತಡೆಯುವ ಕಾರ್ಯಗಳಿಗಾಗಿ 2025 ರ ವೇಳೆಗೆ 20,88,041.23 ಕೋಟಿ ರೂಪಾಯಿ ಬೇಕಾಗುತ್ತದೆ. 2030 ರ ವೇಳೆಗೆ 52,82,744.32 ಕೋಟಿ ರೂಪಾಯಿಗಳ ಅಗತ್ಯವಿದೆ. ಈ ಹಣವನ್ನು ಬಜೆಟ್‌ನಲ್ಲಿ ಹಂಚಿಕೆ ಮಾಡಬೇಕಾಗುತ್ತದೆ ಎಂದು ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (EMPRI) ಅಂದಾಜಿಸಿದೆ.

ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ಸಿದ್ಧಪಡಿಸಿದ 2015ರ ವರದಿಯ ಎರಡನೇ ಆವೃತ್ತಿಯಾದ ಹವಾಮಾನ ಬದಲಾವಣೆಯ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ – ಆವೃತ್ತಿ-2 ರಲ್ಲಿ ಈ ವೆಚ್ಚದ ಅಂದಾಜು ರಚಿಸಲಾಗಿದೆ. ವರದಿಯ ಅನುಮೋದನೆ ಮತ್ತು ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರದ ಮುಂದೆ ಇಡಲಾಗಿದೆ.

ಇದನ್ನು ತಯಾರಿಸಲು 15 ಹವಾಮಾನ ಮಾದರಿಗಳನ್ನು ಬಳಸಲಾಗಿದೆ. 2015ರ ವರದಿಯಲ್ಲಿ ಮಾಡಿದ ಶಿಫಾರಸುಗಳ ಮೇಲೆ ಮಾಡಲಾಗಿರುವ ಸಾಧನೆಗಳು ಮತ್ತು ಕಾರ್ಯಗಳನ್ನು ಮೌಲ್ಯಮಾಪನವನ್ನು ಪರಿಸರ ಮತ್ತು ಶಿಕ್ಷಣ ಕೇಂದ್ರವು ನಡೆಸುತ್ತಿದೆ ಎಂದು EMPRI ಮಹಾನಿರ್ದೇಶಕ ಜಗಮೋಹನ್ ಶರ್ಮಾ ಮಂಗಳವಾರ ಹೇಳಿದ್ದಾರೆ.

ಇದನ್ನೂ ಓದಿ: ನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

ಬೆಂಗಳೂರು ಹವಾಮಾನ ಬದಲಾವಣೆ ಉಪಕ್ರಮ-ಕರ್ನಾಟಕ ಆಯೋಜಿಸಿದ್ದ “COP-26 ಗ್ಲಾಸ್ಗೋ, ಹವಾಮಾನ ಬದಲಾವಣೆ ಶಿಫಾರಸುಗಳು ಮತ್ತು ಕರ್ನಾಟಕದ ಮೇಲೆ ಪರಿಣಾಮ” ಕುರಿತ ಚರ್ಚೆಯಲ್ಲಿ ಮಾತನಾಡಿದ ಶರ್ಮಾ ಅವರು, ಬೇಸಿಗೆ ಮತ್ತು ಚಳಿಗಾಲದ ತಾಪಮಾನವು 0.5 ರಿಂದ 2.5 ಡಿಗ್ರಿ ಸೆಲ್ಸಿಯಸ್‌ಗೆ ಬದಲಾಗುತ್ತದೆ ಮತ್ತು ಮಳೆಯ ದಿನಗಳು ಹೆಚ್ಚಾಗುತ್ತದೆ. ಇದು ರಬಿ ಮತ್ತು ಖಾರಿಫ್ ಬೆಳೆಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿ ಅಂದಾಜಿಸಿದೆ ಎಂದು ಹೇಳಿದ್ದಾರೆ.

“ಹವಾಮಾನ ಬದಲಾವಣೆಯನ್ನು ಪರಿಹರಿಸುವ ಯೋಜನೆಗಳಿಗೆ ಹಣವನ್ನು ನೀಡಲಾಗುವುದು ಎಂದು ವಿಶ್ವಬ್ಯಾಂಕ್ ಹೇಳಿದೆ. ಹೀಗಾಗಿ, ಕರ್ನಾಟಕ ಮತ್ತು ಭಾರತ ಅಂತಹ ಯೋಜನೆಗಳನ್ನು ಸಿದ್ಧಪಡಿಸಲು ಪ್ರಾರಂಭಿಸಬೇಕು. ಆಗ ಮಾತ್ರ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಪರಿಸರ ಪ್ರಭಾವವನ್ನು ಪರಿಹರಿಸಲು ಹಣ ಬರುತ್ತದೆ” ಎಂದು ವಿಶ್ವಸಂಸ್ಥೆ ಸಮಿತಿಯ ಸದಸ್ಯ ಡಾ.ಎಚ್.ಎನ್.ರವೀಂದ್ರನಾಥ್ ಹೇಳಿದ್ದಾರೆ.

ರಾಜ್ಯ ಸರ್ಕಾರವು ಕಾರ್ಯಗತಗೊಳಿಸುವ ಸಣ್ಣ ಯೋಜನೆಗಳು ಪ್ರಮುಖವಾಗಿ ಪರಿಸರ ಮತ್ತು ಪರಿಸರ ಸಂಬಂಧಿತ ವಲಯದ ಮೇಲೆ ಪರಿಣಾಮ ಬೀರುತ್ತವೆ. ಸೌರಶಕ್ತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದರೂ ಶೇ.80ರಷ್ಟು ಸೌರ ಫಲಕಗಳು ಚೀನಾದಲ್ಲಿ ತಯಾರಾಗಿರುವುದು ಅನೇಕರಿಗೆ ತಿಳಿದಿಲ್ಲ. ಒಮ್ಮೆ ಅವುಗಳನ್ನು ಭಾರತದಲ್ಲಿ ತಯಾರಿಸಿದರೆ, ಡೈನಾಮಿಕ್ಸ್ ಬದಲಾಗುತ್ತದೆ ಎಂದು ರವೀಂದ್ರನಾಥ್ ಹೇಳಿದ್ದಾರೆ.

ಹವಾಮಾನ ಬದಲಾವಣೆ ಸಮ್ಮೇಳನ (COP-26) ದಲ್ಲಿ ಭಾರತವು ದ್ವೀಪ ರಾಷ್ಟ್ರಗಳಿಗೆ ಸಹಾಯ ಮಾಡಲು ಬದ್ಧವಾಗಿದೆ. ಆದರೆ, ಕರ್ನಾಟಕದಲ್ಲಿ 94 ದ್ವೀಪಗಳು ಮತ್ತು ಕರಾವಳಿ ಪ್ರದೇಶಗಳು ಈಗಾಗಲೇ ಮಣ್ಣಿನ ಸವೆತಕ್ಕೆ ಸಾಕ್ಷಿಯಾಗುತ್ತಿವೆ, ಅದರ ಬಗ್ಗೆ ಚರ್ಚಿಸಲಾಗಿಲ್ಲ ಎಂಬುದನ್ನು ಗುರುತಿಸಿದ್ದಾರೆ.


ಇದನ್ನೂ ಓದಿ: ನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...