Homeಕರ್ನಾಟಕರಾಜ್ಯದಲ್ಲಿ ಹವಾಮಾನ ವೈಪರೀತ್ಯ ತಡೆಗೆ 2030 ರ ವೇಳೆಗೆ 52 ಲಕ್ಷ ಕೋಟಿ ಅಗತ್ಯವಿದೆ- EMPRI

ರಾಜ್ಯದಲ್ಲಿ ಹವಾಮಾನ ವೈಪರೀತ್ಯ ತಡೆಗೆ 2030 ರ ವೇಳೆಗೆ 52 ಲಕ್ಷ ಕೋಟಿ ಅಗತ್ಯವಿದೆ- EMPRI

- Advertisement -
- Advertisement -

ರಾಜ್ಯಕ್ಕೆ ಹವಾಮಾನ ಬದಲಾವಣೆಯ ಹೊಂದಾಣಿಕೆ ಮತ್ತು ವೈಪರೀತ್ಯ ತಡೆಯುವ ಕಾರ್ಯಗಳಿಗಾಗಿ 2025 ರ ವೇಳೆಗೆ 20,88,041.23 ಕೋಟಿ ರೂಪಾಯಿ ಬೇಕಾಗುತ್ತದೆ. 2030 ರ ವೇಳೆಗೆ 52,82,744.32 ಕೋಟಿ ರೂಪಾಯಿಗಳ ಅಗತ್ಯವಿದೆ. ಈ ಹಣವನ್ನು ಬಜೆಟ್‌ನಲ್ಲಿ ಹಂಚಿಕೆ ಮಾಡಬೇಕಾಗುತ್ತದೆ ಎಂದು ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (EMPRI) ಅಂದಾಜಿಸಿದೆ.

ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ಸಿದ್ಧಪಡಿಸಿದ 2015ರ ವರದಿಯ ಎರಡನೇ ಆವೃತ್ತಿಯಾದ ಹವಾಮಾನ ಬದಲಾವಣೆಯ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ – ಆವೃತ್ತಿ-2 ರಲ್ಲಿ ಈ ವೆಚ್ಚದ ಅಂದಾಜು ರಚಿಸಲಾಗಿದೆ. ವರದಿಯ ಅನುಮೋದನೆ ಮತ್ತು ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರದ ಮುಂದೆ ಇಡಲಾಗಿದೆ.

ಇದನ್ನು ತಯಾರಿಸಲು 15 ಹವಾಮಾನ ಮಾದರಿಗಳನ್ನು ಬಳಸಲಾಗಿದೆ. 2015ರ ವರದಿಯಲ್ಲಿ ಮಾಡಿದ ಶಿಫಾರಸುಗಳ ಮೇಲೆ ಮಾಡಲಾಗಿರುವ ಸಾಧನೆಗಳು ಮತ್ತು ಕಾರ್ಯಗಳನ್ನು ಮೌಲ್ಯಮಾಪನವನ್ನು ಪರಿಸರ ಮತ್ತು ಶಿಕ್ಷಣ ಕೇಂದ್ರವು ನಡೆಸುತ್ತಿದೆ ಎಂದು EMPRI ಮಹಾನಿರ್ದೇಶಕ ಜಗಮೋಹನ್ ಶರ್ಮಾ ಮಂಗಳವಾರ ಹೇಳಿದ್ದಾರೆ.

ಇದನ್ನೂ ಓದಿ: ನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

ಬೆಂಗಳೂರು ಹವಾಮಾನ ಬದಲಾವಣೆ ಉಪಕ್ರಮ-ಕರ್ನಾಟಕ ಆಯೋಜಿಸಿದ್ದ “COP-26 ಗ್ಲಾಸ್ಗೋ, ಹವಾಮಾನ ಬದಲಾವಣೆ ಶಿಫಾರಸುಗಳು ಮತ್ತು ಕರ್ನಾಟಕದ ಮೇಲೆ ಪರಿಣಾಮ” ಕುರಿತ ಚರ್ಚೆಯಲ್ಲಿ ಮಾತನಾಡಿದ ಶರ್ಮಾ ಅವರು, ಬೇಸಿಗೆ ಮತ್ತು ಚಳಿಗಾಲದ ತಾಪಮಾನವು 0.5 ರಿಂದ 2.5 ಡಿಗ್ರಿ ಸೆಲ್ಸಿಯಸ್‌ಗೆ ಬದಲಾಗುತ್ತದೆ ಮತ್ತು ಮಳೆಯ ದಿನಗಳು ಹೆಚ್ಚಾಗುತ್ತದೆ. ಇದು ರಬಿ ಮತ್ತು ಖಾರಿಫ್ ಬೆಳೆಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿ ಅಂದಾಜಿಸಿದೆ ಎಂದು ಹೇಳಿದ್ದಾರೆ.

“ಹವಾಮಾನ ಬದಲಾವಣೆಯನ್ನು ಪರಿಹರಿಸುವ ಯೋಜನೆಗಳಿಗೆ ಹಣವನ್ನು ನೀಡಲಾಗುವುದು ಎಂದು ವಿಶ್ವಬ್ಯಾಂಕ್ ಹೇಳಿದೆ. ಹೀಗಾಗಿ, ಕರ್ನಾಟಕ ಮತ್ತು ಭಾರತ ಅಂತಹ ಯೋಜನೆಗಳನ್ನು ಸಿದ್ಧಪಡಿಸಲು ಪ್ರಾರಂಭಿಸಬೇಕು. ಆಗ ಮಾತ್ರ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಪರಿಸರ ಪ್ರಭಾವವನ್ನು ಪರಿಹರಿಸಲು ಹಣ ಬರುತ್ತದೆ” ಎಂದು ವಿಶ್ವಸಂಸ್ಥೆ ಸಮಿತಿಯ ಸದಸ್ಯ ಡಾ.ಎಚ್.ಎನ್.ರವೀಂದ್ರನಾಥ್ ಹೇಳಿದ್ದಾರೆ.

ರಾಜ್ಯ ಸರ್ಕಾರವು ಕಾರ್ಯಗತಗೊಳಿಸುವ ಸಣ್ಣ ಯೋಜನೆಗಳು ಪ್ರಮುಖವಾಗಿ ಪರಿಸರ ಮತ್ತು ಪರಿಸರ ಸಂಬಂಧಿತ ವಲಯದ ಮೇಲೆ ಪರಿಣಾಮ ಬೀರುತ್ತವೆ. ಸೌರಶಕ್ತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದರೂ ಶೇ.80ರಷ್ಟು ಸೌರ ಫಲಕಗಳು ಚೀನಾದಲ್ಲಿ ತಯಾರಾಗಿರುವುದು ಅನೇಕರಿಗೆ ತಿಳಿದಿಲ್ಲ. ಒಮ್ಮೆ ಅವುಗಳನ್ನು ಭಾರತದಲ್ಲಿ ತಯಾರಿಸಿದರೆ, ಡೈನಾಮಿಕ್ಸ್ ಬದಲಾಗುತ್ತದೆ ಎಂದು ರವೀಂದ್ರನಾಥ್ ಹೇಳಿದ್ದಾರೆ.

ಹವಾಮಾನ ಬದಲಾವಣೆ ಸಮ್ಮೇಳನ (COP-26) ದಲ್ಲಿ ಭಾರತವು ದ್ವೀಪ ರಾಷ್ಟ್ರಗಳಿಗೆ ಸಹಾಯ ಮಾಡಲು ಬದ್ಧವಾಗಿದೆ. ಆದರೆ, ಕರ್ನಾಟಕದಲ್ಲಿ 94 ದ್ವೀಪಗಳು ಮತ್ತು ಕರಾವಳಿ ಪ್ರದೇಶಗಳು ಈಗಾಗಲೇ ಮಣ್ಣಿನ ಸವೆತಕ್ಕೆ ಸಾಕ್ಷಿಯಾಗುತ್ತಿವೆ, ಅದರ ಬಗ್ಗೆ ಚರ್ಚಿಸಲಾಗಿಲ್ಲ ಎಂಬುದನ್ನು ಗುರುತಿಸಿದ್ದಾರೆ.


ಇದನ್ನೂ ಓದಿ: ನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...