Homeಕರ್ನಾಟಕರಾಜ್ಯದಲ್ಲಿ ಹವಾಮಾನ ವೈಪರೀತ್ಯ ತಡೆಗೆ 2030 ರ ವೇಳೆಗೆ 52 ಲಕ್ಷ ಕೋಟಿ ಅಗತ್ಯವಿದೆ- EMPRI

ರಾಜ್ಯದಲ್ಲಿ ಹವಾಮಾನ ವೈಪರೀತ್ಯ ತಡೆಗೆ 2030 ರ ವೇಳೆಗೆ 52 ಲಕ್ಷ ಕೋಟಿ ಅಗತ್ಯವಿದೆ- EMPRI

- Advertisement -
- Advertisement -

ರಾಜ್ಯಕ್ಕೆ ಹವಾಮಾನ ಬದಲಾವಣೆಯ ಹೊಂದಾಣಿಕೆ ಮತ್ತು ವೈಪರೀತ್ಯ ತಡೆಯುವ ಕಾರ್ಯಗಳಿಗಾಗಿ 2025 ರ ವೇಳೆಗೆ 20,88,041.23 ಕೋಟಿ ರೂಪಾಯಿ ಬೇಕಾಗುತ್ತದೆ. 2030 ರ ವೇಳೆಗೆ 52,82,744.32 ಕೋಟಿ ರೂಪಾಯಿಗಳ ಅಗತ್ಯವಿದೆ. ಈ ಹಣವನ್ನು ಬಜೆಟ್‌ನಲ್ಲಿ ಹಂಚಿಕೆ ಮಾಡಬೇಕಾಗುತ್ತದೆ ಎಂದು ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (EMPRI) ಅಂದಾಜಿಸಿದೆ.

ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ಸಿದ್ಧಪಡಿಸಿದ 2015ರ ವರದಿಯ ಎರಡನೇ ಆವೃತ್ತಿಯಾದ ಹವಾಮಾನ ಬದಲಾವಣೆಯ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ – ಆವೃತ್ತಿ-2 ರಲ್ಲಿ ಈ ವೆಚ್ಚದ ಅಂದಾಜು ರಚಿಸಲಾಗಿದೆ. ವರದಿಯ ಅನುಮೋದನೆ ಮತ್ತು ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರದ ಮುಂದೆ ಇಡಲಾಗಿದೆ.

ಇದನ್ನು ತಯಾರಿಸಲು 15 ಹವಾಮಾನ ಮಾದರಿಗಳನ್ನು ಬಳಸಲಾಗಿದೆ. 2015ರ ವರದಿಯಲ್ಲಿ ಮಾಡಿದ ಶಿಫಾರಸುಗಳ ಮೇಲೆ ಮಾಡಲಾಗಿರುವ ಸಾಧನೆಗಳು ಮತ್ತು ಕಾರ್ಯಗಳನ್ನು ಮೌಲ್ಯಮಾಪನವನ್ನು ಪರಿಸರ ಮತ್ತು ಶಿಕ್ಷಣ ಕೇಂದ್ರವು ನಡೆಸುತ್ತಿದೆ ಎಂದು EMPRI ಮಹಾನಿರ್ದೇಶಕ ಜಗಮೋಹನ್ ಶರ್ಮಾ ಮಂಗಳವಾರ ಹೇಳಿದ್ದಾರೆ.

ಇದನ್ನೂ ಓದಿ: ನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

ಬೆಂಗಳೂರು ಹವಾಮಾನ ಬದಲಾವಣೆ ಉಪಕ್ರಮ-ಕರ್ನಾಟಕ ಆಯೋಜಿಸಿದ್ದ “COP-26 ಗ್ಲಾಸ್ಗೋ, ಹವಾಮಾನ ಬದಲಾವಣೆ ಶಿಫಾರಸುಗಳು ಮತ್ತು ಕರ್ನಾಟಕದ ಮೇಲೆ ಪರಿಣಾಮ” ಕುರಿತ ಚರ್ಚೆಯಲ್ಲಿ ಮಾತನಾಡಿದ ಶರ್ಮಾ ಅವರು, ಬೇಸಿಗೆ ಮತ್ತು ಚಳಿಗಾಲದ ತಾಪಮಾನವು 0.5 ರಿಂದ 2.5 ಡಿಗ್ರಿ ಸೆಲ್ಸಿಯಸ್‌ಗೆ ಬದಲಾಗುತ್ತದೆ ಮತ್ತು ಮಳೆಯ ದಿನಗಳು ಹೆಚ್ಚಾಗುತ್ತದೆ. ಇದು ರಬಿ ಮತ್ತು ಖಾರಿಫ್ ಬೆಳೆಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿ ಅಂದಾಜಿಸಿದೆ ಎಂದು ಹೇಳಿದ್ದಾರೆ.

“ಹವಾಮಾನ ಬದಲಾವಣೆಯನ್ನು ಪರಿಹರಿಸುವ ಯೋಜನೆಗಳಿಗೆ ಹಣವನ್ನು ನೀಡಲಾಗುವುದು ಎಂದು ವಿಶ್ವಬ್ಯಾಂಕ್ ಹೇಳಿದೆ. ಹೀಗಾಗಿ, ಕರ್ನಾಟಕ ಮತ್ತು ಭಾರತ ಅಂತಹ ಯೋಜನೆಗಳನ್ನು ಸಿದ್ಧಪಡಿಸಲು ಪ್ರಾರಂಭಿಸಬೇಕು. ಆಗ ಮಾತ್ರ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಪರಿಸರ ಪ್ರಭಾವವನ್ನು ಪರಿಹರಿಸಲು ಹಣ ಬರುತ್ತದೆ” ಎಂದು ವಿಶ್ವಸಂಸ್ಥೆ ಸಮಿತಿಯ ಸದಸ್ಯ ಡಾ.ಎಚ್.ಎನ್.ರವೀಂದ್ರನಾಥ್ ಹೇಳಿದ್ದಾರೆ.

ರಾಜ್ಯ ಸರ್ಕಾರವು ಕಾರ್ಯಗತಗೊಳಿಸುವ ಸಣ್ಣ ಯೋಜನೆಗಳು ಪ್ರಮುಖವಾಗಿ ಪರಿಸರ ಮತ್ತು ಪರಿಸರ ಸಂಬಂಧಿತ ವಲಯದ ಮೇಲೆ ಪರಿಣಾಮ ಬೀರುತ್ತವೆ. ಸೌರಶಕ್ತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದರೂ ಶೇ.80ರಷ್ಟು ಸೌರ ಫಲಕಗಳು ಚೀನಾದಲ್ಲಿ ತಯಾರಾಗಿರುವುದು ಅನೇಕರಿಗೆ ತಿಳಿದಿಲ್ಲ. ಒಮ್ಮೆ ಅವುಗಳನ್ನು ಭಾರತದಲ್ಲಿ ತಯಾರಿಸಿದರೆ, ಡೈನಾಮಿಕ್ಸ್ ಬದಲಾಗುತ್ತದೆ ಎಂದು ರವೀಂದ್ರನಾಥ್ ಹೇಳಿದ್ದಾರೆ.

ಹವಾಮಾನ ಬದಲಾವಣೆ ಸಮ್ಮೇಳನ (COP-26) ದಲ್ಲಿ ಭಾರತವು ದ್ವೀಪ ರಾಷ್ಟ್ರಗಳಿಗೆ ಸಹಾಯ ಮಾಡಲು ಬದ್ಧವಾಗಿದೆ. ಆದರೆ, ಕರ್ನಾಟಕದಲ್ಲಿ 94 ದ್ವೀಪಗಳು ಮತ್ತು ಕರಾವಳಿ ಪ್ರದೇಶಗಳು ಈಗಾಗಲೇ ಮಣ್ಣಿನ ಸವೆತಕ್ಕೆ ಸಾಕ್ಷಿಯಾಗುತ್ತಿವೆ, ಅದರ ಬಗ್ಗೆ ಚರ್ಚಿಸಲಾಗಿಲ್ಲ ಎಂಬುದನ್ನು ಗುರುತಿಸಿದ್ದಾರೆ.


ಇದನ್ನೂ ಓದಿ: ನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...