Homeಮುಖಪುಟ'ರಾಜ್ಯವನ್ನು ನಿರ್ಲಕ್ಷಿಸಲಾಗಿದೆ' : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

- Advertisement -
- Advertisement -

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು ‘ನಿರ್ಲಕ್ಷಿಸಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ ಪಾಲನ್ನು ನೀಡದಿರುವುದು ಈ ನಿರ್ಣಯಕ್ಕೆ ಮುಖ್ಯ ಕಾರಣವಾಗಿದೆ. ಕೇಂದ್ರ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಈ ತಾರತಮ್ಯವನ್ನು ಸರಿಪಡಿಸಬೇಕು ಮತ್ತು ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ಆರ್ಥಿಕ ನೆರವು ಹಾಗೂ ಯೋಜನೆಗಳನ್ನು ಮಂಜೂರು ಮಾಡಬೇಕು ಎಂದು ನಿರ್ಣಯದ ಮೂಲಕ ಕೇರಳ ಸರ್ಕಾರ ಒತ್ತಾಯಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಡಿಸಿದ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತು. ಆದರೆ, ಈ ಸಂದರ್ಭದಲ್ಲಿ ವಿರೋಧ ಪಕ್ಷವಾದ ಯುಡಿಎಫ್ ಮೈತ್ರಿಕೂಟದ ಶಾಸಕರು ಸದನದಲ್ಲಿ ಹಾಜರಿರಲಿಲ್ಲ. ಶಬರಿಮಲೆ ಚಿನ್ನದ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ವಿಪಕ್ಷ ಶಾಸಕರು ಕಲಾಪವನ್ನು ಬಹಿಷ್ಕರಿಸಿದ್ದರಿಂದ, ಅವರ ಅನುಪಸ್ಥಿತಿಯಲ್ಲಿಯೇ ನಿರ್ಣಯ ಕೈಗೊಳ್ಳಲಾಯಿತು. ಕೇಂದ್ರ ಬಜೆಟ್‌ನಲ್ಲಿ ಕೇರಳಕ್ಕೆ ಆಗಿರುವ ಅನ್ಯಾಯವನ್ನು ಖಂಡಿಸುವ ಈ ನಿರ್ಣಯಕ್ಕೆ ಆಡಳಿತ ಪಕ್ಷದ ಸದಸ್ಯರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಕೇಂದ್ರ ಬಜೆಟ್‌ನಲ್ಲಿ ಕಡೆಗಣಿಸಲಾದ ಕೇರಳದ ಪ್ರಮುಖ ಬೇಡಿಕೆಗಳ ಮೇಲೆ ಈ ನಿರ್ಣಯವು ಬೆಳಕು ಚೆಲ್ಲಿದೆ. ವಿಶೇಷವಾಗಿ ರಾಜ್ಯದಲ್ಲಿ ‘ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ’ (ಎಮ್ಸ್‌) ಸ್ಥಾಪನೆ ಮತ್ತು ರಾಜ್ಯಾದಾದ್ಯಂತ ಸಂಚರಿಸುವ ‘ಹೈ-ಸ್ಪೀಡ್ ರೈಲು ಕಾರಿಡಾರ್’ ಯೋಜನೆಗೆ ಅನುಮೋದನೆ ನೀಡಬೇಕೆಂಬ ದೀರ್ಘಕಾಲದ ಬೇಡಿಕೆಗಳನ್ನು ಕೇಂದ್ರ ಸರ್ಕಾರವು ನಿರ್ಲಕ್ಷಿಸಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ. ಅಲ್ಲದೆ, ಕೇಂದ್ರ ಸರ್ಕಾರವು ‘ಸಹಕಾರ ಒಕ್ಕೂಟ ವ್ಯವಸ್ಥೆ’ಗೆ ಗೌರವ ನೀಡಬೇಕು ಮತ್ತು ಕೇರಳದ ಸಮತೋಲಿತ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ನೆರವು ನೀಡಬೇಕು ಎಂದು ಆಗ್ರಹಿಸಲಾಗಿದೆ.

ಕೇರಳ ಸರ್ಕಾರವು ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಏಮ್ಸ್ ಸ್ಥಾಪನೆಗಾಗಿ ಕೇಂದ್ರವನ್ನು ಒತ್ತಾಯಿಸುತ್ತಿದೆ. ಈ ಉದ್ದೇಶಕ್ಕಾಗಿ ಈಗಾಗಲೇ ಜಮೀನನ್ನು ಗುರುತಿಸಿ, ಆರಂಭಿಕ ಹಂತದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದ್ದರೂ, ಕೇಂದ್ರ ಸರ್ಕಾರವು ಈವರೆಗೆ ಯಾವುದೇ ಸಕಾರಾತ್ಮಕ ಕ್ರಮ ಕೈಗೊಂಡಿಲ್ಲ ಎಂದು ನಿರ್ಣಯದಲ್ಲಿ ವಿಷಾದ ವ್ಯಕ್ತಪಡಿಸಲಾಗಿದೆ.

ಅಲ್ಲದೆ, ಕಾಸರಗೋಡಿನಿಂದ ತಿರುವನಂತಪುರದವರೆಗೆ 573 ಕಿ.ಮೀ. ವ್ಯಾಪ್ತಿಯಲ್ಲಿ ಉದ್ದೇಶಿತ ‘ಹೈ-ಸ್ಪೀಡ್ ರೈಲು ಕಾರಿಡಾರ್’ ಯೋಜನೆಗೆ ಅನುಮೋದನೆ ಕೋರಲಾಗಿದೆ. ಪ್ರಸ್ತುತ ಈ ದೂರವನ್ನು ಕ್ರಮಿಸಲು ಬೇಕಾದ 13 ಗಂಟೆಗಳ ಸಮಯವನ್ನು ಗಣನೀಯವಾಗಿ ಕಡಿತಗೊಳಿಸಿ, ರಾಜ್ಯದ ಒಟ್ಟಾರೆ ಅಭಿವೃದ್ಧಿಗೆ ವೇಗ ನೀಡಲು ಈ ಯೋಜನೆ ಅತ್ಯಂತ ಮಹತ್ವದ್ದಾಗಿದೆ ಎಂದು ನಿರ್ಣಯದಲ್ಲಿ ಪ್ರತಿಪಾದಿಸಲಾಗಿದೆ.

ಪಾಲಕ್ಕಾಡ್‌ನಲ್ಲಿ ಬಹಳ ಹಿಂದಿನಿಂದಲೂ ಬೇಡಿಕೆಯಿರುವ ಕೋಚ್ ಫ್ಯಾಕ್ಟರಿ ಯೋಜನೆಯನ್ನು ಕೇಂದ್ರವು ಕಡೆಗಣಿಸಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ. ವಿಳಿಂಜಂ ಅಂತರಾಷ್ಟ್ರೀಯ ಬಂದರು ಯೋಜನೆಗೆ ಯಾವುದೇ ಷರತ್ತುಗಳಿಲ್ಲದ ‘ವಯಬಿಲಿಟಿ ಗ್ಯಾಪ್ ಫಂಡಿಂಗ್’ (VGF) ಒದಗಿಸುವಂತೆ ಕೇರಳ ಸರ್ಕಾರ ಒತ್ತಾಯಿಸಿದೆ. ಕಣ್ಣೂರು ವಿಮಾನ ನಿಲ್ದಾಣಕ್ಕೆ ವಿದೇಶಿ ವಿಮಾನಯಾನ ಸಂಸ್ಥೆಗಳ ಸಂಚಾರಕ್ಕೆ ಅನುವು ಮಾಡಿಕೊಡುವ ‘ಪಾಯಿಂಟ್ ಆಫ್ ಕಾಲ್’ (Point-of-call) ಸೌಲಭ್ಯವನ್ನು ನೀಡದಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ವಯನಾಡ್ ಭೂಕುಸಿತದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಕೇಂದ್ರ ಸರ್ಕಾರವು ವಿಶೇಷ ಆರ್ಥಿಕ ನೆರವು ಅಥವಾ ಪರಿಹಾರ ಪ್ಯಾಕೇಜ್ ನೀಡದೆ ಇರುವುದನ್ನು ನಿರ್ಣಯವು ಬಲವಾಗಿ ಖಂಡಿಸಿದೆ. ಕೇಂದ್ರದ ನೀತಿಗಳಿಂದಾಗಿ ಕೇರಳಕ್ಕೆ ಬರಬೇಕಿದ್ದ ಸುಮಾರು 53,000 ಕೋಟಿ ರೂಪಾಯಿ ಆದಾಯ ಕೊರತೆ ಅನುದಾನವು ಕಡಿತಗೊಳ್ಳುವ ಭೀತಿಯಿದೆ ಎಂದು ರಾಜ್ಯ ಸರ್ಕಾರ ಆತಂಕ ವ್ಯಕ್ತಪಡಿಸಿದೆ. ಒಟ್ಟಾರೆಯಾಗಿ, ಈ ಎಲ್ಲಾ ಯೋಜನೆಗಳನ್ನು ಕಡೆಗಣಿಸಿರುವುದು ‘ಪ್ರಜಾಪ್ರಭುತ್ವದ ಒಕ್ಕೂಟ ತತ್ವಗಳಿಗೆ’ ಮಾಡುವ ಅವಮಾನ ಎಂದು ನಿರ್ಣಯವು ಹೇಳಿದೆ.

ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (MGNREGS) ಸ್ಥಗಿತಗೊಳಿಸಿ, ಅದರ ಬದಲಿಗೆ ‘ವಿಬಿ-ಜಿ ರಾಮ್‌ ಜಿ’ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದಾಗಿ ರಾಜ್ಯಕ್ಕೆ ಸಿಗುತ್ತಿದ್ದ ಕೇಂದ್ರದ ನೆರವು ಶೇ. 60 ರಷ್ಟು ಕಡಿತಗೊಂಡಿದೆ. ಈ ಹಿಂದೆ ಯೋಜನೆಯಡಿ ಕೇರಳಕ್ಕೆ ಸಿಗುತ್ತಿದ್ದ 88,000 ಕೋಟಿ ರೂಪಾಯಿ ಮೊತ್ತವು ಈಗ ಕೇವಲ 30,000 ಕೋಟಿಗೆ ರೂ.ಗೆ ಇಳಿದಿದೆ ಎಂದು ನಿರ್ಣಯದಲ್ಲಿ ವಿವರಿಸಲಾಗಿದೆ.

ಅಲ್ಲದೆ, ಕೇಂದ್ರ ಸರ್ಕಾರವು ಹೇರುತ್ತಿರುವ ಕಟ್ಟುನಿಟ್ಟಿನ ಆರ್ಥಿಕ ನಿರ್ಬಂಧಗಳಿಂದಾಗಿ (Fiscal curbs),15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ಈ ಹಿಂದೆ ಹಂಚಿಕೆಯಾಗಿದ್ದ ಸುಮಾರು 53,000 ಕೋಟಿ ರೂ. ಹಣದಿಂದ ಕೇರಳ ವಂಚಿತವಾಗುವ ಸಾಧ್ಯತೆಯಿದೆ ಎಂದು ರಾಜ್ಯ ಸರ್ಕಾರ ಎಚ್ಚರಿಸಿದೆ. ಕೇಂದ್ರದ ಇಂತಹ ಹಣಕಾಸು ನೀತಿಗಳು ರಾಜ್ಯದ ಅಭಿವೃದ್ಧಿ ಕುಂಠಿತಗೊಳಿಸುತ್ತಿವೆ ಎಂದು ನಿರ್ಣಯವು ಪ್ರತಿಪಾದಿಸಿದೆ.

ವಿಧಾನಸಭೆಯು ಅಂಗೀಕರಿಸಿದ ಈ ನಿರ್ಣಯವು ರಾಜ್ಯದ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವನ್ನು “ಪ್ರಜಾಪ್ರಭುತ್ವದ ಒಕ್ಕೂಟ ತತ್ವಗಳಿಗೆ ಮಾಡಿದ ಅವಮಾನ” ಎಂದು ಬಣ್ಣಿಸಿದೆ. ಕೇವಲ ಆರ್ಥಿಕ ಅಸಮಾನತೆಯಷ್ಟೇ ಅಲ್ಲದೆ, ಇದು ರಾಜ್ಯದ ಹಕ್ಕುಗಳ ಮೇಲಿನ ದಾಳಿಯಾಗಿದೆ ಎಂದು ನಿರ್ಣಯ ಪ್ರತಿಪಾದಿಸಿದೆ. ಕೇರಳಕ್ಕೆ ನ್ಯಾಯ ಒದಗಿಸಲು ಮತ್ತು ರಾಜ್ಯದ ಸಮಾನ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಈ ತಾರತಮ್ಯವನ್ನು ಸರಿಪಡಿಸಬೇಕು ಎಂದು ಈ ನಿರ್ಣಯದ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...