Homeಮುಖಪುಟ'ರಾಜ್ಯವನ್ನು ನಿರ್ಲಕ್ಷಿಸಲಾಗಿದೆ' : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

- Advertisement -
- Advertisement -

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು ‘ನಿರ್ಲಕ್ಷಿಸಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ ಪಾಲನ್ನು ನೀಡದಿರುವುದು ಈ ನಿರ್ಣಯಕ್ಕೆ ಮುಖ್ಯ ಕಾರಣವಾಗಿದೆ. ಕೇಂದ್ರ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಈ ತಾರತಮ್ಯವನ್ನು ಸರಿಪಡಿಸಬೇಕು ಮತ್ತು ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ಆರ್ಥಿಕ ನೆರವು ಹಾಗೂ ಯೋಜನೆಗಳನ್ನು ಮಂಜೂರು ಮಾಡಬೇಕು ಎಂದು ನಿರ್ಣಯದ ಮೂಲಕ ಕೇರಳ ಸರ್ಕಾರ ಒತ್ತಾಯಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಡಿಸಿದ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತು. ಆದರೆ, ಈ ಸಂದರ್ಭದಲ್ಲಿ ವಿರೋಧ ಪಕ್ಷವಾದ ಯುಡಿಎಫ್ ಮೈತ್ರಿಕೂಟದ ಶಾಸಕರು ಸದನದಲ್ಲಿ ಹಾಜರಿರಲಿಲ್ಲ. ಶಬರಿಮಲೆ ಚಿನ್ನದ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ವಿಪಕ್ಷ ಶಾಸಕರು ಕಲಾಪವನ್ನು ಬಹಿಷ್ಕರಿಸಿದ್ದರಿಂದ, ಅವರ ಅನುಪಸ್ಥಿತಿಯಲ್ಲಿಯೇ ನಿರ್ಣಯ ಕೈಗೊಳ್ಳಲಾಯಿತು. ಕೇಂದ್ರ ಬಜೆಟ್‌ನಲ್ಲಿ ಕೇರಳಕ್ಕೆ ಆಗಿರುವ ಅನ್ಯಾಯವನ್ನು ಖಂಡಿಸುವ ಈ ನಿರ್ಣಯಕ್ಕೆ ಆಡಳಿತ ಪಕ್ಷದ ಸದಸ್ಯರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಕೇಂದ್ರ ಬಜೆಟ್‌ನಲ್ಲಿ ಕಡೆಗಣಿಸಲಾದ ಕೇರಳದ ಪ್ರಮುಖ ಬೇಡಿಕೆಗಳ ಮೇಲೆ ಈ ನಿರ್ಣಯವು ಬೆಳಕು ಚೆಲ್ಲಿದೆ. ವಿಶೇಷವಾಗಿ ರಾಜ್ಯದಲ್ಲಿ ‘ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ’ (ಎಮ್ಸ್‌) ಸ್ಥಾಪನೆ ಮತ್ತು ರಾಜ್ಯಾದಾದ್ಯಂತ ಸಂಚರಿಸುವ ‘ಹೈ-ಸ್ಪೀಡ್ ರೈಲು ಕಾರಿಡಾರ್’ ಯೋಜನೆಗೆ ಅನುಮೋದನೆ ನೀಡಬೇಕೆಂಬ ದೀರ್ಘಕಾಲದ ಬೇಡಿಕೆಗಳನ್ನು ಕೇಂದ್ರ ಸರ್ಕಾರವು ನಿರ್ಲಕ್ಷಿಸಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ. ಅಲ್ಲದೆ, ಕೇಂದ್ರ ಸರ್ಕಾರವು ‘ಸಹಕಾರ ಒಕ್ಕೂಟ ವ್ಯವಸ್ಥೆ’ಗೆ ಗೌರವ ನೀಡಬೇಕು ಮತ್ತು ಕೇರಳದ ಸಮತೋಲಿತ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ನೆರವು ನೀಡಬೇಕು ಎಂದು ಆಗ್ರಹಿಸಲಾಗಿದೆ.

ಕೇರಳ ಸರ್ಕಾರವು ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಏಮ್ಸ್ ಸ್ಥಾಪನೆಗಾಗಿ ಕೇಂದ್ರವನ್ನು ಒತ್ತಾಯಿಸುತ್ತಿದೆ. ಈ ಉದ್ದೇಶಕ್ಕಾಗಿ ಈಗಾಗಲೇ ಜಮೀನನ್ನು ಗುರುತಿಸಿ, ಆರಂಭಿಕ ಹಂತದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದ್ದರೂ, ಕೇಂದ್ರ ಸರ್ಕಾರವು ಈವರೆಗೆ ಯಾವುದೇ ಸಕಾರಾತ್ಮಕ ಕ್ರಮ ಕೈಗೊಂಡಿಲ್ಲ ಎಂದು ನಿರ್ಣಯದಲ್ಲಿ ವಿಷಾದ ವ್ಯಕ್ತಪಡಿಸಲಾಗಿದೆ.

ಅಲ್ಲದೆ, ಕಾಸರಗೋಡಿನಿಂದ ತಿರುವನಂತಪುರದವರೆಗೆ 573 ಕಿ.ಮೀ. ವ್ಯಾಪ್ತಿಯಲ್ಲಿ ಉದ್ದೇಶಿತ ‘ಹೈ-ಸ್ಪೀಡ್ ರೈಲು ಕಾರಿಡಾರ್’ ಯೋಜನೆಗೆ ಅನುಮೋದನೆ ಕೋರಲಾಗಿದೆ. ಪ್ರಸ್ತುತ ಈ ದೂರವನ್ನು ಕ್ರಮಿಸಲು ಬೇಕಾದ 13 ಗಂಟೆಗಳ ಸಮಯವನ್ನು ಗಣನೀಯವಾಗಿ ಕಡಿತಗೊಳಿಸಿ, ರಾಜ್ಯದ ಒಟ್ಟಾರೆ ಅಭಿವೃದ್ಧಿಗೆ ವೇಗ ನೀಡಲು ಈ ಯೋಜನೆ ಅತ್ಯಂತ ಮಹತ್ವದ್ದಾಗಿದೆ ಎಂದು ನಿರ್ಣಯದಲ್ಲಿ ಪ್ರತಿಪಾದಿಸಲಾಗಿದೆ.

ಪಾಲಕ್ಕಾಡ್‌ನಲ್ಲಿ ಬಹಳ ಹಿಂದಿನಿಂದಲೂ ಬೇಡಿಕೆಯಿರುವ ಕೋಚ್ ಫ್ಯಾಕ್ಟರಿ ಯೋಜನೆಯನ್ನು ಕೇಂದ್ರವು ಕಡೆಗಣಿಸಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ. ವಿಳಿಂಜಂ ಅಂತರಾಷ್ಟ್ರೀಯ ಬಂದರು ಯೋಜನೆಗೆ ಯಾವುದೇ ಷರತ್ತುಗಳಿಲ್ಲದ ‘ವಯಬಿಲಿಟಿ ಗ್ಯಾಪ್ ಫಂಡಿಂಗ್’ (VGF) ಒದಗಿಸುವಂತೆ ಕೇರಳ ಸರ್ಕಾರ ಒತ್ತಾಯಿಸಿದೆ. ಕಣ್ಣೂರು ವಿಮಾನ ನಿಲ್ದಾಣಕ್ಕೆ ವಿದೇಶಿ ವಿಮಾನಯಾನ ಸಂಸ್ಥೆಗಳ ಸಂಚಾರಕ್ಕೆ ಅನುವು ಮಾಡಿಕೊಡುವ ‘ಪಾಯಿಂಟ್ ಆಫ್ ಕಾಲ್’ (Point-of-call) ಸೌಲಭ್ಯವನ್ನು ನೀಡದಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ವಯನಾಡ್ ಭೂಕುಸಿತದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಕೇಂದ್ರ ಸರ್ಕಾರವು ವಿಶೇಷ ಆರ್ಥಿಕ ನೆರವು ಅಥವಾ ಪರಿಹಾರ ಪ್ಯಾಕೇಜ್ ನೀಡದೆ ಇರುವುದನ್ನು ನಿರ್ಣಯವು ಬಲವಾಗಿ ಖಂಡಿಸಿದೆ. ಕೇಂದ್ರದ ನೀತಿಗಳಿಂದಾಗಿ ಕೇರಳಕ್ಕೆ ಬರಬೇಕಿದ್ದ ಸುಮಾರು 53,000 ಕೋಟಿ ರೂಪಾಯಿ ಆದಾಯ ಕೊರತೆ ಅನುದಾನವು ಕಡಿತಗೊಳ್ಳುವ ಭೀತಿಯಿದೆ ಎಂದು ರಾಜ್ಯ ಸರ್ಕಾರ ಆತಂಕ ವ್ಯಕ್ತಪಡಿಸಿದೆ. ಒಟ್ಟಾರೆಯಾಗಿ, ಈ ಎಲ್ಲಾ ಯೋಜನೆಗಳನ್ನು ಕಡೆಗಣಿಸಿರುವುದು ‘ಪ್ರಜಾಪ್ರಭುತ್ವದ ಒಕ್ಕೂಟ ತತ್ವಗಳಿಗೆ’ ಮಾಡುವ ಅವಮಾನ ಎಂದು ನಿರ್ಣಯವು ಹೇಳಿದೆ.

ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (MGNREGS) ಸ್ಥಗಿತಗೊಳಿಸಿ, ಅದರ ಬದಲಿಗೆ ‘ವಿಬಿ-ಜಿ ರಾಮ್‌ ಜಿ’ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದಾಗಿ ರಾಜ್ಯಕ್ಕೆ ಸಿಗುತ್ತಿದ್ದ ಕೇಂದ್ರದ ನೆರವು ಶೇ. 60 ರಷ್ಟು ಕಡಿತಗೊಂಡಿದೆ. ಈ ಹಿಂದೆ ಯೋಜನೆಯಡಿ ಕೇರಳಕ್ಕೆ ಸಿಗುತ್ತಿದ್ದ 88,000 ಕೋಟಿ ರೂಪಾಯಿ ಮೊತ್ತವು ಈಗ ಕೇವಲ 30,000 ಕೋಟಿಗೆ ರೂ.ಗೆ ಇಳಿದಿದೆ ಎಂದು ನಿರ್ಣಯದಲ್ಲಿ ವಿವರಿಸಲಾಗಿದೆ.

ಅಲ್ಲದೆ, ಕೇಂದ್ರ ಸರ್ಕಾರವು ಹೇರುತ್ತಿರುವ ಕಟ್ಟುನಿಟ್ಟಿನ ಆರ್ಥಿಕ ನಿರ್ಬಂಧಗಳಿಂದಾಗಿ (Fiscal curbs),15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ಈ ಹಿಂದೆ ಹಂಚಿಕೆಯಾಗಿದ್ದ ಸುಮಾರು 53,000 ಕೋಟಿ ರೂ. ಹಣದಿಂದ ಕೇರಳ ವಂಚಿತವಾಗುವ ಸಾಧ್ಯತೆಯಿದೆ ಎಂದು ರಾಜ್ಯ ಸರ್ಕಾರ ಎಚ್ಚರಿಸಿದೆ. ಕೇಂದ್ರದ ಇಂತಹ ಹಣಕಾಸು ನೀತಿಗಳು ರಾಜ್ಯದ ಅಭಿವೃದ್ಧಿ ಕುಂಠಿತಗೊಳಿಸುತ್ತಿವೆ ಎಂದು ನಿರ್ಣಯವು ಪ್ರತಿಪಾದಿಸಿದೆ.

ವಿಧಾನಸಭೆಯು ಅಂಗೀಕರಿಸಿದ ಈ ನಿರ್ಣಯವು ರಾಜ್ಯದ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವನ್ನು “ಪ್ರಜಾಪ್ರಭುತ್ವದ ಒಕ್ಕೂಟ ತತ್ವಗಳಿಗೆ ಮಾಡಿದ ಅವಮಾನ” ಎಂದು ಬಣ್ಣಿಸಿದೆ. ಕೇವಲ ಆರ್ಥಿಕ ಅಸಮಾನತೆಯಷ್ಟೇ ಅಲ್ಲದೆ, ಇದು ರಾಜ್ಯದ ಹಕ್ಕುಗಳ ಮೇಲಿನ ದಾಳಿಯಾಗಿದೆ ಎಂದು ನಿರ್ಣಯ ಪ್ರತಿಪಾದಿಸಿದೆ. ಕೇರಳಕ್ಕೆ ನ್ಯಾಯ ಒದಗಿಸಲು ಮತ್ತು ರಾಜ್ಯದ ಸಮಾನ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಈ ತಾರತಮ್ಯವನ್ನು ಸರಿಪಡಿಸಬೇಕು ಎಂದು ಈ ನಿರ್ಣಯದ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...