Homeಮುಖಪುಟ'ರಾಜ್ಯವನ್ನು ನಿರ್ಲಕ್ಷಿಸಲಾಗಿದೆ' : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

- Advertisement -
- Advertisement -

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು ‘ನಿರ್ಲಕ್ಷಿಸಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ ಪಾಲನ್ನು ನೀಡದಿರುವುದು ಈ ನಿರ್ಣಯಕ್ಕೆ ಮುಖ್ಯ ಕಾರಣವಾಗಿದೆ. ಕೇಂದ್ರ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಈ ತಾರತಮ್ಯವನ್ನು ಸರಿಪಡಿಸಬೇಕು ಮತ್ತು ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ಆರ್ಥಿಕ ನೆರವು ಹಾಗೂ ಯೋಜನೆಗಳನ್ನು ಮಂಜೂರು ಮಾಡಬೇಕು ಎಂದು ನಿರ್ಣಯದ ಮೂಲಕ ಕೇರಳ ಸರ್ಕಾರ ಒತ್ತಾಯಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಡಿಸಿದ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತು. ಆದರೆ, ಈ ಸಂದರ್ಭದಲ್ಲಿ ವಿರೋಧ ಪಕ್ಷವಾದ ಯುಡಿಎಫ್ ಮೈತ್ರಿಕೂಟದ ಶಾಸಕರು ಸದನದಲ್ಲಿ ಹಾಜರಿರಲಿಲ್ಲ. ಶಬರಿಮಲೆ ಚಿನ್ನದ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ವಿಪಕ್ಷ ಶಾಸಕರು ಕಲಾಪವನ್ನು ಬಹಿಷ್ಕರಿಸಿದ್ದರಿಂದ, ಅವರ ಅನುಪಸ್ಥಿತಿಯಲ್ಲಿಯೇ ನಿರ್ಣಯ ಕೈಗೊಳ್ಳಲಾಯಿತು. ಕೇಂದ್ರ ಬಜೆಟ್‌ನಲ್ಲಿ ಕೇರಳಕ್ಕೆ ಆಗಿರುವ ಅನ್ಯಾಯವನ್ನು ಖಂಡಿಸುವ ಈ ನಿರ್ಣಯಕ್ಕೆ ಆಡಳಿತ ಪಕ್ಷದ ಸದಸ್ಯರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಕೇಂದ್ರ ಬಜೆಟ್‌ನಲ್ಲಿ ಕಡೆಗಣಿಸಲಾದ ಕೇರಳದ ಪ್ರಮುಖ ಬೇಡಿಕೆಗಳ ಮೇಲೆ ಈ ನಿರ್ಣಯವು ಬೆಳಕು ಚೆಲ್ಲಿದೆ. ವಿಶೇಷವಾಗಿ ರಾಜ್ಯದಲ್ಲಿ ‘ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ’ (ಎಮ್ಸ್‌) ಸ್ಥಾಪನೆ ಮತ್ತು ರಾಜ್ಯಾದಾದ್ಯಂತ ಸಂಚರಿಸುವ ‘ಹೈ-ಸ್ಪೀಡ್ ರೈಲು ಕಾರಿಡಾರ್’ ಯೋಜನೆಗೆ ಅನುಮೋದನೆ ನೀಡಬೇಕೆಂಬ ದೀರ್ಘಕಾಲದ ಬೇಡಿಕೆಗಳನ್ನು ಕೇಂದ್ರ ಸರ್ಕಾರವು ನಿರ್ಲಕ್ಷಿಸಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ. ಅಲ್ಲದೆ, ಕೇಂದ್ರ ಸರ್ಕಾರವು ‘ಸಹಕಾರ ಒಕ್ಕೂಟ ವ್ಯವಸ್ಥೆ’ಗೆ ಗೌರವ ನೀಡಬೇಕು ಮತ್ತು ಕೇರಳದ ಸಮತೋಲಿತ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ನೆರವು ನೀಡಬೇಕು ಎಂದು ಆಗ್ರಹಿಸಲಾಗಿದೆ.

ಕೇರಳ ಸರ್ಕಾರವು ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಏಮ್ಸ್ ಸ್ಥಾಪನೆಗಾಗಿ ಕೇಂದ್ರವನ್ನು ಒತ್ತಾಯಿಸುತ್ತಿದೆ. ಈ ಉದ್ದೇಶಕ್ಕಾಗಿ ಈಗಾಗಲೇ ಜಮೀನನ್ನು ಗುರುತಿಸಿ, ಆರಂಭಿಕ ಹಂತದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದ್ದರೂ, ಕೇಂದ್ರ ಸರ್ಕಾರವು ಈವರೆಗೆ ಯಾವುದೇ ಸಕಾರಾತ್ಮಕ ಕ್ರಮ ಕೈಗೊಂಡಿಲ್ಲ ಎಂದು ನಿರ್ಣಯದಲ್ಲಿ ವಿಷಾದ ವ್ಯಕ್ತಪಡಿಸಲಾಗಿದೆ.

ಅಲ್ಲದೆ, ಕಾಸರಗೋಡಿನಿಂದ ತಿರುವನಂತಪುರದವರೆಗೆ 573 ಕಿ.ಮೀ. ವ್ಯಾಪ್ತಿಯಲ್ಲಿ ಉದ್ದೇಶಿತ ‘ಹೈ-ಸ್ಪೀಡ್ ರೈಲು ಕಾರಿಡಾರ್’ ಯೋಜನೆಗೆ ಅನುಮೋದನೆ ಕೋರಲಾಗಿದೆ. ಪ್ರಸ್ತುತ ಈ ದೂರವನ್ನು ಕ್ರಮಿಸಲು ಬೇಕಾದ 13 ಗಂಟೆಗಳ ಸಮಯವನ್ನು ಗಣನೀಯವಾಗಿ ಕಡಿತಗೊಳಿಸಿ, ರಾಜ್ಯದ ಒಟ್ಟಾರೆ ಅಭಿವೃದ್ಧಿಗೆ ವೇಗ ನೀಡಲು ಈ ಯೋಜನೆ ಅತ್ಯಂತ ಮಹತ್ವದ್ದಾಗಿದೆ ಎಂದು ನಿರ್ಣಯದಲ್ಲಿ ಪ್ರತಿಪಾದಿಸಲಾಗಿದೆ.

ಪಾಲಕ್ಕಾಡ್‌ನಲ್ಲಿ ಬಹಳ ಹಿಂದಿನಿಂದಲೂ ಬೇಡಿಕೆಯಿರುವ ಕೋಚ್ ಫ್ಯಾಕ್ಟರಿ ಯೋಜನೆಯನ್ನು ಕೇಂದ್ರವು ಕಡೆಗಣಿಸಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ. ವಿಳಿಂಜಂ ಅಂತರಾಷ್ಟ್ರೀಯ ಬಂದರು ಯೋಜನೆಗೆ ಯಾವುದೇ ಷರತ್ತುಗಳಿಲ್ಲದ ‘ವಯಬಿಲಿಟಿ ಗ್ಯಾಪ್ ಫಂಡಿಂಗ್’ (VGF) ಒದಗಿಸುವಂತೆ ಕೇರಳ ಸರ್ಕಾರ ಒತ್ತಾಯಿಸಿದೆ. ಕಣ್ಣೂರು ವಿಮಾನ ನಿಲ್ದಾಣಕ್ಕೆ ವಿದೇಶಿ ವಿಮಾನಯಾನ ಸಂಸ್ಥೆಗಳ ಸಂಚಾರಕ್ಕೆ ಅನುವು ಮಾಡಿಕೊಡುವ ‘ಪಾಯಿಂಟ್ ಆಫ್ ಕಾಲ್’ (Point-of-call) ಸೌಲಭ್ಯವನ್ನು ನೀಡದಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ವಯನಾಡ್ ಭೂಕುಸಿತದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಕೇಂದ್ರ ಸರ್ಕಾರವು ವಿಶೇಷ ಆರ್ಥಿಕ ನೆರವು ಅಥವಾ ಪರಿಹಾರ ಪ್ಯಾಕೇಜ್ ನೀಡದೆ ಇರುವುದನ್ನು ನಿರ್ಣಯವು ಬಲವಾಗಿ ಖಂಡಿಸಿದೆ. ಕೇಂದ್ರದ ನೀತಿಗಳಿಂದಾಗಿ ಕೇರಳಕ್ಕೆ ಬರಬೇಕಿದ್ದ ಸುಮಾರು 53,000 ಕೋಟಿ ರೂಪಾಯಿ ಆದಾಯ ಕೊರತೆ ಅನುದಾನವು ಕಡಿತಗೊಳ್ಳುವ ಭೀತಿಯಿದೆ ಎಂದು ರಾಜ್ಯ ಸರ್ಕಾರ ಆತಂಕ ವ್ಯಕ್ತಪಡಿಸಿದೆ. ಒಟ್ಟಾರೆಯಾಗಿ, ಈ ಎಲ್ಲಾ ಯೋಜನೆಗಳನ್ನು ಕಡೆಗಣಿಸಿರುವುದು ‘ಪ್ರಜಾಪ್ರಭುತ್ವದ ಒಕ್ಕೂಟ ತತ್ವಗಳಿಗೆ’ ಮಾಡುವ ಅವಮಾನ ಎಂದು ನಿರ್ಣಯವು ಹೇಳಿದೆ.

ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (MGNREGS) ಸ್ಥಗಿತಗೊಳಿಸಿ, ಅದರ ಬದಲಿಗೆ ‘ವಿಬಿ-ಜಿ ರಾಮ್‌ ಜಿ’ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದಾಗಿ ರಾಜ್ಯಕ್ಕೆ ಸಿಗುತ್ತಿದ್ದ ಕೇಂದ್ರದ ನೆರವು ಶೇ. 60 ರಷ್ಟು ಕಡಿತಗೊಂಡಿದೆ. ಈ ಹಿಂದೆ ಯೋಜನೆಯಡಿ ಕೇರಳಕ್ಕೆ ಸಿಗುತ್ತಿದ್ದ 88,000 ಕೋಟಿ ರೂಪಾಯಿ ಮೊತ್ತವು ಈಗ ಕೇವಲ 30,000 ಕೋಟಿಗೆ ರೂ.ಗೆ ಇಳಿದಿದೆ ಎಂದು ನಿರ್ಣಯದಲ್ಲಿ ವಿವರಿಸಲಾಗಿದೆ.

ಅಲ್ಲದೆ, ಕೇಂದ್ರ ಸರ್ಕಾರವು ಹೇರುತ್ತಿರುವ ಕಟ್ಟುನಿಟ್ಟಿನ ಆರ್ಥಿಕ ನಿರ್ಬಂಧಗಳಿಂದಾಗಿ (Fiscal curbs),15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ಈ ಹಿಂದೆ ಹಂಚಿಕೆಯಾಗಿದ್ದ ಸುಮಾರು 53,000 ಕೋಟಿ ರೂ. ಹಣದಿಂದ ಕೇರಳ ವಂಚಿತವಾಗುವ ಸಾಧ್ಯತೆಯಿದೆ ಎಂದು ರಾಜ್ಯ ಸರ್ಕಾರ ಎಚ್ಚರಿಸಿದೆ. ಕೇಂದ್ರದ ಇಂತಹ ಹಣಕಾಸು ನೀತಿಗಳು ರಾಜ್ಯದ ಅಭಿವೃದ್ಧಿ ಕುಂಠಿತಗೊಳಿಸುತ್ತಿವೆ ಎಂದು ನಿರ್ಣಯವು ಪ್ರತಿಪಾದಿಸಿದೆ.

ವಿಧಾನಸಭೆಯು ಅಂಗೀಕರಿಸಿದ ಈ ನಿರ್ಣಯವು ರಾಜ್ಯದ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವನ್ನು “ಪ್ರಜಾಪ್ರಭುತ್ವದ ಒಕ್ಕೂಟ ತತ್ವಗಳಿಗೆ ಮಾಡಿದ ಅವಮಾನ” ಎಂದು ಬಣ್ಣಿಸಿದೆ. ಕೇವಲ ಆರ್ಥಿಕ ಅಸಮಾನತೆಯಷ್ಟೇ ಅಲ್ಲದೆ, ಇದು ರಾಜ್ಯದ ಹಕ್ಕುಗಳ ಮೇಲಿನ ದಾಳಿಯಾಗಿದೆ ಎಂದು ನಿರ್ಣಯ ಪ್ರತಿಪಾದಿಸಿದೆ. ಕೇರಳಕ್ಕೆ ನ್ಯಾಯ ಒದಗಿಸಲು ಮತ್ತು ರಾಜ್ಯದ ಸಮಾನ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಈ ತಾರತಮ್ಯವನ್ನು ಸರಿಪಡಿಸಬೇಕು ಎಂದು ಈ ನಿರ್ಣಯದ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...