Homeಅಂಕಣಗಳುತಾರಾ ದಂಪತಿಯ ಖಾಸಗಿ ಸಂಗತಿಗಳನ್ನೆ ಬಂಡವಾಳವಾಗಿರಿಸಿಕೊಂಡಿರುವ ಪತ್ರಿಕೋದ್ಯಮದ ನಡುವೆ...

ತಾರಾ ದಂಪತಿಯ ಖಾಸಗಿ ಸಂಗತಿಗಳನ್ನೆ ಬಂಡವಾಳವಾಗಿರಿಸಿಕೊಂಡಿರುವ ಪತ್ರಿಕೋದ್ಯಮದ ನಡುವೆ…

- Advertisement -
- Advertisement -

ದೇಶದ ರೈತರು ಸಂಕಷ್ಟದ ಸಮಯ ಎದುರಿಸುತ್ತಿರುವಾಗ ಮುಖ್ಯವಾಹಿನಿ ಎನ್ನಿಸಿಕೊಳ್ಳುವ ಮಾಧ್ಯಮಗಳು ಯಾವ ಸುದ್ದಿಗಾಗಿ ಹಸಿದು ಕುಳಿತಿದ್ದವೋ ಅದು 11 ಜನವರಿ 21ಕ್ಕೆ ಸಿಕ್ಕಿಬಿಟ್ಟಿತು. ತಾರಾ ದಂಪತಿಗೆ ಹುಟ್ಟಿದ ಕೂಸು ಈ ಮಾಧ್ಯಮಗಳಲ್ಲಿ ಹರ್ಷೋದ್ಘಾರ ಮೂಡಿಸಿತು. ಇರಲಿ ಜನಪ್ರಿಯ ತಾರೆಗಳ ಖಾಸಗಿ ಸಂಗತಿಗಳನ್ನು ಸಾರ್ವಜನಿಕವಾಗಿ ಈ ಮಟ್ಟಕ್ಕೆ ಬಿತ್ತರಿಸುವುದು ಪ್ರಾರಂಭವಾಗಿ ಹಲವು ದಶಕಗಳೇ ಕಳೆದಿವೆ. ಒಳ್ಳೆಯ ಪತ್ರಿಕೋದ್ಯಮಕ್ಕೆ ಹೆಸರಾದ ಮಾಧ್ಯಮಗಳು ಕೂಡ ಸ್ಟಾರ್‌ಗಳ ಮದುವೆ, ಅವರಿಗೆ ಮಗುವಾದ ಸುದ್ದಿಗಳನ್ನು ದೊಡ್ಡ ಮಟ್ಟದಲ್ಲಿ ಬಿತ್ತರಿಸುವುದನ್ನು ಉಪೇಕ್ಷಿಸಲಾರದೆ ಇರುವ ಒತ್ತಡದ ಸಂದರ್ಭಕ್ಕೆ ಬಂದು ನಾವು ನಿಂತಿದ್ದೀವಿ.

ಈ ದೇಶದಲ್ಲಿ ಅದೇ ದಿನ ಅಥವಾ ಆ ದಿನದ ಒಂದೆರಡು ದಿನಗಳ ಹಿಂದೆ ಮುಂದೆ ನಡೆದ ಘಟನೆಗಳು ಈ ಮಾಧ್ಯಮಗಳಲ್ಲಿ ದೊಡ್ಡದಾಗಿ ಚರ್ಚೆಯಾಗಬೇಕಿತ್ತು. ಓದುಗರಿಗೆ-ನೋಡುಗರಿಗೆ ಅವುಗಳ ಬಗ್ಗೆ ಇನ್‌ಫಾರ್ಮಡ್ ಒಪಿನಿಯನ್ ನೀಡಬೇಕಿದ್ದ ಮಾಧ್ಯಮಗಳು ತಮ್ಮ ಕರ್ತವ್ಯವನ್ನು ನಿಭಾಯಿಸಿದವೇ? ಹಿಂದೂ ಮಹಾಸಭಾದವರು ಮಧ್ಯಪ್ರದೇಶದಲ್ಲಿ ಗೋಡ್ಸೆ ಹೆಸರಿನಲ್ಲಿ ಕಟ್ಟಿದ ಗ್ರಂಥಾಲಯದ ಬಗ್ಗೆ ಸುದ್ದಿ ಬಂದು ಮಿಂಚಿ ಮಾಯವಾಯಿತು. ಸ್ವಾತಂತ್ರ್ಯಾನಂತರ ಮೊದಲ ವರ್ಷಗಳಲ್ಲಿ ಈ ದೇಶ ಕಂಡ ಅತಿ ದೊಡ್ಡ ಭಯೋತ್ಪಾದಕನ ಆರಾಧನೆಗೆ ತೊಡಗಿರುವ ವಿದ್ಯಮಾನದ ಬಗ್ಗೆ ಮುಖ್ಯವಾಹಿನಿ ಮಾಧ್ಯಮಗಳು ಮೂಡಿಸಿದ ಎಚ್ಚರ ಎಷ್ಟು?

ಅದೇ ದಿನ ನಕಲಿ ಸುದ್ದಿಗಳನ್ನು ಬಯಲು ಮಾಡುವ ಆಲ್ಟ್‌ನ್ಯೂಸ್ ಎಂಬ ಡಿಜಿಟಲ್ ಸುದ್ದಿತಾಣ, ಈ ಮುಖ್ಯವಾಹಿನಿ ಸುದ್ದಿಪತ್ರಿಕೆ ಮತ್ತು ಟಿವಿಗಳ ಬೇಜವಾಬ್ದಾರಿತನವನ್ನು ಬಯಲಿಗೆಳೆದಿತ್ತು. ಬಾಲಾಕೋಟ್ ವೈಮಾನಿಕ ದಾಳಿಯಲ್ಲಿ ಭಾರತ 300 ಪಾಕಿಸ್ತಾನಿ ಜನರನ್ನು ಹತ್ಯೆ ಮಾಡಿರುವ ಬಗ್ಗೆ ಪಾಕಿಸ್ತಾನದ ಮಾಜಿ ರಾಜತಾಂತ್ರಿಕರೊಬ್ಬರು ಒಪ್ಪಿಕೊಂಡಿದೆ ಎಂಬ ಸುಳ್ಳುಸುದ್ದಿಯನ್ನು ಹಲವಾರು ಮುಖ್ಯವಾಹಿನಿ ಮಾಧ್ಯಮಗಳು (ಕೆಲವು ನಂಬಿಕಸ್ಥ ಮಾಧ್ಯಮಗಳೂ ಸೇರಿದಂತೆ) ವರದಿ ಮಾಡಿದ್ದನ್ನು ಆಲ್ಟ್‌ನ್ಯೂಸ್ ವರದಿ ಮಾಡಿತ್ತು. ಕುಚೋದ್ಯದ ವಿಷಯ ಎಂದರೆ ಇಲ್ಲಿಯವರೆಗೂ ಭಾರತದ ಯಾವುದೇ ಅಧಿಕೃತ ಸಂಸ್ಥೆ ಇಂತಹ ಸಂಖ್ಯೆಯನ್ನು ಕ್ಲೇಮ್ ಮಾಡದೆ ಇರುವುದು. ಜಫರ್ ಹಿಲಾಲಿ ಎಂಬುವವರ ಒಂದು ವಿಡೀಯೋವನ್ನು ತಿರುಚಿ, ಅದನ್ನು ಆಧಾರವಾಗಿರಿಸಿಕೊಂಡು ಈ ಮಾಧ್ಯಮಗಳು ಇಂತಹ ಸುಳ್ಳುಸುದ್ದಿಯನ್ನು ಓದುಗರಿಗೆ-ವೀಕ್ಷಕರಿಗೆ ಅತಿರಂಜಿತವಾಗಿ ಉಣಬಡಿಸಿದ್ದವು. ಅವುಗಳಲ್ಲಿ ಯಾವ ಯಾವ ಮಾಧ್ಯಮಗಳು ತಾವು ಮಾಡಿದ ತಪ್ಪನ್ನು (ಬೇಜವಾಬ್ದಾರಿಯಿಂದ ಮಾಡಿದ್ದರೆ) ಒಪ್ಪಿಕೊಂಡವು?

ಅದೇ ದಿನ ಆಸ್ಟ್ರೇಲಿಯಾದ ವಿರುದ್ಧ ಮೂರನೇ ಟೆಸ್ಟ್ ಪಂದ್ಯವನ್ನು ಭಾರತ ಡ್ರಾ ಮಾಡಿಕೊಂಡಿದ್ದನ್ನು ಸಂಭ್ರಮಿಸಲಾಯಿತು. ಆದರೆ ಅಲ್ಲಿ ನೆರೆದಿದ್ದ ಪ್ರೇಕ್ಷಕರು ಭಾರತದ ಆಟಗಾರರ ವಿರುದ್ಧ ಜನಾಂಗೀಯ ನಿಂದನೆ ಮಾಡಿದ್ದರ ವಿರುದ್ಧ ಮಾಧ್ಯಮಗಳು ಯಾವ ಅಭಿಪ್ರಾಯ ತಳೆದು ಜನಕ್ಕೆ ತಿಳಿಸಿದವು? ಜಾತಿ, ಧರ್ಮ ಮತ್ತು ವರ್ಣ ನಿಂದನೆಗಳು ಇಲ್ಲಿ ರಕ್ತಗತವಾಗಿ ಇರುವುದರಿಂದ ಅದು ಅಂತಹ ದೊಡ್ಡ ಸಮಸ್ಯೆಯಾಗಿ ಇಲ್ಲಿ ಕಾಣುವುದಿಲ್ಲವೇ?

PC : New Indian Express

ಇನ್ನು ಅದೇ ದಿನ ಮತ್ತು ಅದರ ಮುಂದಿನ ದಿನ ಕೃಷಿ ಕಾಯ್ದೆಗಳು ಮತ್ತು ರೈತ ಹೋರಾಟದ ಬಗ್ಗೆ ಸುಪ್ರೀಮ್ ಕೋರ್ಟ್ ತೀರ್ಪನ್ನು ನೀಡಿದೆ. ಮೂರು ಕೃಷಿ ಕಾಯ್ದೆಗಳಿಗೆ ತಾತ್ಕಾಲಿಕ ತಡೆಯನ್ನು ನೀಡಿ, ಸಮಿತಿಯೊಂದನ್ನು ರಚಿಸಿ ಅದರ ಜೊತೆಗೆ ಸಮಸ್ಯೆ ಚರ್ಚಿಸುವಂತೆ ರೈತ ಸಂಘಟನೆಗಳಿಗೆ ಹೇಳಿದೆ. ಆದರೆ ಆ ಸಮಿತಿಯಲ್ಲಿ ಇರುವ ನಾಲ್ಕೂ ಜನ ಸದಸ್ಯರು ಈ ಕೃಷಿ ಕಾಯ್ದೆಗಳ ಪ್ರಬಲ ಸಮರ್ಥಕರು. ಇದರ ಬಗ್ಗೆ ಈ ಮುಖ್ಯವಾಹಿನಿ ಮಾಧ್ಯಮಗಳು ಯಾವ ರೀತಿಯಲ್ಲಿ ಚರ್ಚಿಸಲಿವೆ ಎಂಬುದನ್ನು ಊಹಿಸುವುದು ಕಷ್ಟವೇನಲ್ಲ ಅಲ್ಲವೇ? ಈ ಕೃಷಿ ಕಾಯ್ದೆಗಳು ಯಾವ ಬಂಡವಾಳಶಾಹಿ ಸಂಸ್ಥೆಗಳಿಗೆ ಸಹಾಯ ಮಾಡಲಿವೆ ಎಂದು ಆರೋಪಿಸಿ ರೈತರು ಪ್ರತಿಭಟಿಸುತ್ತಿದ್ದಾರೋ, ಅದರಲ್ಲಿ ಒಂದು ಕಾರ್ಪೊರೆಟ್ ಸಂಸ್ಥೆ ಹಲವು ಮಾಧ್ಯಮ ಸಂಸ್ಥೆಗಳನ್ನು ಹೊಂದಿರುವ ಒಡೆಯ. ಈ ಒಡೆಯನ ಮಾತನ್ನು ಶಿರಸಾವಹಿಸಿ ಪಾಲಿಸುವ ಕೆಲವು ಡಿಜಿಟಲ್ ಜಾಲತಾಣಗಳು ಮತ್ತು ಟಿವಿ ಚಾನೆಲ್‌ಗಳು ಕೃಷಿ ಕಾಯ್ದೆಗಳ ಪರವಾಗಿ ಒಂದು ನಕಲಿ ಸಮೀಕ್ಷೆಯನ್ನು ಮಾಡಿ, ದೇಶದ ಅತಿ ಹೆಚ್ಚು ಜನ ಕೃಷಿ ಕಾಯ್ದೆಗಳನ್ನು ಬೆಂಬಲಿಸುತ್ತಿದ್ದಾರೆ ಎಂಬ ಫಲಿತಾಂಶವನ್ನು ಪ್ರಕಟಿಸಿ, ರೈತರ ಹೋರಾಟ ಉತ್ತುಂಗದಲ್ಲಿದ್ದಾಗ, ಅದನ್ನು ತನ್ನ ಜಾಲತಾಣದ ಮುಖಪುಟಲ್ಲಿ ದಿನಗಟ್ಟಲೆ ರಾರಾಜಿಸಿಸಿತ್ತು.

ಡಿಸೆಂಬರ್ ತಿಂಗಳ ನ್ಯೂಯಾರ್ಕರ್‌ನ ಒಂದು ಸಂಚಿಕೆಯಲ್ಲಿ ’ಮರ್ಡರ್ ಇನ್ ಮಾಲ್ಟಾ’ ಎಂಬ ರಿಪೋರ್ಟಾಜ್ ಪ್ರಕಟವಾಗಿದೆ. ಮಾಲ್ಟಾ ಯುರೋಪಿನ ಒಂದು ಪುಟ್ಟ ರಾಷ್ಟ್ರ. ಅಲ್ಲಿ ನಡೆದ ಅತಿ ಡೊಡ್ಡ ಭ್ರಷ್ಟಾಚಾರದ ಬಗ್ಗೆ ಒಬ್ಬಂಟಿಯಾಗಿ ಹೋರಾಡಿ, ವರದಿಗಳನ್ನು ತನ್ನ ಬ್ಲಾಗ್‌ನಲ್ಲಿ ಬರೆದು 2017ರಲ್ಲಿ ಕೊಲೆಯಾದ ಪತ್ರಕರ್ತೆಯ ಪ್ರಕರಣದ ಬಗೆಗಿನ ವರದಿ ಅದು. ಗೌರಿಯವರು ಕೊಲೆಯಾದ ಒಂದು ತಿಂಗಳ ನಂತರವಷ್ಟೆ ಪತ್ರಕರ್ತೆ ದಾಫ್ನೆ ಕರುವಾನ ಗಲಿಝಿಯಾ ಕೊಲೆಯಾದದ್ದು. ಅಂದಿನ ಮಾಲ್ಟಾ ಪ್ರಧಾನಿ ಜೋಸೆಫ್ ಮಸ್ಕಟ್‌ನ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಕ್ಕೆ ಈ ಕೊಲೆಯಾದದ್ದು. ಶೆಲ್ ಕಂಪನಿಗಳ ಮೂಲಕ ಅನಧಿಕೃತ ವ್ಯವಹಾರಗಳನ್ನು ಮಾಡುವ ಸಂಸ್ಥೆಗಳ ಹಗರಣದ ’ಪನಾಮಾ ಪೇಪರ್ಸ ಭಾರತದಲ್ಲಿಯೂ ಸದ್ದಾಗಿದ್ದು ನೆನಪಿಸಿಕೊಳ್ಳಬಹುದು.

ಅದನ್ನು ತನ್ನ ಮಗನ ಸಹಾಯದಿಂದ ಬಹಿರಂಗಗೊಳಿಸಿ ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿ ಹತ್ಯೆಯಾದವರು ಆಕೆ. ಭಾರತದಲ್ಲಿ ಪನಾಮ ಪೇಪರ್ಸ್ ಬಗ್ಗೆ ಆದ ಚರ್ಚೆ ಎಷ್ಟು ಎಂಬ ಪ್ರಶ್ನೆಯೇ ಈಗ ಹಾಸ್ಯಾಸ್ಪದ.
ಹಂತಕರನ್ನು ನೇಮಿಸಿ ಸಿನಿಮೀಯ ರೀತಿಯಲ್ಲಿ ಆಗುವ ಕೊಲೆಯ ತನಿಖೆಯನ್ನು ಬೇಧಿಸಲು ದಾಫ್ನೆಯವರ ಮೂವರು ಮಕ್ಕಳು ಒಂದಾಗಿ ಹೋರಾಡುವುದು ಅವರ ತಾಯಿ ಮಾಡಿದ ರೀತಿಯದ್ದೇ ಧೀರೋದ್ದಾತ ಹೋರಾಟ! ಆ ಹೋರಾಟದ ಫಲವಾಗಿ ಪ್ರಧಾನಿ ಜೋಸೆಫ್ ಮಸ್ಕಟ್ ರಾಜೀನಾಮೆ ನೀಡಬೇಕಾಗಿ ಬರುತ್ತದಲ್ಲದೆ, ಹಂತಕ ಮತ್ತು ಈ ಕೊಲೆಗೆ ಆದೇಶಿಸಿದ್ದ ಪ್ರಧಾನಿ ಕಾರ್ಯಾಲಯದ ಸಿಬ್ಬಂದಿ ಕೂಡ ಅರೆಸ್ಟ್ ಆಗುತ್ತಾರೆ.

ಕರಾಳ ದಿನಗಳಲ್ಲಿ ಇಂತಹ ಧೀರ ಮತ್ತು ದಿಟ್ಟ ಪತ್ರಿಕೋದ್ಯಮದ ಕೆಲಸಗಳು ಸ್ಫೂರ್ತಿ ತುಂಬಬಲ್ಲವೇ?


ಇದನ್ನೂ ಓದಿ: ರೈತರಿಗೆ ತಮಗೇನು ಬೇಕೆಂದು ಗೊತ್ತಿಲ್ಲ; ಅವರನ್ನು ಯಾರೋ ಪ್ರಚೋದಿಸುತ್ತಿದ್ದಾರೆ: ಹೇಮಾ ಮಾಲಿನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...