Homeಅಂಕಣಗಳುತಾರಾ ದಂಪತಿಯ ಖಾಸಗಿ ಸಂಗತಿಗಳನ್ನೆ ಬಂಡವಾಳವಾಗಿರಿಸಿಕೊಂಡಿರುವ ಪತ್ರಿಕೋದ್ಯಮದ ನಡುವೆ...

ತಾರಾ ದಂಪತಿಯ ಖಾಸಗಿ ಸಂಗತಿಗಳನ್ನೆ ಬಂಡವಾಳವಾಗಿರಿಸಿಕೊಂಡಿರುವ ಪತ್ರಿಕೋದ್ಯಮದ ನಡುವೆ…

- Advertisement -
- Advertisement -

ದೇಶದ ರೈತರು ಸಂಕಷ್ಟದ ಸಮಯ ಎದುರಿಸುತ್ತಿರುವಾಗ ಮುಖ್ಯವಾಹಿನಿ ಎನ್ನಿಸಿಕೊಳ್ಳುವ ಮಾಧ್ಯಮಗಳು ಯಾವ ಸುದ್ದಿಗಾಗಿ ಹಸಿದು ಕುಳಿತಿದ್ದವೋ ಅದು 11 ಜನವರಿ 21ಕ್ಕೆ ಸಿಕ್ಕಿಬಿಟ್ಟಿತು. ತಾರಾ ದಂಪತಿಗೆ ಹುಟ್ಟಿದ ಕೂಸು ಈ ಮಾಧ್ಯಮಗಳಲ್ಲಿ ಹರ್ಷೋದ್ಘಾರ ಮೂಡಿಸಿತು. ಇರಲಿ ಜನಪ್ರಿಯ ತಾರೆಗಳ ಖಾಸಗಿ ಸಂಗತಿಗಳನ್ನು ಸಾರ್ವಜನಿಕವಾಗಿ ಈ ಮಟ್ಟಕ್ಕೆ ಬಿತ್ತರಿಸುವುದು ಪ್ರಾರಂಭವಾಗಿ ಹಲವು ದಶಕಗಳೇ ಕಳೆದಿವೆ. ಒಳ್ಳೆಯ ಪತ್ರಿಕೋದ್ಯಮಕ್ಕೆ ಹೆಸರಾದ ಮಾಧ್ಯಮಗಳು ಕೂಡ ಸ್ಟಾರ್‌ಗಳ ಮದುವೆ, ಅವರಿಗೆ ಮಗುವಾದ ಸುದ್ದಿಗಳನ್ನು ದೊಡ್ಡ ಮಟ್ಟದಲ್ಲಿ ಬಿತ್ತರಿಸುವುದನ್ನು ಉಪೇಕ್ಷಿಸಲಾರದೆ ಇರುವ ಒತ್ತಡದ ಸಂದರ್ಭಕ್ಕೆ ಬಂದು ನಾವು ನಿಂತಿದ್ದೀವಿ.

ಈ ದೇಶದಲ್ಲಿ ಅದೇ ದಿನ ಅಥವಾ ಆ ದಿನದ ಒಂದೆರಡು ದಿನಗಳ ಹಿಂದೆ ಮುಂದೆ ನಡೆದ ಘಟನೆಗಳು ಈ ಮಾಧ್ಯಮಗಳಲ್ಲಿ ದೊಡ್ಡದಾಗಿ ಚರ್ಚೆಯಾಗಬೇಕಿತ್ತು. ಓದುಗರಿಗೆ-ನೋಡುಗರಿಗೆ ಅವುಗಳ ಬಗ್ಗೆ ಇನ್‌ಫಾರ್ಮಡ್ ಒಪಿನಿಯನ್ ನೀಡಬೇಕಿದ್ದ ಮಾಧ್ಯಮಗಳು ತಮ್ಮ ಕರ್ತವ್ಯವನ್ನು ನಿಭಾಯಿಸಿದವೇ? ಹಿಂದೂ ಮಹಾಸಭಾದವರು ಮಧ್ಯಪ್ರದೇಶದಲ್ಲಿ ಗೋಡ್ಸೆ ಹೆಸರಿನಲ್ಲಿ ಕಟ್ಟಿದ ಗ್ರಂಥಾಲಯದ ಬಗ್ಗೆ ಸುದ್ದಿ ಬಂದು ಮಿಂಚಿ ಮಾಯವಾಯಿತು. ಸ್ವಾತಂತ್ರ್ಯಾನಂತರ ಮೊದಲ ವರ್ಷಗಳಲ್ಲಿ ಈ ದೇಶ ಕಂಡ ಅತಿ ದೊಡ್ಡ ಭಯೋತ್ಪಾದಕನ ಆರಾಧನೆಗೆ ತೊಡಗಿರುವ ವಿದ್ಯಮಾನದ ಬಗ್ಗೆ ಮುಖ್ಯವಾಹಿನಿ ಮಾಧ್ಯಮಗಳು ಮೂಡಿಸಿದ ಎಚ್ಚರ ಎಷ್ಟು?

ಅದೇ ದಿನ ನಕಲಿ ಸುದ್ದಿಗಳನ್ನು ಬಯಲು ಮಾಡುವ ಆಲ್ಟ್‌ನ್ಯೂಸ್ ಎಂಬ ಡಿಜಿಟಲ್ ಸುದ್ದಿತಾಣ, ಈ ಮುಖ್ಯವಾಹಿನಿ ಸುದ್ದಿಪತ್ರಿಕೆ ಮತ್ತು ಟಿವಿಗಳ ಬೇಜವಾಬ್ದಾರಿತನವನ್ನು ಬಯಲಿಗೆಳೆದಿತ್ತು. ಬಾಲಾಕೋಟ್ ವೈಮಾನಿಕ ದಾಳಿಯಲ್ಲಿ ಭಾರತ 300 ಪಾಕಿಸ್ತಾನಿ ಜನರನ್ನು ಹತ್ಯೆ ಮಾಡಿರುವ ಬಗ್ಗೆ ಪಾಕಿಸ್ತಾನದ ಮಾಜಿ ರಾಜತಾಂತ್ರಿಕರೊಬ್ಬರು ಒಪ್ಪಿಕೊಂಡಿದೆ ಎಂಬ ಸುಳ್ಳುಸುದ್ದಿಯನ್ನು ಹಲವಾರು ಮುಖ್ಯವಾಹಿನಿ ಮಾಧ್ಯಮಗಳು (ಕೆಲವು ನಂಬಿಕಸ್ಥ ಮಾಧ್ಯಮಗಳೂ ಸೇರಿದಂತೆ) ವರದಿ ಮಾಡಿದ್ದನ್ನು ಆಲ್ಟ್‌ನ್ಯೂಸ್ ವರದಿ ಮಾಡಿತ್ತು. ಕುಚೋದ್ಯದ ವಿಷಯ ಎಂದರೆ ಇಲ್ಲಿಯವರೆಗೂ ಭಾರತದ ಯಾವುದೇ ಅಧಿಕೃತ ಸಂಸ್ಥೆ ಇಂತಹ ಸಂಖ್ಯೆಯನ್ನು ಕ್ಲೇಮ್ ಮಾಡದೆ ಇರುವುದು. ಜಫರ್ ಹಿಲಾಲಿ ಎಂಬುವವರ ಒಂದು ವಿಡೀಯೋವನ್ನು ತಿರುಚಿ, ಅದನ್ನು ಆಧಾರವಾಗಿರಿಸಿಕೊಂಡು ಈ ಮಾಧ್ಯಮಗಳು ಇಂತಹ ಸುಳ್ಳುಸುದ್ದಿಯನ್ನು ಓದುಗರಿಗೆ-ವೀಕ್ಷಕರಿಗೆ ಅತಿರಂಜಿತವಾಗಿ ಉಣಬಡಿಸಿದ್ದವು. ಅವುಗಳಲ್ಲಿ ಯಾವ ಯಾವ ಮಾಧ್ಯಮಗಳು ತಾವು ಮಾಡಿದ ತಪ್ಪನ್ನು (ಬೇಜವಾಬ್ದಾರಿಯಿಂದ ಮಾಡಿದ್ದರೆ) ಒಪ್ಪಿಕೊಂಡವು?

ಅದೇ ದಿನ ಆಸ್ಟ್ರೇಲಿಯಾದ ವಿರುದ್ಧ ಮೂರನೇ ಟೆಸ್ಟ್ ಪಂದ್ಯವನ್ನು ಭಾರತ ಡ್ರಾ ಮಾಡಿಕೊಂಡಿದ್ದನ್ನು ಸಂಭ್ರಮಿಸಲಾಯಿತು. ಆದರೆ ಅಲ್ಲಿ ನೆರೆದಿದ್ದ ಪ್ರೇಕ್ಷಕರು ಭಾರತದ ಆಟಗಾರರ ವಿರುದ್ಧ ಜನಾಂಗೀಯ ನಿಂದನೆ ಮಾಡಿದ್ದರ ವಿರುದ್ಧ ಮಾಧ್ಯಮಗಳು ಯಾವ ಅಭಿಪ್ರಾಯ ತಳೆದು ಜನಕ್ಕೆ ತಿಳಿಸಿದವು? ಜಾತಿ, ಧರ್ಮ ಮತ್ತು ವರ್ಣ ನಿಂದನೆಗಳು ಇಲ್ಲಿ ರಕ್ತಗತವಾಗಿ ಇರುವುದರಿಂದ ಅದು ಅಂತಹ ದೊಡ್ಡ ಸಮಸ್ಯೆಯಾಗಿ ಇಲ್ಲಿ ಕಾಣುವುದಿಲ್ಲವೇ?

PC : New Indian Express

ಇನ್ನು ಅದೇ ದಿನ ಮತ್ತು ಅದರ ಮುಂದಿನ ದಿನ ಕೃಷಿ ಕಾಯ್ದೆಗಳು ಮತ್ತು ರೈತ ಹೋರಾಟದ ಬಗ್ಗೆ ಸುಪ್ರೀಮ್ ಕೋರ್ಟ್ ತೀರ್ಪನ್ನು ನೀಡಿದೆ. ಮೂರು ಕೃಷಿ ಕಾಯ್ದೆಗಳಿಗೆ ತಾತ್ಕಾಲಿಕ ತಡೆಯನ್ನು ನೀಡಿ, ಸಮಿತಿಯೊಂದನ್ನು ರಚಿಸಿ ಅದರ ಜೊತೆಗೆ ಸಮಸ್ಯೆ ಚರ್ಚಿಸುವಂತೆ ರೈತ ಸಂಘಟನೆಗಳಿಗೆ ಹೇಳಿದೆ. ಆದರೆ ಆ ಸಮಿತಿಯಲ್ಲಿ ಇರುವ ನಾಲ್ಕೂ ಜನ ಸದಸ್ಯರು ಈ ಕೃಷಿ ಕಾಯ್ದೆಗಳ ಪ್ರಬಲ ಸಮರ್ಥಕರು. ಇದರ ಬಗ್ಗೆ ಈ ಮುಖ್ಯವಾಹಿನಿ ಮಾಧ್ಯಮಗಳು ಯಾವ ರೀತಿಯಲ್ಲಿ ಚರ್ಚಿಸಲಿವೆ ಎಂಬುದನ್ನು ಊಹಿಸುವುದು ಕಷ್ಟವೇನಲ್ಲ ಅಲ್ಲವೇ? ಈ ಕೃಷಿ ಕಾಯ್ದೆಗಳು ಯಾವ ಬಂಡವಾಳಶಾಹಿ ಸಂಸ್ಥೆಗಳಿಗೆ ಸಹಾಯ ಮಾಡಲಿವೆ ಎಂದು ಆರೋಪಿಸಿ ರೈತರು ಪ್ರತಿಭಟಿಸುತ್ತಿದ್ದಾರೋ, ಅದರಲ್ಲಿ ಒಂದು ಕಾರ್ಪೊರೆಟ್ ಸಂಸ್ಥೆ ಹಲವು ಮಾಧ್ಯಮ ಸಂಸ್ಥೆಗಳನ್ನು ಹೊಂದಿರುವ ಒಡೆಯ. ಈ ಒಡೆಯನ ಮಾತನ್ನು ಶಿರಸಾವಹಿಸಿ ಪಾಲಿಸುವ ಕೆಲವು ಡಿಜಿಟಲ್ ಜಾಲತಾಣಗಳು ಮತ್ತು ಟಿವಿ ಚಾನೆಲ್‌ಗಳು ಕೃಷಿ ಕಾಯ್ದೆಗಳ ಪರವಾಗಿ ಒಂದು ನಕಲಿ ಸಮೀಕ್ಷೆಯನ್ನು ಮಾಡಿ, ದೇಶದ ಅತಿ ಹೆಚ್ಚು ಜನ ಕೃಷಿ ಕಾಯ್ದೆಗಳನ್ನು ಬೆಂಬಲಿಸುತ್ತಿದ್ದಾರೆ ಎಂಬ ಫಲಿತಾಂಶವನ್ನು ಪ್ರಕಟಿಸಿ, ರೈತರ ಹೋರಾಟ ಉತ್ತುಂಗದಲ್ಲಿದ್ದಾಗ, ಅದನ್ನು ತನ್ನ ಜಾಲತಾಣದ ಮುಖಪುಟಲ್ಲಿ ದಿನಗಟ್ಟಲೆ ರಾರಾಜಿಸಿಸಿತ್ತು.

ಡಿಸೆಂಬರ್ ತಿಂಗಳ ನ್ಯೂಯಾರ್ಕರ್‌ನ ಒಂದು ಸಂಚಿಕೆಯಲ್ಲಿ ’ಮರ್ಡರ್ ಇನ್ ಮಾಲ್ಟಾ’ ಎಂಬ ರಿಪೋರ್ಟಾಜ್ ಪ್ರಕಟವಾಗಿದೆ. ಮಾಲ್ಟಾ ಯುರೋಪಿನ ಒಂದು ಪುಟ್ಟ ರಾಷ್ಟ್ರ. ಅಲ್ಲಿ ನಡೆದ ಅತಿ ಡೊಡ್ಡ ಭ್ರಷ್ಟಾಚಾರದ ಬಗ್ಗೆ ಒಬ್ಬಂಟಿಯಾಗಿ ಹೋರಾಡಿ, ವರದಿಗಳನ್ನು ತನ್ನ ಬ್ಲಾಗ್‌ನಲ್ಲಿ ಬರೆದು 2017ರಲ್ಲಿ ಕೊಲೆಯಾದ ಪತ್ರಕರ್ತೆಯ ಪ್ರಕರಣದ ಬಗೆಗಿನ ವರದಿ ಅದು. ಗೌರಿಯವರು ಕೊಲೆಯಾದ ಒಂದು ತಿಂಗಳ ನಂತರವಷ್ಟೆ ಪತ್ರಕರ್ತೆ ದಾಫ್ನೆ ಕರುವಾನ ಗಲಿಝಿಯಾ ಕೊಲೆಯಾದದ್ದು. ಅಂದಿನ ಮಾಲ್ಟಾ ಪ್ರಧಾನಿ ಜೋಸೆಫ್ ಮಸ್ಕಟ್‌ನ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಕ್ಕೆ ಈ ಕೊಲೆಯಾದದ್ದು. ಶೆಲ್ ಕಂಪನಿಗಳ ಮೂಲಕ ಅನಧಿಕೃತ ವ್ಯವಹಾರಗಳನ್ನು ಮಾಡುವ ಸಂಸ್ಥೆಗಳ ಹಗರಣದ ’ಪನಾಮಾ ಪೇಪರ್ಸ ಭಾರತದಲ್ಲಿಯೂ ಸದ್ದಾಗಿದ್ದು ನೆನಪಿಸಿಕೊಳ್ಳಬಹುದು.

ಅದನ್ನು ತನ್ನ ಮಗನ ಸಹಾಯದಿಂದ ಬಹಿರಂಗಗೊಳಿಸಿ ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿ ಹತ್ಯೆಯಾದವರು ಆಕೆ. ಭಾರತದಲ್ಲಿ ಪನಾಮ ಪೇಪರ್ಸ್ ಬಗ್ಗೆ ಆದ ಚರ್ಚೆ ಎಷ್ಟು ಎಂಬ ಪ್ರಶ್ನೆಯೇ ಈಗ ಹಾಸ್ಯಾಸ್ಪದ.
ಹಂತಕರನ್ನು ನೇಮಿಸಿ ಸಿನಿಮೀಯ ರೀತಿಯಲ್ಲಿ ಆಗುವ ಕೊಲೆಯ ತನಿಖೆಯನ್ನು ಬೇಧಿಸಲು ದಾಫ್ನೆಯವರ ಮೂವರು ಮಕ್ಕಳು ಒಂದಾಗಿ ಹೋರಾಡುವುದು ಅವರ ತಾಯಿ ಮಾಡಿದ ರೀತಿಯದ್ದೇ ಧೀರೋದ್ದಾತ ಹೋರಾಟ! ಆ ಹೋರಾಟದ ಫಲವಾಗಿ ಪ್ರಧಾನಿ ಜೋಸೆಫ್ ಮಸ್ಕಟ್ ರಾಜೀನಾಮೆ ನೀಡಬೇಕಾಗಿ ಬರುತ್ತದಲ್ಲದೆ, ಹಂತಕ ಮತ್ತು ಈ ಕೊಲೆಗೆ ಆದೇಶಿಸಿದ್ದ ಪ್ರಧಾನಿ ಕಾರ್ಯಾಲಯದ ಸಿಬ್ಬಂದಿ ಕೂಡ ಅರೆಸ್ಟ್ ಆಗುತ್ತಾರೆ.

ಕರಾಳ ದಿನಗಳಲ್ಲಿ ಇಂತಹ ಧೀರ ಮತ್ತು ದಿಟ್ಟ ಪತ್ರಿಕೋದ್ಯಮದ ಕೆಲಸಗಳು ಸ್ಫೂರ್ತಿ ತುಂಬಬಲ್ಲವೇ?


ಇದನ್ನೂ ಓದಿ: ರೈತರಿಗೆ ತಮಗೇನು ಬೇಕೆಂದು ಗೊತ್ತಿಲ್ಲ; ಅವರನ್ನು ಯಾರೋ ಪ್ರಚೋದಿಸುತ್ತಿದ್ದಾರೆ: ಹೇಮಾ ಮಾಲಿನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...