Homeಅಂಕಣಗಳುತಾರಾ ದಂಪತಿಯ ಖಾಸಗಿ ಸಂಗತಿಗಳನ್ನೆ ಬಂಡವಾಳವಾಗಿರಿಸಿಕೊಂಡಿರುವ ಪತ್ರಿಕೋದ್ಯಮದ ನಡುವೆ...

ತಾರಾ ದಂಪತಿಯ ಖಾಸಗಿ ಸಂಗತಿಗಳನ್ನೆ ಬಂಡವಾಳವಾಗಿರಿಸಿಕೊಂಡಿರುವ ಪತ್ರಿಕೋದ್ಯಮದ ನಡುವೆ…

- Advertisement -
- Advertisement -

ದೇಶದ ರೈತರು ಸಂಕಷ್ಟದ ಸಮಯ ಎದುರಿಸುತ್ತಿರುವಾಗ ಮುಖ್ಯವಾಹಿನಿ ಎನ್ನಿಸಿಕೊಳ್ಳುವ ಮಾಧ್ಯಮಗಳು ಯಾವ ಸುದ್ದಿಗಾಗಿ ಹಸಿದು ಕುಳಿತಿದ್ದವೋ ಅದು 11 ಜನವರಿ 21ಕ್ಕೆ ಸಿಕ್ಕಿಬಿಟ್ಟಿತು. ತಾರಾ ದಂಪತಿಗೆ ಹುಟ್ಟಿದ ಕೂಸು ಈ ಮಾಧ್ಯಮಗಳಲ್ಲಿ ಹರ್ಷೋದ್ಘಾರ ಮೂಡಿಸಿತು. ಇರಲಿ ಜನಪ್ರಿಯ ತಾರೆಗಳ ಖಾಸಗಿ ಸಂಗತಿಗಳನ್ನು ಸಾರ್ವಜನಿಕವಾಗಿ ಈ ಮಟ್ಟಕ್ಕೆ ಬಿತ್ತರಿಸುವುದು ಪ್ರಾರಂಭವಾಗಿ ಹಲವು ದಶಕಗಳೇ ಕಳೆದಿವೆ. ಒಳ್ಳೆಯ ಪತ್ರಿಕೋದ್ಯಮಕ್ಕೆ ಹೆಸರಾದ ಮಾಧ್ಯಮಗಳು ಕೂಡ ಸ್ಟಾರ್‌ಗಳ ಮದುವೆ, ಅವರಿಗೆ ಮಗುವಾದ ಸುದ್ದಿಗಳನ್ನು ದೊಡ್ಡ ಮಟ್ಟದಲ್ಲಿ ಬಿತ್ತರಿಸುವುದನ್ನು ಉಪೇಕ್ಷಿಸಲಾರದೆ ಇರುವ ಒತ್ತಡದ ಸಂದರ್ಭಕ್ಕೆ ಬಂದು ನಾವು ನಿಂತಿದ್ದೀವಿ.

ಈ ದೇಶದಲ್ಲಿ ಅದೇ ದಿನ ಅಥವಾ ಆ ದಿನದ ಒಂದೆರಡು ದಿನಗಳ ಹಿಂದೆ ಮುಂದೆ ನಡೆದ ಘಟನೆಗಳು ಈ ಮಾಧ್ಯಮಗಳಲ್ಲಿ ದೊಡ್ಡದಾಗಿ ಚರ್ಚೆಯಾಗಬೇಕಿತ್ತು. ಓದುಗರಿಗೆ-ನೋಡುಗರಿಗೆ ಅವುಗಳ ಬಗ್ಗೆ ಇನ್‌ಫಾರ್ಮಡ್ ಒಪಿನಿಯನ್ ನೀಡಬೇಕಿದ್ದ ಮಾಧ್ಯಮಗಳು ತಮ್ಮ ಕರ್ತವ್ಯವನ್ನು ನಿಭಾಯಿಸಿದವೇ? ಹಿಂದೂ ಮಹಾಸಭಾದವರು ಮಧ್ಯಪ್ರದೇಶದಲ್ಲಿ ಗೋಡ್ಸೆ ಹೆಸರಿನಲ್ಲಿ ಕಟ್ಟಿದ ಗ್ರಂಥಾಲಯದ ಬಗ್ಗೆ ಸುದ್ದಿ ಬಂದು ಮಿಂಚಿ ಮಾಯವಾಯಿತು. ಸ್ವಾತಂತ್ರ್ಯಾನಂತರ ಮೊದಲ ವರ್ಷಗಳಲ್ಲಿ ಈ ದೇಶ ಕಂಡ ಅತಿ ದೊಡ್ಡ ಭಯೋತ್ಪಾದಕನ ಆರಾಧನೆಗೆ ತೊಡಗಿರುವ ವಿದ್ಯಮಾನದ ಬಗ್ಗೆ ಮುಖ್ಯವಾಹಿನಿ ಮಾಧ್ಯಮಗಳು ಮೂಡಿಸಿದ ಎಚ್ಚರ ಎಷ್ಟು?

ಅದೇ ದಿನ ನಕಲಿ ಸುದ್ದಿಗಳನ್ನು ಬಯಲು ಮಾಡುವ ಆಲ್ಟ್‌ನ್ಯೂಸ್ ಎಂಬ ಡಿಜಿಟಲ್ ಸುದ್ದಿತಾಣ, ಈ ಮುಖ್ಯವಾಹಿನಿ ಸುದ್ದಿಪತ್ರಿಕೆ ಮತ್ತು ಟಿವಿಗಳ ಬೇಜವಾಬ್ದಾರಿತನವನ್ನು ಬಯಲಿಗೆಳೆದಿತ್ತು. ಬಾಲಾಕೋಟ್ ವೈಮಾನಿಕ ದಾಳಿಯಲ್ಲಿ ಭಾರತ 300 ಪಾಕಿಸ್ತಾನಿ ಜನರನ್ನು ಹತ್ಯೆ ಮಾಡಿರುವ ಬಗ್ಗೆ ಪಾಕಿಸ್ತಾನದ ಮಾಜಿ ರಾಜತಾಂತ್ರಿಕರೊಬ್ಬರು ಒಪ್ಪಿಕೊಂಡಿದೆ ಎಂಬ ಸುಳ್ಳುಸುದ್ದಿಯನ್ನು ಹಲವಾರು ಮುಖ್ಯವಾಹಿನಿ ಮಾಧ್ಯಮಗಳು (ಕೆಲವು ನಂಬಿಕಸ್ಥ ಮಾಧ್ಯಮಗಳೂ ಸೇರಿದಂತೆ) ವರದಿ ಮಾಡಿದ್ದನ್ನು ಆಲ್ಟ್‌ನ್ಯೂಸ್ ವರದಿ ಮಾಡಿತ್ತು. ಕುಚೋದ್ಯದ ವಿಷಯ ಎಂದರೆ ಇಲ್ಲಿಯವರೆಗೂ ಭಾರತದ ಯಾವುದೇ ಅಧಿಕೃತ ಸಂಸ್ಥೆ ಇಂತಹ ಸಂಖ್ಯೆಯನ್ನು ಕ್ಲೇಮ್ ಮಾಡದೆ ಇರುವುದು. ಜಫರ್ ಹಿಲಾಲಿ ಎಂಬುವವರ ಒಂದು ವಿಡೀಯೋವನ್ನು ತಿರುಚಿ, ಅದನ್ನು ಆಧಾರವಾಗಿರಿಸಿಕೊಂಡು ಈ ಮಾಧ್ಯಮಗಳು ಇಂತಹ ಸುಳ್ಳುಸುದ್ದಿಯನ್ನು ಓದುಗರಿಗೆ-ವೀಕ್ಷಕರಿಗೆ ಅತಿರಂಜಿತವಾಗಿ ಉಣಬಡಿಸಿದ್ದವು. ಅವುಗಳಲ್ಲಿ ಯಾವ ಯಾವ ಮಾಧ್ಯಮಗಳು ತಾವು ಮಾಡಿದ ತಪ್ಪನ್ನು (ಬೇಜವಾಬ್ದಾರಿಯಿಂದ ಮಾಡಿದ್ದರೆ) ಒಪ್ಪಿಕೊಂಡವು?

ಅದೇ ದಿನ ಆಸ್ಟ್ರೇಲಿಯಾದ ವಿರುದ್ಧ ಮೂರನೇ ಟೆಸ್ಟ್ ಪಂದ್ಯವನ್ನು ಭಾರತ ಡ್ರಾ ಮಾಡಿಕೊಂಡಿದ್ದನ್ನು ಸಂಭ್ರಮಿಸಲಾಯಿತು. ಆದರೆ ಅಲ್ಲಿ ನೆರೆದಿದ್ದ ಪ್ರೇಕ್ಷಕರು ಭಾರತದ ಆಟಗಾರರ ವಿರುದ್ಧ ಜನಾಂಗೀಯ ನಿಂದನೆ ಮಾಡಿದ್ದರ ವಿರುದ್ಧ ಮಾಧ್ಯಮಗಳು ಯಾವ ಅಭಿಪ್ರಾಯ ತಳೆದು ಜನಕ್ಕೆ ತಿಳಿಸಿದವು? ಜಾತಿ, ಧರ್ಮ ಮತ್ತು ವರ್ಣ ನಿಂದನೆಗಳು ಇಲ್ಲಿ ರಕ್ತಗತವಾಗಿ ಇರುವುದರಿಂದ ಅದು ಅಂತಹ ದೊಡ್ಡ ಸಮಸ್ಯೆಯಾಗಿ ಇಲ್ಲಿ ಕಾಣುವುದಿಲ್ಲವೇ?

PC : New Indian Express

ಇನ್ನು ಅದೇ ದಿನ ಮತ್ತು ಅದರ ಮುಂದಿನ ದಿನ ಕೃಷಿ ಕಾಯ್ದೆಗಳು ಮತ್ತು ರೈತ ಹೋರಾಟದ ಬಗ್ಗೆ ಸುಪ್ರೀಮ್ ಕೋರ್ಟ್ ತೀರ್ಪನ್ನು ನೀಡಿದೆ. ಮೂರು ಕೃಷಿ ಕಾಯ್ದೆಗಳಿಗೆ ತಾತ್ಕಾಲಿಕ ತಡೆಯನ್ನು ನೀಡಿ, ಸಮಿತಿಯೊಂದನ್ನು ರಚಿಸಿ ಅದರ ಜೊತೆಗೆ ಸಮಸ್ಯೆ ಚರ್ಚಿಸುವಂತೆ ರೈತ ಸಂಘಟನೆಗಳಿಗೆ ಹೇಳಿದೆ. ಆದರೆ ಆ ಸಮಿತಿಯಲ್ಲಿ ಇರುವ ನಾಲ್ಕೂ ಜನ ಸದಸ್ಯರು ಈ ಕೃಷಿ ಕಾಯ್ದೆಗಳ ಪ್ರಬಲ ಸಮರ್ಥಕರು. ಇದರ ಬಗ್ಗೆ ಈ ಮುಖ್ಯವಾಹಿನಿ ಮಾಧ್ಯಮಗಳು ಯಾವ ರೀತಿಯಲ್ಲಿ ಚರ್ಚಿಸಲಿವೆ ಎಂಬುದನ್ನು ಊಹಿಸುವುದು ಕಷ್ಟವೇನಲ್ಲ ಅಲ್ಲವೇ? ಈ ಕೃಷಿ ಕಾಯ್ದೆಗಳು ಯಾವ ಬಂಡವಾಳಶಾಹಿ ಸಂಸ್ಥೆಗಳಿಗೆ ಸಹಾಯ ಮಾಡಲಿವೆ ಎಂದು ಆರೋಪಿಸಿ ರೈತರು ಪ್ರತಿಭಟಿಸುತ್ತಿದ್ದಾರೋ, ಅದರಲ್ಲಿ ಒಂದು ಕಾರ್ಪೊರೆಟ್ ಸಂಸ್ಥೆ ಹಲವು ಮಾಧ್ಯಮ ಸಂಸ್ಥೆಗಳನ್ನು ಹೊಂದಿರುವ ಒಡೆಯ. ಈ ಒಡೆಯನ ಮಾತನ್ನು ಶಿರಸಾವಹಿಸಿ ಪಾಲಿಸುವ ಕೆಲವು ಡಿಜಿಟಲ್ ಜಾಲತಾಣಗಳು ಮತ್ತು ಟಿವಿ ಚಾನೆಲ್‌ಗಳು ಕೃಷಿ ಕಾಯ್ದೆಗಳ ಪರವಾಗಿ ಒಂದು ನಕಲಿ ಸಮೀಕ್ಷೆಯನ್ನು ಮಾಡಿ, ದೇಶದ ಅತಿ ಹೆಚ್ಚು ಜನ ಕೃಷಿ ಕಾಯ್ದೆಗಳನ್ನು ಬೆಂಬಲಿಸುತ್ತಿದ್ದಾರೆ ಎಂಬ ಫಲಿತಾಂಶವನ್ನು ಪ್ರಕಟಿಸಿ, ರೈತರ ಹೋರಾಟ ಉತ್ತುಂಗದಲ್ಲಿದ್ದಾಗ, ಅದನ್ನು ತನ್ನ ಜಾಲತಾಣದ ಮುಖಪುಟಲ್ಲಿ ದಿನಗಟ್ಟಲೆ ರಾರಾಜಿಸಿಸಿತ್ತು.

ಡಿಸೆಂಬರ್ ತಿಂಗಳ ನ್ಯೂಯಾರ್ಕರ್‌ನ ಒಂದು ಸಂಚಿಕೆಯಲ್ಲಿ ’ಮರ್ಡರ್ ಇನ್ ಮಾಲ್ಟಾ’ ಎಂಬ ರಿಪೋರ್ಟಾಜ್ ಪ್ರಕಟವಾಗಿದೆ. ಮಾಲ್ಟಾ ಯುರೋಪಿನ ಒಂದು ಪುಟ್ಟ ರಾಷ್ಟ್ರ. ಅಲ್ಲಿ ನಡೆದ ಅತಿ ಡೊಡ್ಡ ಭ್ರಷ್ಟಾಚಾರದ ಬಗ್ಗೆ ಒಬ್ಬಂಟಿಯಾಗಿ ಹೋರಾಡಿ, ವರದಿಗಳನ್ನು ತನ್ನ ಬ್ಲಾಗ್‌ನಲ್ಲಿ ಬರೆದು 2017ರಲ್ಲಿ ಕೊಲೆಯಾದ ಪತ್ರಕರ್ತೆಯ ಪ್ರಕರಣದ ಬಗೆಗಿನ ವರದಿ ಅದು. ಗೌರಿಯವರು ಕೊಲೆಯಾದ ಒಂದು ತಿಂಗಳ ನಂತರವಷ್ಟೆ ಪತ್ರಕರ್ತೆ ದಾಫ್ನೆ ಕರುವಾನ ಗಲಿಝಿಯಾ ಕೊಲೆಯಾದದ್ದು. ಅಂದಿನ ಮಾಲ್ಟಾ ಪ್ರಧಾನಿ ಜೋಸೆಫ್ ಮಸ್ಕಟ್‌ನ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಕ್ಕೆ ಈ ಕೊಲೆಯಾದದ್ದು. ಶೆಲ್ ಕಂಪನಿಗಳ ಮೂಲಕ ಅನಧಿಕೃತ ವ್ಯವಹಾರಗಳನ್ನು ಮಾಡುವ ಸಂಸ್ಥೆಗಳ ಹಗರಣದ ’ಪನಾಮಾ ಪೇಪರ್ಸ ಭಾರತದಲ್ಲಿಯೂ ಸದ್ದಾಗಿದ್ದು ನೆನಪಿಸಿಕೊಳ್ಳಬಹುದು.

ಅದನ್ನು ತನ್ನ ಮಗನ ಸಹಾಯದಿಂದ ಬಹಿರಂಗಗೊಳಿಸಿ ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿ ಹತ್ಯೆಯಾದವರು ಆಕೆ. ಭಾರತದಲ್ಲಿ ಪನಾಮ ಪೇಪರ್ಸ್ ಬಗ್ಗೆ ಆದ ಚರ್ಚೆ ಎಷ್ಟು ಎಂಬ ಪ್ರಶ್ನೆಯೇ ಈಗ ಹಾಸ್ಯಾಸ್ಪದ.
ಹಂತಕರನ್ನು ನೇಮಿಸಿ ಸಿನಿಮೀಯ ರೀತಿಯಲ್ಲಿ ಆಗುವ ಕೊಲೆಯ ತನಿಖೆಯನ್ನು ಬೇಧಿಸಲು ದಾಫ್ನೆಯವರ ಮೂವರು ಮಕ್ಕಳು ಒಂದಾಗಿ ಹೋರಾಡುವುದು ಅವರ ತಾಯಿ ಮಾಡಿದ ರೀತಿಯದ್ದೇ ಧೀರೋದ್ದಾತ ಹೋರಾಟ! ಆ ಹೋರಾಟದ ಫಲವಾಗಿ ಪ್ರಧಾನಿ ಜೋಸೆಫ್ ಮಸ್ಕಟ್ ರಾಜೀನಾಮೆ ನೀಡಬೇಕಾಗಿ ಬರುತ್ತದಲ್ಲದೆ, ಹಂತಕ ಮತ್ತು ಈ ಕೊಲೆಗೆ ಆದೇಶಿಸಿದ್ದ ಪ್ರಧಾನಿ ಕಾರ್ಯಾಲಯದ ಸಿಬ್ಬಂದಿ ಕೂಡ ಅರೆಸ್ಟ್ ಆಗುತ್ತಾರೆ.

ಕರಾಳ ದಿನಗಳಲ್ಲಿ ಇಂತಹ ಧೀರ ಮತ್ತು ದಿಟ್ಟ ಪತ್ರಿಕೋದ್ಯಮದ ಕೆಲಸಗಳು ಸ್ಫೂರ್ತಿ ತುಂಬಬಲ್ಲವೇ?


ಇದನ್ನೂ ಓದಿ: ರೈತರಿಗೆ ತಮಗೇನು ಬೇಕೆಂದು ಗೊತ್ತಿಲ್ಲ; ಅವರನ್ನು ಯಾರೋ ಪ್ರಚೋದಿಸುತ್ತಿದ್ದಾರೆ: ಹೇಮಾ ಮಾಲಿನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...