HomeUncategorizedಕೇರಳದ ಪ್ರಯಾಣಿಕರಿಗೆ ರಾಜ್ಯದ ನಿರ್ಬಂಧ - ಕರ್ನಾಟಕ ಪ್ರವೇಶಿಸುವುದು ಹೇಗೆ? ಇಲ್ಲಿದೆ ಮಾಹಿತಿ!

ಕೇರಳದ ಪ್ರಯಾಣಿಕರಿಗೆ ರಾಜ್ಯದ ನಿರ್ಬಂಧ – ಕರ್ನಾಟಕ ಪ್ರವೇಶಿಸುವುದು ಹೇಗೆ? ಇಲ್ಲಿದೆ ಮಾಹಿತಿ!

- Advertisement -
- Advertisement -

ನೆರೆಯ ಕೇರಳದಿಂದ ರಾಜ್ಯಕ್ಕೆ ಪ್ರವೇಶಿಸುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ನೆಗೆಟಿವ್‌‌ ವರದಿ ಅಥವಾ “ಎರಡೂ ಡೋಸ್‌ಗಳನ್ನು ಪಡೆದಿರುವ” ಕೊರೊನಾ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ನೀಡುವಂತೆ ಕೇಳಲಾಗುವುದು ಎಂದು ಗುರುವಾರ ಹೊರಡಿಸಲಾದ ಅಧಿಕೃತ ಆದೇಶದಲ್ಲಿ ರಾಜ್ಯ ಸರ್ಕಾರ ತಿಳಿಸಿದೆ. ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಹೊರಡಿಸಿದ ಆದೇಶದಲ್ಲಿ, ಕೇರಳದ ಕೆಲವು ಜಿಲ್ಲೆಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರವು ವರದಿಯಾಗಿದೆ, ಆದ್ದರಿಂದ ವಿಶೇಷ ಕಣ್ಗಾವಲು ಕ್ರಮಗಳು ರಾಜ್ಯದಾದ್ಯಂತ ಜಾರಿಯಲ್ಲಿರುತ್ತದೆ ಎಂದು ಹೇಳಿದೆ.

ಆದೇಶವು, “ಆರ್ಟಿ-ಪಿಸಿಆರ್‌ ನೆಗೆಟಿವ್‌‌ ವರದಿಯು 72 ಗಂಟೆಗಳಿಗಿಂತ ಹಳೆಯದಾಗಿರಬಾರದು. ಲಸಿಕೆ ಪ್ರಮಾಣಪತ್ರವು ಕೊರೊನಾ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿದ್ದಾರೆಂದು ನಿರ್ದಿಷ್ಟಪಡಿಸಿರಬೇಕು. ವಿಮಾನ, ಬಸ್, ರೈಲು, ಟ್ಯಾಕ್ಸಿ ಮತ್ತು ವೈಯಕ್ತಿಕ ಸಾರಿಗೆಯ ಮೂಲಕ ಕರ್ನಾಟಕಕ್ಕೆ ಪ್ರವೇಶಿಸುವ ಎಲ್ಲ ಪ್ರಯಾಣಿಕರಿಗೂ ಈ ನಿಯಮ ಅನ್ವಯವಾಗುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾವುಗಳಿಗೆ ಕಾರಣವಾಗುತ್ತೆ ಎನ್ನಲು ಮಾಹಿತಿಯಿಲ್ಲ: ಡಾ. ರಂದೀಪ್ ಗುಲೇರಿಯಾ

ಇದಲ್ಲದೆ, ಕೇರಳದೊಂದಿಗೆ ಗಡಿ ಹಂಚಿಕೊಳ್ಳುವ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರದ ಜಿಲ್ಲಾಧಿಕಾರಿಗಳಿಗೆ ನಿಯಮವನ್ನು ಜಾರಿಗೆ ತರಲು ಚೆಕ್ ಪೋಸ್ಟ್‌ಗಳಲ್ಲಿ ಸಾಕಷ್ಟು ಸಿಬ್ಬಂದಿಯನ್ನು ನಿಯೋಜಿಸುವಂತೆ ಸೂಚನೆ ನೀಡಲಾಗಿದೆ.

“ಎಲ್ಲಾ ವಾಹನಗಳ ಚಾಲಕ, ಸಹಾಯಕ ಅಥವಾ ಕ್ಲೀನರ್ ಮತ್ತು ಪ್ರಯಾಣಿಕರು ಸೇರಿದಂತೆ ಎಲ್ಲರನ್ನು ಪರೀಕ್ಷಿಸಲು ಅಧಿಕಾರಿಗಳಿಗೆ ನಿರ್ದಿಷ್ಟವಾಗಿ ಕೇಳಲಾಗಿದೆ. ಬಸ್‌ನಲ್ಲಿ ಪ್ರಯಾಣಿಸುವವರ ಆರ್‌ಟಿ-ಪಿಸಿಆರ್ ಪ್ರಮಾಣಪತ್ರವು 72 ಗಂಟೆಗಳಿಗಿಂತ ಹಳೆಯದಾಗಿರಬಾರದು.ಇದನ್ನು ಪರಿಶೀಲಿಸುವುದು ಕಂಡಕ್ಟರ್‌ನ ಜವಾಬ್ದಾರಿಯಾಗಿದೆ” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮಧ್ಯೆ, “ಶಿಕ್ಷಣ, ವ್ಯವಹಾರ ಮತ್ತು ಇತರ ಕಾರಣಗಳಿಗಾಗಿ ಕರ್ನಾಟಕಕ್ಕೆ ಪ್ರತಿದಿನ ಭೇಟಿ ನೀಡುವ ಎಲ್ಲಾ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ 15 ದಿನಗಳಿಗೊಮ್ಮೆ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗುವುದು ಮತ್ತು ನೆಗಟಿವ್‌‌ ರಿಪೋರ್ಟ್ ವರದಿ ಹೊಂದಿರುವುದು ಕಡ್ಡಾಯವಾಗಿದೆ” ಎಂದು ಆದೇಶವು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಇಂಟರ್‍‍ನ್ಯಾಶನಲ್ ಫೋಕಸ್; ಇಥಿಯೋಪಿಯಾ: ನೊಬೆಲ್ ಶಾಂತಿ ಪ್ರಶಸ್ತಿಯ ಇನ್ನೊಂದು ಯುದ್ಧ

ಈ ವಾರದ ಆರಂಭದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾಡಳಿತಗಳು ಮಂಗಳವಾರದಿಂದ ಕೇರಳದಿಂದ ಬರುವ ಜನರಿಂದ ಪರೀಕ್ಷಾ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಪರಿಶೀಲಿಸಲಾಗುವುದು ಎಂದು ಘೋಷಿಸಿತ್ತು. ಕೇರಳ-ಕರ್ನಾಟಕ ಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ಹೆಚ್ಚಿನ ಜಾಗರೂಕತೆಯಿಂದ ಇರಬೇಕು ಮತ್ತು ಚೆಕ್‌ಪೋಸ್ಟ್‌ಗಳನ್ನು ಬಲಪಡಿಸುವಂತೆ ರಾಜ್ಯ ಸರ್ಕಾರ ಜಿಲ್ಲೆಗಳಿಗೆ ಸೂಚನೆ ನೀಡಿದ ನಂತರ ಈ ಕ್ರಮಕ್ಕೆ ಚಾಲನೆ ನೀಡಲಾಯಿತು.

ಆದರೆ, ಸಾಂವಿಧಾನಿಕ ಹುದ್ದೆಗಳಲ್ಲಿರುವವರಿಗೆ, ಆರೋಗ್ಯ ಕಾರ್ಯಕರ್ತರಿಗೆ ಮತ್ತು ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ. ಜೊತೆಗೆ ಕುಟುಂಬದಲ್ಲಿ ಸಾವು ಮತ್ತು ವೈದ್ಯಕೀಯ ಅವಶ್ಯಕತೆಗಳಂತಹ ತುರ್ತು ಸಂದರ್ಭಗಳಲ್ಲಿ ಗಡಿಗಳ ನಡುವೆ ಪ್ರಯಾಣಿಸಲು ಅನುಮತಿಸಲಾಗುವುದು. ಆದರೆ ಅವರು ತಮ್ಮ ಗುರುತು ಮತ್ತು ವಿಳಾಸದ ವಿವರಗಳನ್ನು ನೀಡುವುದರ ಜೊತೆಗೆ ಕೋವಿಡ್ ಪರೀಕ್ಷೆಗೆ ತಮ್ಮ ಸ್ವ್ಯಾಬ್ ಮಾದರಿಯನ್ನು ನೀಡಬೇಕಾಗುತ್ತದೆ. ಪರೀಕ್ಷಾ ಫಲಿತಾಂಶವನ್ನು ಅವಲಂಬಿಸಿ ಪ್ರೋಟೋಕಾಲ್ ಪ್ರಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಆದೇಶ ಹೇಳಿದೆ.

ಜೂನ್ 28 ರಂದು ರಾಜ್ಯ ಸರ್ಕಾರವು ಮಹಾರಾಷ್ಟ್ರದ ಎಲ್ಲ ಪ್ರಯಾಣಿಕರಿಗೆ 72 ಗಂಟೆಗಳನ್ನು ಮೀರದ ಆರ್‌ಟಿ-ಪಿಸಿಆರ್ ಬೆಗೆಟಿವ್‌‌ ವರದಿಯನ್ನು ಮತ್ತು ಕನಿಷ್ಠ ಒಂದು ಡೋಸ್‌ನ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಹೊಂದಿರುವ ಜನರಿಗೆ ರಾಜ್ಯಕ್ಕೆ ಪ್ರವೇಶಿಸಲು ಅನುಮತಿ ನೀಡುವಂತೆ ನಿರ್ದೇಶಿಸಿತ್ತು.

ಇದನ್ನೂ ಓದಿ: ಮತದಾನ ನಂತರದ ಹಿಂಸಾಚಾರ: ಚುನಾವಣಾ ಆಯೋಗ, ಬಂಗಾಳ ಮತ್ತು ಒಕ್ಕೂಟ ಸರ್ಕಾರಕ್ಕೆ ಸುಪ್ರೀಂನಿಂದ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...