Homeಮುಖಪುಟಗಾಂಧಿ ನೆನಪಿನಲ್ಲಿ ರಾಜ್ಯದ್ಯಂತ ಉಪವಾಸ ಸತ್ಯಾಗ್ರಹ : NPR ಜಾರಿಗೊಳಿಸದಂತೆ ತಡೆಯುವ ಪ್ರತಿಜ್ಞೆ..

ಗಾಂಧಿ ನೆನಪಿನಲ್ಲಿ ರಾಜ್ಯದ್ಯಂತ ಉಪವಾಸ ಸತ್ಯಾಗ್ರಹ : NPR ಜಾರಿಗೊಳಿಸದಂತೆ ತಡೆಯುವ ಪ್ರತಿಜ್ಞೆ..

ಸಾವಿರಾರು ಜನರು ಇಂದು ಒಂದೇ ದಿನ, ಒಂದೇ ಬಾರಿಗೆ, ಒಂದೇ ವಿಚಾರದ ಕಾರಣಕ್ಕೆ ಉಪವಾಸವಿದ್ದು ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ವಿರೋಧಿಸಿ ಅಪೂರ್ವ ಸತ್ಯಾಗ್ರಹ ಇದಾಗಿದ್ದು ರಾಜ್ಯದ ಜನರ ಗಮನ ಸೆಳೆದಿದೆ.

- Advertisement -
- Advertisement -

ಮಹಾತ್ಮ ಗಾಂಧೀಜಿಯವರು ನಡೆಸಿದ ದಂಡಿ (ಉಪ್ಪಿನ) ಸತ್ಯಾಗ್ರಹದ 90ನೇ ವರ್ಷಾಚರಣೆಯ ನೆನಪು ಹಾಗೂ ಸ್ಫೂರ್ತಿಯಲ್ಲಿ ಸಂವಿಧಾನ ಹಾಗೂ ಪೌರತ್ವದ ಹಕ್ಕುಗಳನ್ನು ಉಳಿಸಿಕೊಳ್ಳಲು ಇಂದು ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉಪವಾಸ ಸತ್ಯಾಗ್ರಹ ನಡೆದಿದ್ದು NPR ಜಾರಿಗೊಳಿಸದಂತೆ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರಗಳನ್ನು ಸಲ್ಲಿಸಲಾಗಿದೆ.

ಸಾವಿರಾರು ಜನರು ಇಂದು ಒಂದೇ ದಿನ, ಒಂದೇ ಬಾರಿಗೆ, ಒಂದೇ ವಿಚಾರದ ಕಾರಣಕ್ಕೆ ಉಪವಾಸವಿದ್ದು ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ವಿರೋಧಿಸಿ ಅಪೂರ್ವ ಸತ್ಯಾಗ್ರಹ ಇದಾಗಿದ್ದು ರಾಜ್ಯದ ಜನರ ಗಮನ ಸೆಳೆದಿದೆ.

ಮೈಸೂರಿನಲ್ಲಿ

ನಾವು ಭಾರತೀಯರು – We the people of India ಜಂಟಿ ಕ್ರಿಯಾ ಸಮಿತಿ – ಕರ್ನಾಟಕ, ಸಂವಿಧಾನ ಉಳಿಸಿ ವೇದಿಕೆಗಳು ಕರೆ ಕೊಟ್ಟಿದ್ದ ಉಪವಾಸ ಸತ್ಯಾಗ್ರಹ ಕಾರ್ಯಕ್ರಮಕ್ಕೆ ಬೆಂಗಳೂರು, ಮೈಸೂರು, ಧಾರವಾಡ, ಹುಬ್ಬಳ್ಳಿ, ರಾಯಚೂರು, ಸಿಂಧನೂರು, ಶಿವಮೊಗ್ಗ, ಬಳ್ಳಾರಿ, ಮಣಿಪಾಲ, ತುಮಕೂರು, ಯಾದಗಿರಿ, ರಾಮನಗರ ಮುಂತಾದ ಸ್ಥಳಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹಿರಿಯ ಸಾಹಿತಿಗಳಾದ ದೇವನೂರು ಮಹಾದೇವ, ಭಾಷಾ ತಜ್ಞರಾದ ಪ್ರೊ.ಜಿ.ಎನ್‌ ಗಣೇಶ್‌ ದೇವಿ, ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ನ್ಯಾಯವಾದಿ ಬಾಲನ್‌ ಸೇರಿದಂತೆ ಹಲವು ಗಣ್ಯರು ಸಹ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದಾರೆ.

ಬೆಂಗಳೂರು

ಭಾರತವನ್ನು ಆಳುತ್ತಿದ್ದ ಬ್ರಿಟಿಷರು, ತಮ್ಮ ಆರ್ಥಿಕ ದಬ್ಬಾಳಿಕೆಯನ್ನು ಮುಂದುವರೆಸುವುದರ ಭಾಗವಾಗಿ ಉಪ್ಪಿನ ಮೇಲೆ ಕರ ವಿಧಿಸಿದ್ದರು. ಅದನ್ನು ವಿರೋಧಿಸಿ ಆಯ್ದ ಸತ್ಯಾಗ್ರಹಿಗಳೊಂದಿಗೆ ಗಾಂಧಿಯವರು ಮಾರ್ಚ್ 12, 1930ರಂದು ದಂಡಿ (ಉಪ್ಪಿನ) ಸತ್ಯಾಗ್ರಹವನ್ನು ಆರಂಭಿಸಿದರು. ಉಪ್ಪು ತಯಾರಿಸಲು ಸಮುದ್ರದೆಡೆಗೆ ನಡೆಸಿದ ಪ್ರಯಾಣ ಅಂದು ಶುರುವಾಗಿತ್ತು. ಅಂತಿಮವಾಗಿ ಸತ್ಯಾಗ್ರಹಿಗಳು ಬಂಧನಕ್ಕೊಳಗಾದರು. ಅಂತಹ ಎಷ್ಟೋ ಬಂಧನಗಳು, ಸಾವುಗಳು, ತ್ಯಾಗ ಬಲಿದಾನಗಳಿಂದ ದೇಶಕ್ಕೆ ಸ್ವಾತಂತ್ರ್ಯ ಮತ್ತು ಸಂವಿಧಾನ ಬಂದವು. ಇಂದು ಈ ಸ್ವಾತಂತ್ರ್ಯ ಹಾಗೂ ಸಂವಿಧಾನಗಳಿಗೆ ಕುತ್ತು ಬಂದಿದೆ. ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾಗದ ಪರಂಪರೆಯುಳ್ಳವರು ದೇಶದಲ್ಲಿ ಅಧಿಕಾರ ಹಿಡಿದಿದ್ದಾರೆ. ಸ್ವಾತಂತ್ರ್ಯ ಚಳವಳಿಯಲ್ಲಿ ಧೀರೋದಾತ್ತವಾಗಿ ಸೆಣೆಸಿದ ಎಲ್ಲ ಧರ್ಮಗಳಿಗೆ ಸೇರಿದವರು, ಆದಿವಾಸಿಗಳು, ದಲಿತರು, ರೈತ ಕಾರ್ಮಿಕರು, ಮಹಿಳೆಯರು ತಾವು ಈ ದೇಶದ ಪೌರರು ಎಂದು ತಾವೇ ಓಟು ಹಾಕಿ ಗೆಲ್ಲಿಸಿದ ಸರ್ಕಾರದ ಮುಂದೆ ಸಾಬೀತು ಮಾಡಬೇಕಾದ ದುಸ್ಥಿತಿ ಬಂದಿದೆ ಎಂದು ಸತ್ಯಾಗ್ರಹಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ

ನಮ್ಮ ಆಂದೋಲನವು ಸ್ವಾತಂತ್ರ್ಯ ಚಳವಳಿಯಲ್ಲಿ ಗಾಂಧಿಯವರು ಹಾಕಿಕೊಟ್ಟ ಪರಂಪರೆಯಂತೆಯೇ ಅಹಿಂಸಾತ್ಮಕವಾಗಿ ಇರಲಿದ್ದು, ಗುರಿ ಮುಟ್ಟುವವರೆಗೂ ನಿಲ್ಲುವುದಿಲ್ಲ ಎಂದು ನಮ್ಮೊಳಗೇ ಆತ್ಯಾನುಸಂಧಾನ ನಡೆಸಿಕೊಳ್ಳುವ ದಿನವಾಗಿಯೂ ಈ ಸತ್ಯಾಗ್ರಹವು ಇರಲಿದೆ ಎಂದು ಸತ್ಯಾಗ್ರಹಿಗಳು ಘೋಷಿಸಿದ್ದಾರೆ. ಹಲವೆಡೆ ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ಎನ್‌ಪಿಆರ್‌ ಜಾರಿಗೊಳಿಸಬಾರದೆಂದು ಹಕ್ಕೊತ್ತಾಯ ಪತ್ರಗಳನ್ನು ಸಲ್ಲಿಸಲಾಗಿದೆ.

ಸಿಂಧನೂರು

ಚಿಕ್ಕಮಗಳೂರು, ಚಿತ್ರದುರ್ಗ, ಹೊಸಪೇಟೆ, ಕೊಪ್ಪಳ, ವಿಜಯಪುರ, ಉಡುಪಿ, ದಾವಣಗೆರೆ ಜಿಲ್ಲೆಗಳಲ್ಲಿ ನಾಳೆ ಉಪವಾಸ ಸತ್ಯಾಗ್ರಹ ನಡೆಸಲು ಯೋಜಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ಅಪಾಯಗಳ ಕುರಿತು ಕಾರ್ಯಗಾರಗಳು ಜರುಗಲಿವೆ.

ಶಿವಮೊಗ್ಗ

ಎನ್‌ಪಿಆರ್‌ ವಿರೋಧಿಸಿ ಮಾರ್ಚ್‌ 29 ಕ್ಕೆ ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ

ಜನಗಣತಿಯೊಂದಿಗೇನೆ ಏಪ್ರಿಲ್‌ 15 ರಿಂದ ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಅನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು ಎಂದು ಜನರು ತಮ್ಮ ಗಟ್ಟಿ ನಿರ್ಧಾರವನ್ನು ಪ್ರಕಟಿಸಲು ಮಾರ್ಚ್‌ 29 ಕ್ಕೆ ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ ನಡೆಸಲು ಸಿದ್ಧತೆ ನಡೆದಿದೆ.

ರಾಯಚೂರು

ಈ ಸಮಾವೇಶದಲ್ಲಿ ಜನಪರ ಸಂಘಟನೆಗಳು, ರಾಜಕೀಯ ಪಕ್ಷಗಳು, ವಿವಿಧ ಧರ್ಮ ಮತ್ತು ಜಾತಿ ಸಂಘಟನೆಗಳು, ರೈತ ಕಾರ್ಮಿಕ ದಲಿತ ಸಂಘಟನೆಗಳು ಸೇರಿದಂತೆ ಲಕ್ಷಾಂತರ ಜನ ಭಾಗವಹಿಸಲಿದ್ದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಡುವ ಹೋರಾಟ ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಧಾರವಾಡ

ಅದಕ್ಕೂ ಸರ್ಕಾರ ಬಗ್ಗದಿದ್ದಲ್ಲಿ ಅಂಬೇಡ್ಕರ್‌ ಜನ್ಮದಿನವಾದ ಏಪ್ರಿಲ್‌ 14 ರಂದು ಮತ್ತೊಂದು ಸುತ್ತಿನ ಬೃಹತ್‌ ಹೋರಾಟ ನಡೆಸುವ ಎಚ್ಚರಿಕೆ ಸಹ ನೀಡಲಾಗಿದೆ. ಒಟ್ಟಿನಲ್ಲಿ ರಾಜ್ಯದಲ್ಲಿ ಎನ್‌ಆರ್‌ಸಿಯ ಮೊದಲ ಹೆಜ್ಜೆಯಾಗಿರುವ ಎನ್‌ಪಿಆರ್‌ ಜಾರಿಯಾಗಬಾರದೆಂಬುದು ನಾವು ಭಾರತೀಯರು ತಂಡದ ಆಗ್ರಹವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...