Homeಮುಖಪುಟಗಾಂಧಿ ನೆನಪಿನಲ್ಲಿ ರಾಜ್ಯದ್ಯಂತ ಉಪವಾಸ ಸತ್ಯಾಗ್ರಹ : NPR ಜಾರಿಗೊಳಿಸದಂತೆ ತಡೆಯುವ ಪ್ರತಿಜ್ಞೆ..

ಗಾಂಧಿ ನೆನಪಿನಲ್ಲಿ ರಾಜ್ಯದ್ಯಂತ ಉಪವಾಸ ಸತ್ಯಾಗ್ರಹ : NPR ಜಾರಿಗೊಳಿಸದಂತೆ ತಡೆಯುವ ಪ್ರತಿಜ್ಞೆ..

ಸಾವಿರಾರು ಜನರು ಇಂದು ಒಂದೇ ದಿನ, ಒಂದೇ ಬಾರಿಗೆ, ಒಂದೇ ವಿಚಾರದ ಕಾರಣಕ್ಕೆ ಉಪವಾಸವಿದ್ದು ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ವಿರೋಧಿಸಿ ಅಪೂರ್ವ ಸತ್ಯಾಗ್ರಹ ಇದಾಗಿದ್ದು ರಾಜ್ಯದ ಜನರ ಗಮನ ಸೆಳೆದಿದೆ.

- Advertisement -
- Advertisement -

ಮಹಾತ್ಮ ಗಾಂಧೀಜಿಯವರು ನಡೆಸಿದ ದಂಡಿ (ಉಪ್ಪಿನ) ಸತ್ಯಾಗ್ರಹದ 90ನೇ ವರ್ಷಾಚರಣೆಯ ನೆನಪು ಹಾಗೂ ಸ್ಫೂರ್ತಿಯಲ್ಲಿ ಸಂವಿಧಾನ ಹಾಗೂ ಪೌರತ್ವದ ಹಕ್ಕುಗಳನ್ನು ಉಳಿಸಿಕೊಳ್ಳಲು ಇಂದು ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉಪವಾಸ ಸತ್ಯಾಗ್ರಹ ನಡೆದಿದ್ದು NPR ಜಾರಿಗೊಳಿಸದಂತೆ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರಗಳನ್ನು ಸಲ್ಲಿಸಲಾಗಿದೆ.

ಸಾವಿರಾರು ಜನರು ಇಂದು ಒಂದೇ ದಿನ, ಒಂದೇ ಬಾರಿಗೆ, ಒಂದೇ ವಿಚಾರದ ಕಾರಣಕ್ಕೆ ಉಪವಾಸವಿದ್ದು ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ವಿರೋಧಿಸಿ ಅಪೂರ್ವ ಸತ್ಯಾಗ್ರಹ ಇದಾಗಿದ್ದು ರಾಜ್ಯದ ಜನರ ಗಮನ ಸೆಳೆದಿದೆ.

ಮೈಸೂರಿನಲ್ಲಿ

ನಾವು ಭಾರತೀಯರು – We the people of India ಜಂಟಿ ಕ್ರಿಯಾ ಸಮಿತಿ – ಕರ್ನಾಟಕ, ಸಂವಿಧಾನ ಉಳಿಸಿ ವೇದಿಕೆಗಳು ಕರೆ ಕೊಟ್ಟಿದ್ದ ಉಪವಾಸ ಸತ್ಯಾಗ್ರಹ ಕಾರ್ಯಕ್ರಮಕ್ಕೆ ಬೆಂಗಳೂರು, ಮೈಸೂರು, ಧಾರವಾಡ, ಹುಬ್ಬಳ್ಳಿ, ರಾಯಚೂರು, ಸಿಂಧನೂರು, ಶಿವಮೊಗ್ಗ, ಬಳ್ಳಾರಿ, ಮಣಿಪಾಲ, ತುಮಕೂರು, ಯಾದಗಿರಿ, ರಾಮನಗರ ಮುಂತಾದ ಸ್ಥಳಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹಿರಿಯ ಸಾಹಿತಿಗಳಾದ ದೇವನೂರು ಮಹಾದೇವ, ಭಾಷಾ ತಜ್ಞರಾದ ಪ್ರೊ.ಜಿ.ಎನ್‌ ಗಣೇಶ್‌ ದೇವಿ, ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ನ್ಯಾಯವಾದಿ ಬಾಲನ್‌ ಸೇರಿದಂತೆ ಹಲವು ಗಣ್ಯರು ಸಹ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದಾರೆ.

ಬೆಂಗಳೂರು

ಭಾರತವನ್ನು ಆಳುತ್ತಿದ್ದ ಬ್ರಿಟಿಷರು, ತಮ್ಮ ಆರ್ಥಿಕ ದಬ್ಬಾಳಿಕೆಯನ್ನು ಮುಂದುವರೆಸುವುದರ ಭಾಗವಾಗಿ ಉಪ್ಪಿನ ಮೇಲೆ ಕರ ವಿಧಿಸಿದ್ದರು. ಅದನ್ನು ವಿರೋಧಿಸಿ ಆಯ್ದ ಸತ್ಯಾಗ್ರಹಿಗಳೊಂದಿಗೆ ಗಾಂಧಿಯವರು ಮಾರ್ಚ್ 12, 1930ರಂದು ದಂಡಿ (ಉಪ್ಪಿನ) ಸತ್ಯಾಗ್ರಹವನ್ನು ಆರಂಭಿಸಿದರು. ಉಪ್ಪು ತಯಾರಿಸಲು ಸಮುದ್ರದೆಡೆಗೆ ನಡೆಸಿದ ಪ್ರಯಾಣ ಅಂದು ಶುರುವಾಗಿತ್ತು. ಅಂತಿಮವಾಗಿ ಸತ್ಯಾಗ್ರಹಿಗಳು ಬಂಧನಕ್ಕೊಳಗಾದರು. ಅಂತಹ ಎಷ್ಟೋ ಬಂಧನಗಳು, ಸಾವುಗಳು, ತ್ಯಾಗ ಬಲಿದಾನಗಳಿಂದ ದೇಶಕ್ಕೆ ಸ್ವಾತಂತ್ರ್ಯ ಮತ್ತು ಸಂವಿಧಾನ ಬಂದವು. ಇಂದು ಈ ಸ್ವಾತಂತ್ರ್ಯ ಹಾಗೂ ಸಂವಿಧಾನಗಳಿಗೆ ಕುತ್ತು ಬಂದಿದೆ. ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾಗದ ಪರಂಪರೆಯುಳ್ಳವರು ದೇಶದಲ್ಲಿ ಅಧಿಕಾರ ಹಿಡಿದಿದ್ದಾರೆ. ಸ್ವಾತಂತ್ರ್ಯ ಚಳವಳಿಯಲ್ಲಿ ಧೀರೋದಾತ್ತವಾಗಿ ಸೆಣೆಸಿದ ಎಲ್ಲ ಧರ್ಮಗಳಿಗೆ ಸೇರಿದವರು, ಆದಿವಾಸಿಗಳು, ದಲಿತರು, ರೈತ ಕಾರ್ಮಿಕರು, ಮಹಿಳೆಯರು ತಾವು ಈ ದೇಶದ ಪೌರರು ಎಂದು ತಾವೇ ಓಟು ಹಾಕಿ ಗೆಲ್ಲಿಸಿದ ಸರ್ಕಾರದ ಮುಂದೆ ಸಾಬೀತು ಮಾಡಬೇಕಾದ ದುಸ್ಥಿತಿ ಬಂದಿದೆ ಎಂದು ಸತ್ಯಾಗ್ರಹಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ

ನಮ್ಮ ಆಂದೋಲನವು ಸ್ವಾತಂತ್ರ್ಯ ಚಳವಳಿಯಲ್ಲಿ ಗಾಂಧಿಯವರು ಹಾಕಿಕೊಟ್ಟ ಪರಂಪರೆಯಂತೆಯೇ ಅಹಿಂಸಾತ್ಮಕವಾಗಿ ಇರಲಿದ್ದು, ಗುರಿ ಮುಟ್ಟುವವರೆಗೂ ನಿಲ್ಲುವುದಿಲ್ಲ ಎಂದು ನಮ್ಮೊಳಗೇ ಆತ್ಯಾನುಸಂಧಾನ ನಡೆಸಿಕೊಳ್ಳುವ ದಿನವಾಗಿಯೂ ಈ ಸತ್ಯಾಗ್ರಹವು ಇರಲಿದೆ ಎಂದು ಸತ್ಯಾಗ್ರಹಿಗಳು ಘೋಷಿಸಿದ್ದಾರೆ. ಹಲವೆಡೆ ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ಎನ್‌ಪಿಆರ್‌ ಜಾರಿಗೊಳಿಸಬಾರದೆಂದು ಹಕ್ಕೊತ್ತಾಯ ಪತ್ರಗಳನ್ನು ಸಲ್ಲಿಸಲಾಗಿದೆ.

ಸಿಂಧನೂರು

ಚಿಕ್ಕಮಗಳೂರು, ಚಿತ್ರದುರ್ಗ, ಹೊಸಪೇಟೆ, ಕೊಪ್ಪಳ, ವಿಜಯಪುರ, ಉಡುಪಿ, ದಾವಣಗೆರೆ ಜಿಲ್ಲೆಗಳಲ್ಲಿ ನಾಳೆ ಉಪವಾಸ ಸತ್ಯಾಗ್ರಹ ನಡೆಸಲು ಯೋಜಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ಅಪಾಯಗಳ ಕುರಿತು ಕಾರ್ಯಗಾರಗಳು ಜರುಗಲಿವೆ.

ಶಿವಮೊಗ್ಗ

ಎನ್‌ಪಿಆರ್‌ ವಿರೋಧಿಸಿ ಮಾರ್ಚ್‌ 29 ಕ್ಕೆ ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ

ಜನಗಣತಿಯೊಂದಿಗೇನೆ ಏಪ್ರಿಲ್‌ 15 ರಿಂದ ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಅನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು ಎಂದು ಜನರು ತಮ್ಮ ಗಟ್ಟಿ ನಿರ್ಧಾರವನ್ನು ಪ್ರಕಟಿಸಲು ಮಾರ್ಚ್‌ 29 ಕ್ಕೆ ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ ನಡೆಸಲು ಸಿದ್ಧತೆ ನಡೆದಿದೆ.

ರಾಯಚೂರು

ಈ ಸಮಾವೇಶದಲ್ಲಿ ಜನಪರ ಸಂಘಟನೆಗಳು, ರಾಜಕೀಯ ಪಕ್ಷಗಳು, ವಿವಿಧ ಧರ್ಮ ಮತ್ತು ಜಾತಿ ಸಂಘಟನೆಗಳು, ರೈತ ಕಾರ್ಮಿಕ ದಲಿತ ಸಂಘಟನೆಗಳು ಸೇರಿದಂತೆ ಲಕ್ಷಾಂತರ ಜನ ಭಾಗವಹಿಸಲಿದ್ದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಡುವ ಹೋರಾಟ ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಧಾರವಾಡ

ಅದಕ್ಕೂ ಸರ್ಕಾರ ಬಗ್ಗದಿದ್ದಲ್ಲಿ ಅಂಬೇಡ್ಕರ್‌ ಜನ್ಮದಿನವಾದ ಏಪ್ರಿಲ್‌ 14 ರಂದು ಮತ್ತೊಂದು ಸುತ್ತಿನ ಬೃಹತ್‌ ಹೋರಾಟ ನಡೆಸುವ ಎಚ್ಚರಿಕೆ ಸಹ ನೀಡಲಾಗಿದೆ. ಒಟ್ಟಿನಲ್ಲಿ ರಾಜ್ಯದಲ್ಲಿ ಎನ್‌ಆರ್‌ಸಿಯ ಮೊದಲ ಹೆಜ್ಜೆಯಾಗಿರುವ ಎನ್‌ಪಿಆರ್‌ ಜಾರಿಯಾಗಬಾರದೆಂಬುದು ನಾವು ಭಾರತೀಯರು ತಂಡದ ಆಗ್ರಹವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...