Homeಮುಖಪುಟಗಾಂಧಿ ನೆನಪಿನಲ್ಲಿ ರಾಜ್ಯದ್ಯಂತ ಉಪವಾಸ ಸತ್ಯಾಗ್ರಹ : NPR ಜಾರಿಗೊಳಿಸದಂತೆ ತಡೆಯುವ ಪ್ರತಿಜ್ಞೆ..

ಗಾಂಧಿ ನೆನಪಿನಲ್ಲಿ ರಾಜ್ಯದ್ಯಂತ ಉಪವಾಸ ಸತ್ಯಾಗ್ರಹ : NPR ಜಾರಿಗೊಳಿಸದಂತೆ ತಡೆಯುವ ಪ್ರತಿಜ್ಞೆ..

ಸಾವಿರಾರು ಜನರು ಇಂದು ಒಂದೇ ದಿನ, ಒಂದೇ ಬಾರಿಗೆ, ಒಂದೇ ವಿಚಾರದ ಕಾರಣಕ್ಕೆ ಉಪವಾಸವಿದ್ದು ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ವಿರೋಧಿಸಿ ಅಪೂರ್ವ ಸತ್ಯಾಗ್ರಹ ಇದಾಗಿದ್ದು ರಾಜ್ಯದ ಜನರ ಗಮನ ಸೆಳೆದಿದೆ.

- Advertisement -
- Advertisement -

ಮಹಾತ್ಮ ಗಾಂಧೀಜಿಯವರು ನಡೆಸಿದ ದಂಡಿ (ಉಪ್ಪಿನ) ಸತ್ಯಾಗ್ರಹದ 90ನೇ ವರ್ಷಾಚರಣೆಯ ನೆನಪು ಹಾಗೂ ಸ್ಫೂರ್ತಿಯಲ್ಲಿ ಸಂವಿಧಾನ ಹಾಗೂ ಪೌರತ್ವದ ಹಕ್ಕುಗಳನ್ನು ಉಳಿಸಿಕೊಳ್ಳಲು ಇಂದು ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉಪವಾಸ ಸತ್ಯಾಗ್ರಹ ನಡೆದಿದ್ದು NPR ಜಾರಿಗೊಳಿಸದಂತೆ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರಗಳನ್ನು ಸಲ್ಲಿಸಲಾಗಿದೆ.

ಸಾವಿರಾರು ಜನರು ಇಂದು ಒಂದೇ ದಿನ, ಒಂದೇ ಬಾರಿಗೆ, ಒಂದೇ ವಿಚಾರದ ಕಾರಣಕ್ಕೆ ಉಪವಾಸವಿದ್ದು ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ವಿರೋಧಿಸಿ ಅಪೂರ್ವ ಸತ್ಯಾಗ್ರಹ ಇದಾಗಿದ್ದು ರಾಜ್ಯದ ಜನರ ಗಮನ ಸೆಳೆದಿದೆ.

ಮೈಸೂರಿನಲ್ಲಿ

ನಾವು ಭಾರತೀಯರು – We the people of India ಜಂಟಿ ಕ್ರಿಯಾ ಸಮಿತಿ – ಕರ್ನಾಟಕ, ಸಂವಿಧಾನ ಉಳಿಸಿ ವೇದಿಕೆಗಳು ಕರೆ ಕೊಟ್ಟಿದ್ದ ಉಪವಾಸ ಸತ್ಯಾಗ್ರಹ ಕಾರ್ಯಕ್ರಮಕ್ಕೆ ಬೆಂಗಳೂರು, ಮೈಸೂರು, ಧಾರವಾಡ, ಹುಬ್ಬಳ್ಳಿ, ರಾಯಚೂರು, ಸಿಂಧನೂರು, ಶಿವಮೊಗ್ಗ, ಬಳ್ಳಾರಿ, ಮಣಿಪಾಲ, ತುಮಕೂರು, ಯಾದಗಿರಿ, ರಾಮನಗರ ಮುಂತಾದ ಸ್ಥಳಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹಿರಿಯ ಸಾಹಿತಿಗಳಾದ ದೇವನೂರು ಮಹಾದೇವ, ಭಾಷಾ ತಜ್ಞರಾದ ಪ್ರೊ.ಜಿ.ಎನ್‌ ಗಣೇಶ್‌ ದೇವಿ, ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ನ್ಯಾಯವಾದಿ ಬಾಲನ್‌ ಸೇರಿದಂತೆ ಹಲವು ಗಣ್ಯರು ಸಹ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದಾರೆ.

ಬೆಂಗಳೂರು

ಭಾರತವನ್ನು ಆಳುತ್ತಿದ್ದ ಬ್ರಿಟಿಷರು, ತಮ್ಮ ಆರ್ಥಿಕ ದಬ್ಬಾಳಿಕೆಯನ್ನು ಮುಂದುವರೆಸುವುದರ ಭಾಗವಾಗಿ ಉಪ್ಪಿನ ಮೇಲೆ ಕರ ವಿಧಿಸಿದ್ದರು. ಅದನ್ನು ವಿರೋಧಿಸಿ ಆಯ್ದ ಸತ್ಯಾಗ್ರಹಿಗಳೊಂದಿಗೆ ಗಾಂಧಿಯವರು ಮಾರ್ಚ್ 12, 1930ರಂದು ದಂಡಿ (ಉಪ್ಪಿನ) ಸತ್ಯಾಗ್ರಹವನ್ನು ಆರಂಭಿಸಿದರು. ಉಪ್ಪು ತಯಾರಿಸಲು ಸಮುದ್ರದೆಡೆಗೆ ನಡೆಸಿದ ಪ್ರಯಾಣ ಅಂದು ಶುರುವಾಗಿತ್ತು. ಅಂತಿಮವಾಗಿ ಸತ್ಯಾಗ್ರಹಿಗಳು ಬಂಧನಕ್ಕೊಳಗಾದರು. ಅಂತಹ ಎಷ್ಟೋ ಬಂಧನಗಳು, ಸಾವುಗಳು, ತ್ಯಾಗ ಬಲಿದಾನಗಳಿಂದ ದೇಶಕ್ಕೆ ಸ್ವಾತಂತ್ರ್ಯ ಮತ್ತು ಸಂವಿಧಾನ ಬಂದವು. ಇಂದು ಈ ಸ್ವಾತಂತ್ರ್ಯ ಹಾಗೂ ಸಂವಿಧಾನಗಳಿಗೆ ಕುತ್ತು ಬಂದಿದೆ. ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾಗದ ಪರಂಪರೆಯುಳ್ಳವರು ದೇಶದಲ್ಲಿ ಅಧಿಕಾರ ಹಿಡಿದಿದ್ದಾರೆ. ಸ್ವಾತಂತ್ರ್ಯ ಚಳವಳಿಯಲ್ಲಿ ಧೀರೋದಾತ್ತವಾಗಿ ಸೆಣೆಸಿದ ಎಲ್ಲ ಧರ್ಮಗಳಿಗೆ ಸೇರಿದವರು, ಆದಿವಾಸಿಗಳು, ದಲಿತರು, ರೈತ ಕಾರ್ಮಿಕರು, ಮಹಿಳೆಯರು ತಾವು ಈ ದೇಶದ ಪೌರರು ಎಂದು ತಾವೇ ಓಟು ಹಾಕಿ ಗೆಲ್ಲಿಸಿದ ಸರ್ಕಾರದ ಮುಂದೆ ಸಾಬೀತು ಮಾಡಬೇಕಾದ ದುಸ್ಥಿತಿ ಬಂದಿದೆ ಎಂದು ಸತ್ಯಾಗ್ರಹಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ

ನಮ್ಮ ಆಂದೋಲನವು ಸ್ವಾತಂತ್ರ್ಯ ಚಳವಳಿಯಲ್ಲಿ ಗಾಂಧಿಯವರು ಹಾಕಿಕೊಟ್ಟ ಪರಂಪರೆಯಂತೆಯೇ ಅಹಿಂಸಾತ್ಮಕವಾಗಿ ಇರಲಿದ್ದು, ಗುರಿ ಮುಟ್ಟುವವರೆಗೂ ನಿಲ್ಲುವುದಿಲ್ಲ ಎಂದು ನಮ್ಮೊಳಗೇ ಆತ್ಯಾನುಸಂಧಾನ ನಡೆಸಿಕೊಳ್ಳುವ ದಿನವಾಗಿಯೂ ಈ ಸತ್ಯಾಗ್ರಹವು ಇರಲಿದೆ ಎಂದು ಸತ್ಯಾಗ್ರಹಿಗಳು ಘೋಷಿಸಿದ್ದಾರೆ. ಹಲವೆಡೆ ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ಎನ್‌ಪಿಆರ್‌ ಜಾರಿಗೊಳಿಸಬಾರದೆಂದು ಹಕ್ಕೊತ್ತಾಯ ಪತ್ರಗಳನ್ನು ಸಲ್ಲಿಸಲಾಗಿದೆ.

ಸಿಂಧನೂರು

ಚಿಕ್ಕಮಗಳೂರು, ಚಿತ್ರದುರ್ಗ, ಹೊಸಪೇಟೆ, ಕೊಪ್ಪಳ, ವಿಜಯಪುರ, ಉಡುಪಿ, ದಾವಣಗೆರೆ ಜಿಲ್ಲೆಗಳಲ್ಲಿ ನಾಳೆ ಉಪವಾಸ ಸತ್ಯಾಗ್ರಹ ನಡೆಸಲು ಯೋಜಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ಅಪಾಯಗಳ ಕುರಿತು ಕಾರ್ಯಗಾರಗಳು ಜರುಗಲಿವೆ.

ಶಿವಮೊಗ್ಗ

ಎನ್‌ಪಿಆರ್‌ ವಿರೋಧಿಸಿ ಮಾರ್ಚ್‌ 29 ಕ್ಕೆ ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ

ಜನಗಣತಿಯೊಂದಿಗೇನೆ ಏಪ್ರಿಲ್‌ 15 ರಿಂದ ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಅನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು ಎಂದು ಜನರು ತಮ್ಮ ಗಟ್ಟಿ ನಿರ್ಧಾರವನ್ನು ಪ್ರಕಟಿಸಲು ಮಾರ್ಚ್‌ 29 ಕ್ಕೆ ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ ನಡೆಸಲು ಸಿದ್ಧತೆ ನಡೆದಿದೆ.

ರಾಯಚೂರು

ಈ ಸಮಾವೇಶದಲ್ಲಿ ಜನಪರ ಸಂಘಟನೆಗಳು, ರಾಜಕೀಯ ಪಕ್ಷಗಳು, ವಿವಿಧ ಧರ್ಮ ಮತ್ತು ಜಾತಿ ಸಂಘಟನೆಗಳು, ರೈತ ಕಾರ್ಮಿಕ ದಲಿತ ಸಂಘಟನೆಗಳು ಸೇರಿದಂತೆ ಲಕ್ಷಾಂತರ ಜನ ಭಾಗವಹಿಸಲಿದ್ದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಡುವ ಹೋರಾಟ ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಧಾರವಾಡ

ಅದಕ್ಕೂ ಸರ್ಕಾರ ಬಗ್ಗದಿದ್ದಲ್ಲಿ ಅಂಬೇಡ್ಕರ್‌ ಜನ್ಮದಿನವಾದ ಏಪ್ರಿಲ್‌ 14 ರಂದು ಮತ್ತೊಂದು ಸುತ್ತಿನ ಬೃಹತ್‌ ಹೋರಾಟ ನಡೆಸುವ ಎಚ್ಚರಿಕೆ ಸಹ ನೀಡಲಾಗಿದೆ. ಒಟ್ಟಿನಲ್ಲಿ ರಾಜ್ಯದಲ್ಲಿ ಎನ್‌ಆರ್‌ಸಿಯ ಮೊದಲ ಹೆಜ್ಜೆಯಾಗಿರುವ ಎನ್‌ಪಿಆರ್‌ ಜಾರಿಯಾಗಬಾರದೆಂಬುದು ನಾವು ಭಾರತೀಯರು ತಂಡದ ಆಗ್ರಹವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...