Homeಮುಖಪುಟಗಾಂಧಿ ನೆನಪಿನಲ್ಲಿ ರಾಜ್ಯದ್ಯಂತ ಉಪವಾಸ ಸತ್ಯಾಗ್ರಹ : NPR ಜಾರಿಗೊಳಿಸದಂತೆ ತಡೆಯುವ ಪ್ರತಿಜ್ಞೆ..

ಗಾಂಧಿ ನೆನಪಿನಲ್ಲಿ ರಾಜ್ಯದ್ಯಂತ ಉಪವಾಸ ಸತ್ಯಾಗ್ರಹ : NPR ಜಾರಿಗೊಳಿಸದಂತೆ ತಡೆಯುವ ಪ್ರತಿಜ್ಞೆ..

ಸಾವಿರಾರು ಜನರು ಇಂದು ಒಂದೇ ದಿನ, ಒಂದೇ ಬಾರಿಗೆ, ಒಂದೇ ವಿಚಾರದ ಕಾರಣಕ್ಕೆ ಉಪವಾಸವಿದ್ದು ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ವಿರೋಧಿಸಿ ಅಪೂರ್ವ ಸತ್ಯಾಗ್ರಹ ಇದಾಗಿದ್ದು ರಾಜ್ಯದ ಜನರ ಗಮನ ಸೆಳೆದಿದೆ.

- Advertisement -
- Advertisement -

ಮಹಾತ್ಮ ಗಾಂಧೀಜಿಯವರು ನಡೆಸಿದ ದಂಡಿ (ಉಪ್ಪಿನ) ಸತ್ಯಾಗ್ರಹದ 90ನೇ ವರ್ಷಾಚರಣೆಯ ನೆನಪು ಹಾಗೂ ಸ್ಫೂರ್ತಿಯಲ್ಲಿ ಸಂವಿಧಾನ ಹಾಗೂ ಪೌರತ್ವದ ಹಕ್ಕುಗಳನ್ನು ಉಳಿಸಿಕೊಳ್ಳಲು ಇಂದು ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉಪವಾಸ ಸತ್ಯಾಗ್ರಹ ನಡೆದಿದ್ದು NPR ಜಾರಿಗೊಳಿಸದಂತೆ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರಗಳನ್ನು ಸಲ್ಲಿಸಲಾಗಿದೆ.

ಸಾವಿರಾರು ಜನರು ಇಂದು ಒಂದೇ ದಿನ, ಒಂದೇ ಬಾರಿಗೆ, ಒಂದೇ ವಿಚಾರದ ಕಾರಣಕ್ಕೆ ಉಪವಾಸವಿದ್ದು ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ವಿರೋಧಿಸಿ ಅಪೂರ್ವ ಸತ್ಯಾಗ್ರಹ ಇದಾಗಿದ್ದು ರಾಜ್ಯದ ಜನರ ಗಮನ ಸೆಳೆದಿದೆ.

ಮೈಸೂರಿನಲ್ಲಿ

ನಾವು ಭಾರತೀಯರು – We the people of India ಜಂಟಿ ಕ್ರಿಯಾ ಸಮಿತಿ – ಕರ್ನಾಟಕ, ಸಂವಿಧಾನ ಉಳಿಸಿ ವೇದಿಕೆಗಳು ಕರೆ ಕೊಟ್ಟಿದ್ದ ಉಪವಾಸ ಸತ್ಯಾಗ್ರಹ ಕಾರ್ಯಕ್ರಮಕ್ಕೆ ಬೆಂಗಳೂರು, ಮೈಸೂರು, ಧಾರವಾಡ, ಹುಬ್ಬಳ್ಳಿ, ರಾಯಚೂರು, ಸಿಂಧನೂರು, ಶಿವಮೊಗ್ಗ, ಬಳ್ಳಾರಿ, ಮಣಿಪಾಲ, ತುಮಕೂರು, ಯಾದಗಿರಿ, ರಾಮನಗರ ಮುಂತಾದ ಸ್ಥಳಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹಿರಿಯ ಸಾಹಿತಿಗಳಾದ ದೇವನೂರು ಮಹಾದೇವ, ಭಾಷಾ ತಜ್ಞರಾದ ಪ್ರೊ.ಜಿ.ಎನ್‌ ಗಣೇಶ್‌ ದೇವಿ, ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ನ್ಯಾಯವಾದಿ ಬಾಲನ್‌ ಸೇರಿದಂತೆ ಹಲವು ಗಣ್ಯರು ಸಹ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದಾರೆ.

ಬೆಂಗಳೂರು

ಭಾರತವನ್ನು ಆಳುತ್ತಿದ್ದ ಬ್ರಿಟಿಷರು, ತಮ್ಮ ಆರ್ಥಿಕ ದಬ್ಬಾಳಿಕೆಯನ್ನು ಮುಂದುವರೆಸುವುದರ ಭಾಗವಾಗಿ ಉಪ್ಪಿನ ಮೇಲೆ ಕರ ವಿಧಿಸಿದ್ದರು. ಅದನ್ನು ವಿರೋಧಿಸಿ ಆಯ್ದ ಸತ್ಯಾಗ್ರಹಿಗಳೊಂದಿಗೆ ಗಾಂಧಿಯವರು ಮಾರ್ಚ್ 12, 1930ರಂದು ದಂಡಿ (ಉಪ್ಪಿನ) ಸತ್ಯಾಗ್ರಹವನ್ನು ಆರಂಭಿಸಿದರು. ಉಪ್ಪು ತಯಾರಿಸಲು ಸಮುದ್ರದೆಡೆಗೆ ನಡೆಸಿದ ಪ್ರಯಾಣ ಅಂದು ಶುರುವಾಗಿತ್ತು. ಅಂತಿಮವಾಗಿ ಸತ್ಯಾಗ್ರಹಿಗಳು ಬಂಧನಕ್ಕೊಳಗಾದರು. ಅಂತಹ ಎಷ್ಟೋ ಬಂಧನಗಳು, ಸಾವುಗಳು, ತ್ಯಾಗ ಬಲಿದಾನಗಳಿಂದ ದೇಶಕ್ಕೆ ಸ್ವಾತಂತ್ರ್ಯ ಮತ್ತು ಸಂವಿಧಾನ ಬಂದವು. ಇಂದು ಈ ಸ್ವಾತಂತ್ರ್ಯ ಹಾಗೂ ಸಂವಿಧಾನಗಳಿಗೆ ಕುತ್ತು ಬಂದಿದೆ. ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾಗದ ಪರಂಪರೆಯುಳ್ಳವರು ದೇಶದಲ್ಲಿ ಅಧಿಕಾರ ಹಿಡಿದಿದ್ದಾರೆ. ಸ್ವಾತಂತ್ರ್ಯ ಚಳವಳಿಯಲ್ಲಿ ಧೀರೋದಾತ್ತವಾಗಿ ಸೆಣೆಸಿದ ಎಲ್ಲ ಧರ್ಮಗಳಿಗೆ ಸೇರಿದವರು, ಆದಿವಾಸಿಗಳು, ದಲಿತರು, ರೈತ ಕಾರ್ಮಿಕರು, ಮಹಿಳೆಯರು ತಾವು ಈ ದೇಶದ ಪೌರರು ಎಂದು ತಾವೇ ಓಟು ಹಾಕಿ ಗೆಲ್ಲಿಸಿದ ಸರ್ಕಾರದ ಮುಂದೆ ಸಾಬೀತು ಮಾಡಬೇಕಾದ ದುಸ್ಥಿತಿ ಬಂದಿದೆ ಎಂದು ಸತ್ಯಾಗ್ರಹಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ

ನಮ್ಮ ಆಂದೋಲನವು ಸ್ವಾತಂತ್ರ್ಯ ಚಳವಳಿಯಲ್ಲಿ ಗಾಂಧಿಯವರು ಹಾಕಿಕೊಟ್ಟ ಪರಂಪರೆಯಂತೆಯೇ ಅಹಿಂಸಾತ್ಮಕವಾಗಿ ಇರಲಿದ್ದು, ಗುರಿ ಮುಟ್ಟುವವರೆಗೂ ನಿಲ್ಲುವುದಿಲ್ಲ ಎಂದು ನಮ್ಮೊಳಗೇ ಆತ್ಯಾನುಸಂಧಾನ ನಡೆಸಿಕೊಳ್ಳುವ ದಿನವಾಗಿಯೂ ಈ ಸತ್ಯಾಗ್ರಹವು ಇರಲಿದೆ ಎಂದು ಸತ್ಯಾಗ್ರಹಿಗಳು ಘೋಷಿಸಿದ್ದಾರೆ. ಹಲವೆಡೆ ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ಎನ್‌ಪಿಆರ್‌ ಜಾರಿಗೊಳಿಸಬಾರದೆಂದು ಹಕ್ಕೊತ್ತಾಯ ಪತ್ರಗಳನ್ನು ಸಲ್ಲಿಸಲಾಗಿದೆ.

ಸಿಂಧನೂರು

ಚಿಕ್ಕಮಗಳೂರು, ಚಿತ್ರದುರ್ಗ, ಹೊಸಪೇಟೆ, ಕೊಪ್ಪಳ, ವಿಜಯಪುರ, ಉಡುಪಿ, ದಾವಣಗೆರೆ ಜಿಲ್ಲೆಗಳಲ್ಲಿ ನಾಳೆ ಉಪವಾಸ ಸತ್ಯಾಗ್ರಹ ನಡೆಸಲು ಯೋಜಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ಅಪಾಯಗಳ ಕುರಿತು ಕಾರ್ಯಗಾರಗಳು ಜರುಗಲಿವೆ.

ಶಿವಮೊಗ್ಗ

ಎನ್‌ಪಿಆರ್‌ ವಿರೋಧಿಸಿ ಮಾರ್ಚ್‌ 29 ಕ್ಕೆ ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ

ಜನಗಣತಿಯೊಂದಿಗೇನೆ ಏಪ್ರಿಲ್‌ 15 ರಿಂದ ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಅನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು ಎಂದು ಜನರು ತಮ್ಮ ಗಟ್ಟಿ ನಿರ್ಧಾರವನ್ನು ಪ್ರಕಟಿಸಲು ಮಾರ್ಚ್‌ 29 ಕ್ಕೆ ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ ನಡೆಸಲು ಸಿದ್ಧತೆ ನಡೆದಿದೆ.

ರಾಯಚೂರು

ಈ ಸಮಾವೇಶದಲ್ಲಿ ಜನಪರ ಸಂಘಟನೆಗಳು, ರಾಜಕೀಯ ಪಕ್ಷಗಳು, ವಿವಿಧ ಧರ್ಮ ಮತ್ತು ಜಾತಿ ಸಂಘಟನೆಗಳು, ರೈತ ಕಾರ್ಮಿಕ ದಲಿತ ಸಂಘಟನೆಗಳು ಸೇರಿದಂತೆ ಲಕ್ಷಾಂತರ ಜನ ಭಾಗವಹಿಸಲಿದ್ದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಡುವ ಹೋರಾಟ ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಧಾರವಾಡ

ಅದಕ್ಕೂ ಸರ್ಕಾರ ಬಗ್ಗದಿದ್ದಲ್ಲಿ ಅಂಬೇಡ್ಕರ್‌ ಜನ್ಮದಿನವಾದ ಏಪ್ರಿಲ್‌ 14 ರಂದು ಮತ್ತೊಂದು ಸುತ್ತಿನ ಬೃಹತ್‌ ಹೋರಾಟ ನಡೆಸುವ ಎಚ್ಚರಿಕೆ ಸಹ ನೀಡಲಾಗಿದೆ. ಒಟ್ಟಿನಲ್ಲಿ ರಾಜ್ಯದಲ್ಲಿ ಎನ್‌ಆರ್‌ಸಿಯ ಮೊದಲ ಹೆಜ್ಜೆಯಾಗಿರುವ ಎನ್‌ಪಿಆರ್‌ ಜಾರಿಯಾಗಬಾರದೆಂಬುದು ನಾವು ಭಾರತೀಯರು ತಂಡದ ಆಗ್ರಹವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...