Homeಮುಖಪುಟತೀವ್ರಗೊಂಡ 'ಲಡಾಖ್ ರಾಜ್ಯತ್ವ' ಹೋರಾಟ: ಲೇಹ್‌ನಲ್ಲಿ ಬೀದಿಗಿಳಿದ ಯುವಜನತೆ

ತೀವ್ರಗೊಂಡ ‘ಲಡಾಖ್ ರಾಜ್ಯತ್ವ’ ಹೋರಾಟ: ಲೇಹ್‌ನಲ್ಲಿ ಬೀದಿಗಿಳಿದ ಯುವಜನತೆ

- Advertisement -
- Advertisement -

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಬುಧವಾರ ಬೆಳಿಗ್ಗೆ (ಸೆ.24) ಲೇಹ್ ನಗರದಲ್ಲಿ ಆಕ್ರೋಶಿತ ಯುವಜನರ ಗುಂಪು ಪೊಲೀಸರೊಂದಿಗೆ ಘರ್ಷಣೆ ನಡೆಸಿದೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರತಿಭಟನಾಕಾರರು, ಪೊಲೀಸ್ ವಾಹನವನ್ನು ಸುಟ್ಟು ಹಾಕಿದ್ದಾರೆ. ಈ ಮೂಲಕ ರಾಜತ್ವಕ್ಕಾಗಿ ನಡೆಯುತ್ತಿರುವ ಹೋರಾಟ ಇದೇ ಮೊದಲ ಬಾರಿಗೆ ಹಿಂಸಾತ್ಮಕ ರೂಪ ಪಡೆದುಕೊಂಡಿದೆ.

ರಾಜ್ಯದ ಸ್ಥಾನಮಾನ ಮತ್ತು ಸಾಂವಿಧಾನಿಕ ರಕ್ಷಣೆಗೆ ಒತ್ತಾಯಿಸಿ ನೂರಾರು ಪ್ರತಿಭಟನಾಕಾರರು ಬುಧವಾರ ಬೆಳಿಗ್ಗೆ ಲೇಹ್‌ನ ಬೀದಿಗಿಳಿದಿದ್ದರು. ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ತಮ್ಮ ರಾಜ್ಯದ ಸ್ಥಾನಮಾನ ಬೇಡಿಕೆಯನ್ನು ಮುಂದಿಟ್ಟು ಇಂದು ಸಂಪೂರ್ಣ ಲಡಾಖ್ ಬಂದ್‌ಗೆ ಕರೆ ನೀಡಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಲೇಹ್‌ನಲ್ಲಿರುವ ಬಿಜೆಪಿ ಕಚೇರಿಯ ಮೇಲೆ ಆಕ್ರೋಶಿತ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಪೊಲೀಸರ ಮೇಲೆ ಕಲ್ಲು ತೂರಿದ್ದು, ಅವರ ವಾಹನವನ್ನು ಸುಟ್ಟುಹಾಕಿದ್ದಾರೆ. ಇದಕ್ಕೆ ಪ್ರತಿಯಾಗಿ, ಪೊಲೀಸರು ಅಶ್ರುವಾಯು, ಶೆಲ್ ದಾಳಿ ಮತ್ತು ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ವರದಿ ವಿವರಿಸಿದೆ.

ಇತ್ತೀಚಿನ ದಿನಗಳಲ್ಲಿ ಲಡಾಖ್‌ನಲ್ಲಿ ಇಂತಹ ಘರ್ಷಣೆ ನಡೆದಿರುವುದು ಇದೇ ಮೊದಲು. ಶೀಘ್ರದಲ್ಲೇ ಕೇಂದ್ರ ಸರ್ಕಾರೊಂದಿಗೆ ಮಾತುಕತೆ ನಡೆಯುವ ಸಾಧ್ಯತೆ ಇದೆ. ಅದಕ್ಕೂ ಮುನ್ನ ಹಿಂಸಾಚಾರ ಭುಗಿಲೆದ್ದಿದೆ. ಲಡಾಖ್ ಜನರ ಬೇಡಿಕೆಗಳ ಕುರಿತು ಮಾತುಕತೆಗಳನ್ನು ಪುನರಾರಂಭಿಸಲು ಕೇಂದ್ರವು ಅಕ್ಟೋಬರ್ 6 ರಂದು ಲಡಾಖ್ ಪ್ರತಿನಿಧಿಗಳೊಂದಿಗೆ ಸಭೆ ಕರೆದಿದೆ.

ಕಳೆದ ಎರಡು ವಾರಗಳಿಂದ, ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಮತ್ತು ಸಂವಿಧಾನದ ಆರನೇ ಪರಿಚ್ಛೇದದ ಅಡಿಯಲ್ಲಿ ಈ ಪ್ರದೇಶವನ್ನು ಸೇರಿಸಬೇಕೆಂದು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಕಳೆದ ಮೂರು ವರ್ಷಗಳಿಂದ, ಲಡಾಖ್‌ನಲ್ಲಿ ಕೇಂದ್ರದ ಆಡಳಿತದ ವಿರುದ್ಧ ಆಕ್ರೋಶ ಹೆಚ್ಚುತ್ತಿದೆ. ಜನರು ತಮ್ಮ ಭೂಮಿ, ಸಂಸ್ಕೃತಿ ಮತ್ತು ಸಂಪನ್ಮೂಲಗಳನ್ನು ರಕ್ಷಿಸಲು ರಾಜ್ಯತ್ವ ಮತ್ತು ಸಾಂವಿಧಾನಿಕ ರಕ್ಷಣೆಗಾಗಿ ಪದೇ ಪದೇ ಒತ್ತಾಯಿಸುತ್ತಿದ್ದಾರೆ.

ಲಡಾಖ್‌ನ ಭೂಮಿ, ಸಂಸ್ಕೃತಿ ಮತ್ತು ಸಂಪನ್ಮೂಲಗಳ ರಕ್ಷಣೆಗಾಗಿ ಲಡಾಖ್‌ ಅನ್ನು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು, ಲಡಾಖ್‌ಗೆ ರಾಜ್ಯತ್ವ ಸ್ಥಾನಮಾನ ನೀಡಬೇಕು, ಸ್ಥಳೀಯ ಉದ್ಯೋಗಕ್ಕಾಗಿ ಸಾರ್ವಜನಿಕ ಸೇವಾ ಆಯೋಗ (ಪಿಎಸ್‌ಎ) ರಚಿಸಬೇಕು, ಲೇಹ್ ಮತ್ತು ಕಾರ್ಗಿಲ್‌ಗೆ ತಲಾ ಒಂದು ಲೋಕಸಭೆ ಸ್ಥಾನ ನೀಡಬೇಕು ಎಂಬ ಒಟ್ಟು ಪ್ರಮುಖ ನಾಲ್ಕು ಬೇಡಿಕೆಗಳನ್ನು ಮುಂದಿಟ್ಟುಕೊಂಡು 2019ರ ನಂತರದಿಂದ ಲಡಾಖ್‌ನಲ್ಲಿ ನಿರಂತರವಾಗಿ ಪ್ರತಿಭಟನೆಗಳು ನಡೆಯುತ್ತಿವೆ.

370ನೇ ವಿಧಿಯನ್ನು ರದ್ದುಪಡಿಸಿ ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ವಿಭಜಿಸಿದ ನಂತರ, ಆಗಸ್ಟ್ 2019ರಲ್ಲಿ ಲಡಾಖ್ ಅನ್ನು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲಾಯಿತು. ಆ ಸಮಯದಲ್ಲಿ, ವಾಂಗ್‌ಚುಕ್ ಸೇರಿದಂತೆ ಲೇಹ್‌ನ ಅನೇಕರು ಈ ಕ್ರಮವನ್ನು ಸ್ವಾಗತಿಸಿದ್ದರು. ಆದರೆ, ಆ ಬಳಿಕ ಲೆಫ್ಟಿನೆಂಟ್ ಗವರ್ನರ್‌ ಆಡಳಿತದ ವಿರುದ್ದ ಜನರು ಅಸಮಾಧಾನಗೊಂಡಿದ್ದಾರೆ. ರಾಜ್ಯದ ಸ್ಥಾನಮಾನಕ್ಕೆ ಆಗ್ರಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಅಸಮಾಧಾನವು ದೊಡ್ಡ ಪ್ರಮಾಣದ ಪ್ರತಿಭಟನೆಗಳು ಮತ್ತು ಉಪವಾಸ ಸತ್ಯಾಗ್ರಹಗಳಿಗೆ ಕಾರಣವಾಗಿದೆ. ಮೊದಲ ಬಾರಿಗೆ, ಬೌದ್ಧರು ಬಹುಸಂಖ್ಯಾತರಾಗಿರುವ ಲೇಹ್ ಮತ್ತು ಮುಸ್ಲಿಂ ಬಹುಸಂಖ್ಯಾತರಾಗಿರುವ ಕಾರ್ಗಿಲ್‌ನ ರಾಜಕೀಯ ಮತ್ತು ಧಾರ್ಮಿಕ ಗುಂಪುಗಳು ‘ಲೇಹ್‌ನ ಅಪೆಕ್ಸ್ ಬಾಡಿ’ ಮತ್ತು ‘ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್’ ಎಂಬ ಜಂಟಿ ವೇದಿಕೆಯಡಿ ಒಂದಾಗಿವೆ.

ಪ್ರತಿಭಟನೆಗಳ ಹಿನ್ನೆಲೆ, ಕೇಂದ್ರ ಸರ್ಕಾರ ಲಡಾಖ್‌ನ ಬೇಡಿಕೆಗಳನ್ನು ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಆದಾಗ್ಯೂ, ಹಲವು ಸುತ್ತಿನ ಮಾತುಕತೆಗಳಿಂದ ಯಾವುದೇ ಪ್ರಗತಿ ಕಂಡಿಲ್ಲ. ಕಳೆದ ಮಾರ್ಚ್‌ನಲ್ಲಿ, ಲಡಾಖ್ ಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ಆದರೆ, ಸ್ಥಳೀಯ ನಾಯಕರು ಗೃಹ ಸಚಿವರು ತಮ್ಮ ಪ್ರಮುಖ ಬೇಡಿಕೆಗಳನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿಕೊಂಡ ನಂತರ ಆ ಮಾತುಕತೆ ವಿಫಲವಾಯಿತು.

“ಸಭೆಯಲ್ಲಿ ಗೃಹ ಸಚಿವರು ಲಡಾಖ್ ಅನ್ನು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸುವ ಮೂಲಕ ತಪ್ಪು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆದರೆ, ಅವರು ರಾಜ್ಯದ ಸ್ಥಾನಮಾನ ಮತ್ತು ಆರನೇ ಶೆಡ್ಯೂಲ್‌ನ ನಮ್ಮ ಬೇಡಿಕೆಯನ್ನು ತಿರಸ್ಕರಿಸಿದ್ದಾರೆ” ಎಂದು ಸಭೆಯಲ್ಲಿ ಭಾಗವಹಿಸಿದ್ದ ನಾಯಕರೊಬ್ಬರು ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಬಜರಂಗದಳದಿಂದ ಮತಾಂತರ ಆರೋಪ: ಕ್ರೈಸ್ತ ಸನ್ಯಾಸಿನಿ, 19 ಆದಿವಾಸಿ ಅಪ್ರಾಪ್ತರನ್ನು ವಿಚಾರಣೆಗೊಳಪಡಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...