Homeಮುಖಪುಟಅಲೋಪತಿ ವಿರುದ್ದ ಹೇಳಿಕೆ: ವಿವಾದಿತ ಯೋಗಗುರು ರಾಮ್‌ದೇವ್‌ ವಿರುದ್ದದ ಅರ್ಜಿ‌ ಸೋಮವಾರ ವಿಚಾರಣೆಗೆ

ಅಲೋಪತಿ ವಿರುದ್ದ ಹೇಳಿಕೆ: ವಿವಾದಿತ ಯೋಗಗುರು ರಾಮ್‌ದೇವ್‌ ವಿರುದ್ದದ ಅರ್ಜಿ‌ ಸೋಮವಾರ ವಿಚಾರಣೆಗೆ

- Advertisement -
- Advertisement -

ಕೊರೊನಾ ಎರಡನೆ ಅಲೆಯ ಸಮಯದಲ್ಲಿ ಅಲೋಪತಿ ವಿರುದ್ಧ ತಪ್ಪು ಮಾಹಿತಿ ಹರಡಿದ್ದಾರೆ ಎಂಬ ಆರೋಪದಡಿ ವಿವಾದಿತ ಯೋಗ ಗುರು ರಾಮ್‌ದೇವ್‌ ವಿರುದ್ಧ ಏಳು ವೈದ್ಯರ ಸಂಘಗಳು ಸಲ್ಲಿಸಿರುವ ಮನವಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿ ಸಿ. ಹರಿ ಶಂಕರ್ ಅವರು ಈ ಪ್ರಕರಣವನ್ನು ವಿಚಾರಣೆ ನಡೆಸಲಿದ್ದಾರೆ.

ನ್ಯಾಯಮೂರ್ತಿ ಸಿ. ಹರಿ ಶಂಕರ್ ಈ ಹಿಂದೆ ವೈದ್ಯರ ಸಂಘಗಳಿಗೆ ಆಪಾದಿತ ತಪ್ಪು ಮಾಹಿತಿ ನೀಡಿದ ವೀಡಿಯೊಗಳನ್ನು ಸಲ್ಲಿಸುವಂತೆ ಕೇಳಿದ್ದರು. ರಾಮ್‌ದೇವ್ ವಿರುದ್ದ ಒಟ್ಟು ಏಳು ವೈದ್ಯರ ಸಂಘಗಳು ಒಟ್ಟಾಗಿ ನ್ಯಾಯಾಲಯದ ಮೆಟ್ಟಿಲನ್ನು ಹತ್ತಿದ್ದವು.

ಕೊರೊನಾ ಸೋಂಕಿತ ರೋಗಿಗಳ ಹಲವಾರು ಜನರ ಸಾವಿಗೆ ಅಲೋಪತಿಯೆ ಕಾರಣ ಮತ್ತು ಅಲೋಪತಿ ವೈದ್ಯರು ರೋಗಿಗಳ ಸಾವಿಗೆ ಕಾರಣರಾಗುತ್ತಿದ್ದಾರೆ ಎಂದು ರಾಮ್‌ದೇವ್‌ ಪ್ರತಿಪಾದಿಸಿದ್ದು, ಅವರು ಸಾರ್ವಜನಿಕರನ್ನು ತಪ್ಪುದಾರಿಗೆಳೆಯುತ್ತಿದ್ದಾರೆ ಎಂದು ವೈದ್ಯರ ಸಂಘಗಳು ಆರೋಪಿಸಿದ್ದವು.

ಇದನ್ನೂ ಓದಿ: ಅಲೋಪತಿ ವೈದ್ಯರ ವಿರುದ್ಧ ಅವಹೇಳನ: ವಿಚಾರಣೆಗೆ ತಡೆಯೊಡ್ಡಲು ಸುಪ್ರೀಂ ಮೊರೆ ಹೋದ ಬಾಬಾ ರಾಮದೇವ್

ಅಲೋಪತಿ ಚಿಕಿತ್ಸೆಗಳು ಮಾತ್ರವಲ್ಲದೆ, ಕೊರೊನಾ ಲಸಿಕೆಗಳ ಸುರಕ್ಷತೆ ಮತ್ತು ಪರಿಣಾಮಕಾರಿತ್ವ ಸಂಬಂಧಿಸಿದಂತೆ ರಾಮ್‌ದೇವ್‌ ಸಾರ್ವಜನಿಕರ ಮನಸ್ಸಿನಲ್ಲಿ ಅನುಮಾನಗಳನ್ನು ಬಿತ್ತುತ್ತಿದ್ದಾರೆ ಎಂದು ಸಂಘಗಳು ತಮ್ಮ ಮನವಿಯಲ್ಲಿ ದೂರಿದ್ದವು.

ರಾಮ್ದೇವ್‌ ಪ್ರಭಾವಶಾಲಿ ವ್ಯಕ್ತಿಯಾಗಿರುವುದರಿಂದ ಅವರ ಹೇಳಿಕೆಗಳು ಲಕ್ಷಾಂತರ ಜನರ ಮೇಲೆ ಪ್ರಭಾವ ಬೀರಬಹುದಾಗಿದ್ದು, ಜನರು ಅಲೋಪಥಿಕ್ ಚಿಕಿತ್ಸೆಯಿಂದ ದೂರ ಸರಿಯಲು ಈ ಹೇಳಿಕೆ ಕಾರಣವಾಗಬಹುದು ಎಂದು ಮನವಿಯಲ್ಲಿ ಹೇಳಿದ್ದಾರೆ.

ಅಲೋಪತಿ ಔಷಧಿಗಳ ವಿರುದ್ಧದ ಹೇಳಿಕೆಗಳು ಮತ್ತು ಪತಂಜಲಿಯ ಕೊರೊನಿಲ್ ಕಿಟ್‌ಗೆ ಸಂಬಂಧಿಸಿದ ಪ್ರತಿಪಾದನೆಗೆ ಸಂಬಂಧಿಸಿದಂತೆ ದೆಹಲಿ ವೈದ್ಯಕೀಯ ಸಂಘವು ಸಲ್ಲಿಸಿದ್ದ ಮನವಿಯ ಮೇರೆಗೆ ನ್ಯಾಯಾಲಯವು ಜೂನ್ 3 ರಂದು ರಾಮದೇವ್‌ಗೆ ಸಮನ್ಸ್ ಜಾರಿಗೊಳಿಸಿತ್ತು.

ಇದನ್ನೂ ಓದಿ: ಬಾಬಾ ರಾಮದೇವ್ ವಿರುದ್ಧ ಎಫ್‌ಐಆರ್ ದಾಖಲಿಸಿದ ಛತ್ತೀಸ್‌ಗಢ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...