Homeಮುಖಪುಟಅಲೋಪತಿ ವಿರುದ್ದ ಹೇಳಿಕೆ: ವಿವಾದಿತ ಯೋಗಗುರು ರಾಮ್‌ದೇವ್‌ ವಿರುದ್ದದ ಅರ್ಜಿ‌ ಸೋಮವಾರ ವಿಚಾರಣೆಗೆ

ಅಲೋಪತಿ ವಿರುದ್ದ ಹೇಳಿಕೆ: ವಿವಾದಿತ ಯೋಗಗುರು ರಾಮ್‌ದೇವ್‌ ವಿರುದ್ದದ ಅರ್ಜಿ‌ ಸೋಮವಾರ ವಿಚಾರಣೆಗೆ

- Advertisement -
- Advertisement -

ಕೊರೊನಾ ಎರಡನೆ ಅಲೆಯ ಸಮಯದಲ್ಲಿ ಅಲೋಪತಿ ವಿರುದ್ಧ ತಪ್ಪು ಮಾಹಿತಿ ಹರಡಿದ್ದಾರೆ ಎಂಬ ಆರೋಪದಡಿ ವಿವಾದಿತ ಯೋಗ ಗುರು ರಾಮ್‌ದೇವ್‌ ವಿರುದ್ಧ ಏಳು ವೈದ್ಯರ ಸಂಘಗಳು ಸಲ್ಲಿಸಿರುವ ಮನವಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿ ಸಿ. ಹರಿ ಶಂಕರ್ ಅವರು ಈ ಪ್ರಕರಣವನ್ನು ವಿಚಾರಣೆ ನಡೆಸಲಿದ್ದಾರೆ.

ನ್ಯಾಯಮೂರ್ತಿ ಸಿ. ಹರಿ ಶಂಕರ್ ಈ ಹಿಂದೆ ವೈದ್ಯರ ಸಂಘಗಳಿಗೆ ಆಪಾದಿತ ತಪ್ಪು ಮಾಹಿತಿ ನೀಡಿದ ವೀಡಿಯೊಗಳನ್ನು ಸಲ್ಲಿಸುವಂತೆ ಕೇಳಿದ್ದರು. ರಾಮ್‌ದೇವ್ ವಿರುದ್ದ ಒಟ್ಟು ಏಳು ವೈದ್ಯರ ಸಂಘಗಳು ಒಟ್ಟಾಗಿ ನ್ಯಾಯಾಲಯದ ಮೆಟ್ಟಿಲನ್ನು ಹತ್ತಿದ್ದವು.

ಕೊರೊನಾ ಸೋಂಕಿತ ರೋಗಿಗಳ ಹಲವಾರು ಜನರ ಸಾವಿಗೆ ಅಲೋಪತಿಯೆ ಕಾರಣ ಮತ್ತು ಅಲೋಪತಿ ವೈದ್ಯರು ರೋಗಿಗಳ ಸಾವಿಗೆ ಕಾರಣರಾಗುತ್ತಿದ್ದಾರೆ ಎಂದು ರಾಮ್‌ದೇವ್‌ ಪ್ರತಿಪಾದಿಸಿದ್ದು, ಅವರು ಸಾರ್ವಜನಿಕರನ್ನು ತಪ್ಪುದಾರಿಗೆಳೆಯುತ್ತಿದ್ದಾರೆ ಎಂದು ವೈದ್ಯರ ಸಂಘಗಳು ಆರೋಪಿಸಿದ್ದವು.

ಇದನ್ನೂ ಓದಿ: ಅಲೋಪತಿ ವೈದ್ಯರ ವಿರುದ್ಧ ಅವಹೇಳನ: ವಿಚಾರಣೆಗೆ ತಡೆಯೊಡ್ಡಲು ಸುಪ್ರೀಂ ಮೊರೆ ಹೋದ ಬಾಬಾ ರಾಮದೇವ್

ಅಲೋಪತಿ ಚಿಕಿತ್ಸೆಗಳು ಮಾತ್ರವಲ್ಲದೆ, ಕೊರೊನಾ ಲಸಿಕೆಗಳ ಸುರಕ್ಷತೆ ಮತ್ತು ಪರಿಣಾಮಕಾರಿತ್ವ ಸಂಬಂಧಿಸಿದಂತೆ ರಾಮ್‌ದೇವ್‌ ಸಾರ್ವಜನಿಕರ ಮನಸ್ಸಿನಲ್ಲಿ ಅನುಮಾನಗಳನ್ನು ಬಿತ್ತುತ್ತಿದ್ದಾರೆ ಎಂದು ಸಂಘಗಳು ತಮ್ಮ ಮನವಿಯಲ್ಲಿ ದೂರಿದ್ದವು.

ರಾಮ್ದೇವ್‌ ಪ್ರಭಾವಶಾಲಿ ವ್ಯಕ್ತಿಯಾಗಿರುವುದರಿಂದ ಅವರ ಹೇಳಿಕೆಗಳು ಲಕ್ಷಾಂತರ ಜನರ ಮೇಲೆ ಪ್ರಭಾವ ಬೀರಬಹುದಾಗಿದ್ದು, ಜನರು ಅಲೋಪಥಿಕ್ ಚಿಕಿತ್ಸೆಯಿಂದ ದೂರ ಸರಿಯಲು ಈ ಹೇಳಿಕೆ ಕಾರಣವಾಗಬಹುದು ಎಂದು ಮನವಿಯಲ್ಲಿ ಹೇಳಿದ್ದಾರೆ.

ಅಲೋಪತಿ ಔಷಧಿಗಳ ವಿರುದ್ಧದ ಹೇಳಿಕೆಗಳು ಮತ್ತು ಪತಂಜಲಿಯ ಕೊರೊನಿಲ್ ಕಿಟ್‌ಗೆ ಸಂಬಂಧಿಸಿದ ಪ್ರತಿಪಾದನೆಗೆ ಸಂಬಂಧಿಸಿದಂತೆ ದೆಹಲಿ ವೈದ್ಯಕೀಯ ಸಂಘವು ಸಲ್ಲಿಸಿದ್ದ ಮನವಿಯ ಮೇರೆಗೆ ನ್ಯಾಯಾಲಯವು ಜೂನ್ 3 ರಂದು ರಾಮದೇವ್‌ಗೆ ಸಮನ್ಸ್ ಜಾರಿಗೊಳಿಸಿತ್ತು.

ಇದನ್ನೂ ಓದಿ: ಬಾಬಾ ರಾಮದೇವ್ ವಿರುದ್ಧ ಎಫ್‌ಐಆರ್ ದಾಖಲಿಸಿದ ಛತ್ತೀಸ್‌ಗಢ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...