Homeಮುಖಪುಟಅಲೋಪತಿ ವಿರುದ್ದ ಹೇಳಿಕೆ: ವಿವಾದಿತ ಯೋಗಗುರು ರಾಮ್‌ದೇವ್‌ ವಿರುದ್ದದ ಅರ್ಜಿ‌ ಸೋಮವಾರ ವಿಚಾರಣೆಗೆ

ಅಲೋಪತಿ ವಿರುದ್ದ ಹೇಳಿಕೆ: ವಿವಾದಿತ ಯೋಗಗುರು ರಾಮ್‌ದೇವ್‌ ವಿರುದ್ದದ ಅರ್ಜಿ‌ ಸೋಮವಾರ ವಿಚಾರಣೆಗೆ

- Advertisement -
- Advertisement -

ಕೊರೊನಾ ಎರಡನೆ ಅಲೆಯ ಸಮಯದಲ್ಲಿ ಅಲೋಪತಿ ವಿರುದ್ಧ ತಪ್ಪು ಮಾಹಿತಿ ಹರಡಿದ್ದಾರೆ ಎಂಬ ಆರೋಪದಡಿ ವಿವಾದಿತ ಯೋಗ ಗುರು ರಾಮ್‌ದೇವ್‌ ವಿರುದ್ಧ ಏಳು ವೈದ್ಯರ ಸಂಘಗಳು ಸಲ್ಲಿಸಿರುವ ಮನವಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿ ಸಿ. ಹರಿ ಶಂಕರ್ ಅವರು ಈ ಪ್ರಕರಣವನ್ನು ವಿಚಾರಣೆ ನಡೆಸಲಿದ್ದಾರೆ.

ನ್ಯಾಯಮೂರ್ತಿ ಸಿ. ಹರಿ ಶಂಕರ್ ಈ ಹಿಂದೆ ವೈದ್ಯರ ಸಂಘಗಳಿಗೆ ಆಪಾದಿತ ತಪ್ಪು ಮಾಹಿತಿ ನೀಡಿದ ವೀಡಿಯೊಗಳನ್ನು ಸಲ್ಲಿಸುವಂತೆ ಕೇಳಿದ್ದರು. ರಾಮ್‌ದೇವ್ ವಿರುದ್ದ ಒಟ್ಟು ಏಳು ವೈದ್ಯರ ಸಂಘಗಳು ಒಟ್ಟಾಗಿ ನ್ಯಾಯಾಲಯದ ಮೆಟ್ಟಿಲನ್ನು ಹತ್ತಿದ್ದವು.

ಕೊರೊನಾ ಸೋಂಕಿತ ರೋಗಿಗಳ ಹಲವಾರು ಜನರ ಸಾವಿಗೆ ಅಲೋಪತಿಯೆ ಕಾರಣ ಮತ್ತು ಅಲೋಪತಿ ವೈದ್ಯರು ರೋಗಿಗಳ ಸಾವಿಗೆ ಕಾರಣರಾಗುತ್ತಿದ್ದಾರೆ ಎಂದು ರಾಮ್‌ದೇವ್‌ ಪ್ರತಿಪಾದಿಸಿದ್ದು, ಅವರು ಸಾರ್ವಜನಿಕರನ್ನು ತಪ್ಪುದಾರಿಗೆಳೆಯುತ್ತಿದ್ದಾರೆ ಎಂದು ವೈದ್ಯರ ಸಂಘಗಳು ಆರೋಪಿಸಿದ್ದವು.

ಇದನ್ನೂ ಓದಿ: ಅಲೋಪತಿ ವೈದ್ಯರ ವಿರುದ್ಧ ಅವಹೇಳನ: ವಿಚಾರಣೆಗೆ ತಡೆಯೊಡ್ಡಲು ಸುಪ್ರೀಂ ಮೊರೆ ಹೋದ ಬಾಬಾ ರಾಮದೇವ್

ಅಲೋಪತಿ ಚಿಕಿತ್ಸೆಗಳು ಮಾತ್ರವಲ್ಲದೆ, ಕೊರೊನಾ ಲಸಿಕೆಗಳ ಸುರಕ್ಷತೆ ಮತ್ತು ಪರಿಣಾಮಕಾರಿತ್ವ ಸಂಬಂಧಿಸಿದಂತೆ ರಾಮ್‌ದೇವ್‌ ಸಾರ್ವಜನಿಕರ ಮನಸ್ಸಿನಲ್ಲಿ ಅನುಮಾನಗಳನ್ನು ಬಿತ್ತುತ್ತಿದ್ದಾರೆ ಎಂದು ಸಂಘಗಳು ತಮ್ಮ ಮನವಿಯಲ್ಲಿ ದೂರಿದ್ದವು.

ರಾಮ್ದೇವ್‌ ಪ್ರಭಾವಶಾಲಿ ವ್ಯಕ್ತಿಯಾಗಿರುವುದರಿಂದ ಅವರ ಹೇಳಿಕೆಗಳು ಲಕ್ಷಾಂತರ ಜನರ ಮೇಲೆ ಪ್ರಭಾವ ಬೀರಬಹುದಾಗಿದ್ದು, ಜನರು ಅಲೋಪಥಿಕ್ ಚಿಕಿತ್ಸೆಯಿಂದ ದೂರ ಸರಿಯಲು ಈ ಹೇಳಿಕೆ ಕಾರಣವಾಗಬಹುದು ಎಂದು ಮನವಿಯಲ್ಲಿ ಹೇಳಿದ್ದಾರೆ.

ಅಲೋಪತಿ ಔಷಧಿಗಳ ವಿರುದ್ಧದ ಹೇಳಿಕೆಗಳು ಮತ್ತು ಪತಂಜಲಿಯ ಕೊರೊನಿಲ್ ಕಿಟ್‌ಗೆ ಸಂಬಂಧಿಸಿದ ಪ್ರತಿಪಾದನೆಗೆ ಸಂಬಂಧಿಸಿದಂತೆ ದೆಹಲಿ ವೈದ್ಯಕೀಯ ಸಂಘವು ಸಲ್ಲಿಸಿದ್ದ ಮನವಿಯ ಮೇರೆಗೆ ನ್ಯಾಯಾಲಯವು ಜೂನ್ 3 ರಂದು ರಾಮದೇವ್‌ಗೆ ಸಮನ್ಸ್ ಜಾರಿಗೊಳಿಸಿತ್ತು.

ಇದನ್ನೂ ಓದಿ: ಬಾಬಾ ರಾಮದೇವ್ ವಿರುದ್ಧ ಎಫ್‌ಐಆರ್ ದಾಖಲಿಸಿದ ಛತ್ತೀಸ್‌ಗಢ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...