Homeಮುಖಪುಟಕರ್ನಲ್ ಸೋಫಿಯಾ ಖುರೇಷಿ ಅವಹೇಳನ | ಬಿಜೆಪಿ ಸಚಿವ ಶಾ ವಿರುದ್ಧ ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್...

ಕರ್ನಲ್ ಸೋಫಿಯಾ ಖುರೇಷಿ ಅವಹೇಳನ | ಬಿಜೆಪಿ ಸಚಿವ ಶಾ ವಿರುದ್ಧ ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್ ಆದೇಶ

- Advertisement -
- Advertisement -

‘ಆಪರೇಷನ್ ಸಿಂಧೂರ’ ಮಿಲಿಟರಿ ಕಾರ್ಯಾಚರಣೆ ಸಂದರ್ಭದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಮತ್ತು ಕೋಮುವಾದಿ ಹೇಳಿಕೆ ನೀಡಿದ್ದ ಬಿಜೆಪಿ ಸಚಿವ ಕುನ್ವರ್ ವಿಜಯ್ ಶಾ ಅವರ ಪ್ರಕರಣದ ತನಿಖೆ ನಡೆಸಲು ಸುಪ್ರೀಂಕೋರ್ಟ್ ಶುಕ್ರವಾರ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಆದೇಶಿಸಿದೆ.

ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್ ಕೋಟೀಶ್ವರ್ ಸಿಂಗ್ ಅವರ ಪೀಠವು ನಾಳೆಯೊಳಗೆ ಮಧ್ಯಪ್ರದೇಶ ಕೇಡರ್‌ನ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ಎಸ್‌ಐಟಿ ರಚಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಆದೇಶಿಸಿದೆ. ಆದಾಗ್ಯೂ, ಐಪಿಎಸ್ ಅಧಿಕಾರಿಗಳು ಮಧ್ಯಪ್ರದೇಶದ ಹೊರಗಿನವರಾಗಿರಬೇಕು ಎಂದು ಅದು ಹೇಳಿದೆ.

“ನಾವು ಮೂವರು ಐಪಿಎಸ್ ಅಧಿಕಾರಿಗಳನ್ನು ಹೊಂದಿರುವ ಎಸ್‌ಐಟಿಯನ್ನು ರಚಿಸುತ್ತಿದ್ದೇವೆ. ಅದರಲ್ಲಿ ಒಬ್ಬರು ಐಜಿ ಅಥವಾ ಡಿಜಿಪಿ ಶ್ರೇಣಿಯವರಾಗಿರಬೇಕು. ಅವರೆಲ್ಲರೂ ರಾಜ್ಯದ ಹೊರಗಿನವರಾಗಿರಬೇಕು. ಇದು ಒಂದು ಅಗ್ನಿ ಪರೀಕ್ಷೆಯಾಗಿದ್ದು, ರಾಜ್ಯವು ಎಸ್‌ಐಟಿ ವರದಿಯನ್ನು ನಮಗೆ ಸಲ್ಲಿಸಬೇಕೆಂದು ನಾವು ಬಯಸುತ್ತೇವೆ. ನಾವು ಇದನ್ನು ಬಹಳ ನಿಕಟವಾಗಿ ಗಮನಿಸಲು ಬಯಸುತ್ತೇವೆ” ಎಂದು ನ್ಯಾಯಾಲಯ ಹೇಳಿದೆ.

ಈ ಮಧ್ಯೆ, ನ್ಯಾಯಾಲಯವು ಸಚಿವ ಶಾ ಅವರ ಬಂಧನವನ್ನು ತಡೆಹಿಡಿದು ತನಿಖೆಗೆ ಸಹಕರಿಸುವಂತೆ ಆದೇಶಿಸಿದೆ. ವಿಚಾರಣೆಯ ಸಮಯದಲ್ಲಿ, ಶಾ ಅವರ ಕ್ಷಮೆಯಾಚನೆಯನ್ನು ಪ್ರಶ್ನಿಸಿದ ನ್ಯಾಯಾಲಯ, ತಮ್ಮ ಮಾತುಗಳಿಗೆ ಕ್ಷಮೆಯಾಚಿಸಲು ಅವರು ಯಾವುದೇ ನ್ಯಾಯಾಂಗ ನಿಂದನೆ ಮಾಡಿಲ್ಲ ಎಂದು ಹೇಳಿದೆ. “ಇದು ನೀವು ಸಂಪೂರ್ಣವಾಗಿ ವಿವೇಕಯಿಲ್ಲದೆ ಮಾಡಿದ ಈ ರೀತಿಯ ಅಸಭ್ಯ ಹೇಳಿಕೆಗಳು… ನಮಗೆ ಈ ಕ್ಷಮೆಯಾಚನೆಯ ಅಗತ್ಯವಿಲ್ಲ” ಎಂದು ನ್ಯಾಯಾಲಯವು ಅವರ ಕ್ಷಮೆ ಯಾಚನೆಯನ್ನು ತಿರಸ್ಕರಿಸಿದ್ದು, ಇದು ಪರಿಣಾಮಗಳಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಎಂದು ಹೇಳಿದೆ.

ಈ ವಿಷಯದಲ್ಲಿ ಸರ್ಕಾರದ ನಿಷ್ಕ್ರಿಯತೆಯನ್ನು ನ್ಯಾಯಾಲಯವು ಇದೆ ವೇಳೆ ಪ್ರಶ್ನಿಸಿದೆ. “ಎಫ್‌ಐಆರ್ ದಾಖಲಿಸಿದ ನಂತರ ನೀವು ಏನು ಮಾಡಿದ್ದೀರಿ? ಅವರು [SHO] ಯಾವ ರೀತಿಯ ಅಪರಾಧವನ್ನು ಮಾಡಿದ್ದಾರೆಂದು ಪರಿಶೀಲಿಸಿದ್ದಾರೆಯೇ? ಅದರ ಸ್ಥಿತಿ ಏನು” ಎಂದು ಅದು ಕೇಳಿದೆ. ಸರ್ಕಾರವು ಅವರ ವಿರುದ್ಧ ಮತ್ತಷ್ಟು ಕ್ರಮ ಕೈಗೊಳ್ಳಬೇಕಿತ್ತು ನ್ಯಾಯಾಲಯವು ಹೇಳಿದೆ.

ಮಧ್ಯಪ್ರದೇಶ ಹೈಕೋರ್ಟ್ ಮೇ 14 ರಂದು ಸಚಿವ ಶಾ ವಿರುದ್ಧ ಸ್ವಯಂಪ್ರೇರಿತ ಪ್ರಕರಣವನ್ನು ಆರಂಭಿಸಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ನಿರ್ದೇಶಿಸಿತು. ನಂತರ ಅವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

“ಅವರ ಹೇಳಿಕೆಗಳು ಆ ಅಧಿಕಾರಿಗೆ ಮಾತ್ರವಲ್ಲ, ಸಶಸ್ತ್ರ ಪಡೆಗಳಿಗೂ ಅವಹೇಳನಕಾರಿ ಮತ್ತು ಅಪಾಯಕಾರಿ,” ಎಂದು ಕಳೆದ ವಾರ ಹೈಕೋರ್ಟ್ ಅವರ ಹೇಳಿಕೆಗಳ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿತ್ತು. ಕರ್ನಲ್ ಸೋಫಿಯಾ ಖುರೇಷಿ ಅವರನ್ನು “ಭಯೋತ್ಪಾದಕರ ಸಹೋದರಿ” ಎಂದು ಕರೆದು ಸಚಿವ ಶಾ “ಗಟಾರಗಳ ಭಾಷೆ”ಯನ್ನು ಬಳಸಿದ್ದಾರೆ ಎಂದು ಹೈಕೋರ್ಟ್ ಹೇಳಿತ್ತು.

ಹೈಕೋರ್ಟ್ ಆದೇಶದ ನಂತರ, ಮೇ 14 ರಂದು ತಡರಾತ್ರಿ ಸಚಿವ ಶಾ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 152, 196(1)(ಬಿ), ಮತ್ತು 197(1)(ಸಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಯಿತು. ಮೇ 15 ರಂದು, ಆರೋಪಿಗಳ ಕ್ರಮಗಳನ್ನು ಸ್ಪಷ್ಟವಾಗಿ ಉಲ್ಲೇಖಿಸದ ಕಾರಣ ಮುಂದೊಂದು ದಿನ ರದ್ದಾಗಬಹುದಾದ ಗಂಭೀರವಲ್ಲದ ರೀತಿಯಲ್ಲಿ ಎಫ್‌ಐಆರ್ ರಚಿಸಿದ್ದಕ್ಕಾಗಿ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಲವಂತದ ಅಥವಾ ವಂಚನೆಯ ಧಾರ್ಮಿಕ ಮತಾಂತರವನ್ನು ಸಂವಿಧಾನ ಬೆಂಬಲಿಸುವುದಿಲ್ಲ: ಅಲಹಾಬಾದ್ ಹೈಕೋರ್ಟ್

ಬಲವಂತದ ಅಥವಾ ವಂಚನೆಯ ಧಾರ್ಮಿಕ ಮತಾಂತರವನ್ನು ಸಂವಿಧಾನ ಬೆಂಬಲಿಸುವುದಿಲ್ಲ: ಅಲಹಾಬಾದ್ ಹೈಕೋರ್ಟ್

ಇದನ್ನೂಓದಿ:    ಬೆಳಗಾವಿಯಲ್ಲಿ ಕುರಾನ್ ಅಪವಿತ್ರ ಪ್ರಕರಣ: ಸಾವಿರಾರು ಜನರಿಂದ ಶಾಂತಿಯುತ ಪ್ರತಿಭಟನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....