Homeಮುಖಪುಟಕುಕಿಗಳ ವಿರುದ್ಧದ ಹೇಳಿಕೆ ವಾಪಾಸ್ | ಕುಕಿ ಉಗ್ರರಿಂದ ದಾಳಿ ಎಂದಿದ್ದ ಮಣಿಪುರ ಸರ್ಕಾರ!

ಕುಕಿಗಳ ವಿರುದ್ಧದ ಹೇಳಿಕೆ ವಾಪಾಸ್ | ಕುಕಿ ಉಗ್ರರಿಂದ ದಾಳಿ ಎಂದಿದ್ದ ಮಣಿಪುರ ಸರ್ಕಾರ!

- Advertisement -
- Advertisement -

‘900 ಕುಕಿ ಉಗ್ರಗಾಮಿಗಳು ಸೆಪ್ಟೆಂಬರ್ 28 ರ ಸುಮಾರಿಗೆ ಇಂಫಾಲ್ ಕಣಿವೆಯ ಜಿಲ್ಲೆಗಳ ಹೊರಗಿನ ಗ್ರಾಮಗಳ ಮೇಲೆ ದಾಳಿ ಮಾಡಲು ಯೋಜಿಸುತ್ತಿದ್ದಾರೆ’ ಎಂದು ಹೇಳಿದ್ದ ಮಣಿಪುರ ಸರ್ಕಾರ ತನ್ನ ಹೇಳಿಕೆಯನ್ನು ಕೆಲವು ದಿನಗಳ ನಂತರ ವಾಪಾಸು ಪಡೆದಿದೆ. ಈ ಹೇಳಿಕೆ ಆಧಾರ ರಹಿತವಾಗಿದ್ದು, ಸಶಸ್ತ್ರ ಗುಂಪುಗಳ ಈ ರೀತಿಯ ಯಾವುದೇ ದುಷ್ಕೃತ್ಯಗಳ ಸಾಧ್ಯತೆಯು ಕಡಿಮೆಯಾಗಿದೆ ಎಂದು ಸರ್ಕಾರ ಪ್ರತಿಪಾದಿಸಿದೆ.ಕುಕಿಗಳ ವಿರುದ್ಧದ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬುಧವಾರ ಜಂಟಿ ಹೇಳಿಕೆ ನೀಡಿರುವ ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ಮತ್ತು ಡಿಜಿಪಿ ರಾಜೀವ್ ಸಿಂಗ್, “ಸೆಪ್ಟೆಂಬರ್ 28 ರಂದು ಮೈತೆಯಿ ಸಮುದಾಯಗಳ ಮೇಲೆ ದಾಳಿ ನಡೆಸಲು ಮ್ಯಾನ್ಮಾರ್‌ನಿಂದ 900 ತರಬೇತಿ ಪಡೆದ ಕುಕಿ ಉಗ್ರಗಾಮಿಗಳು ಒಳನುಸುಳಿದ್ದಾರೆ ಎಂಬ ಈ ಮಾಹಿತಿಯನ್ನು ವಿವಿಧ ಮೂಲಗಳಿಂದ ಪರಿಶೀಲಿಸಲಾಗಿದೆ. ಆದರೆ ಅಂತಹ ಯಾವುದೇ ಮಾಹಿತಿಯನ್ನು ನಂಬಲು ಪ್ರಸ್ತುತ ಆಧಾರವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂಓದಿ: ಉದ್ಯೋಗಕ್ಕಾಗಿ ನಗದು ಪ್ರಕರಣ: ಜಾಮೀನು ಪಡೆದ ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿ

“ನಾಗರಿಕರ ಜೀವ ಮತ್ತು ಆಸ್ತಿಯನ್ನು ರಕ್ಷಿಸಲು ಭದ್ರತಾ ಪಡೆಗಳು ಹೆಚ್ಚಿನ ಜಾಗರೂಕತೆ ವಹಿಸಿವೆ. ಎಲ್ಲಾ ಸಮುದಾಯಗಳು ಅವರ ಸುರಕ್ಷತೆಯ ಬಗ್ಗೆ ಖಾತ್ರಿಪಡಿಸಲಾಗಿದೆ. ಯಾವುದೇ ವದಂತಿಗಳು ಅಥವಾ ಪರಿಶೀಲಿಸದ ಸುದ್ದಿಗಳನ್ನು ನಂಬಬೇಡಿ” ಎಂದು ಸಾರ್ವಜನಿಕರಿಗೆ ಅವರು ಸಲಹೆ ನೀಡಿದ್ದಾರೆ.

ಉಗ್ರಗಾಮಿಗಳು ಹೊರಗಿನ ಗ್ರಾಮಗಳಲ್ಲಿ ಹಿಂಸಾಚಾರ ನಡೆಸಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಹಲವಾರು ಕ್ರಮಗಳನ್ನು ತೆಗೆದುಕೊಂಡಿವೆ ಎಂದು ಸೆಪ್ಟಂಬರ್ 20 ರಂದು ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ತಿಳಿಸಿದ್ದರು. ಕಳೆದ ಮೂರ್ನಾಲ್ಕು ದಿನಗಳಿಂದ ಈ ಉಗ್ರರ ಚಲನವಲನದ ವರದಿಗಳು ಹರಿದಾಡುತ್ತಿವೆ ಎಂದು ಅವರು ಹೇಳಿದ್ದರು.

ಮುಖ್ಯಮಂತ್ರಿಯ ಕಾರ್ಯದರ್ಶಿ ಎನ್ ಜೆಫ್ರಿ ಮಾತನಾಡಿ, “ಶಸ್ತ್ರಸಜ್ಜಿತ ಗುಂಪುಗಳ ಚಲನವಲನಕ್ಕೆ ಸಂಬಂಧಿಸಿದ ಮಾಹಿತಿಯ ಆಧಾರದ ಮೇಲೆ, ಮುಖ್ಯಮಂತ್ರಿ ಕಛೇರಿಯು ಗುಪ್ತಚರ ಮಾಹಿತಿಗಳನ್ನು ಪೊಲೀಸ್ ಇಲಾಖೆಯೊಂದಿಗೆ ಹಂಚಿಕೊಂಡಿದೆ. ಇದರಿಂದ ಮತ್ತಷ್ಟು ವಿವರವಾದ ಮಾಹಿತಿಗಳು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ಸಶಸ್ತ್ರ ಗುಂಪುಗಳಿಂದ ಇಂತಹ ದುಷ್ಕೃತ್ಯಗಳು ಸಾಧ್ಯತೆಯಿಲ್ಲ ಎಂದು ಈಗ ಖಚಿತವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂಓದಿ: ಸಮಾಜ ಒಟ್ಟಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಮಾಡಬೇಕು: ಸಚಿವ ಕೃಷ್ಣ ಬೈರೇಗೌಡ

900 ಕುಕಿ ಉಗ್ರಗಾಮಿಗಳು ರಾಜ್ಯವನ್ನು ಪ್ರವೇಶಿಸಿದ್ದಾರೆ ಎಂಬ ಸರ್ಕಾರದ ಹೇಳಿಕೆಗೆ ಬುಧವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದ ಮಣಿಪುರದ ಕಾಂಗ್ರೆಸ್ ಶಾಸಕ ಟಿ ಲೋಕೇಶ್ವರ್ ಅವರು, ಇದು ಇಂಫಾಲ್ ಕಣಿವೆಯ ಹೊರವಲಯದ ಹಳ್ಳಿಗಳಲ್ಲಿ ಭೀತಿಯನ್ನು ಉಂಟುಮಾಡಿದೆ ಎಂದು ಪ್ರತಿಪಾದಿಸಿದ್ದಾರೆ. ಈ ಹೇಳಿಕೆಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.ಕುಕಿಗಳ ವಿರುದ್ಧದ ಹೇಳಿಕೆ

“ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ಅವರ ಹೇಳಿಕೆ ಹೊರಗಿನ ಪ್ರದೇಶಗಳಲ್ಲಿ ಅಶಾಂತಿಯನ್ನು ಸೃಷ್ಟಿಸಿದೆ. ಅವರು ತಮ್ಮ ಸಮರ್ಥನೆಗಳಿಗೆ ಆಧಾರವನ್ನು ಸ್ಪಷ್ಟಪಡಿಸಬೇಕು ಮತ್ತು ಉಗ್ರಗಾಮಿಗಳ ಪ್ರವೇಶವನ್ನು ಎದುರಿಸಲು ಯಾವ ಕ್ರಮಗಳು ಜಾರಿಯಲ್ಲಿವೆ ಎಂಬುದನ್ನು ವಿವರಿಸಬೇಕು. ಗ್ರಾಮಸ್ಥರು ಭಯದಿಂದ ಬದುಕುವಂತೆ ಆಗಬಾರದು” ಎಂದು ಕಾಂಗ್ರೆಸ್ ಶಾಸಕ ಹೇಳಿದ್ದರು.

ಇಂಫಾಲ್ ಕಣಿವೆಯ ಹೊರಗಿನ ಗ್ರಾಮಗಳನ್ನು ಗುರಿಯಾಗಿಸಲು ಉಗ್ರಗಾಮಿಗಳು ರಾಜ್ಯವನ್ನು ಪ್ರವೇಶಿಸಿದ್ದಾರೆ ಎಂಬ ವರದಿಗಳ ನಂತರ ಭದ್ರತಾ ಪಡೆಗಳು ಹೆಚ್ಚಿನ ಎಚ್ಚರಿಕೆಯಲ್ಲಿವೆ ಎಂದು ಸೆಪ್ಟೆಂಬರ್ 20 ರ ಶುಕ್ರವಾರದಂದು ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ಸೂಚಿಸಿದ್ದರು. ಸೆಪ್ಟೆಂಬರ್ 28 ರ ಸುಮಾರಿಗೆ ಸಂಭಾವ್ಯ ದಾಳಿಗಳಿ ನಡೆಯಲಿದೆ ಎಂದು ಹೇಳಿದ್ದರು.

ವಿಡಿಯೊ ನೋಡಿ: LIVE : ಕ್ರಾಂತಿಕಾರಿ ಪ್ರಜಾಕವಿ, ಗಾಯಕ ಗದ್ದರ್‌ ಪ್ರಥಮ ಪರಿನಿಬ್ಬಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...