Homeಮುಖಪುಟಕುಕಿಗಳ ವಿರುದ್ಧದ ಹೇಳಿಕೆ ವಾಪಾಸ್ | ಕುಕಿ ಉಗ್ರರಿಂದ ದಾಳಿ ಎಂದಿದ್ದ ಮಣಿಪುರ ಸರ್ಕಾರ!

ಕುಕಿಗಳ ವಿರುದ್ಧದ ಹೇಳಿಕೆ ವಾಪಾಸ್ | ಕುಕಿ ಉಗ್ರರಿಂದ ದಾಳಿ ಎಂದಿದ್ದ ಮಣಿಪುರ ಸರ್ಕಾರ!

- Advertisement -
- Advertisement -

‘900 ಕುಕಿ ಉಗ್ರಗಾಮಿಗಳು ಸೆಪ್ಟೆಂಬರ್ 28 ರ ಸುಮಾರಿಗೆ ಇಂಫಾಲ್ ಕಣಿವೆಯ ಜಿಲ್ಲೆಗಳ ಹೊರಗಿನ ಗ್ರಾಮಗಳ ಮೇಲೆ ದಾಳಿ ಮಾಡಲು ಯೋಜಿಸುತ್ತಿದ್ದಾರೆ’ ಎಂದು ಹೇಳಿದ್ದ ಮಣಿಪುರ ಸರ್ಕಾರ ತನ್ನ ಹೇಳಿಕೆಯನ್ನು ಕೆಲವು ದಿನಗಳ ನಂತರ ವಾಪಾಸು ಪಡೆದಿದೆ. ಈ ಹೇಳಿಕೆ ಆಧಾರ ರಹಿತವಾಗಿದ್ದು, ಸಶಸ್ತ್ರ ಗುಂಪುಗಳ ಈ ರೀತಿಯ ಯಾವುದೇ ದುಷ್ಕೃತ್ಯಗಳ ಸಾಧ್ಯತೆಯು ಕಡಿಮೆಯಾಗಿದೆ ಎಂದು ಸರ್ಕಾರ ಪ್ರತಿಪಾದಿಸಿದೆ.ಕುಕಿಗಳ ವಿರುದ್ಧದ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬುಧವಾರ ಜಂಟಿ ಹೇಳಿಕೆ ನೀಡಿರುವ ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ಮತ್ತು ಡಿಜಿಪಿ ರಾಜೀವ್ ಸಿಂಗ್, “ಸೆಪ್ಟೆಂಬರ್ 28 ರಂದು ಮೈತೆಯಿ ಸಮುದಾಯಗಳ ಮೇಲೆ ದಾಳಿ ನಡೆಸಲು ಮ್ಯಾನ್ಮಾರ್‌ನಿಂದ 900 ತರಬೇತಿ ಪಡೆದ ಕುಕಿ ಉಗ್ರಗಾಮಿಗಳು ಒಳನುಸುಳಿದ್ದಾರೆ ಎಂಬ ಈ ಮಾಹಿತಿಯನ್ನು ವಿವಿಧ ಮೂಲಗಳಿಂದ ಪರಿಶೀಲಿಸಲಾಗಿದೆ. ಆದರೆ ಅಂತಹ ಯಾವುದೇ ಮಾಹಿತಿಯನ್ನು ನಂಬಲು ಪ್ರಸ್ತುತ ಆಧಾರವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂಓದಿ: ಉದ್ಯೋಗಕ್ಕಾಗಿ ನಗದು ಪ್ರಕರಣ: ಜಾಮೀನು ಪಡೆದ ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿ

“ನಾಗರಿಕರ ಜೀವ ಮತ್ತು ಆಸ್ತಿಯನ್ನು ರಕ್ಷಿಸಲು ಭದ್ರತಾ ಪಡೆಗಳು ಹೆಚ್ಚಿನ ಜಾಗರೂಕತೆ ವಹಿಸಿವೆ. ಎಲ್ಲಾ ಸಮುದಾಯಗಳು ಅವರ ಸುರಕ್ಷತೆಯ ಬಗ್ಗೆ ಖಾತ್ರಿಪಡಿಸಲಾಗಿದೆ. ಯಾವುದೇ ವದಂತಿಗಳು ಅಥವಾ ಪರಿಶೀಲಿಸದ ಸುದ್ದಿಗಳನ್ನು ನಂಬಬೇಡಿ” ಎಂದು ಸಾರ್ವಜನಿಕರಿಗೆ ಅವರು ಸಲಹೆ ನೀಡಿದ್ದಾರೆ.

ಉಗ್ರಗಾಮಿಗಳು ಹೊರಗಿನ ಗ್ರಾಮಗಳಲ್ಲಿ ಹಿಂಸಾಚಾರ ನಡೆಸಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಹಲವಾರು ಕ್ರಮಗಳನ್ನು ತೆಗೆದುಕೊಂಡಿವೆ ಎಂದು ಸೆಪ್ಟಂಬರ್ 20 ರಂದು ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ತಿಳಿಸಿದ್ದರು. ಕಳೆದ ಮೂರ್ನಾಲ್ಕು ದಿನಗಳಿಂದ ಈ ಉಗ್ರರ ಚಲನವಲನದ ವರದಿಗಳು ಹರಿದಾಡುತ್ತಿವೆ ಎಂದು ಅವರು ಹೇಳಿದ್ದರು.

ಮುಖ್ಯಮಂತ್ರಿಯ ಕಾರ್ಯದರ್ಶಿ ಎನ್ ಜೆಫ್ರಿ ಮಾತನಾಡಿ, “ಶಸ್ತ್ರಸಜ್ಜಿತ ಗುಂಪುಗಳ ಚಲನವಲನಕ್ಕೆ ಸಂಬಂಧಿಸಿದ ಮಾಹಿತಿಯ ಆಧಾರದ ಮೇಲೆ, ಮುಖ್ಯಮಂತ್ರಿ ಕಛೇರಿಯು ಗುಪ್ತಚರ ಮಾಹಿತಿಗಳನ್ನು ಪೊಲೀಸ್ ಇಲಾಖೆಯೊಂದಿಗೆ ಹಂಚಿಕೊಂಡಿದೆ. ಇದರಿಂದ ಮತ್ತಷ್ಟು ವಿವರವಾದ ಮಾಹಿತಿಗಳು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ಸಶಸ್ತ್ರ ಗುಂಪುಗಳಿಂದ ಇಂತಹ ದುಷ್ಕೃತ್ಯಗಳು ಸಾಧ್ಯತೆಯಿಲ್ಲ ಎಂದು ಈಗ ಖಚಿತವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂಓದಿ: ಸಮಾಜ ಒಟ್ಟಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಮಾಡಬೇಕು: ಸಚಿವ ಕೃಷ್ಣ ಬೈರೇಗೌಡ

900 ಕುಕಿ ಉಗ್ರಗಾಮಿಗಳು ರಾಜ್ಯವನ್ನು ಪ್ರವೇಶಿಸಿದ್ದಾರೆ ಎಂಬ ಸರ್ಕಾರದ ಹೇಳಿಕೆಗೆ ಬುಧವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದ ಮಣಿಪುರದ ಕಾಂಗ್ರೆಸ್ ಶಾಸಕ ಟಿ ಲೋಕೇಶ್ವರ್ ಅವರು, ಇದು ಇಂಫಾಲ್ ಕಣಿವೆಯ ಹೊರವಲಯದ ಹಳ್ಳಿಗಳಲ್ಲಿ ಭೀತಿಯನ್ನು ಉಂಟುಮಾಡಿದೆ ಎಂದು ಪ್ರತಿಪಾದಿಸಿದ್ದಾರೆ. ಈ ಹೇಳಿಕೆಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.ಕುಕಿಗಳ ವಿರುದ್ಧದ ಹೇಳಿಕೆ

“ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ಅವರ ಹೇಳಿಕೆ ಹೊರಗಿನ ಪ್ರದೇಶಗಳಲ್ಲಿ ಅಶಾಂತಿಯನ್ನು ಸೃಷ್ಟಿಸಿದೆ. ಅವರು ತಮ್ಮ ಸಮರ್ಥನೆಗಳಿಗೆ ಆಧಾರವನ್ನು ಸ್ಪಷ್ಟಪಡಿಸಬೇಕು ಮತ್ತು ಉಗ್ರಗಾಮಿಗಳ ಪ್ರವೇಶವನ್ನು ಎದುರಿಸಲು ಯಾವ ಕ್ರಮಗಳು ಜಾರಿಯಲ್ಲಿವೆ ಎಂಬುದನ್ನು ವಿವರಿಸಬೇಕು. ಗ್ರಾಮಸ್ಥರು ಭಯದಿಂದ ಬದುಕುವಂತೆ ಆಗಬಾರದು” ಎಂದು ಕಾಂಗ್ರೆಸ್ ಶಾಸಕ ಹೇಳಿದ್ದರು.

ಇಂಫಾಲ್ ಕಣಿವೆಯ ಹೊರಗಿನ ಗ್ರಾಮಗಳನ್ನು ಗುರಿಯಾಗಿಸಲು ಉಗ್ರಗಾಮಿಗಳು ರಾಜ್ಯವನ್ನು ಪ್ರವೇಶಿಸಿದ್ದಾರೆ ಎಂಬ ವರದಿಗಳ ನಂತರ ಭದ್ರತಾ ಪಡೆಗಳು ಹೆಚ್ಚಿನ ಎಚ್ಚರಿಕೆಯಲ್ಲಿವೆ ಎಂದು ಸೆಪ್ಟೆಂಬರ್ 20 ರ ಶುಕ್ರವಾರದಂದು ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ಸೂಚಿಸಿದ್ದರು. ಸೆಪ್ಟೆಂಬರ್ 28 ರ ಸುಮಾರಿಗೆ ಸಂಭಾವ್ಯ ದಾಳಿಗಳಿ ನಡೆಯಲಿದೆ ಎಂದು ಹೇಳಿದ್ದರು.

ವಿಡಿಯೊ ನೋಡಿ: LIVE : ಕ್ರಾಂತಿಕಾರಿ ಪ್ರಜಾಕವಿ, ಗಾಯಕ ಗದ್ದರ್‌ ಪ್ರಥಮ ಪರಿನಿಬ್ಬಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...