Homeಮುಖಪುಟಕುಕಿಗಳ ವಿರುದ್ಧದ ಹೇಳಿಕೆ ವಾಪಾಸ್ | ಕುಕಿ ಉಗ್ರರಿಂದ ದಾಳಿ ಎಂದಿದ್ದ ಮಣಿಪುರ ಸರ್ಕಾರ!

ಕುಕಿಗಳ ವಿರುದ್ಧದ ಹೇಳಿಕೆ ವಾಪಾಸ್ | ಕುಕಿ ಉಗ್ರರಿಂದ ದಾಳಿ ಎಂದಿದ್ದ ಮಣಿಪುರ ಸರ್ಕಾರ!

- Advertisement -
- Advertisement -

‘900 ಕುಕಿ ಉಗ್ರಗಾಮಿಗಳು ಸೆಪ್ಟೆಂಬರ್ 28 ರ ಸುಮಾರಿಗೆ ಇಂಫಾಲ್ ಕಣಿವೆಯ ಜಿಲ್ಲೆಗಳ ಹೊರಗಿನ ಗ್ರಾಮಗಳ ಮೇಲೆ ದಾಳಿ ಮಾಡಲು ಯೋಜಿಸುತ್ತಿದ್ದಾರೆ’ ಎಂದು ಹೇಳಿದ್ದ ಮಣಿಪುರ ಸರ್ಕಾರ ತನ್ನ ಹೇಳಿಕೆಯನ್ನು ಕೆಲವು ದಿನಗಳ ನಂತರ ವಾಪಾಸು ಪಡೆದಿದೆ. ಈ ಹೇಳಿಕೆ ಆಧಾರ ರಹಿತವಾಗಿದ್ದು, ಸಶಸ್ತ್ರ ಗುಂಪುಗಳ ಈ ರೀತಿಯ ಯಾವುದೇ ದುಷ್ಕೃತ್ಯಗಳ ಸಾಧ್ಯತೆಯು ಕಡಿಮೆಯಾಗಿದೆ ಎಂದು ಸರ್ಕಾರ ಪ್ರತಿಪಾದಿಸಿದೆ.ಕುಕಿಗಳ ವಿರುದ್ಧದ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬುಧವಾರ ಜಂಟಿ ಹೇಳಿಕೆ ನೀಡಿರುವ ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ಮತ್ತು ಡಿಜಿಪಿ ರಾಜೀವ್ ಸಿಂಗ್, “ಸೆಪ್ಟೆಂಬರ್ 28 ರಂದು ಮೈತೆಯಿ ಸಮುದಾಯಗಳ ಮೇಲೆ ದಾಳಿ ನಡೆಸಲು ಮ್ಯಾನ್ಮಾರ್‌ನಿಂದ 900 ತರಬೇತಿ ಪಡೆದ ಕುಕಿ ಉಗ್ರಗಾಮಿಗಳು ಒಳನುಸುಳಿದ್ದಾರೆ ಎಂಬ ಈ ಮಾಹಿತಿಯನ್ನು ವಿವಿಧ ಮೂಲಗಳಿಂದ ಪರಿಶೀಲಿಸಲಾಗಿದೆ. ಆದರೆ ಅಂತಹ ಯಾವುದೇ ಮಾಹಿತಿಯನ್ನು ನಂಬಲು ಪ್ರಸ್ತುತ ಆಧಾರವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂಓದಿ: ಉದ್ಯೋಗಕ್ಕಾಗಿ ನಗದು ಪ್ರಕರಣ: ಜಾಮೀನು ಪಡೆದ ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿ

“ನಾಗರಿಕರ ಜೀವ ಮತ್ತು ಆಸ್ತಿಯನ್ನು ರಕ್ಷಿಸಲು ಭದ್ರತಾ ಪಡೆಗಳು ಹೆಚ್ಚಿನ ಜಾಗರೂಕತೆ ವಹಿಸಿವೆ. ಎಲ್ಲಾ ಸಮುದಾಯಗಳು ಅವರ ಸುರಕ್ಷತೆಯ ಬಗ್ಗೆ ಖಾತ್ರಿಪಡಿಸಲಾಗಿದೆ. ಯಾವುದೇ ವದಂತಿಗಳು ಅಥವಾ ಪರಿಶೀಲಿಸದ ಸುದ್ದಿಗಳನ್ನು ನಂಬಬೇಡಿ” ಎಂದು ಸಾರ್ವಜನಿಕರಿಗೆ ಅವರು ಸಲಹೆ ನೀಡಿದ್ದಾರೆ.

ಉಗ್ರಗಾಮಿಗಳು ಹೊರಗಿನ ಗ್ರಾಮಗಳಲ್ಲಿ ಹಿಂಸಾಚಾರ ನಡೆಸಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಹಲವಾರು ಕ್ರಮಗಳನ್ನು ತೆಗೆದುಕೊಂಡಿವೆ ಎಂದು ಸೆಪ್ಟಂಬರ್ 20 ರಂದು ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ತಿಳಿಸಿದ್ದರು. ಕಳೆದ ಮೂರ್ನಾಲ್ಕು ದಿನಗಳಿಂದ ಈ ಉಗ್ರರ ಚಲನವಲನದ ವರದಿಗಳು ಹರಿದಾಡುತ್ತಿವೆ ಎಂದು ಅವರು ಹೇಳಿದ್ದರು.

ಮುಖ್ಯಮಂತ್ರಿಯ ಕಾರ್ಯದರ್ಶಿ ಎನ್ ಜೆಫ್ರಿ ಮಾತನಾಡಿ, “ಶಸ್ತ್ರಸಜ್ಜಿತ ಗುಂಪುಗಳ ಚಲನವಲನಕ್ಕೆ ಸಂಬಂಧಿಸಿದ ಮಾಹಿತಿಯ ಆಧಾರದ ಮೇಲೆ, ಮುಖ್ಯಮಂತ್ರಿ ಕಛೇರಿಯು ಗುಪ್ತಚರ ಮಾಹಿತಿಗಳನ್ನು ಪೊಲೀಸ್ ಇಲಾಖೆಯೊಂದಿಗೆ ಹಂಚಿಕೊಂಡಿದೆ. ಇದರಿಂದ ಮತ್ತಷ್ಟು ವಿವರವಾದ ಮಾಹಿತಿಗಳು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ಸಶಸ್ತ್ರ ಗುಂಪುಗಳಿಂದ ಇಂತಹ ದುಷ್ಕೃತ್ಯಗಳು ಸಾಧ್ಯತೆಯಿಲ್ಲ ಎಂದು ಈಗ ಖಚಿತವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂಓದಿ: ಸಮಾಜ ಒಟ್ಟಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಮಾಡಬೇಕು: ಸಚಿವ ಕೃಷ್ಣ ಬೈರೇಗೌಡ

900 ಕುಕಿ ಉಗ್ರಗಾಮಿಗಳು ರಾಜ್ಯವನ್ನು ಪ್ರವೇಶಿಸಿದ್ದಾರೆ ಎಂಬ ಸರ್ಕಾರದ ಹೇಳಿಕೆಗೆ ಬುಧವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದ ಮಣಿಪುರದ ಕಾಂಗ್ರೆಸ್ ಶಾಸಕ ಟಿ ಲೋಕೇಶ್ವರ್ ಅವರು, ಇದು ಇಂಫಾಲ್ ಕಣಿವೆಯ ಹೊರವಲಯದ ಹಳ್ಳಿಗಳಲ್ಲಿ ಭೀತಿಯನ್ನು ಉಂಟುಮಾಡಿದೆ ಎಂದು ಪ್ರತಿಪಾದಿಸಿದ್ದಾರೆ. ಈ ಹೇಳಿಕೆಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.ಕುಕಿಗಳ ವಿರುದ್ಧದ ಹೇಳಿಕೆ

“ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ಅವರ ಹೇಳಿಕೆ ಹೊರಗಿನ ಪ್ರದೇಶಗಳಲ್ಲಿ ಅಶಾಂತಿಯನ್ನು ಸೃಷ್ಟಿಸಿದೆ. ಅವರು ತಮ್ಮ ಸಮರ್ಥನೆಗಳಿಗೆ ಆಧಾರವನ್ನು ಸ್ಪಷ್ಟಪಡಿಸಬೇಕು ಮತ್ತು ಉಗ್ರಗಾಮಿಗಳ ಪ್ರವೇಶವನ್ನು ಎದುರಿಸಲು ಯಾವ ಕ್ರಮಗಳು ಜಾರಿಯಲ್ಲಿವೆ ಎಂಬುದನ್ನು ವಿವರಿಸಬೇಕು. ಗ್ರಾಮಸ್ಥರು ಭಯದಿಂದ ಬದುಕುವಂತೆ ಆಗಬಾರದು” ಎಂದು ಕಾಂಗ್ರೆಸ್ ಶಾಸಕ ಹೇಳಿದ್ದರು.

ಇಂಫಾಲ್ ಕಣಿವೆಯ ಹೊರಗಿನ ಗ್ರಾಮಗಳನ್ನು ಗುರಿಯಾಗಿಸಲು ಉಗ್ರಗಾಮಿಗಳು ರಾಜ್ಯವನ್ನು ಪ್ರವೇಶಿಸಿದ್ದಾರೆ ಎಂಬ ವರದಿಗಳ ನಂತರ ಭದ್ರತಾ ಪಡೆಗಳು ಹೆಚ್ಚಿನ ಎಚ್ಚರಿಕೆಯಲ್ಲಿವೆ ಎಂದು ಸೆಪ್ಟೆಂಬರ್ 20 ರ ಶುಕ್ರವಾರದಂದು ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ಸೂಚಿಸಿದ್ದರು. ಸೆಪ್ಟೆಂಬರ್ 28 ರ ಸುಮಾರಿಗೆ ಸಂಭಾವ್ಯ ದಾಳಿಗಳಿ ನಡೆಯಲಿದೆ ಎಂದು ಹೇಳಿದ್ದರು.

ವಿಡಿಯೊ ನೋಡಿ: LIVE : ಕ್ರಾಂತಿಕಾರಿ ಪ್ರಜಾಕವಿ, ಗಾಯಕ ಗದ್ದರ್‌ ಪ್ರಥಮ ಪರಿನಿಬ್ಬಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...