Homeಕರ್ನಾಟಕರೈತರ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಕ್ಷಮೆ ಕೇಳಿದ ಯಕ್ಷಗಾನ ಕಲಾವಿದ

ರೈತರ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಕ್ಷಮೆ ಕೇಳಿದ ಯಕ್ಷಗಾನ ಕಲಾವಿದ

ರೈತ ಚಳವಳಿಯ ಬಗ್ಗೆ ನಡೆಸುತ್ತಿರುವ ಅಪಪ್ರಚಾರಕ್ಕೆ ಯಕ್ಷಗಾನ ಕಲೆಯನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ ಎಂದು ರೈತ ನಾಯಕರು ಆಕ್ಷೇಪಿಸಿದ್ದಾರೆ

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವವರು ನಿಜವಾದ ರೈತರಲ್ಲ ಅವರೆಲ್ಲರೂ ನಕಲಿಗಳು ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದ ಯಕ್ಷಗಾನ ಕಲಾವಿದ ದಿನೇಶ್‌ ಕೋಡಪದವು, ರೈತ ಸಂಘಟನೆಗಳ ಆಕ್ರೋಶದ ಬೆನ್ನಲ್ಲೇ ರೈತರ ಕ್ಷಮೆ ಯಾಚಿಸಿದ್ದಾರೆ.

ಯಕ್ಷಗಾನ ಕಲಾವಿದ ದಿನೇಶ್‌ ಕೋಡಪದವು ಅಪ್ಪಟ ಮೋದಿ ಅಭಿಮಾನಿ ಎಂಬುದು ಆತನ ಫೇಸ್‌ಬುಕ್‌ ಪೋಸ್ಟ್‌ಗಳಿಂದಲೇ ಸಾಬೀತಾಗುತ್ತದೆ. ಈ ಕಲಾವಿದ ಯಾರನ್ನೂ ನೋಯಿಸುವ ಉದ್ದೇಶವಿರಲಿಲ್ಲ ಎಂದು ರೈತರ ಕ್ಷಮೆ ಕೇಳಿದ್ದಾನಾದರೂ, ರೈತ ಹೋರಾಟದ ಕುರಿತಾದ ಈ ಬಿಜೆಪಿ ಬೆಂಬಲಿಗನ ಹೇಳಿಕೆಗಳು ಮಾತ್ರ ಉದ್ದೇಶ ಪೂರ್ವಕ ಎಂಬುದು ಸ್ಪಷ್ಟ.

ಯಕ್ಷಗಾನ ರಂಗದಲ್ಲಿ ಮೂವರು ಕಲಾವಿದರು ರೈತರನ್ನು ಅಪಹಾಸ್ಯ ಮಾಡಿ ತುಳುವಿನಲ್ಲಿ ಮಾತನಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ವೇದಿಕೆಯಲ್ಲಿ ಸಹ ಕಲಾವಿದದರೊಂದಿಗೆ ಹಾಸ್ಯ ಸಂಭಾಷಣೆ ನಡೆಸಿದ್ದ ದಿನೇಶ್‌, “ಹಲವು ತಿಂಗಳುಗಳಿಂದ ಹಸಿರು ಶಾಲು, ಟೊಪಿ ಧರಿಸಿ ದೆಹಲಿ ಗಡಿಗಳಲ್ಲಿ ಹೋರಾಟ ಮಾಡುತ್ತಿರುವವರು ನಿಜವಾದ ರೈತರಲ್ಲ, ಅವರೆಲ್ಲರು ನಕಲಿಗಳು, ಒಂದು ವೇಳೆ ರೈತರು ರಸ್ತೆಯಲ್ಲಿ ಕುಳಿತಿದ್ದರೆ ನಮಗೆ ತಿನ್ನಲು ಅಕ್ಕಿ ಎಲ್ಲಿಂದ ಸಿಗುತ್ತಿತ್ತು? ನಿಜವಾದ ರೈತರು ಇನ್ನೂ ಗದ್ದೆಯಲ್ಲೇ ಇದ್ದಾರೆ. ಈಗ ಕೇಂದ್ರದಲ್ಲಿ ಸರ್ಕಾರ ನಡೆಸುತ್ತಿರುವುದು ತಂತಿಯ ಮೇಲೆ ನಡೆಯುವ ಮಂಗನಂತಹ ವ್ಯಕ್ತಿಯಲ್ಲ. ಬದಲಿಗೆ ಸಿಂಹದಂತಹ ವ್ಯಕ್ತಿ ಅಧಿಕಾರದಲ್ಲಿದ್ದಾರೆ. ನೀವು 6 ತಿಂಗಳಲ್ಲ 6 ವರ್ಷ ಹೋರಾಟ ನಡೆಸಿದರೂ ಪ್ರಯೋಜನವಿಲ್ಲ. ಕೃಷಿ ಕಾಯ್ದೆಯಿಂದ ರೈತರಿಗೆ ದಲ್ಲಾಳಿಗಳ ಕಾಟ ಇಲ್ಲದಂತಾಗುತ್ತದೆ. ರೈತ ತಾನು ಬೆಳೆದ ಬೆಳೆಯನ್ನು ನೇರವಾಗಿ ಮಾರುಕಟ್ಟೆಗೆ ಕೊಂಡೊಯ್ದು ಮಾರಾಟ ಮಾಡಲು ಈ ಕಾಯ್ದೆ ಅವಕಾಶ ಮಾಡಿ ಕೊಡುತ್ತದೆ. ಇಂತಹ ಕಾಯ್ದೆಯನ್ನು ವಿರೋಧಿಸುತ್ತಿರುವವರು ನಿಜವಾದ ರೈತರಲ್ಲ. ಅವರೆಲ್ಲ ನಕಲಿ ರೈತರು” ಎಂದು ವ್ಯಂಗ್ಯವಾಡಿದ್ದರು.

ಇದನ್ನೂ ಓದಿ: ಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

ರೈತರ ಕುರಿತಾದ ದಿನೇಶ್‌ ಅವರ ಅವಹೇಳನಕಾರಿ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಲೇ ರಾಜ್ಯದ ರೈತ ಸಂಘಟನೆಗಳ ನಾಯಕರು ಹಾಗೂ ರೈತಪರರು ಹಾಸ್ಯ ಕಲಾವಿದನ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದರು.

ದಿನೇಶ್‌ ರೈತರ ಕುರಿತು ವ್ಯಂಗ್ಯವಾಡಿದ್ದ ಸಂದರ್ಭದ ವಿಡಿಯೋ ತುಣುಕನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ನೆಟ್ಟಿಗ ಫೈಜಲ್‌ ಪೆರಾಜೆ, “ಕೃಷಿ ಕಾಯ್ದೆ ವಿರುದ್ಧ ಹೋರಾಡುತ್ತಿರುವವರು ನಕಲಿ ರೈತರು : ದಿನೇಶ್ ಕೋಡಪದವು ದಿನೇಶ್ ಕೋಡಪದವು ಅನ್ನುವ ಕಲಾವಿದರೊಬ್ಬರು ಯಕ್ಷರಂಗದಲ್ಲಿ ರಾಜಕೀಯ ಪಕ್ಷವೊಂದರ ಪ್ರಚಾರ ಮಾಡಿ ‘ರೈತರನ್ನೇ’ ಅವಮಾನಿಸಿದ ಕ್ರಮ ಖಂಡನೀಯ” ಎಂದು ಆಕ್ರೋಶ ವ್ಯಕ್ತ ಪಡಿಸಿದ್ದರು.

ರೈತ ಚಳವಳಿಯ ಬಗ್ಗೆ ನಡೆಸುತ್ತಿರುವ ಅಪಪ್ರಚಾರಕ್ಕೆ ಯಕ್ಷಗಾನ ಕಲೆಯನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ. ಆ ಮೂಲಕ ಯಕ್ಷಗಾನವನ್ನೂ ಕೆಡಿಸುವ ಹುನ್ನಾರ ನಡೆಯುತ್ತಿದೆ’ ಎಂದು ಕರ್ನಾಟಕ ಪ್ರಾಂತ ಪ್ರದೇಶ ರೈತ ಸಂಘದ ಉಪಾಧ್ಯಕ್ಷ ಯಾದವ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ, “ಯಕ್ಷಗಾನದ ಬಗ್ಗೆ ಗೌರವ ಇದೆ. ಆದರೆ, ಜೀವನದ ಅನುಭವ ಇಲ್ಲದವರು ಕಲೆಯ ಮೂಲಕ ಅನ್ನದಾತರನ್ನೇ ಹೀಯಾಳಿಸುವುದು ನೋವುಂಟು ಮಾಡಿದೆ’ ಎಂದು ಬೇಸರ ವ್ಯಕ್ತ ಪಡಿಸಿದ್ದರು.

ಇದಾದ ಬೆನ್ನಲ್ಲೇ ರೈತರ ಕ್ಷಮೆ ಯಾಚಿಸಿರುವ ದಿನೇಶ್‌, “ಯಾವುದೇ ರಾಜಕೀಯ ಅಥವಾ ಯಾರನ್ನಾದರೂ ನೋಯಿಸುವ ಉದ್ದೇಶದಿಂದ ಯಕ್ಷಗಾನದಲ್ಲಿ ನಾನು ಈ ರೀತಿಯ ಹೇಳಿಕೆ ನೀಡಿಲ್ಲ. ಕಲಾವಿದನಾಗಿ ಸಾಂದರ್ಭಿಕವಾಗಿ ನನ್ನ ಸಹ ಕಲಾವಿದನೊಂದಿಗೆ ಸಂಭಾಷಣೆ ನಡೆಸಿದ್ದೇನೆ. ರೈತರನ್ನಾಗಲಿ ಅಥವಾ ರೈತ ಹೋರಾಟವನ್ನಾಗಲಿ ಅಪಹಾಸ್ಯ ಮಾಡುವ ಉದ್ದೇಶ ನನ್ನದಾಗಿರಲಿಲ್ಲ” ಎಂದಿದ್ದಾರೆ. ಮುಂದುವರೆದು ಮಾತನಾಡಿರುವ ಅವರು, “ನನ್ನನ್ನು ಒಳಗೊಂಡಂತೆ ಸುಮಾರು 2 ಸಾವಿರ ಮಂದಿ ಯಕ್ಷಗಾನ ಕಲಾವಿದರು ಕೋವಿಡ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ನಮ್ಮ ಅನ್ನದಾತರು ನನ್ನ ಹೇಳಿಕೆಯಿಂದ ರೈತರಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಅಖಿಲ ಭಾರತ ವಕೀಲರ ಒಕ್ಕೂಟದ ಸಂಪೂರ್ಣ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...