Homeಕರ್ನಾಟಕರೈತರ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಕ್ಷಮೆ ಕೇಳಿದ ಯಕ್ಷಗಾನ ಕಲಾವಿದ

ರೈತರ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಕ್ಷಮೆ ಕೇಳಿದ ಯಕ್ಷಗಾನ ಕಲಾವಿದ

ರೈತ ಚಳವಳಿಯ ಬಗ್ಗೆ ನಡೆಸುತ್ತಿರುವ ಅಪಪ್ರಚಾರಕ್ಕೆ ಯಕ್ಷಗಾನ ಕಲೆಯನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ ಎಂದು ರೈತ ನಾಯಕರು ಆಕ್ಷೇಪಿಸಿದ್ದಾರೆ

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವವರು ನಿಜವಾದ ರೈತರಲ್ಲ ಅವರೆಲ್ಲರೂ ನಕಲಿಗಳು ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದ ಯಕ್ಷಗಾನ ಕಲಾವಿದ ದಿನೇಶ್‌ ಕೋಡಪದವು, ರೈತ ಸಂಘಟನೆಗಳ ಆಕ್ರೋಶದ ಬೆನ್ನಲ್ಲೇ ರೈತರ ಕ್ಷಮೆ ಯಾಚಿಸಿದ್ದಾರೆ.

ಯಕ್ಷಗಾನ ಕಲಾವಿದ ದಿನೇಶ್‌ ಕೋಡಪದವು ಅಪ್ಪಟ ಮೋದಿ ಅಭಿಮಾನಿ ಎಂಬುದು ಆತನ ಫೇಸ್‌ಬುಕ್‌ ಪೋಸ್ಟ್‌ಗಳಿಂದಲೇ ಸಾಬೀತಾಗುತ್ತದೆ. ಈ ಕಲಾವಿದ ಯಾರನ್ನೂ ನೋಯಿಸುವ ಉದ್ದೇಶವಿರಲಿಲ್ಲ ಎಂದು ರೈತರ ಕ್ಷಮೆ ಕೇಳಿದ್ದಾನಾದರೂ, ರೈತ ಹೋರಾಟದ ಕುರಿತಾದ ಈ ಬಿಜೆಪಿ ಬೆಂಬಲಿಗನ ಹೇಳಿಕೆಗಳು ಮಾತ್ರ ಉದ್ದೇಶ ಪೂರ್ವಕ ಎಂಬುದು ಸ್ಪಷ್ಟ.

ಯಕ್ಷಗಾನ ರಂಗದಲ್ಲಿ ಮೂವರು ಕಲಾವಿದರು ರೈತರನ್ನು ಅಪಹಾಸ್ಯ ಮಾಡಿ ತುಳುವಿನಲ್ಲಿ ಮಾತನಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ವೇದಿಕೆಯಲ್ಲಿ ಸಹ ಕಲಾವಿದದರೊಂದಿಗೆ ಹಾಸ್ಯ ಸಂಭಾಷಣೆ ನಡೆಸಿದ್ದ ದಿನೇಶ್‌, “ಹಲವು ತಿಂಗಳುಗಳಿಂದ ಹಸಿರು ಶಾಲು, ಟೊಪಿ ಧರಿಸಿ ದೆಹಲಿ ಗಡಿಗಳಲ್ಲಿ ಹೋರಾಟ ಮಾಡುತ್ತಿರುವವರು ನಿಜವಾದ ರೈತರಲ್ಲ, ಅವರೆಲ್ಲರು ನಕಲಿಗಳು, ಒಂದು ವೇಳೆ ರೈತರು ರಸ್ತೆಯಲ್ಲಿ ಕುಳಿತಿದ್ದರೆ ನಮಗೆ ತಿನ್ನಲು ಅಕ್ಕಿ ಎಲ್ಲಿಂದ ಸಿಗುತ್ತಿತ್ತು? ನಿಜವಾದ ರೈತರು ಇನ್ನೂ ಗದ್ದೆಯಲ್ಲೇ ಇದ್ದಾರೆ. ಈಗ ಕೇಂದ್ರದಲ್ಲಿ ಸರ್ಕಾರ ನಡೆಸುತ್ತಿರುವುದು ತಂತಿಯ ಮೇಲೆ ನಡೆಯುವ ಮಂಗನಂತಹ ವ್ಯಕ್ತಿಯಲ್ಲ. ಬದಲಿಗೆ ಸಿಂಹದಂತಹ ವ್ಯಕ್ತಿ ಅಧಿಕಾರದಲ್ಲಿದ್ದಾರೆ. ನೀವು 6 ತಿಂಗಳಲ್ಲ 6 ವರ್ಷ ಹೋರಾಟ ನಡೆಸಿದರೂ ಪ್ರಯೋಜನವಿಲ್ಲ. ಕೃಷಿ ಕಾಯ್ದೆಯಿಂದ ರೈತರಿಗೆ ದಲ್ಲಾಳಿಗಳ ಕಾಟ ಇಲ್ಲದಂತಾಗುತ್ತದೆ. ರೈತ ತಾನು ಬೆಳೆದ ಬೆಳೆಯನ್ನು ನೇರವಾಗಿ ಮಾರುಕಟ್ಟೆಗೆ ಕೊಂಡೊಯ್ದು ಮಾರಾಟ ಮಾಡಲು ಈ ಕಾಯ್ದೆ ಅವಕಾಶ ಮಾಡಿ ಕೊಡುತ್ತದೆ. ಇಂತಹ ಕಾಯ್ದೆಯನ್ನು ವಿರೋಧಿಸುತ್ತಿರುವವರು ನಿಜವಾದ ರೈತರಲ್ಲ. ಅವರೆಲ್ಲ ನಕಲಿ ರೈತರು” ಎಂದು ವ್ಯಂಗ್ಯವಾಡಿದ್ದರು.

ಇದನ್ನೂ ಓದಿ: ಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

ರೈತರ ಕುರಿತಾದ ದಿನೇಶ್‌ ಅವರ ಅವಹೇಳನಕಾರಿ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಲೇ ರಾಜ್ಯದ ರೈತ ಸಂಘಟನೆಗಳ ನಾಯಕರು ಹಾಗೂ ರೈತಪರರು ಹಾಸ್ಯ ಕಲಾವಿದನ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದರು.

ದಿನೇಶ್‌ ರೈತರ ಕುರಿತು ವ್ಯಂಗ್ಯವಾಡಿದ್ದ ಸಂದರ್ಭದ ವಿಡಿಯೋ ತುಣುಕನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ನೆಟ್ಟಿಗ ಫೈಜಲ್‌ ಪೆರಾಜೆ, “ಕೃಷಿ ಕಾಯ್ದೆ ವಿರುದ್ಧ ಹೋರಾಡುತ್ತಿರುವವರು ನಕಲಿ ರೈತರು : ದಿನೇಶ್ ಕೋಡಪದವು ದಿನೇಶ್ ಕೋಡಪದವು ಅನ್ನುವ ಕಲಾವಿದರೊಬ್ಬರು ಯಕ್ಷರಂಗದಲ್ಲಿ ರಾಜಕೀಯ ಪಕ್ಷವೊಂದರ ಪ್ರಚಾರ ಮಾಡಿ ‘ರೈತರನ್ನೇ’ ಅವಮಾನಿಸಿದ ಕ್ರಮ ಖಂಡನೀಯ” ಎಂದು ಆಕ್ರೋಶ ವ್ಯಕ್ತ ಪಡಿಸಿದ್ದರು.

ರೈತ ಚಳವಳಿಯ ಬಗ್ಗೆ ನಡೆಸುತ್ತಿರುವ ಅಪಪ್ರಚಾರಕ್ಕೆ ಯಕ್ಷಗಾನ ಕಲೆಯನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ. ಆ ಮೂಲಕ ಯಕ್ಷಗಾನವನ್ನೂ ಕೆಡಿಸುವ ಹುನ್ನಾರ ನಡೆಯುತ್ತಿದೆ’ ಎಂದು ಕರ್ನಾಟಕ ಪ್ರಾಂತ ಪ್ರದೇಶ ರೈತ ಸಂಘದ ಉಪಾಧ್ಯಕ್ಷ ಯಾದವ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ, “ಯಕ್ಷಗಾನದ ಬಗ್ಗೆ ಗೌರವ ಇದೆ. ಆದರೆ, ಜೀವನದ ಅನುಭವ ಇಲ್ಲದವರು ಕಲೆಯ ಮೂಲಕ ಅನ್ನದಾತರನ್ನೇ ಹೀಯಾಳಿಸುವುದು ನೋವುಂಟು ಮಾಡಿದೆ’ ಎಂದು ಬೇಸರ ವ್ಯಕ್ತ ಪಡಿಸಿದ್ದರು.

ಇದಾದ ಬೆನ್ನಲ್ಲೇ ರೈತರ ಕ್ಷಮೆ ಯಾಚಿಸಿರುವ ದಿನೇಶ್‌, “ಯಾವುದೇ ರಾಜಕೀಯ ಅಥವಾ ಯಾರನ್ನಾದರೂ ನೋಯಿಸುವ ಉದ್ದೇಶದಿಂದ ಯಕ್ಷಗಾನದಲ್ಲಿ ನಾನು ಈ ರೀತಿಯ ಹೇಳಿಕೆ ನೀಡಿಲ್ಲ. ಕಲಾವಿದನಾಗಿ ಸಾಂದರ್ಭಿಕವಾಗಿ ನನ್ನ ಸಹ ಕಲಾವಿದನೊಂದಿಗೆ ಸಂಭಾಷಣೆ ನಡೆಸಿದ್ದೇನೆ. ರೈತರನ್ನಾಗಲಿ ಅಥವಾ ರೈತ ಹೋರಾಟವನ್ನಾಗಲಿ ಅಪಹಾಸ್ಯ ಮಾಡುವ ಉದ್ದೇಶ ನನ್ನದಾಗಿರಲಿಲ್ಲ” ಎಂದಿದ್ದಾರೆ. ಮುಂದುವರೆದು ಮಾತನಾಡಿರುವ ಅವರು, “ನನ್ನನ್ನು ಒಳಗೊಂಡಂತೆ ಸುಮಾರು 2 ಸಾವಿರ ಮಂದಿ ಯಕ್ಷಗಾನ ಕಲಾವಿದರು ಕೋವಿಡ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ನಮ್ಮ ಅನ್ನದಾತರು ನನ್ನ ಹೇಳಿಕೆಯಿಂದ ರೈತರಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಅಖಿಲ ಭಾರತ ವಕೀಲರ ಒಕ್ಕೂಟದ ಸಂಪೂರ್ಣ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...