Homeಕರ್ನಾಟಕರೈತರ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಕ್ಷಮೆ ಕೇಳಿದ ಯಕ್ಷಗಾನ ಕಲಾವಿದ

ರೈತರ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಕ್ಷಮೆ ಕೇಳಿದ ಯಕ್ಷಗಾನ ಕಲಾವಿದ

ರೈತ ಚಳವಳಿಯ ಬಗ್ಗೆ ನಡೆಸುತ್ತಿರುವ ಅಪಪ್ರಚಾರಕ್ಕೆ ಯಕ್ಷಗಾನ ಕಲೆಯನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ ಎಂದು ರೈತ ನಾಯಕರು ಆಕ್ಷೇಪಿಸಿದ್ದಾರೆ

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವವರು ನಿಜವಾದ ರೈತರಲ್ಲ ಅವರೆಲ್ಲರೂ ನಕಲಿಗಳು ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದ ಯಕ್ಷಗಾನ ಕಲಾವಿದ ದಿನೇಶ್‌ ಕೋಡಪದವು, ರೈತ ಸಂಘಟನೆಗಳ ಆಕ್ರೋಶದ ಬೆನ್ನಲ್ಲೇ ರೈತರ ಕ್ಷಮೆ ಯಾಚಿಸಿದ್ದಾರೆ.

ಯಕ್ಷಗಾನ ಕಲಾವಿದ ದಿನೇಶ್‌ ಕೋಡಪದವು ಅಪ್ಪಟ ಮೋದಿ ಅಭಿಮಾನಿ ಎಂಬುದು ಆತನ ಫೇಸ್‌ಬುಕ್‌ ಪೋಸ್ಟ್‌ಗಳಿಂದಲೇ ಸಾಬೀತಾಗುತ್ತದೆ. ಈ ಕಲಾವಿದ ಯಾರನ್ನೂ ನೋಯಿಸುವ ಉದ್ದೇಶವಿರಲಿಲ್ಲ ಎಂದು ರೈತರ ಕ್ಷಮೆ ಕೇಳಿದ್ದಾನಾದರೂ, ರೈತ ಹೋರಾಟದ ಕುರಿತಾದ ಈ ಬಿಜೆಪಿ ಬೆಂಬಲಿಗನ ಹೇಳಿಕೆಗಳು ಮಾತ್ರ ಉದ್ದೇಶ ಪೂರ್ವಕ ಎಂಬುದು ಸ್ಪಷ್ಟ.

ಯಕ್ಷಗಾನ ರಂಗದಲ್ಲಿ ಮೂವರು ಕಲಾವಿದರು ರೈತರನ್ನು ಅಪಹಾಸ್ಯ ಮಾಡಿ ತುಳುವಿನಲ್ಲಿ ಮಾತನಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ವೇದಿಕೆಯಲ್ಲಿ ಸಹ ಕಲಾವಿದದರೊಂದಿಗೆ ಹಾಸ್ಯ ಸಂಭಾಷಣೆ ನಡೆಸಿದ್ದ ದಿನೇಶ್‌, “ಹಲವು ತಿಂಗಳುಗಳಿಂದ ಹಸಿರು ಶಾಲು, ಟೊಪಿ ಧರಿಸಿ ದೆಹಲಿ ಗಡಿಗಳಲ್ಲಿ ಹೋರಾಟ ಮಾಡುತ್ತಿರುವವರು ನಿಜವಾದ ರೈತರಲ್ಲ, ಅವರೆಲ್ಲರು ನಕಲಿಗಳು, ಒಂದು ವೇಳೆ ರೈತರು ರಸ್ತೆಯಲ್ಲಿ ಕುಳಿತಿದ್ದರೆ ನಮಗೆ ತಿನ್ನಲು ಅಕ್ಕಿ ಎಲ್ಲಿಂದ ಸಿಗುತ್ತಿತ್ತು? ನಿಜವಾದ ರೈತರು ಇನ್ನೂ ಗದ್ದೆಯಲ್ಲೇ ಇದ್ದಾರೆ. ಈಗ ಕೇಂದ್ರದಲ್ಲಿ ಸರ್ಕಾರ ನಡೆಸುತ್ತಿರುವುದು ತಂತಿಯ ಮೇಲೆ ನಡೆಯುವ ಮಂಗನಂತಹ ವ್ಯಕ್ತಿಯಲ್ಲ. ಬದಲಿಗೆ ಸಿಂಹದಂತಹ ವ್ಯಕ್ತಿ ಅಧಿಕಾರದಲ್ಲಿದ್ದಾರೆ. ನೀವು 6 ತಿಂಗಳಲ್ಲ 6 ವರ್ಷ ಹೋರಾಟ ನಡೆಸಿದರೂ ಪ್ರಯೋಜನವಿಲ್ಲ. ಕೃಷಿ ಕಾಯ್ದೆಯಿಂದ ರೈತರಿಗೆ ದಲ್ಲಾಳಿಗಳ ಕಾಟ ಇಲ್ಲದಂತಾಗುತ್ತದೆ. ರೈತ ತಾನು ಬೆಳೆದ ಬೆಳೆಯನ್ನು ನೇರವಾಗಿ ಮಾರುಕಟ್ಟೆಗೆ ಕೊಂಡೊಯ್ದು ಮಾರಾಟ ಮಾಡಲು ಈ ಕಾಯ್ದೆ ಅವಕಾಶ ಮಾಡಿ ಕೊಡುತ್ತದೆ. ಇಂತಹ ಕಾಯ್ದೆಯನ್ನು ವಿರೋಧಿಸುತ್ತಿರುವವರು ನಿಜವಾದ ರೈತರಲ್ಲ. ಅವರೆಲ್ಲ ನಕಲಿ ರೈತರು” ಎಂದು ವ್ಯಂಗ್ಯವಾಡಿದ್ದರು.

ಇದನ್ನೂ ಓದಿ: ಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

ರೈತರ ಕುರಿತಾದ ದಿನೇಶ್‌ ಅವರ ಅವಹೇಳನಕಾರಿ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಲೇ ರಾಜ್ಯದ ರೈತ ಸಂಘಟನೆಗಳ ನಾಯಕರು ಹಾಗೂ ರೈತಪರರು ಹಾಸ್ಯ ಕಲಾವಿದನ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದರು.

ದಿನೇಶ್‌ ರೈತರ ಕುರಿತು ವ್ಯಂಗ್ಯವಾಡಿದ್ದ ಸಂದರ್ಭದ ವಿಡಿಯೋ ತುಣುಕನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ನೆಟ್ಟಿಗ ಫೈಜಲ್‌ ಪೆರಾಜೆ, “ಕೃಷಿ ಕಾಯ್ದೆ ವಿರುದ್ಧ ಹೋರಾಡುತ್ತಿರುವವರು ನಕಲಿ ರೈತರು : ದಿನೇಶ್ ಕೋಡಪದವು ದಿನೇಶ್ ಕೋಡಪದವು ಅನ್ನುವ ಕಲಾವಿದರೊಬ್ಬರು ಯಕ್ಷರಂಗದಲ್ಲಿ ರಾಜಕೀಯ ಪಕ್ಷವೊಂದರ ಪ್ರಚಾರ ಮಾಡಿ ‘ರೈತರನ್ನೇ’ ಅವಮಾನಿಸಿದ ಕ್ರಮ ಖಂಡನೀಯ” ಎಂದು ಆಕ್ರೋಶ ವ್ಯಕ್ತ ಪಡಿಸಿದ್ದರು.

ರೈತ ಚಳವಳಿಯ ಬಗ್ಗೆ ನಡೆಸುತ್ತಿರುವ ಅಪಪ್ರಚಾರಕ್ಕೆ ಯಕ್ಷಗಾನ ಕಲೆಯನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ. ಆ ಮೂಲಕ ಯಕ್ಷಗಾನವನ್ನೂ ಕೆಡಿಸುವ ಹುನ್ನಾರ ನಡೆಯುತ್ತಿದೆ’ ಎಂದು ಕರ್ನಾಟಕ ಪ್ರಾಂತ ಪ್ರದೇಶ ರೈತ ಸಂಘದ ಉಪಾಧ್ಯಕ್ಷ ಯಾದವ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ, “ಯಕ್ಷಗಾನದ ಬಗ್ಗೆ ಗೌರವ ಇದೆ. ಆದರೆ, ಜೀವನದ ಅನುಭವ ಇಲ್ಲದವರು ಕಲೆಯ ಮೂಲಕ ಅನ್ನದಾತರನ್ನೇ ಹೀಯಾಳಿಸುವುದು ನೋವುಂಟು ಮಾಡಿದೆ’ ಎಂದು ಬೇಸರ ವ್ಯಕ್ತ ಪಡಿಸಿದ್ದರು.

ಇದಾದ ಬೆನ್ನಲ್ಲೇ ರೈತರ ಕ್ಷಮೆ ಯಾಚಿಸಿರುವ ದಿನೇಶ್‌, “ಯಾವುದೇ ರಾಜಕೀಯ ಅಥವಾ ಯಾರನ್ನಾದರೂ ನೋಯಿಸುವ ಉದ್ದೇಶದಿಂದ ಯಕ್ಷಗಾನದಲ್ಲಿ ನಾನು ಈ ರೀತಿಯ ಹೇಳಿಕೆ ನೀಡಿಲ್ಲ. ಕಲಾವಿದನಾಗಿ ಸಾಂದರ್ಭಿಕವಾಗಿ ನನ್ನ ಸಹ ಕಲಾವಿದನೊಂದಿಗೆ ಸಂಭಾಷಣೆ ನಡೆಸಿದ್ದೇನೆ. ರೈತರನ್ನಾಗಲಿ ಅಥವಾ ರೈತ ಹೋರಾಟವನ್ನಾಗಲಿ ಅಪಹಾಸ್ಯ ಮಾಡುವ ಉದ್ದೇಶ ನನ್ನದಾಗಿರಲಿಲ್ಲ” ಎಂದಿದ್ದಾರೆ. ಮುಂದುವರೆದು ಮಾತನಾಡಿರುವ ಅವರು, “ನನ್ನನ್ನು ಒಳಗೊಂಡಂತೆ ಸುಮಾರು 2 ಸಾವಿರ ಮಂದಿ ಯಕ್ಷಗಾನ ಕಲಾವಿದರು ಕೋವಿಡ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ನಮ್ಮ ಅನ್ನದಾತರು ನನ್ನ ಹೇಳಿಕೆಯಿಂದ ರೈತರಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಅಖಿಲ ಭಾರತ ವಕೀಲರ ಒಕ್ಕೂಟದ ಸಂಪೂರ್ಣ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...