Homeಕರ್ನಾಟಕರೈತರ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಕ್ಷಮೆ ಕೇಳಿದ ಯಕ್ಷಗಾನ ಕಲಾವಿದ

ರೈತರ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಕ್ಷಮೆ ಕೇಳಿದ ಯಕ್ಷಗಾನ ಕಲಾವಿದ

ರೈತ ಚಳವಳಿಯ ಬಗ್ಗೆ ನಡೆಸುತ್ತಿರುವ ಅಪಪ್ರಚಾರಕ್ಕೆ ಯಕ್ಷಗಾನ ಕಲೆಯನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ ಎಂದು ರೈತ ನಾಯಕರು ಆಕ್ಷೇಪಿಸಿದ್ದಾರೆ

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವವರು ನಿಜವಾದ ರೈತರಲ್ಲ ಅವರೆಲ್ಲರೂ ನಕಲಿಗಳು ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದ ಯಕ್ಷಗಾನ ಕಲಾವಿದ ದಿನೇಶ್‌ ಕೋಡಪದವು, ರೈತ ಸಂಘಟನೆಗಳ ಆಕ್ರೋಶದ ಬೆನ್ನಲ್ಲೇ ರೈತರ ಕ್ಷಮೆ ಯಾಚಿಸಿದ್ದಾರೆ.

ಯಕ್ಷಗಾನ ಕಲಾವಿದ ದಿನೇಶ್‌ ಕೋಡಪದವು ಅಪ್ಪಟ ಮೋದಿ ಅಭಿಮಾನಿ ಎಂಬುದು ಆತನ ಫೇಸ್‌ಬುಕ್‌ ಪೋಸ್ಟ್‌ಗಳಿಂದಲೇ ಸಾಬೀತಾಗುತ್ತದೆ. ಈ ಕಲಾವಿದ ಯಾರನ್ನೂ ನೋಯಿಸುವ ಉದ್ದೇಶವಿರಲಿಲ್ಲ ಎಂದು ರೈತರ ಕ್ಷಮೆ ಕೇಳಿದ್ದಾನಾದರೂ, ರೈತ ಹೋರಾಟದ ಕುರಿತಾದ ಈ ಬಿಜೆಪಿ ಬೆಂಬಲಿಗನ ಹೇಳಿಕೆಗಳು ಮಾತ್ರ ಉದ್ದೇಶ ಪೂರ್ವಕ ಎಂಬುದು ಸ್ಪಷ್ಟ.

ಯಕ್ಷಗಾನ ರಂಗದಲ್ಲಿ ಮೂವರು ಕಲಾವಿದರು ರೈತರನ್ನು ಅಪಹಾಸ್ಯ ಮಾಡಿ ತುಳುವಿನಲ್ಲಿ ಮಾತನಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ವೇದಿಕೆಯಲ್ಲಿ ಸಹ ಕಲಾವಿದದರೊಂದಿಗೆ ಹಾಸ್ಯ ಸಂಭಾಷಣೆ ನಡೆಸಿದ್ದ ದಿನೇಶ್‌, “ಹಲವು ತಿಂಗಳುಗಳಿಂದ ಹಸಿರು ಶಾಲು, ಟೊಪಿ ಧರಿಸಿ ದೆಹಲಿ ಗಡಿಗಳಲ್ಲಿ ಹೋರಾಟ ಮಾಡುತ್ತಿರುವವರು ನಿಜವಾದ ರೈತರಲ್ಲ, ಅವರೆಲ್ಲರು ನಕಲಿಗಳು, ಒಂದು ವೇಳೆ ರೈತರು ರಸ್ತೆಯಲ್ಲಿ ಕುಳಿತಿದ್ದರೆ ನಮಗೆ ತಿನ್ನಲು ಅಕ್ಕಿ ಎಲ್ಲಿಂದ ಸಿಗುತ್ತಿತ್ತು? ನಿಜವಾದ ರೈತರು ಇನ್ನೂ ಗದ್ದೆಯಲ್ಲೇ ಇದ್ದಾರೆ. ಈಗ ಕೇಂದ್ರದಲ್ಲಿ ಸರ್ಕಾರ ನಡೆಸುತ್ತಿರುವುದು ತಂತಿಯ ಮೇಲೆ ನಡೆಯುವ ಮಂಗನಂತಹ ವ್ಯಕ್ತಿಯಲ್ಲ. ಬದಲಿಗೆ ಸಿಂಹದಂತಹ ವ್ಯಕ್ತಿ ಅಧಿಕಾರದಲ್ಲಿದ್ದಾರೆ. ನೀವು 6 ತಿಂಗಳಲ್ಲ 6 ವರ್ಷ ಹೋರಾಟ ನಡೆಸಿದರೂ ಪ್ರಯೋಜನವಿಲ್ಲ. ಕೃಷಿ ಕಾಯ್ದೆಯಿಂದ ರೈತರಿಗೆ ದಲ್ಲಾಳಿಗಳ ಕಾಟ ಇಲ್ಲದಂತಾಗುತ್ತದೆ. ರೈತ ತಾನು ಬೆಳೆದ ಬೆಳೆಯನ್ನು ನೇರವಾಗಿ ಮಾರುಕಟ್ಟೆಗೆ ಕೊಂಡೊಯ್ದು ಮಾರಾಟ ಮಾಡಲು ಈ ಕಾಯ್ದೆ ಅವಕಾಶ ಮಾಡಿ ಕೊಡುತ್ತದೆ. ಇಂತಹ ಕಾಯ್ದೆಯನ್ನು ವಿರೋಧಿಸುತ್ತಿರುವವರು ನಿಜವಾದ ರೈತರಲ್ಲ. ಅವರೆಲ್ಲ ನಕಲಿ ರೈತರು” ಎಂದು ವ್ಯಂಗ್ಯವಾಡಿದ್ದರು.

ಇದನ್ನೂ ಓದಿ: ಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

ರೈತರ ಕುರಿತಾದ ದಿನೇಶ್‌ ಅವರ ಅವಹೇಳನಕಾರಿ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಲೇ ರಾಜ್ಯದ ರೈತ ಸಂಘಟನೆಗಳ ನಾಯಕರು ಹಾಗೂ ರೈತಪರರು ಹಾಸ್ಯ ಕಲಾವಿದನ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದರು.

ದಿನೇಶ್‌ ರೈತರ ಕುರಿತು ವ್ಯಂಗ್ಯವಾಡಿದ್ದ ಸಂದರ್ಭದ ವಿಡಿಯೋ ತುಣುಕನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ನೆಟ್ಟಿಗ ಫೈಜಲ್‌ ಪೆರಾಜೆ, “ಕೃಷಿ ಕಾಯ್ದೆ ವಿರುದ್ಧ ಹೋರಾಡುತ್ತಿರುವವರು ನಕಲಿ ರೈತರು : ದಿನೇಶ್ ಕೋಡಪದವು ದಿನೇಶ್ ಕೋಡಪದವು ಅನ್ನುವ ಕಲಾವಿದರೊಬ್ಬರು ಯಕ್ಷರಂಗದಲ್ಲಿ ರಾಜಕೀಯ ಪಕ್ಷವೊಂದರ ಪ್ರಚಾರ ಮಾಡಿ ‘ರೈತರನ್ನೇ’ ಅವಮಾನಿಸಿದ ಕ್ರಮ ಖಂಡನೀಯ” ಎಂದು ಆಕ್ರೋಶ ವ್ಯಕ್ತ ಪಡಿಸಿದ್ದರು.

ರೈತ ಚಳವಳಿಯ ಬಗ್ಗೆ ನಡೆಸುತ್ತಿರುವ ಅಪಪ್ರಚಾರಕ್ಕೆ ಯಕ್ಷಗಾನ ಕಲೆಯನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ. ಆ ಮೂಲಕ ಯಕ್ಷಗಾನವನ್ನೂ ಕೆಡಿಸುವ ಹುನ್ನಾರ ನಡೆಯುತ್ತಿದೆ’ ಎಂದು ಕರ್ನಾಟಕ ಪ್ರಾಂತ ಪ್ರದೇಶ ರೈತ ಸಂಘದ ಉಪಾಧ್ಯಕ್ಷ ಯಾದವ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ, “ಯಕ್ಷಗಾನದ ಬಗ್ಗೆ ಗೌರವ ಇದೆ. ಆದರೆ, ಜೀವನದ ಅನುಭವ ಇಲ್ಲದವರು ಕಲೆಯ ಮೂಲಕ ಅನ್ನದಾತರನ್ನೇ ಹೀಯಾಳಿಸುವುದು ನೋವುಂಟು ಮಾಡಿದೆ’ ಎಂದು ಬೇಸರ ವ್ಯಕ್ತ ಪಡಿಸಿದ್ದರು.

ಇದಾದ ಬೆನ್ನಲ್ಲೇ ರೈತರ ಕ್ಷಮೆ ಯಾಚಿಸಿರುವ ದಿನೇಶ್‌, “ಯಾವುದೇ ರಾಜಕೀಯ ಅಥವಾ ಯಾರನ್ನಾದರೂ ನೋಯಿಸುವ ಉದ್ದೇಶದಿಂದ ಯಕ್ಷಗಾನದಲ್ಲಿ ನಾನು ಈ ರೀತಿಯ ಹೇಳಿಕೆ ನೀಡಿಲ್ಲ. ಕಲಾವಿದನಾಗಿ ಸಾಂದರ್ಭಿಕವಾಗಿ ನನ್ನ ಸಹ ಕಲಾವಿದನೊಂದಿಗೆ ಸಂಭಾಷಣೆ ನಡೆಸಿದ್ದೇನೆ. ರೈತರನ್ನಾಗಲಿ ಅಥವಾ ರೈತ ಹೋರಾಟವನ್ನಾಗಲಿ ಅಪಹಾಸ್ಯ ಮಾಡುವ ಉದ್ದೇಶ ನನ್ನದಾಗಿರಲಿಲ್ಲ” ಎಂದಿದ್ದಾರೆ. ಮುಂದುವರೆದು ಮಾತನಾಡಿರುವ ಅವರು, “ನನ್ನನ್ನು ಒಳಗೊಂಡಂತೆ ಸುಮಾರು 2 ಸಾವಿರ ಮಂದಿ ಯಕ್ಷಗಾನ ಕಲಾವಿದರು ಕೋವಿಡ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ನಮ್ಮ ಅನ್ನದಾತರು ನನ್ನ ಹೇಳಿಕೆಯಿಂದ ರೈತರಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಅಖಿಲ ಭಾರತ ವಕೀಲರ ಒಕ್ಕೂಟದ ಸಂಪೂರ್ಣ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...