Homeಕರ್ನಾಟಕರೈತರ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಕ್ಷಮೆ ಕೇಳಿದ ಯಕ್ಷಗಾನ ಕಲಾವಿದ

ರೈತರ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಕ್ಷಮೆ ಕೇಳಿದ ಯಕ್ಷಗಾನ ಕಲಾವಿದ

ರೈತ ಚಳವಳಿಯ ಬಗ್ಗೆ ನಡೆಸುತ್ತಿರುವ ಅಪಪ್ರಚಾರಕ್ಕೆ ಯಕ್ಷಗಾನ ಕಲೆಯನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ ಎಂದು ರೈತ ನಾಯಕರು ಆಕ್ಷೇಪಿಸಿದ್ದಾರೆ

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವವರು ನಿಜವಾದ ರೈತರಲ್ಲ ಅವರೆಲ್ಲರೂ ನಕಲಿಗಳು ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದ ಯಕ್ಷಗಾನ ಕಲಾವಿದ ದಿನೇಶ್‌ ಕೋಡಪದವು, ರೈತ ಸಂಘಟನೆಗಳ ಆಕ್ರೋಶದ ಬೆನ್ನಲ್ಲೇ ರೈತರ ಕ್ಷಮೆ ಯಾಚಿಸಿದ್ದಾರೆ.

ಯಕ್ಷಗಾನ ಕಲಾವಿದ ದಿನೇಶ್‌ ಕೋಡಪದವು ಅಪ್ಪಟ ಮೋದಿ ಅಭಿಮಾನಿ ಎಂಬುದು ಆತನ ಫೇಸ್‌ಬುಕ್‌ ಪೋಸ್ಟ್‌ಗಳಿಂದಲೇ ಸಾಬೀತಾಗುತ್ತದೆ. ಈ ಕಲಾವಿದ ಯಾರನ್ನೂ ನೋಯಿಸುವ ಉದ್ದೇಶವಿರಲಿಲ್ಲ ಎಂದು ರೈತರ ಕ್ಷಮೆ ಕೇಳಿದ್ದಾನಾದರೂ, ರೈತ ಹೋರಾಟದ ಕುರಿತಾದ ಈ ಬಿಜೆಪಿ ಬೆಂಬಲಿಗನ ಹೇಳಿಕೆಗಳು ಮಾತ್ರ ಉದ್ದೇಶ ಪೂರ್ವಕ ಎಂಬುದು ಸ್ಪಷ್ಟ.

ಯಕ್ಷಗಾನ ರಂಗದಲ್ಲಿ ಮೂವರು ಕಲಾವಿದರು ರೈತರನ್ನು ಅಪಹಾಸ್ಯ ಮಾಡಿ ತುಳುವಿನಲ್ಲಿ ಮಾತನಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ವೇದಿಕೆಯಲ್ಲಿ ಸಹ ಕಲಾವಿದದರೊಂದಿಗೆ ಹಾಸ್ಯ ಸಂಭಾಷಣೆ ನಡೆಸಿದ್ದ ದಿನೇಶ್‌, “ಹಲವು ತಿಂಗಳುಗಳಿಂದ ಹಸಿರು ಶಾಲು, ಟೊಪಿ ಧರಿಸಿ ದೆಹಲಿ ಗಡಿಗಳಲ್ಲಿ ಹೋರಾಟ ಮಾಡುತ್ತಿರುವವರು ನಿಜವಾದ ರೈತರಲ್ಲ, ಅವರೆಲ್ಲರು ನಕಲಿಗಳು, ಒಂದು ವೇಳೆ ರೈತರು ರಸ್ತೆಯಲ್ಲಿ ಕುಳಿತಿದ್ದರೆ ನಮಗೆ ತಿನ್ನಲು ಅಕ್ಕಿ ಎಲ್ಲಿಂದ ಸಿಗುತ್ತಿತ್ತು? ನಿಜವಾದ ರೈತರು ಇನ್ನೂ ಗದ್ದೆಯಲ್ಲೇ ಇದ್ದಾರೆ. ಈಗ ಕೇಂದ್ರದಲ್ಲಿ ಸರ್ಕಾರ ನಡೆಸುತ್ತಿರುವುದು ತಂತಿಯ ಮೇಲೆ ನಡೆಯುವ ಮಂಗನಂತಹ ವ್ಯಕ್ತಿಯಲ್ಲ. ಬದಲಿಗೆ ಸಿಂಹದಂತಹ ವ್ಯಕ್ತಿ ಅಧಿಕಾರದಲ್ಲಿದ್ದಾರೆ. ನೀವು 6 ತಿಂಗಳಲ್ಲ 6 ವರ್ಷ ಹೋರಾಟ ನಡೆಸಿದರೂ ಪ್ರಯೋಜನವಿಲ್ಲ. ಕೃಷಿ ಕಾಯ್ದೆಯಿಂದ ರೈತರಿಗೆ ದಲ್ಲಾಳಿಗಳ ಕಾಟ ಇಲ್ಲದಂತಾಗುತ್ತದೆ. ರೈತ ತಾನು ಬೆಳೆದ ಬೆಳೆಯನ್ನು ನೇರವಾಗಿ ಮಾರುಕಟ್ಟೆಗೆ ಕೊಂಡೊಯ್ದು ಮಾರಾಟ ಮಾಡಲು ಈ ಕಾಯ್ದೆ ಅವಕಾಶ ಮಾಡಿ ಕೊಡುತ್ತದೆ. ಇಂತಹ ಕಾಯ್ದೆಯನ್ನು ವಿರೋಧಿಸುತ್ತಿರುವವರು ನಿಜವಾದ ರೈತರಲ್ಲ. ಅವರೆಲ್ಲ ನಕಲಿ ರೈತರು” ಎಂದು ವ್ಯಂಗ್ಯವಾಡಿದ್ದರು.

ಇದನ್ನೂ ಓದಿ: ಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

ರೈತರ ಕುರಿತಾದ ದಿನೇಶ್‌ ಅವರ ಅವಹೇಳನಕಾರಿ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಲೇ ರಾಜ್ಯದ ರೈತ ಸಂಘಟನೆಗಳ ನಾಯಕರು ಹಾಗೂ ರೈತಪರರು ಹಾಸ್ಯ ಕಲಾವಿದನ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದರು.

ದಿನೇಶ್‌ ರೈತರ ಕುರಿತು ವ್ಯಂಗ್ಯವಾಡಿದ್ದ ಸಂದರ್ಭದ ವಿಡಿಯೋ ತುಣುಕನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ನೆಟ್ಟಿಗ ಫೈಜಲ್‌ ಪೆರಾಜೆ, “ಕೃಷಿ ಕಾಯ್ದೆ ವಿರುದ್ಧ ಹೋರಾಡುತ್ತಿರುವವರು ನಕಲಿ ರೈತರು : ದಿನೇಶ್ ಕೋಡಪದವು ದಿನೇಶ್ ಕೋಡಪದವು ಅನ್ನುವ ಕಲಾವಿದರೊಬ್ಬರು ಯಕ್ಷರಂಗದಲ್ಲಿ ರಾಜಕೀಯ ಪಕ್ಷವೊಂದರ ಪ್ರಚಾರ ಮಾಡಿ ‘ರೈತರನ್ನೇ’ ಅವಮಾನಿಸಿದ ಕ್ರಮ ಖಂಡನೀಯ” ಎಂದು ಆಕ್ರೋಶ ವ್ಯಕ್ತ ಪಡಿಸಿದ್ದರು.

ರೈತ ಚಳವಳಿಯ ಬಗ್ಗೆ ನಡೆಸುತ್ತಿರುವ ಅಪಪ್ರಚಾರಕ್ಕೆ ಯಕ್ಷಗಾನ ಕಲೆಯನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ. ಆ ಮೂಲಕ ಯಕ್ಷಗಾನವನ್ನೂ ಕೆಡಿಸುವ ಹುನ್ನಾರ ನಡೆಯುತ್ತಿದೆ’ ಎಂದು ಕರ್ನಾಟಕ ಪ್ರಾಂತ ಪ್ರದೇಶ ರೈತ ಸಂಘದ ಉಪಾಧ್ಯಕ್ಷ ಯಾದವ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ, “ಯಕ್ಷಗಾನದ ಬಗ್ಗೆ ಗೌರವ ಇದೆ. ಆದರೆ, ಜೀವನದ ಅನುಭವ ಇಲ್ಲದವರು ಕಲೆಯ ಮೂಲಕ ಅನ್ನದಾತರನ್ನೇ ಹೀಯಾಳಿಸುವುದು ನೋವುಂಟು ಮಾಡಿದೆ’ ಎಂದು ಬೇಸರ ವ್ಯಕ್ತ ಪಡಿಸಿದ್ದರು.

ಇದಾದ ಬೆನ್ನಲ್ಲೇ ರೈತರ ಕ್ಷಮೆ ಯಾಚಿಸಿರುವ ದಿನೇಶ್‌, “ಯಾವುದೇ ರಾಜಕೀಯ ಅಥವಾ ಯಾರನ್ನಾದರೂ ನೋಯಿಸುವ ಉದ್ದೇಶದಿಂದ ಯಕ್ಷಗಾನದಲ್ಲಿ ನಾನು ಈ ರೀತಿಯ ಹೇಳಿಕೆ ನೀಡಿಲ್ಲ. ಕಲಾವಿದನಾಗಿ ಸಾಂದರ್ಭಿಕವಾಗಿ ನನ್ನ ಸಹ ಕಲಾವಿದನೊಂದಿಗೆ ಸಂಭಾಷಣೆ ನಡೆಸಿದ್ದೇನೆ. ರೈತರನ್ನಾಗಲಿ ಅಥವಾ ರೈತ ಹೋರಾಟವನ್ನಾಗಲಿ ಅಪಹಾಸ್ಯ ಮಾಡುವ ಉದ್ದೇಶ ನನ್ನದಾಗಿರಲಿಲ್ಲ” ಎಂದಿದ್ದಾರೆ. ಮುಂದುವರೆದು ಮಾತನಾಡಿರುವ ಅವರು, “ನನ್ನನ್ನು ಒಳಗೊಂಡಂತೆ ಸುಮಾರು 2 ಸಾವಿರ ಮಂದಿ ಯಕ್ಷಗಾನ ಕಲಾವಿದರು ಕೋವಿಡ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ನಮ್ಮ ಅನ್ನದಾತರು ನನ್ನ ಹೇಳಿಕೆಯಿಂದ ರೈತರಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಅಖಿಲ ಭಾರತ ವಕೀಲರ ಒಕ್ಕೂಟದ ಸಂಪೂರ್ಣ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...