Homeಕರ್ನಾಟಕರೈತರ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಕ್ಷಮೆ ಕೇಳಿದ ಯಕ್ಷಗಾನ ಕಲಾವಿದ

ರೈತರ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಕ್ಷಮೆ ಕೇಳಿದ ಯಕ್ಷಗಾನ ಕಲಾವಿದ

ರೈತ ಚಳವಳಿಯ ಬಗ್ಗೆ ನಡೆಸುತ್ತಿರುವ ಅಪಪ್ರಚಾರಕ್ಕೆ ಯಕ್ಷಗಾನ ಕಲೆಯನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ ಎಂದು ರೈತ ನಾಯಕರು ಆಕ್ಷೇಪಿಸಿದ್ದಾರೆ

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವವರು ನಿಜವಾದ ರೈತರಲ್ಲ ಅವರೆಲ್ಲರೂ ನಕಲಿಗಳು ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದ ಯಕ್ಷಗಾನ ಕಲಾವಿದ ದಿನೇಶ್‌ ಕೋಡಪದವು, ರೈತ ಸಂಘಟನೆಗಳ ಆಕ್ರೋಶದ ಬೆನ್ನಲ್ಲೇ ರೈತರ ಕ್ಷಮೆ ಯಾಚಿಸಿದ್ದಾರೆ.

ಯಕ್ಷಗಾನ ಕಲಾವಿದ ದಿನೇಶ್‌ ಕೋಡಪದವು ಅಪ್ಪಟ ಮೋದಿ ಅಭಿಮಾನಿ ಎಂಬುದು ಆತನ ಫೇಸ್‌ಬುಕ್‌ ಪೋಸ್ಟ್‌ಗಳಿಂದಲೇ ಸಾಬೀತಾಗುತ್ತದೆ. ಈ ಕಲಾವಿದ ಯಾರನ್ನೂ ನೋಯಿಸುವ ಉದ್ದೇಶವಿರಲಿಲ್ಲ ಎಂದು ರೈತರ ಕ್ಷಮೆ ಕೇಳಿದ್ದಾನಾದರೂ, ರೈತ ಹೋರಾಟದ ಕುರಿತಾದ ಈ ಬಿಜೆಪಿ ಬೆಂಬಲಿಗನ ಹೇಳಿಕೆಗಳು ಮಾತ್ರ ಉದ್ದೇಶ ಪೂರ್ವಕ ಎಂಬುದು ಸ್ಪಷ್ಟ.

ಯಕ್ಷಗಾನ ರಂಗದಲ್ಲಿ ಮೂವರು ಕಲಾವಿದರು ರೈತರನ್ನು ಅಪಹಾಸ್ಯ ಮಾಡಿ ತುಳುವಿನಲ್ಲಿ ಮಾತನಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ವೇದಿಕೆಯಲ್ಲಿ ಸಹ ಕಲಾವಿದದರೊಂದಿಗೆ ಹಾಸ್ಯ ಸಂಭಾಷಣೆ ನಡೆಸಿದ್ದ ದಿನೇಶ್‌, “ಹಲವು ತಿಂಗಳುಗಳಿಂದ ಹಸಿರು ಶಾಲು, ಟೊಪಿ ಧರಿಸಿ ದೆಹಲಿ ಗಡಿಗಳಲ್ಲಿ ಹೋರಾಟ ಮಾಡುತ್ತಿರುವವರು ನಿಜವಾದ ರೈತರಲ್ಲ, ಅವರೆಲ್ಲರು ನಕಲಿಗಳು, ಒಂದು ವೇಳೆ ರೈತರು ರಸ್ತೆಯಲ್ಲಿ ಕುಳಿತಿದ್ದರೆ ನಮಗೆ ತಿನ್ನಲು ಅಕ್ಕಿ ಎಲ್ಲಿಂದ ಸಿಗುತ್ತಿತ್ತು? ನಿಜವಾದ ರೈತರು ಇನ್ನೂ ಗದ್ದೆಯಲ್ಲೇ ಇದ್ದಾರೆ. ಈಗ ಕೇಂದ್ರದಲ್ಲಿ ಸರ್ಕಾರ ನಡೆಸುತ್ತಿರುವುದು ತಂತಿಯ ಮೇಲೆ ನಡೆಯುವ ಮಂಗನಂತಹ ವ್ಯಕ್ತಿಯಲ್ಲ. ಬದಲಿಗೆ ಸಿಂಹದಂತಹ ವ್ಯಕ್ತಿ ಅಧಿಕಾರದಲ್ಲಿದ್ದಾರೆ. ನೀವು 6 ತಿಂಗಳಲ್ಲ 6 ವರ್ಷ ಹೋರಾಟ ನಡೆಸಿದರೂ ಪ್ರಯೋಜನವಿಲ್ಲ. ಕೃಷಿ ಕಾಯ್ದೆಯಿಂದ ರೈತರಿಗೆ ದಲ್ಲಾಳಿಗಳ ಕಾಟ ಇಲ್ಲದಂತಾಗುತ್ತದೆ. ರೈತ ತಾನು ಬೆಳೆದ ಬೆಳೆಯನ್ನು ನೇರವಾಗಿ ಮಾರುಕಟ್ಟೆಗೆ ಕೊಂಡೊಯ್ದು ಮಾರಾಟ ಮಾಡಲು ಈ ಕಾಯ್ದೆ ಅವಕಾಶ ಮಾಡಿ ಕೊಡುತ್ತದೆ. ಇಂತಹ ಕಾಯ್ದೆಯನ್ನು ವಿರೋಧಿಸುತ್ತಿರುವವರು ನಿಜವಾದ ರೈತರಲ್ಲ. ಅವರೆಲ್ಲ ನಕಲಿ ರೈತರು” ಎಂದು ವ್ಯಂಗ್ಯವಾಡಿದ್ದರು.

ಇದನ್ನೂ ಓದಿ: ಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

ರೈತರ ಕುರಿತಾದ ದಿನೇಶ್‌ ಅವರ ಅವಹೇಳನಕಾರಿ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಲೇ ರಾಜ್ಯದ ರೈತ ಸಂಘಟನೆಗಳ ನಾಯಕರು ಹಾಗೂ ರೈತಪರರು ಹಾಸ್ಯ ಕಲಾವಿದನ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದರು.

ದಿನೇಶ್‌ ರೈತರ ಕುರಿತು ವ್ಯಂಗ್ಯವಾಡಿದ್ದ ಸಂದರ್ಭದ ವಿಡಿಯೋ ತುಣುಕನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ನೆಟ್ಟಿಗ ಫೈಜಲ್‌ ಪೆರಾಜೆ, “ಕೃಷಿ ಕಾಯ್ದೆ ವಿರುದ್ಧ ಹೋರಾಡುತ್ತಿರುವವರು ನಕಲಿ ರೈತರು : ದಿನೇಶ್ ಕೋಡಪದವು ದಿನೇಶ್ ಕೋಡಪದವು ಅನ್ನುವ ಕಲಾವಿದರೊಬ್ಬರು ಯಕ್ಷರಂಗದಲ್ಲಿ ರಾಜಕೀಯ ಪಕ್ಷವೊಂದರ ಪ್ರಚಾರ ಮಾಡಿ ‘ರೈತರನ್ನೇ’ ಅವಮಾನಿಸಿದ ಕ್ರಮ ಖಂಡನೀಯ” ಎಂದು ಆಕ್ರೋಶ ವ್ಯಕ್ತ ಪಡಿಸಿದ್ದರು.

ರೈತ ಚಳವಳಿಯ ಬಗ್ಗೆ ನಡೆಸುತ್ತಿರುವ ಅಪಪ್ರಚಾರಕ್ಕೆ ಯಕ್ಷಗಾನ ಕಲೆಯನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ. ಆ ಮೂಲಕ ಯಕ್ಷಗಾನವನ್ನೂ ಕೆಡಿಸುವ ಹುನ್ನಾರ ನಡೆಯುತ್ತಿದೆ’ ಎಂದು ಕರ್ನಾಟಕ ಪ್ರಾಂತ ಪ್ರದೇಶ ರೈತ ಸಂಘದ ಉಪಾಧ್ಯಕ್ಷ ಯಾದವ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ, “ಯಕ್ಷಗಾನದ ಬಗ್ಗೆ ಗೌರವ ಇದೆ. ಆದರೆ, ಜೀವನದ ಅನುಭವ ಇಲ್ಲದವರು ಕಲೆಯ ಮೂಲಕ ಅನ್ನದಾತರನ್ನೇ ಹೀಯಾಳಿಸುವುದು ನೋವುಂಟು ಮಾಡಿದೆ’ ಎಂದು ಬೇಸರ ವ್ಯಕ್ತ ಪಡಿಸಿದ್ದರು.

ಇದಾದ ಬೆನ್ನಲ್ಲೇ ರೈತರ ಕ್ಷಮೆ ಯಾಚಿಸಿರುವ ದಿನೇಶ್‌, “ಯಾವುದೇ ರಾಜಕೀಯ ಅಥವಾ ಯಾರನ್ನಾದರೂ ನೋಯಿಸುವ ಉದ್ದೇಶದಿಂದ ಯಕ್ಷಗಾನದಲ್ಲಿ ನಾನು ಈ ರೀತಿಯ ಹೇಳಿಕೆ ನೀಡಿಲ್ಲ. ಕಲಾವಿದನಾಗಿ ಸಾಂದರ್ಭಿಕವಾಗಿ ನನ್ನ ಸಹ ಕಲಾವಿದನೊಂದಿಗೆ ಸಂಭಾಷಣೆ ನಡೆಸಿದ್ದೇನೆ. ರೈತರನ್ನಾಗಲಿ ಅಥವಾ ರೈತ ಹೋರಾಟವನ್ನಾಗಲಿ ಅಪಹಾಸ್ಯ ಮಾಡುವ ಉದ್ದೇಶ ನನ್ನದಾಗಿರಲಿಲ್ಲ” ಎಂದಿದ್ದಾರೆ. ಮುಂದುವರೆದು ಮಾತನಾಡಿರುವ ಅವರು, “ನನ್ನನ್ನು ಒಳಗೊಂಡಂತೆ ಸುಮಾರು 2 ಸಾವಿರ ಮಂದಿ ಯಕ್ಷಗಾನ ಕಲಾವಿದರು ಕೋವಿಡ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ನಮ್ಮ ಅನ್ನದಾತರು ನನ್ನ ಹೇಳಿಕೆಯಿಂದ ರೈತರಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಅಖಿಲ ಭಾರತ ವಕೀಲರ ಒಕ್ಕೂಟದ ಸಂಪೂರ್ಣ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...