Homeಮುಖಪುಟಶಿಂಧೆ ವಿರುದ್ಧ ಹೇಳಿಕೆ | ಕುನಾಲ್ ಬ್ಯಾಂಕ್ ಖಾತೆ ಸ್ಥಗಿತಕ್ಕೆ ಮುಂದಾದ ಮಹಾರಾಷ್ಟ್ರ ಸರ್ಕಾರ

ಶಿಂಧೆ ವಿರುದ್ಧ ಹೇಳಿಕೆ | ಕುನಾಲ್ ಬ್ಯಾಂಕ್ ಖಾತೆ ಸ್ಥಗಿತಕ್ಕೆ ಮುಂದಾದ ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಉಲ್ಲೆಖಿಸಿ “ದೇಶದ್ರೋಹಿ” ಎಂದು ಕರೆದಿರುವ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಹಾರಾಷ್ಟ್ರ ಸರ್ಕಾರ ಎಚ್ಚರಿಸಿದ್ದು, ಅಧಿಕಾರಿಗಳು ಕುನಾಲ್ ಅವರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಯೋಜನೆಯನ್ನು ಪ್ರಕಟಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕಮ್ರಾ ಅವರ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದು, ಶಿಂಧೆ ಅವರನ್ನು ಅವಮಾನಿಸಿದ್ದಕ್ಕಾಗಿ ಕುನಾಲ್ ಅವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಶಿಂಧೆ ವಿರುದ್ಧ ಹೇಳಿಕೆ

“ಕುನಾಲ್ ಕಮ್ರಾ ಸಂವಿಧಾನ ಪುಸ್ತಕವನ್ನು ತೋರಿಸಿ ತನಗೆ ಮಾತನಾಡುವ ಹಕ್ಕಿದೆ ಎಂದು ಹೇಳಿದ್ದಾರೆ. ಆದರೆ ಕುನಾಲ್ ಅವರು ಸಂವಿಧಾನವನ್ನು ಓದಬೇಕು, ಅಲ್ಲಿ ನಿಮಗೆ ವಾಕ್ ಮತ್ತು ಬರವಣಿಗೆಯ ಸ್ವಾತಂತ್ರ್ಯವಿದೆ ಎಂದು ಉಲ್ಲೇಖಿಸಲಾಗಿದೆ, ಆದರೆ ಅದು ಯಾರನ್ನೂ ಅವಮಾನಿಸುವವರೆಗೆ ವಿಸ್ತರಿಸಬಾರದು. ಅವರು ಯಾರ ಸ್ವಾತಂತ್ರ್ಯವನ್ನೂ ಅತಿಕ್ರಮಿಸಲು ಸಾಧ್ಯವಿಲ್ಲ. ಆದ್ದರಿಂದ, ನಾವು ಕುನಾಲ್ ಅವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸುತ್ತೇವೆ,” ಎಂದು ಫಡ್ನವೀಸ್ ಹೇಳಿದ್ದಾರೆ.

ಖಾರ್‌ನ ಕಾಂಟಿನೆಂಟಲ್ ಹೋಟೆಲ್‌ನಲ್ಲಿರುವ ಹ್ಯಾಬಿಟಾಟ್ ಕಾಮಿಡಿ ಕ್ಲಬ್‌ನಲ್ಲಿ ನಡೆದ ಪ್ರದರ್ಶನದಲ್ಲಿ, ಕುನಾಲ್ ಅವರು ಶಿಂಧೆ ಅವರ ಬಗ್ಗೆ ಎರಡು ನಿಮಿಷಗಳ ವಿಡಂಬನಾತ್ಮಕ ಹಾಡನ್ನು ಒಳಗೊಂಡಂತೆ ಸುಮಾರು 50 ನಿಮಿಷಗಳ ಸೆಟ್ ಅನ್ನು ಪ್ರದರ್ಶಿಸಿದ್ದರು. ಶಿಂಧೆ ವಿರುದ್ಧ ಹೇಳಿಕೆ

ಉದ್ಧವ್ ಠಾಕ್ರೆ ವಿರುದ್ಧ 2022 ರಲ್ಲಿ ದಂಗೆಯೆದ್ದ ಶಿಂಧೆ ಅವರನ್ನು ಅಣಕಿಸಲು ಅವರು ಬಾಲಿವುಡ್ ಚಲನಚಿತ್ರ ದಿಲ್ ತೋ ಪಾಗಲ್ ಹೈ ಹಾಡನ್ನು ಮಾರ್ಪಡಿಸಿದ ಆವೃತ್ತಿಯನ್ನು ಬಳಸಿದ್ದಾರೆ. ಈ ವೇಳೆ ಕುನಾಲ್ ಅವರು ವಿವಿಧ ಉದ್ಯಮಿಗಳು ಮತ್ತು ರಾಜಕಾರಣಿಗಳ ಬಗ್ಗೆಯೂ ವಿಡಂಬನಾತ್ಮಕ ಟೀಕೆಗಳನ್ನು ಮಾಡಿದ್ದಾರೆ.

ಶಿಂಧೆ ವಿರುದ್ಧದ ಹಾಸ್ಯಕ್ಕೆ ಉದ್ರಿಕ್ತರಾಗಿರುವ ಶಿವಸೇನೆ ಕಾರ್ಯಕರ್ತರು ಮತ್ತೊಬ್ಬ ಹಾಸ್ಯನಟ ರಜತ್ ಸೂದ್ ಅದೇ ಸ್ಥಳದಲ್ಲಿ ಪ್ರದರ್ಶನ ನೀಡುತ್ತಿದ್ದಾಗ ಸ್ಥಳಕ್ಕೆ ನುಗ್ಗಿದ್ದಾರೆ. ಶಿಂಧೆ ಅವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದ ಅವರು, ಕುನಾಲ್ ಪ್ರದರ್ಶನ ನೀಡಿದ ಸ್ಟುಡಿಯೋವನ್ನು ಧ್ವಂಸ ಮಾಡಿದ್ದಾರೆ. ಇದರ ನಂತರ ಮುಂಬೈ ಪೊಲೀಸರು ರಾಹುಲ್ ಕನಾಲ್ ಸೇರಿದಂತೆ ಹನ್ನೊಂದು ಶಿವಸೇನಾ ಕಾರ್ಯಕರ್ತರನ್ನು ವಿಧ್ವಂಸಕ ಕೃತ್ಯಕ್ಕಾಗಿ ಬಂಧಿಸಿದ್ದಾರೆ. ಅವರನ್ನು ಅದೇ ದಿನ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ರಾಜ್ಯ ಗೃಹ ಸಚಿವ ಯೋಗೇಶ್ ಕದಮ್ ಅವರು ಪ್ರತಿಕ್ರಿಯಿಸಿ, ಅಧಿಕಾರಿಗಳು ಕುನಾಲ್ ಅವರ ಫೋನ್ ದಾಖಲೆಗಳನ್ನು ತನಿಖೆ ಮಾಡಿ ಅವರ ಸ್ಥಳವನ್ನು ಪತ್ತೆಹಚ್ಚುತ್ತಾರೆ ಎಂದು ಹೇಳಿದ್ದಾರೆ. “ಶಿವಸೇನೆ ಕಾರ್ಯಕರ್ತರ ಕೋಪವನ್ನು ನಾವು ಅರ್ಥಮಾಡಿಕೊಳ್ಳಬೇಕು. ನಾನು ವಿಧ್ವಂಸಕ ಕೃತ್ಯವನ್ನು ಬೆಂಬಲಿಸುವುದಿಲ್ಲ, ಆದರೆ ಡಿಸಿಎಂ ಶಿಂಧೆ ವಿರುದ್ಧ ಕುನಾಲ್ ಅವರ ಅವಹೇಳನಕಾರಿ ಹೇಳಿಕೆಗಳನ್ನು ಹಾಗೆ ಬಿಟ್ಟು ಬಿಡಲಾಗುವುದಿಲ್ಲ ಅಥವಾ ಸಹಿಸಲಾಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಕುನಾಲ್ ಅವರ ಪ್ರದರ್ಶನದ ನಂತರದ ಉಂಟಾದ ಗೊಂದಲದ ಬಳಿಕ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಹೋಟೆಲ್ ವಿರುದ್ಧ ತ್ವರಿತ ಕ್ರಮ ಕೈಗೊಂಡಿದೆ. ಕೆಲವೇ ತಿಂಗಳುಗಳ ಹಿಂದೆ ಕಾನೂನುಬದ್ಧಗೊಳಿಸಿದ್ದ ಕೆಲವು ಕಟ್ಟಡಗಳನ್ನು ಕೆಡವಲು ತಕ್ಷಣದ ನೋಟಿಸ್ ನೀಡಿದೆ. ಜೊತೆಗೆ ಶಿವಸೇನೆಯು ಕುನಾಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (BNS) 2023 ಮತ್ತು ಮಹಾರಾಷ್ಟ್ರ ಪೊಲೀಸ್ ಕಾಯ್ದೆಯ ಬಹು ವಿಭಾಗಗಳ ಅಡಿಯಲ್ಲಿ ಪೊಲೀಸ್ ಪ್ರಕರಣ ದಾಖಲಿಸಿದೆ.

ಸಿಎಂ ಫಡ್ನವೀಸ್ ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದು, “ಕುನಾಲ್ ಕಮ್ರಾಗೆ ಹಾಸ್ಯ ಮಾಡಲು ಸಂಪೂರ್ಣ ಹಕ್ಕು ಮತ್ತು ಸ್ವಾತಂತ್ರ್ಯವಿದೆ. ಆದರೆ ಅವರು ಮಿತಿಗಳು ಮತ್ತು ಸಾಂವಿಧಾನಿಕ ಚೌಕಟ್ಟಿನೊಳಗೆ ಅದನ್ನು ಮಾಡಬೇಕು. ಜನರು ಅಧಿಕಾರಕ್ಕೆ ಮರಳಲು ಜನಾದೇಶವನ್ನು ನೀಡಿರುವ ಮಾಜಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಅವರು ಅವಮಾನಿಸುವುದನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಉದ್ಧವ್ ಠಾಕ್ರೆ ಸರ್ಕಾರದ ಕ್ರಮಗಳನ್ನು ಪ್ರಶ್ನಿಸಿದ್ದು, “ಕುನಾಲ್ ಏನು ತಪ್ಪು ಮಾತನಾಡಿದ್ದಾರೆ? ಶಿಂಧೆ ನಮಗೆ ದ್ರೋಹ ಬಗೆದರು, ನನ್ನ ಸರ್ಕಾರವನ್ನು ಉರುಳಿಸಿದರು ಮತ್ತು ಬಿಜೆಪಿಯೊಂದಿಗೆ ಸೇರಿ ಸರ್ಕಾರವನ್ನು ರಚಿಸಿದರು. ಅವರನ್ನು ದೇಶದ್ರೋಹಿ ಎಂದು ಕರೆಯುವುದು ಸಮರ್ಥನೀಯ.” ಎಂದು ಹೇಳಿದ್ದಾರೆ.

ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಕೂಡ ಕಾಮಿಡಿ ಕ್ಲಬ್ ಮೇಲಿನ ದಾಳಿಯನ್ನು ಟೀಕಿಸಿದ್ದು,”ಅಸುರಕ್ಷಿತ ಹೇಡಿ ಮಾತ್ರ ಯಾರಾದರೊಬ್ಬರ ಹಾಡಿಗೆ ಪ್ರತಿಕ್ರಿಯಿಸುತ್ತಾನೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಇದೆಯೆ?” ಎಂದು ಪ್ರಶ್ನಿಸಿದ್ದಾರೆ. ಕುನಾಲ್ ಅವರು ತಮ್ಮ ಪ್ರದರ್ಶನದಲ್ಲಿ ಶಿಂಧೆ ಅವರ ಹೆಸರನ್ನು ಸ್ಪಷ್ಟವಾಗಿ ಹೆಸರಿಸಲಿಲ್ಲ ಎಂದು ಅವರು ಹೇಳಿದ್ದು, “ಹಾಗಾದರೆ ಶಿಂಧೆ ಮತ್ತು ಅವರ ಜನರು ‘ದೇಶದ್ರೋಹಿ’ ಎಂಬ ಪದವು ಅವರಿಗೆ ಉದ್ದೇಶಿಸಲಾಗಿದೆ ಎಂದು ಹೇಗೆ ಖಚಿತವಾಗಿ ತಿಳಿಯುತ್ತಾರೆ? ಶಿಂಧೆ ‘ದೇಶದ್ರೋಹಿ’ ಎಂಬ ಪದಕ್ಕೆ ಹೆದರುತ್ತಾರೆ ಎಂದು ಇದು ತೋರಿಸುತ್ತದೆ” ಎಂದು ಆದಿತ್ಯ ಠಾಕ್ರೆ ಹೇಳಿದ್ದಾರೆ.

ಈ ನಡುವೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿವಾದದಿಂದ ಅಂತರ ಕಾಪಾಡಿದ್ದು, “ಪೊಲೀಸರ ಮೇಲೆ ಒತ್ತಡ ಇರಬಾರದು” ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕರ್ನಾಟಕದ ವಕೀಲರ ಸಂಘಗಳಲ್ಲಿ ಮಹಿಳಾ ನ್ಯಾಯವಾದಿಗಳಿಗೆ ಶೇ.30ರಷ್ಟು ಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ

ಕರ್ನಾಟಕದ ವಕೀಲರ ಸಂಘಗಳಲ್ಲಿ ಮಹಿಳಾ ನ್ಯಾಯವಾದಿಗಳಿಗೆ ಶೇ.30ರಷ್ಟು ಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...